Homeಮುಖಪುಟಯುಎಪಿಎ ಪ್ರಕರಣದಲ್ಲಿ ಮುಸ್ಲಿಂ ವ್ಯಕ್ತಿಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ : 'ಸಂದೇಶ ನೀಡಲು ಇದು...

ಯುಎಪಿಎ ಪ್ರಕರಣದಲ್ಲಿ ಮುಸ್ಲಿಂ ವ್ಯಕ್ತಿಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ : ‘ಸಂದೇಶ ನೀಡಲು ಇದು ಅತ್ಯುತ್ತಮ ಬೆಳಿಗ್ಗೆ’ ಎಂದ ನ್ಯಾಯಾಲಯ

ದೆಹಲಿ ಸ್ಪೋಟದ ಮರುದಿನ ಹೇಳಿಕೆ ನೀಡಿದ ನ್ಯಾಯಪೀಠ

- Advertisement -
- Advertisement -

ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪಿಯಾಗಿರುವ ಮುಸ್ಲಿಂ ವ್ಯಕ್ತಿ ಸೈಯದ್ ಮಾಮೂರ್ ಅಲಿ ಅಥವಾ ಮಾಮೂರ್ ಭಾಯಿಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್, ‘ಸಂದೇಶ ಕಳುಹಿಸಲು ಇದು ಅತ್ಯುತ್ತಮ ಬೆಳಿಗ್ಗೆ” ಎಂದು ಮಂಗಳವಾರ (ನ.11) ಹೇಳಿದೆ.

ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟ ಸಂಭವಿಸಿದ ಮರುದಿನ ಸುಪ್ರೀಂ ಕೋರ್ಟ್ ಮೇಲಿನ ಹೇಳಿಕೆ ನೀಡಿದೆ. ಆದರೆ, ದೆಹಲಿ ಸ್ಪೋಟಕ್ಕೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವರದಿಗಳು ತಿಳಿಸಿವೆ.

ಮಂಗಳವಾರ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಪರ ವಕೀಲ ಸಿದ್ಧಾರ್ಥ ದವೆ, ದೆಹಲಿ ಸ್ಪೋಟವನ್ನು ಉಲ್ಲೇಖಿಸಿ, “ಇದು ವಾದ ಮಂಡಿಸಲು ಅತ್ಯುತ್ತಮ ಬೆಳಿಗ್ಗೆ ಅಲ್ಲ” ಎಂದಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠ, “ಸಂದೇಶ ಕಳುಹಿಸಲು ಇದು ಅತ್ಯುತ್ತಮ ಬೆಳಿಗ್ಗೆ” ಎಂದಿದೆ.

ಬಾರ್ ಮತ್ತು ಬೆಂಚ್ ವರದಿಯ ಪ್ರಕಾರ, ಆರೋಪಿಯಿಂದ ಪ್ರಚೋದನಕಾರಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನ್ಯಾಯಾಲಯ ಹೇಳಿದಾಗ, ಅದು ಕೇವಲ ಇಸ್ಲಾಮಿಕ್ ಸಾಹಿತ್ಯ ಎಂದು ದೇವ್ ಸ್ಪಷ್ಟಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಮೆಹ್ತಾ ಅವರು, ಆರೋಪಿಗಳು ವಾಟ್ಸಾಪ್ ಗುಂಪನ್ನು ರಚಿಸಿಕೊಂಡಿದ್ದು, ಅಲ್ಲಿ ಐಸಿಸ್ ಧ್ವಜಕ್ಕೆ ‘ಬಹುತೇಕ ಹೋಲುವ’ ಧ್ವಜ ಕಂಡುಬಂದಿದೆ ಎಂದಿದ್ದಾರೆ.

