Homeಮುಖಪುಟಯುಎಪಿಎ ಪ್ರಕರಣದಲ್ಲಿ ಮುಸ್ಲಿಂ ವ್ಯಕ್ತಿಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ : 'ಸಂದೇಶ ನೀಡಲು ಇದು...

ಯುಎಪಿಎ ಪ್ರಕರಣದಲ್ಲಿ ಮುಸ್ಲಿಂ ವ್ಯಕ್ತಿಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ : ‘ಸಂದೇಶ ನೀಡಲು ಇದು ಅತ್ಯುತ್ತಮ ಬೆಳಿಗ್ಗೆ’ ಎಂದ ನ್ಯಾಯಾಲಯ

ದೆಹಲಿ ಸ್ಪೋಟದ ಮರುದಿನ ಹೇಳಿಕೆ ನೀಡಿದ ನ್ಯಾಯಪೀಠ

- Advertisement -
- Advertisement -

ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪಿಯಾಗಿರುವ ಮುಸ್ಲಿಂ ವ್ಯಕ್ತಿ ಸೈಯದ್ ಮಾಮೂರ್ ಅಲಿ ಅಥವಾ ಮಾಮೂರ್ ಭಾಯಿಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್, ‘ಸಂದೇಶ ಕಳುಹಿಸಲು ಇದು ಅತ್ಯುತ್ತಮ ಬೆಳಿಗ್ಗೆ” ಎಂದು ಮಂಗಳವಾರ (ನ.11) ಹೇಳಿದೆ.

ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟ ಸಂಭವಿಸಿದ ಮರುದಿನ ಸುಪ್ರೀಂ ಕೋರ್ಟ್ ಮೇಲಿನ ಹೇಳಿಕೆ ನೀಡಿದೆ. ಆದರೆ, ದೆಹಲಿ ಸ್ಪೋಟಕ್ಕೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವರದಿಗಳು ತಿಳಿಸಿವೆ.

ಮಂಗಳವಾರ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಪರ ವಕೀಲ ಸಿದ್ಧಾರ್ಥ ದವೆ, ದೆಹಲಿ ಸ್ಪೋಟವನ್ನು ಉಲ್ಲೇಖಿಸಿ, “ಇದು ವಾದ ಮಂಡಿಸಲು ಅತ್ಯುತ್ತಮ ಬೆಳಿಗ್ಗೆ ಅಲ್ಲ” ಎಂದಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠ, “ಸಂದೇಶ ಕಳುಹಿಸಲು ಇದು ಅತ್ಯುತ್ತಮ ಬೆಳಿಗ್ಗೆ” ಎಂದಿದೆ.

ಬಾರ್ ಮತ್ತು ಬೆಂಚ್ ವರದಿಯ ಪ್ರಕಾರ, ಆರೋಪಿಯಿಂದ ಪ್ರಚೋದನಕಾರಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನ್ಯಾಯಾಲಯ ಹೇಳಿದಾಗ, ಅದು ಕೇವಲ ಇಸ್ಲಾಮಿಕ್ ಸಾಹಿತ್ಯ ಎಂದು ದೇವ್ ಸ್ಪಷ್ಟಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಮೆಹ್ತಾ ಅವರು, ಆರೋಪಿಗಳು ವಾಟ್ಸಾಪ್ ಗುಂಪನ್ನು ರಚಿಸಿಕೊಂಡಿದ್ದು, ಅಲ್ಲಿ ಐಸಿಸ್ ಧ್ವಜಕ್ಕೆ ‘ಬಹುತೇಕ ಹೋಲುವ’ ಧ್ವಜ ಕಂಡುಬಂದಿದೆ ಎಂದಿದ್ದಾರೆ.

