Homeಮುಖಪುಟಮೊಹರಂ ಮೆರವಣಿಗೆಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ: ಸುಪ್ರೀಂ

ಮೊಹರಂ ಮೆರವಣಿಗೆಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ: ಸುಪ್ರೀಂ

ಅರ್ಜಿದಾರರು ಜೂನ್‌ ತಿಂಗಳಿನಲ್ಲಿ ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಗೆ ಅವಕಾಶ ನೀಡಿದ್ದನ್ನು ಉಲ್ಲೇಖಿಸಿ ಮೊಹರಂ ಹಬ್ಬದ ಮೆರವಣಿಗೆಗೂ ಅವಕಾಶ ನೀಡಬೇಕೆಂದು ಕೋರಿದ್ದರು.

- Advertisement -
- Advertisement -

ಮೊಹರಂ ಮೆರವಣಿಗೆಗಳಿಗೆ ಅನುಮತಿ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್, ಕೊರೊನಾ ಹರಡಲು ಒಂದು ನಿರ್ದಿಷ್ಟ ಸಮುದಾಯವೇ ಕಾರಣವೆಂಬ ಟಾರ್ಗೆಟ್‌ಗೆ ಒಳಗಾಗುವುದರಿಂದ ಅನುಮತಿ ಸಾಧ್ಯವಿಲ್ಲ ಎಂದಿದೆ.

ಉತ್ತರ ಪ್ರದೇಶದ ಸೈಯ್ಯದ್ ಕಾಲ್ಬೆ ಜವಾದ್ ಎಂಬುವವರು ಸಲ್ಲಿಸಿದ್ದ ಅರ್ಜಿ ಆಲಿಸಿದ ಸಿಜೆಐ ಎಸ್‌ ಎ ಬೋಬ್ಡೆ ನೇತೃತ್ವದ ನ್ಯಾಯಪೀಠ ನಾವು ಮೆರವಣಿಗೆಗೆ ಅನುಮತಿ ನೀಡಿದರೆ ನಿರ್ದಿಷ್ಟ ಸಮುದಾಯವೊಂದು ಕೊರೊನಾ ಹರಡಲು ಕಾರಣವೆಂಬ ಟಾರ್ಗೆಟ್‌ಗೆ ಒಳಗಾಗುತ್ತದೆ ಎಂದಿದೆ.

ಅರ್ಜಿದಾರರು ಜೂನ್‌ ತಿಂಗಳಿನಲ್ಲಿ ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಗೆ ಅವಕಾಶ ನೀಡಿದ್ದನ್ನು ಉಲ್ಲೇಖಿಸಿ ಮೊಹರಂ ಹಬ್ಬದ ಮೆರವಣಿಗೆಗೂ ಅವಕಾಶ ನೀಡಬೇಕೆಂದು ಕೋರಿದ್ದರು.

ಇದಕ್ಕೆ ಉತ್ತರಿಸಿ ಸಿಜೆಐ ‘ನೀವು ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಯನ್ನು ಉಲ್ಲೇಖಿಸಿದ್ದೀರಿ. ಆದರೆ ಅದು ಕೇವಲ ಒಂದು ಊರಿನಲ್ಲಿ ಮತ್ತು ಒಂದು ಬೀದಿಯಲ್ಲಿ ಮಾತ್ರ ನಡೆದ ಮೆರವಣಿಗೆಯಾದ್ದರಿಂದ ನಮಗೆ ಅಪಾಯದ ಅಂದಾಜಿದ್ದರಿಂದ ಅನುಮತಿ ನೀಡಿದ್ದೆವು. ಆದರೆ ಇಡೀ ದೇಶಕ್ಕೆ ಅನ್ವಯವಾಗುವಂಥಹ ಸಾಮಾನ್ಯ ತೀರ್ಪು ನೀಡುವುದು ಕಷ್ಟ’ ಎಂದಿದ್ದಾರೆ.

ಒಂದು ಜಾಗದಲ್ಲಿ ನಡೆಯುವ ಮೆರವಣಿಗೆಯಾದರೆ ನಾವು ಅಪಾಯವನ್ನು ಅಂದಾಜಿಸಬಹುದು. ಹಾಗಾಗಿ ಇಡೀ ದೇಶದ ಜನರ ಆರೋಗ್ಯವನ್ನು ಅಪಾಯಕ್ಕೆ ತಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಇದಕ್ಕೆ ಪ್ರತಿಯಾಗಿ ಅರ್ಜಿದಾರರು ಲಕ್ನೋ ನಗರದಲ್ಲಿ ಮೆರವಣಿಗೆ ನಡೆಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ಹಾಗಾದರೆ ನೀವು ಅಲಹಾಬಾದ್ ಹೈಕೋರ್ಟ್ ಅನ್ನು ಸಂಪರ್ಕಿಸಿ ಎಂದು ಸುಪ್ರೀಂ ಹೇಳಿದೆ.

ಜೂನ್ ತಿಂಗಳಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದ ವೇಳೆ ಸುಪ್ರೀಂ ಕೋರ್ಟ್ ‘ಜಗನ್ನಾಥ ದೇವರು ನಮ್ಮನ್ನು ಕ್ಷಮಿಸುವುದಿಲ್ಲ’ ಎಂದು ಹೇಳುವ ಮೂಲಕ ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಗೆ ಅನುಮತಿ ನಿರಾಕರಿಸಿತ್ತು. ಆದರೆ ಐದು ದಿನಗಳ ನಂತರ ಕೇಂದ್ರ ಮನವಿ ಮೇರೆಗೆ ಮೆರವಣಿಗೆಗೆ ಅವಕಾಶ ನೀಡಿತ್ತು.


ಇದನ್ನೂ ಓದಿ: ’ಬ್ಯಾಡ್‌ ಬಾಯ್‌ ಬಿಲಿಯನೇರ್ಸ್’ ಸಾಕ್ಷ್ಯಚಿತ್ರದ ವಿರುದ್ದ ಕೋರ್ಟ್ ಮೆಟ್ಟಿಲೇರಿದ ಮೆಹುಲ್ ಚೋಕ್ಸಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....