Homeಮುಖಪುಟಮೊಹರಂ ಮೆರವಣಿಗೆಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ: ಸುಪ್ರೀಂ

ಮೊಹರಂ ಮೆರವಣಿಗೆಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ: ಸುಪ್ರೀಂ

ಅರ್ಜಿದಾರರು ಜೂನ್‌ ತಿಂಗಳಿನಲ್ಲಿ ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಗೆ ಅವಕಾಶ ನೀಡಿದ್ದನ್ನು ಉಲ್ಲೇಖಿಸಿ ಮೊಹರಂ ಹಬ್ಬದ ಮೆರವಣಿಗೆಗೂ ಅವಕಾಶ ನೀಡಬೇಕೆಂದು ಕೋರಿದ್ದರು.

- Advertisement -
- Advertisement -

ಮೊಹರಂ ಮೆರವಣಿಗೆಗಳಿಗೆ ಅನುಮತಿ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್, ಕೊರೊನಾ ಹರಡಲು ಒಂದು ನಿರ್ದಿಷ್ಟ ಸಮುದಾಯವೇ ಕಾರಣವೆಂಬ ಟಾರ್ಗೆಟ್‌ಗೆ ಒಳಗಾಗುವುದರಿಂದ ಅನುಮತಿ ಸಾಧ್ಯವಿಲ್ಲ ಎಂದಿದೆ.

ಉತ್ತರ ಪ್ರದೇಶದ ಸೈಯ್ಯದ್ ಕಾಲ್ಬೆ ಜವಾದ್ ಎಂಬುವವರು ಸಲ್ಲಿಸಿದ್ದ ಅರ್ಜಿ ಆಲಿಸಿದ ಸಿಜೆಐ ಎಸ್‌ ಎ ಬೋಬ್ಡೆ ನೇತೃತ್ವದ ನ್ಯಾಯಪೀಠ ನಾವು ಮೆರವಣಿಗೆಗೆ ಅನುಮತಿ ನೀಡಿದರೆ ನಿರ್ದಿಷ್ಟ ಸಮುದಾಯವೊಂದು ಕೊರೊನಾ ಹರಡಲು ಕಾರಣವೆಂಬ ಟಾರ್ಗೆಟ್‌ಗೆ ಒಳಗಾಗುತ್ತದೆ ಎಂದಿದೆ.

ಅರ್ಜಿದಾರರು ಜೂನ್‌ ತಿಂಗಳಿನಲ್ಲಿ ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಗೆ ಅವಕಾಶ ನೀಡಿದ್ದನ್ನು ಉಲ್ಲೇಖಿಸಿ ಮೊಹರಂ ಹಬ್ಬದ ಮೆರವಣಿಗೆಗೂ ಅವಕಾಶ ನೀಡಬೇಕೆಂದು ಕೋರಿದ್ದರು.

ಇದಕ್ಕೆ ಉತ್ತರಿಸಿ ಸಿಜೆಐ ‘ನೀವು ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಯನ್ನು ಉಲ್ಲೇಖಿಸಿದ್ದೀರಿ. ಆದರೆ ಅದು ಕೇವಲ ಒಂದು ಊರಿನಲ್ಲಿ ಮತ್ತು ಒಂದು ಬೀದಿಯಲ್ಲಿ ಮಾತ್ರ ನಡೆದ ಮೆರವಣಿಗೆಯಾದ್ದರಿಂದ ನಮಗೆ ಅಪಾಯದ ಅಂದಾಜಿದ್ದರಿಂದ ಅನುಮತಿ ನೀಡಿದ್ದೆವು. ಆದರೆ ಇಡೀ ದೇಶಕ್ಕೆ ಅನ್ವಯವಾಗುವಂಥಹ ಸಾಮಾನ್ಯ ತೀರ್ಪು ನೀಡುವುದು ಕಷ್ಟ’ ಎಂದಿದ್ದಾರೆ.

ಒಂದು ಜಾಗದಲ್ಲಿ ನಡೆಯುವ ಮೆರವಣಿಗೆಯಾದರೆ ನಾವು ಅಪಾಯವನ್ನು ಅಂದಾಜಿಸಬಹುದು. ಹಾಗಾಗಿ ಇಡೀ ದೇಶದ ಜನರ ಆರೋಗ್ಯವನ್ನು ಅಪಾಯಕ್ಕೆ ತಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಇದಕ್ಕೆ ಪ್ರತಿಯಾಗಿ ಅರ್ಜಿದಾರರು ಲಕ್ನೋ ನಗರದಲ್ಲಿ ಮೆರವಣಿಗೆ ನಡೆಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ಹಾಗಾದರೆ ನೀವು ಅಲಹಾಬಾದ್ ಹೈಕೋರ್ಟ್ ಅನ್ನು ಸಂಪರ್ಕಿಸಿ ಎಂದು ಸುಪ್ರೀಂ ಹೇಳಿದೆ.

ಜೂನ್ ತಿಂಗಳಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದ ವೇಳೆ ಸುಪ್ರೀಂ ಕೋರ್ಟ್ ‘ಜಗನ್ನಾಥ ದೇವರು ನಮ್ಮನ್ನು ಕ್ಷಮಿಸುವುದಿಲ್ಲ’ ಎಂದು ಹೇಳುವ ಮೂಲಕ ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಗೆ ಅನುಮತಿ ನಿರಾಕರಿಸಿತ್ತು. ಆದರೆ ಐದು ದಿನಗಳ ನಂತರ ಕೇಂದ್ರ ಮನವಿ ಮೇರೆಗೆ ಮೆರವಣಿಗೆಗೆ ಅವಕಾಶ ನೀಡಿತ್ತು.


ಇದನ್ನೂ ಓದಿ: ’ಬ್ಯಾಡ್‌ ಬಾಯ್‌ ಬಿಲಿಯನೇರ್ಸ್’ ಸಾಕ್ಷ್ಯಚಿತ್ರದ ವಿರುದ್ದ ಕೋರ್ಟ್ ಮೆಟ್ಟಿಲೇರಿದ ಮೆಹುಲ್ ಚೋಕ್ಸಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...