ಆಗ, ಮಾಮೂರ್ ಅಲಿ ಎರಡು ವರ್ಷಗಳಿಗೂ ಹೆಚ್ಚು ಸಮಯದಿಂದ ಜೈಲಿನಲ್ಲಿದ್ದಾರೆ. ಯಾವುದೇ ಆರ್‌ಡಿಎಕ್ಸ್ ಅಥವಾ ಸ್ಫೋಟಕಗಳು ಅವರ ಬಳಿ ಪತ್ತೆಯಾಗಿಲ್ಲ. ಅಲ್ಲದೆ, ಅವರು ಶೇಕಡ 70ರಷ್ಟು ಅಂಗವಿಕಲರಾಗಿದ್ದಾರೆ ಎಂದು ಪೀಠಕ್ಕೆ ತಿಳಿಸಿದ್ದಾರೆ.

ಈ ಎಲ್ಲಾ ವಾದಗಳ ಹೊರತಾಗಿಯೂ, ಆರೋಪಗಳ ಗಂಭೀರತೆಯನ್ನು ಉಲ್ಲೇಖಿಸಿ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿದೆ.

ಆದಾಗ್ಯೂ, ವಿಚಾರಣೆಯನ್ನು ಎರಡು ವರ್ಷಗಳ ಒಳಗೆ ಪೂರ್ಣಗೊಳಿಸಬೇಕು ಎಂದು ಪೀಠ ನಿರ್ದೇಶಿಸಿದೆ. ಆ ಅವಧಿಯೊಳಗೆ ವಿಚಾರಣೆ ಮುಗಿಯದಿದ್ದರೆ, ವಿಳಂಬಕ್ಕೆ ಆರೋಪಿ ಕಾರಣವಲ್ಲದಿದ್ದರೆ, ಅವರು ಜಾಮೀನಿಗಾಗಿ ಮತ್ತೆ ಅರ್ಜಿ ಸಲ್ಲಿಸಬಹುದು ಎಂದಿದೆ.

ನ್ಯಾಯಾಲಯದ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಟಿಎಂಸಿ ಸಂಸದ ಸಾಕೇತ್ ಗೋಖಲೆ, “ನಿಮ್ಮ ವೈಯಕ್ತಿಕ ಸ್ವಾತಂತ್ರ್ಯವನ್ನು ಈಗ ಸಂಬಂಧವಿಲ್ಲದ ಬೆಳಗಿನ ಸುದ್ದಿಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತಿದೆ. ಸಂವಿಧಾನ ವಾರಾಂತ್ಯದ ಉಪನ್ಯಾಸಗಳಿಗೆ ಉಲ್ಲೇಖ ಪುಸ್ತಕವಾಗಿ ಮಾತ್ರ ಉಳಿದಿದೆ” ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ಭಾರತೀಯ ಸುಪ್ರೀಂ ಕೋರ್ಟ್ ದುರಂತ ಸ್ಫೋಟದ ಒಂದು ದಿನದ ನಂತರ ಮುಸ್ಲಿಂ ಆರೋಪಿಗೆ ಜಾಮೀನು ನಿರಾಕರಿಸಿ ‘ಸಂದೇಶ ಕಳುಹಿಸಲು’ ಬಯಸುತ್ತಿದೆಯಾ? ಯಾರಿಗೆ ಸಂದೇಶ? ಅದೇ ದಿನ ಬೆಳಗ್ಗೆ ಮುಖ್ಯ ನ್ಯಾಯಮೂರ್ತಿ ಕಾನೂನಿನ ಆಡಳಿತಕ್ಕೆ ನ್ಯಾಯಾಲಯದ ಬದ್ಧತೆಯ ಬಗ್ಗೆ ಮಾತನಾಡಿದ್ದರು. ಇದು ನನಗೆ ಕಾನೂನಿನ ಆಡಳಿತದಂತೆ ತೋರುವುದಿಲ್ಲ. ಪಕ್ಷಪಾತಿ ನ್ಯಾಯಾಂಗ ಮನಸ್ಸು,” ಎಂದು ವಕೀಲ ಅಶೀಷ್ ಗೋಯಲ್ ಹೇಳಿದ್ದಾರೆ.

ತಮಿಳುನಾಡು, ಪ.ಬಂಗಾಳದಲ್ಲಿ ಎಸ್‌ಐಆರ್ ಪ್ರಶ್ನಿಸಿ ಅರ್ಜಿ : ಚು. ಆಯೋಗಕ್ಕೆ ಸುಪ್ರೀಂ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...