ಆಗ, ಮಾಮೂರ್ ಅಲಿ ಎರಡು ವರ್ಷಗಳಿಗೂ ಹೆಚ್ಚು ಸಮಯದಿಂದ ಜೈಲಿನಲ್ಲಿದ್ದಾರೆ. ಯಾವುದೇ ಆರ್‌ಡಿಎಕ್ಸ್ ಅಥವಾ ಸ್ಫೋಟಕಗಳು ಅವರ ಬಳಿ ಪತ್ತೆಯಾಗಿಲ್ಲ. ಅಲ್ಲದೆ, ಅವರು ಶೇಕಡ 70ರಷ್ಟು ಅಂಗವಿಕಲರಾಗಿದ್ದಾರೆ ಎಂದು ಪೀಠಕ್ಕೆ ತಿಳಿಸಿದ್ದಾರೆ.

ಈ ಎಲ್ಲಾ ವಾದಗಳ ಹೊರತಾಗಿಯೂ, ಆರೋಪಗಳ ಗಂಭೀರತೆಯನ್ನು ಉಲ್ಲೇಖಿಸಿ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿದೆ.

ಆದಾಗ್ಯೂ, ವಿಚಾರಣೆಯನ್ನು ಎರಡು ವರ್ಷಗಳ ಒಳಗೆ ಪೂರ್ಣಗೊಳಿಸಬೇಕು ಎಂದು ಪೀಠ ನಿರ್ದೇಶಿಸಿದೆ. ಆ ಅವಧಿಯೊಳಗೆ ವಿಚಾರಣೆ ಮುಗಿಯದಿದ್ದರೆ, ವಿಳಂಬಕ್ಕೆ ಆರೋಪಿ ಕಾರಣವಲ್ಲದಿದ್ದರೆ, ಅವರು ಜಾಮೀನಿಗಾಗಿ ಮತ್ತೆ ಅರ್ಜಿ ಸಲ್ಲಿಸಬಹುದು ಎಂದಿದೆ.

ನ್ಯಾಯಾಲಯದ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಟಿಎಂಸಿ ಸಂಸದ ಸಾಕೇತ್ ಗೋಖಲೆ, “ನಿಮ್ಮ ವೈಯಕ್ತಿಕ ಸ್ವಾತಂತ್ರ್ಯವನ್ನು ಈಗ ಸಂಬಂಧವಿಲ್ಲದ ಬೆಳಗಿನ ಸುದ್ದಿಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತಿದೆ. ಸಂವಿಧಾನ ವಾರಾಂತ್ಯದ ಉಪನ್ಯಾಸಗಳಿಗೆ ಉಲ್ಲೇಖ ಪುಸ್ತಕವಾಗಿ ಮಾತ್ರ ಉಳಿದಿದೆ” ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ಭಾರತೀಯ ಸುಪ್ರೀಂ ಕೋರ್ಟ್ ದುರಂತ ಸ್ಫೋಟದ ಒಂದು ದಿನದ ನಂತರ ಮುಸ್ಲಿಂ ಆರೋಪಿಗೆ ಜಾಮೀನು ನಿರಾಕರಿಸಿ ‘ಸಂದೇಶ ಕಳುಹಿಸಲು’ ಬಯಸುತ್ತಿದೆಯಾ? ಯಾರಿಗೆ ಸಂದೇಶ? ಅದೇ ದಿನ ಬೆಳಗ್ಗೆ ಮುಖ್ಯ ನ್ಯಾಯಮೂರ್ತಿ ಕಾನೂನಿನ ಆಡಳಿತಕ್ಕೆ ನ್ಯಾಯಾಲಯದ ಬದ್ಧತೆಯ ಬಗ್ಗೆ ಮಾತನಾಡಿದ್ದರು. ಇದು ನನಗೆ ಕಾನೂನಿನ ಆಡಳಿತದಂತೆ ತೋರುವುದಿಲ್ಲ. ಪಕ್ಷಪಾತಿ ನ್ಯಾಯಾಂಗ ಮನಸ್ಸು,” ಎಂದು ವಕೀಲ ಅಶೀಷ್ ಗೋಯಲ್ ಹೇಳಿದ್ದಾರೆ.

ತಮಿಳುನಾಡು, ಪ.ಬಂಗಾಳದಲ್ಲಿ ಎಸ್‌ಐಆರ್ ಪ್ರಶ್ನಿಸಿ ಅರ್ಜಿ : ಚು. ಆಯೋಗಕ್ಕೆ ಸುಪ್ರೀಂ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...