Homeಮುಖಪುಟಮೊಹರಂ ಮೆರವಣಿಗೆಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ: ಸುಪ್ರೀಂ

ಮೊಹರಂ ಮೆರವಣಿಗೆಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ: ಸುಪ್ರೀಂ

ಅರ್ಜಿದಾರರು ಜೂನ್‌ ತಿಂಗಳಿನಲ್ಲಿ ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಗೆ ಅವಕಾಶ ನೀಡಿದ್ದನ್ನು ಉಲ್ಲೇಖಿಸಿ ಮೊಹರಂ ಹಬ್ಬದ ಮೆರವಣಿಗೆಗೂ ಅವಕಾಶ ನೀಡಬೇಕೆಂದು ಕೋರಿದ್ದರು.

- Advertisement -
- Advertisement -

ಮೊಹರಂ ಮೆರವಣಿಗೆಗಳಿಗೆ ಅನುಮತಿ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್, ಕೊರೊನಾ ಹರಡಲು ಒಂದು ನಿರ್ದಿಷ್ಟ ಸಮುದಾಯವೇ ಕಾರಣವೆಂಬ ಟಾರ್ಗೆಟ್‌ಗೆ ಒಳಗಾಗುವುದರಿಂದ ಅನುಮತಿ ಸಾಧ್ಯವಿಲ್ಲ ಎಂದಿದೆ.

ಉತ್ತರ ಪ್ರದೇಶದ ಸೈಯ್ಯದ್ ಕಾಲ್ಬೆ ಜವಾದ್ ಎಂಬುವವರು ಸಲ್ಲಿಸಿದ್ದ ಅರ್ಜಿ ಆಲಿಸಿದ ಸಿಜೆಐ ಎಸ್‌ ಎ ಬೋಬ್ಡೆ ನೇತೃತ್ವದ ನ್ಯಾಯಪೀಠ ನಾವು ಮೆರವಣಿಗೆಗೆ ಅನುಮತಿ ನೀಡಿದರೆ ನಿರ್ದಿಷ್ಟ ಸಮುದಾಯವೊಂದು ಕೊರೊನಾ ಹರಡಲು ಕಾರಣವೆಂಬ ಟಾರ್ಗೆಟ್‌ಗೆ ಒಳಗಾಗುತ್ತದೆ ಎಂದಿದೆ.

ಅರ್ಜಿದಾರರು ಜೂನ್‌ ತಿಂಗಳಿನಲ್ಲಿ ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಗೆ ಅವಕಾಶ ನೀಡಿದ್ದನ್ನು ಉಲ್ಲೇಖಿಸಿ ಮೊಹರಂ ಹಬ್ಬದ ಮೆರವಣಿಗೆಗೂ ಅವಕಾಶ ನೀಡಬೇಕೆಂದು ಕೋರಿದ್ದರು.

ಇದಕ್ಕೆ ಉತ್ತರಿಸಿ ಸಿಜೆಐ ‘ನೀವು ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಯನ್ನು ಉಲ್ಲೇಖಿಸಿದ್ದೀರಿ. ಆದರೆ ಅದು ಕೇವಲ ಒಂದು ಊರಿನಲ್ಲಿ ಮತ್ತು ಒಂದು ಬೀದಿಯಲ್ಲಿ ಮಾತ್ರ ನಡೆದ ಮೆರವಣಿಗೆಯಾದ್ದರಿಂದ ನಮಗೆ ಅಪಾಯದ ಅಂದಾಜಿದ್ದರಿಂದ ಅನುಮತಿ ನೀಡಿದ್ದೆವು. ಆದರೆ ಇಡೀ ದೇಶಕ್ಕೆ ಅನ್ವಯವಾಗುವಂಥಹ ಸಾಮಾನ್ಯ ತೀರ್ಪು ನೀಡುವುದು ಕಷ್ಟ’ ಎಂದಿದ್ದಾರೆ.

ಒಂದು ಜಾಗದಲ್ಲಿ ನಡೆಯುವ ಮೆರವಣಿಗೆಯಾದರೆ ನಾವು ಅಪಾಯವನ್ನು ಅಂದಾಜಿಸಬಹುದು. ಹಾಗಾಗಿ ಇಡೀ ದೇಶದ ಜನರ ಆರೋಗ್ಯವನ್ನು ಅಪಾಯಕ್ಕೆ ತಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಇದಕ್ಕೆ ಪ್ರತಿಯಾಗಿ ಅರ್ಜಿದಾರರು ಲಕ್ನೋ ನಗರದಲ್ಲಿ ಮೆರವಣಿಗೆ ನಡೆಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ಹಾಗಾದರೆ ನೀವು ಅಲಹಾಬಾದ್ ಹೈಕೋರ್ಟ್ ಅನ್ನು ಸಂಪರ್ಕಿಸಿ ಎಂದು ಸುಪ್ರೀಂ ಹೇಳಿದೆ.

ಜೂನ್ ತಿಂಗಳಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದ ವೇಳೆ ಸುಪ್ರೀಂ ಕೋರ್ಟ್ ‘ಜಗನ್ನಾಥ ದೇವರು ನಮ್ಮನ್ನು ಕ್ಷಮಿಸುವುದಿಲ್ಲ’ ಎಂದು ಹೇಳುವ ಮೂಲಕ ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಗೆ ಅನುಮತಿ ನಿರಾಕರಿಸಿತ್ತು. ಆದರೆ ಐದು ದಿನಗಳ ನಂತರ ಕೇಂದ್ರ ಮನವಿ ಮೇರೆಗೆ ಮೆರವಣಿಗೆಗೆ ಅವಕಾಶ ನೀಡಿತ್ತು.


ಇದನ್ನೂ ಓದಿ: ’ಬ್ಯಾಡ್‌ ಬಾಯ್‌ ಬಿಲಿಯನೇರ್ಸ್’ ಸಾಕ್ಷ್ಯಚಿತ್ರದ ವಿರುದ್ದ ಕೋರ್ಟ್ ಮೆಟ್ಟಿಲೇರಿದ ಮೆಹುಲ್ ಚೋಕ್ಸಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...