Homeಮುಖಪುಟಯುಪಿ ಸರ್ಕಾರ ಬಂಧಿಸಿದ ಕೇರಳದ ಪತ್ರಕರ್ತನಿಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ!

ಯುಪಿ ಸರ್ಕಾರ ಬಂಧಿಸಿದ ಕೇರಳದ ಪತ್ರಕರ್ತನಿಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ!

ಪ್ರಕರಣದ ಬಗ್ಗೆ ಪ್ರತಿಕ್ರಿಯೆ ಕೋರಿ ಉತ್ತರ ಪ್ರದೇಶ ಸರಕಾರಕ್ಕೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.

- Advertisement -
- Advertisement -

ಹತ್ರಾಸ್ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಬಗ್ಗೆ ವರದಿ ಮಾಡಲು ತೆರಳಿದ್ದಾಗ ಉತ್ತರ ಪ್ರದೇಶ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್‌ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ.

ನವೆಂಬರ್ 20 ರ ಶುಕ್ರವಾರದಂದು ಪ್ರಕರಣದ ಅರ್ಜಿಯ ವಿಚಾರಣೆ ನಡೆಸಲಾಗುವುದು ಎಂದಿರುವ ಸುಪ್ರೀಂಕೋರ್ಟ್, ಪ್ರಕರಣದ ಬಗ್ಗೆ ಪ್ರತಿಕ್ರಿಯೆ ಕೋರಿ ಉತ್ತರ ಪ್ರದೇಶ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಇದನ್ನೂ ಓದಿ: ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

ಕೇರಳ ಕಾರ್ಯನಿರತ ಪತ್ರಕರ್ತರ ಸಂಘ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ಎಸ್.ಎ. ಬೊಬ್ಡೆಯವರ ನೇತೃತ್ವದ ಪೀಠ, ಅರ್ಜಿದಾರರು ಜಾಮೀನಿಗಾಗಿ ಅಲಹಾಬಾದ್ ಹೈಕೋರ್ಟನ್ನು ಯಾಕೆ ಸಂಪರ್ಕಿಸಿಲ್ಲ ಎಂದು ಕೇಳಿದೆ.

ಇದಕ್ಕೆ ಉತ್ತರಿಸಿದ ಸಿದ್ದೀಕ್ ಕಪ್ಪನ್ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, “ ಅವರನ್ನು ಭೇಟಿಯಾಗಲು ಕೂಡ ಸಾಧ್ಯವಾಗುತ್ತಿಲ್ಲ. ಇನ್ನು ಹೈಕೋರ್ಟ್‌ಗೆ ಹೋಗುವುದು ಹೇಗೆ. FIR ನಲ್ಲಿ ಸಿದ್ದೀಕ್ ಕಪ್ಪನ್ ಹೆಸರಿಲ್ಲ, ಯಾವುದೇ ಅಪರಾಧಗಳ ಆರೋಪವಿಲ್ಲ ಅದರೂ ಅಕ್ಟೋಬರ್ 5 ರಿಂದ ಅವರು ಜೈಲಿನಲ್ಲಿದ್ದಾರೆ” ಎಂದರು.

ದಲಿತ ಯುವತಿಯ ಅತ್ಯಾಚಾರ ಹಾಗೂ ಕೊಲೆಯ ಬಗ್ಗೆ ವರದಿ ಮಾಡುವುದಕ್ಕಾಗಿ ದೆಹಲಿಯಿಂದ ಹತ್ರಾಸ್‌ಗೆ ಹೊರಟಿದ್ದ ಸಿದ್ದೀಕ್ ಅವರನ್ನು ಅಕ್ಟೋಬರ್‌ 6 ರಂದು ಉತ್ತರ ಪ್ರದೇಶ ಪೊಲೀಸರು PFI ಜೊತೆಗೆ ಸಂಪರ್ಕ ಹೊಂದಿದ್ದಾರೆಂದು ಆರೋಪಿಸಿ ಮಥುರಾದಲ್ಲಿ ಬಂಧಿಸಿದ್ದರು.

ಇದನ್ನೂ ಓದಿ: PFI ಸಂಬಂಧ ಆರೋಪ; ಹತ್ರಾಸ್‌ಗೆ ಹೊರಟ ಕೇರಳದ ಪತ್ರಕರ್ತ ಸೇರಿ ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....