Homeಮುಖಪುಟಯುಪಿ ಸರ್ಕಾರ ಬಂಧಿಸಿದ ಕೇರಳದ ಪತ್ರಕರ್ತನಿಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ!

ಯುಪಿ ಸರ್ಕಾರ ಬಂಧಿಸಿದ ಕೇರಳದ ಪತ್ರಕರ್ತನಿಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ!

ಪ್ರಕರಣದ ಬಗ್ಗೆ ಪ್ರತಿಕ್ರಿಯೆ ಕೋರಿ ಉತ್ತರ ಪ್ರದೇಶ ಸರಕಾರಕ್ಕೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.

- Advertisement -
- Advertisement -

ಹತ್ರಾಸ್ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಬಗ್ಗೆ ವರದಿ ಮಾಡಲು ತೆರಳಿದ್ದಾಗ ಉತ್ತರ ಪ್ರದೇಶ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್‌ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ.

ನವೆಂಬರ್ 20 ರ ಶುಕ್ರವಾರದಂದು ಪ್ರಕರಣದ ಅರ್ಜಿಯ ವಿಚಾರಣೆ ನಡೆಸಲಾಗುವುದು ಎಂದಿರುವ ಸುಪ್ರೀಂಕೋರ್ಟ್, ಪ್ರಕರಣದ ಬಗ್ಗೆ ಪ್ರತಿಕ್ರಿಯೆ ಕೋರಿ ಉತ್ತರ ಪ್ರದೇಶ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಇದನ್ನೂ ಓದಿ: ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

ಕೇರಳ ಕಾರ್ಯನಿರತ ಪತ್ರಕರ್ತರ ಸಂಘ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ಎಸ್.ಎ. ಬೊಬ್ಡೆಯವರ ನೇತೃತ್ವದ ಪೀಠ, ಅರ್ಜಿದಾರರು ಜಾಮೀನಿಗಾಗಿ ಅಲಹಾಬಾದ್ ಹೈಕೋರ್ಟನ್ನು ಯಾಕೆ ಸಂಪರ್ಕಿಸಿಲ್ಲ ಎಂದು ಕೇಳಿದೆ.

ಇದಕ್ಕೆ ಉತ್ತರಿಸಿದ ಸಿದ್ದೀಕ್ ಕಪ್ಪನ್ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, “ ಅವರನ್ನು ಭೇಟಿಯಾಗಲು ಕೂಡ ಸಾಧ್ಯವಾಗುತ್ತಿಲ್ಲ. ಇನ್ನು ಹೈಕೋರ್ಟ್‌ಗೆ ಹೋಗುವುದು ಹೇಗೆ. FIR ನಲ್ಲಿ ಸಿದ್ದೀಕ್ ಕಪ್ಪನ್ ಹೆಸರಿಲ್ಲ, ಯಾವುದೇ ಅಪರಾಧಗಳ ಆರೋಪವಿಲ್ಲ ಅದರೂ ಅಕ್ಟೋಬರ್ 5 ರಿಂದ ಅವರು ಜೈಲಿನಲ್ಲಿದ್ದಾರೆ” ಎಂದರು.

ದಲಿತ ಯುವತಿಯ ಅತ್ಯಾಚಾರ ಹಾಗೂ ಕೊಲೆಯ ಬಗ್ಗೆ ವರದಿ ಮಾಡುವುದಕ್ಕಾಗಿ ದೆಹಲಿಯಿಂದ ಹತ್ರಾಸ್‌ಗೆ ಹೊರಟಿದ್ದ ಸಿದ್ದೀಕ್ ಅವರನ್ನು ಅಕ್ಟೋಬರ್‌ 6 ರಂದು ಉತ್ತರ ಪ್ರದೇಶ ಪೊಲೀಸರು PFI ಜೊತೆಗೆ ಸಂಪರ್ಕ ಹೊಂದಿದ್ದಾರೆಂದು ಆರೋಪಿಸಿ ಮಥುರಾದಲ್ಲಿ ಬಂಧಿಸಿದ್ದರು.

ಇದನ್ನೂ ಓದಿ: PFI ಸಂಬಂಧ ಆರೋಪ; ಹತ್ರಾಸ್‌ಗೆ ಹೊರಟ ಕೇರಳದ ಪತ್ರಕರ್ತ ಸೇರಿ ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...