Homeಮುಖಪುಟಮೊಹರಂ ಮೆರವಣಿಗೆಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ: ಸುಪ್ರೀಂ

ಮೊಹರಂ ಮೆರವಣಿಗೆಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ: ಸುಪ್ರೀಂ

ಅರ್ಜಿದಾರರು ಜೂನ್‌ ತಿಂಗಳಿನಲ್ಲಿ ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಗೆ ಅವಕಾಶ ನೀಡಿದ್ದನ್ನು ಉಲ್ಲೇಖಿಸಿ ಮೊಹರಂ ಹಬ್ಬದ ಮೆರವಣಿಗೆಗೂ ಅವಕಾಶ ನೀಡಬೇಕೆಂದು ಕೋರಿದ್ದರು.

- Advertisement -
- Advertisement -

ಮೊಹರಂ ಮೆರವಣಿಗೆಗಳಿಗೆ ಅನುಮತಿ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್, ಕೊರೊನಾ ಹರಡಲು ಒಂದು ನಿರ್ದಿಷ್ಟ ಸಮುದಾಯವೇ ಕಾರಣವೆಂಬ ಟಾರ್ಗೆಟ್‌ಗೆ ಒಳಗಾಗುವುದರಿಂದ ಅನುಮತಿ ಸಾಧ್ಯವಿಲ್ಲ ಎಂದಿದೆ.

ಉತ್ತರ ಪ್ರದೇಶದ ಸೈಯ್ಯದ್ ಕಾಲ್ಬೆ ಜವಾದ್ ಎಂಬುವವರು ಸಲ್ಲಿಸಿದ್ದ ಅರ್ಜಿ ಆಲಿಸಿದ ಸಿಜೆಐ ಎಸ್‌ ಎ ಬೋಬ್ಡೆ ನೇತೃತ್ವದ ನ್ಯಾಯಪೀಠ ನಾವು ಮೆರವಣಿಗೆಗೆ ಅನುಮತಿ ನೀಡಿದರೆ ನಿರ್ದಿಷ್ಟ ಸಮುದಾಯವೊಂದು ಕೊರೊನಾ ಹರಡಲು ಕಾರಣವೆಂಬ ಟಾರ್ಗೆಟ್‌ಗೆ ಒಳಗಾಗುತ್ತದೆ ಎಂದಿದೆ.

ಅರ್ಜಿದಾರರು ಜೂನ್‌ ತಿಂಗಳಿನಲ್ಲಿ ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಗೆ ಅವಕಾಶ ನೀಡಿದ್ದನ್ನು ಉಲ್ಲೇಖಿಸಿ ಮೊಹರಂ ಹಬ್ಬದ ಮೆರವಣಿಗೆಗೂ ಅವಕಾಶ ನೀಡಬೇಕೆಂದು ಕೋರಿದ್ದರು.

ಇದಕ್ಕೆ ಉತ್ತರಿಸಿ ಸಿಜೆಐ ‘ನೀವು ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಯನ್ನು ಉಲ್ಲೇಖಿಸಿದ್ದೀರಿ. ಆದರೆ ಅದು ಕೇವಲ ಒಂದು ಊರಿನಲ್ಲಿ ಮತ್ತು ಒಂದು ಬೀದಿಯಲ್ಲಿ ಮಾತ್ರ ನಡೆದ ಮೆರವಣಿಗೆಯಾದ್ದರಿಂದ ನಮಗೆ ಅಪಾಯದ ಅಂದಾಜಿದ್ದರಿಂದ ಅನುಮತಿ ನೀಡಿದ್ದೆವು. ಆದರೆ ಇಡೀ ದೇಶಕ್ಕೆ ಅನ್ವಯವಾಗುವಂಥಹ ಸಾಮಾನ್ಯ ತೀರ್ಪು ನೀಡುವುದು ಕಷ್ಟ’ ಎಂದಿದ್ದಾರೆ.

ಒಂದು ಜಾಗದಲ್ಲಿ ನಡೆಯುವ ಮೆರವಣಿಗೆಯಾದರೆ ನಾವು ಅಪಾಯವನ್ನು ಅಂದಾಜಿಸಬಹುದು. ಹಾಗಾಗಿ ಇಡೀ ದೇಶದ ಜನರ ಆರೋಗ್ಯವನ್ನು ಅಪಾಯಕ್ಕೆ ತಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಇದಕ್ಕೆ ಪ್ರತಿಯಾಗಿ ಅರ್ಜಿದಾರರು ಲಕ್ನೋ ನಗರದಲ್ಲಿ ಮೆರವಣಿಗೆ ನಡೆಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ಹಾಗಾದರೆ ನೀವು ಅಲಹಾಬಾದ್ ಹೈಕೋರ್ಟ್ ಅನ್ನು ಸಂಪರ್ಕಿಸಿ ಎಂದು ಸುಪ್ರೀಂ ಹೇಳಿದೆ.

ಜೂನ್ ತಿಂಗಳಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದ ವೇಳೆ ಸುಪ್ರೀಂ ಕೋರ್ಟ್ ‘ಜಗನ್ನಾಥ ದೇವರು ನಮ್ಮನ್ನು ಕ್ಷಮಿಸುವುದಿಲ್ಲ’ ಎಂದು ಹೇಳುವ ಮೂಲಕ ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಗೆ ಅನುಮತಿ ನಿರಾಕರಿಸಿತ್ತು. ಆದರೆ ಐದು ದಿನಗಳ ನಂತರ ಕೇಂದ್ರ ಮನವಿ ಮೇರೆಗೆ ಮೆರವಣಿಗೆಗೆ ಅವಕಾಶ ನೀಡಿತ್ತು.


ಇದನ್ನೂ ಓದಿ: ’ಬ್ಯಾಡ್‌ ಬಾಯ್‌ ಬಿಲಿಯನೇರ್ಸ್’ ಸಾಕ್ಷ್ಯಚಿತ್ರದ ವಿರುದ್ದ ಕೋರ್ಟ್ ಮೆಟ್ಟಿಲೇರಿದ ಮೆಹುಲ್ ಚೋಕ್ಸಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...