Homeಮುಖಪುಟಮೊಹರಂ ಮೆರವಣಿಗೆಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ: ಸುಪ್ರೀಂ

ಮೊಹರಂ ಮೆರವಣಿಗೆಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ: ಸುಪ್ರೀಂ

ಅರ್ಜಿದಾರರು ಜೂನ್‌ ತಿಂಗಳಿನಲ್ಲಿ ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಗೆ ಅವಕಾಶ ನೀಡಿದ್ದನ್ನು ಉಲ್ಲೇಖಿಸಿ ಮೊಹರಂ ಹಬ್ಬದ ಮೆರವಣಿಗೆಗೂ ಅವಕಾಶ ನೀಡಬೇಕೆಂದು ಕೋರಿದ್ದರು.

- Advertisement -
- Advertisement -

ಮೊಹರಂ ಮೆರವಣಿಗೆಗಳಿಗೆ ಅನುಮತಿ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್, ಕೊರೊನಾ ಹರಡಲು ಒಂದು ನಿರ್ದಿಷ್ಟ ಸಮುದಾಯವೇ ಕಾರಣವೆಂಬ ಟಾರ್ಗೆಟ್‌ಗೆ ಒಳಗಾಗುವುದರಿಂದ ಅನುಮತಿ ಸಾಧ್ಯವಿಲ್ಲ ಎಂದಿದೆ.

ಉತ್ತರ ಪ್ರದೇಶದ ಸೈಯ್ಯದ್ ಕಾಲ್ಬೆ ಜವಾದ್ ಎಂಬುವವರು ಸಲ್ಲಿಸಿದ್ದ ಅರ್ಜಿ ಆಲಿಸಿದ ಸಿಜೆಐ ಎಸ್‌ ಎ ಬೋಬ್ಡೆ ನೇತೃತ್ವದ ನ್ಯಾಯಪೀಠ ನಾವು ಮೆರವಣಿಗೆಗೆ ಅನುಮತಿ ನೀಡಿದರೆ ನಿರ್ದಿಷ್ಟ ಸಮುದಾಯವೊಂದು ಕೊರೊನಾ ಹರಡಲು ಕಾರಣವೆಂಬ ಟಾರ್ಗೆಟ್‌ಗೆ ಒಳಗಾಗುತ್ತದೆ ಎಂದಿದೆ.

ಅರ್ಜಿದಾರರು ಜೂನ್‌ ತಿಂಗಳಿನಲ್ಲಿ ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಗೆ ಅವಕಾಶ ನೀಡಿದ್ದನ್ನು ಉಲ್ಲೇಖಿಸಿ ಮೊಹರಂ ಹಬ್ಬದ ಮೆರವಣಿಗೆಗೂ ಅವಕಾಶ ನೀಡಬೇಕೆಂದು ಕೋರಿದ್ದರು.

ಇದಕ್ಕೆ ಉತ್ತರಿಸಿ ಸಿಜೆಐ ‘ನೀವು ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಯನ್ನು ಉಲ್ಲೇಖಿಸಿದ್ದೀರಿ. ಆದರೆ ಅದು ಕೇವಲ ಒಂದು ಊರಿನಲ್ಲಿ ಮತ್ತು ಒಂದು ಬೀದಿಯಲ್ಲಿ ಮಾತ್ರ ನಡೆದ ಮೆರವಣಿಗೆಯಾದ್ದರಿಂದ ನಮಗೆ ಅಪಾಯದ ಅಂದಾಜಿದ್ದರಿಂದ ಅನುಮತಿ ನೀಡಿದ್ದೆವು. ಆದರೆ ಇಡೀ ದೇಶಕ್ಕೆ ಅನ್ವಯವಾಗುವಂಥಹ ಸಾಮಾನ್ಯ ತೀರ್ಪು ನೀಡುವುದು ಕಷ್ಟ’ ಎಂದಿದ್ದಾರೆ.

ಒಂದು ಜಾಗದಲ್ಲಿ ನಡೆಯುವ ಮೆರವಣಿಗೆಯಾದರೆ ನಾವು ಅಪಾಯವನ್ನು ಅಂದಾಜಿಸಬಹುದು. ಹಾಗಾಗಿ ಇಡೀ ದೇಶದ ಜನರ ಆರೋಗ್ಯವನ್ನು ಅಪಾಯಕ್ಕೆ ತಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಇದಕ್ಕೆ ಪ್ರತಿಯಾಗಿ ಅರ್ಜಿದಾರರು ಲಕ್ನೋ ನಗರದಲ್ಲಿ ಮೆರವಣಿಗೆ ನಡೆಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ಹಾಗಾದರೆ ನೀವು ಅಲಹಾಬಾದ್ ಹೈಕೋರ್ಟ್ ಅನ್ನು ಸಂಪರ್ಕಿಸಿ ಎಂದು ಸುಪ್ರೀಂ ಹೇಳಿದೆ.

ಜೂನ್ ತಿಂಗಳಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದ ವೇಳೆ ಸುಪ್ರೀಂ ಕೋರ್ಟ್ ‘ಜಗನ್ನಾಥ ದೇವರು ನಮ್ಮನ್ನು ಕ್ಷಮಿಸುವುದಿಲ್ಲ’ ಎಂದು ಹೇಳುವ ಮೂಲಕ ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಗೆ ಅನುಮತಿ ನಿರಾಕರಿಸಿತ್ತು. ಆದರೆ ಐದು ದಿನಗಳ ನಂತರ ಕೇಂದ್ರ ಮನವಿ ಮೇರೆಗೆ ಮೆರವಣಿಗೆಗೆ ಅವಕಾಶ ನೀಡಿತ್ತು.


ಇದನ್ನೂ ಓದಿ: ’ಬ್ಯಾಡ್‌ ಬಾಯ್‌ ಬಿಲಿಯನೇರ್ಸ್’ ಸಾಕ್ಷ್ಯಚಿತ್ರದ ವಿರುದ್ದ ಕೋರ್ಟ್ ಮೆಟ್ಟಿಲೇರಿದ ಮೆಹುಲ್ ಚೋಕ್ಸಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...