Homeಕರ್ನಾಟಕಸುಪ್ರೀಂನಿಂದ ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನಿರಾಕರಣೆ: ಪೊಲೀಸ್ ಕೋಟೆಯಾಗಿ ಮಾರ್ಪಟ್ಟ ಮೈದಾನ

ಸುಪ್ರೀಂನಿಂದ ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನಿರಾಕರಣೆ: ಪೊಲೀಸ್ ಕೋಟೆಯಾಗಿ ಮಾರ್ಪಟ್ಟ ಮೈದಾನ

- Advertisement -
- Advertisement -

ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡದಂತೆ ಸುಪ್ರೀಂ ಕೋರ್ಟ್‌ ಆದೇಶ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸರು ಬುಧವಾರ ಸುಮಾರು 1,500 ಪೊಲೀಸರನ್ನು ಈದ್ಗಾ ಮೈದಾನದಲ್ಲಿ ನಿಯೋಜಿಸಿದ್ದಾರೆ ಎಂದು ವರದಿಯಾಗಿದೆ.

ಮೈದಾನದಲ್ಲಿರುವ ಸಿಬ್ಬಂದಿಗಳಲ್ಲಿ 21 ಎಸಿಪಿಗಳು, 47 ಇನ್ಸ್‌ಪೆಕ್ಟರ್‌ಗಳು, 130 ಸಬ್ ಇನ್‌ಸ್ಪೆಕ್ಟರ್‌ಗಳು, 126 ಸಹಾಯಕ ಸಬ್ ಇನ್‌ಸ್ಪೆಕ್ಟರ್‌ಗಳು ಮತ್ತು 900 ಕಾನ್‌ಸ್ಟೆಬಲ್‌ಗಳು ಸೇರಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌‌ ಪತ್ರಿಕೆ ಉಲ್ಲೇಖಿಸಿದ್ದು, ಅವರನ್ನು ಡಿಸಿಪಿಗಳು ಮೇಲ್ವಿಚಾರಣೆ ಮಾಡುತ್ತಾರೆ ಎಂದು ವರದಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಒಟ್ಟು 120 ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್) ಸಿಬ್ಬಂದಿ, 100 ವಿಶೇಷ ಮದ್ದುಗುಂಡು ತಜ್ಞರ ತಂಡ, ಕರ್ನಾಟಕ ರಾಜ್ಯ ಮೀಸಲು ಪೊಲೀಸರ (ಕೆಎಸ್‌ಆರ್‌ಪಿ) 10 ಪ್ಲಟೂನ್‌ಗಳನ್ನು ಕೂಡಾ ಸ್ಥಳದಲ್ಲಿ ಇರಿಸಲಾಗಿದೆ.

ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ನಡೆಸುವಂತಿಲ್ಲ: ಸುಪ್ರೀಂ ಆದೇಶ

ಪೊಲೀಸರು ಈಗಾಗಲೇ ಈ ಪ್ರದೇಶದ ರೌಡಿ ಎಲಿಮೆಂಟ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಧ್ವಜ ಮೆರವಣಿಗೆ ಮತ್ತು ಧಾರ್ಮಿಕ ಮುಖಂಡರೊಂದಿಗೆ ಸರಣಿ ಸಭೆಗಳನ್ನು ಸಹ ನಡೆಸಿದ್ದಾರೆ. ಈ ನಡುವೆ ಗಣೇಶೋತ್ಸವ ಆಚರಿಸಲು ಅವಕಾಶ ನೀಡುವಂತೆ ಒತ್ತಾಯಿಸಿ ಕಾನೂನು ಹೋರಾಟ ನಡೆಸುತ್ತಿರುವ ಚಾಮರಾಜನಗರ ನಾಗರಿಕರ ವೇದಿಕೆ ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸುವುದಾಗಿ ಹೇಳಿದೆ.

“ಸಂಘಟನೆಯು ತನ್ನ ಕಾನೂನು ಹೋರಾಟವನ್ನು ಮುಂದುವರೆಸಲಿದೆ. ಮುಂಬರುವ ದಿನಗಳಲ್ಲಿ ಜಯಶಾಲಿಯಾಗುವ ವಿಶ್ವಾಸವಿದೆ. ಅದರ ನಂತರ ಈದ್ಗಾ ಮೈದಾನದಲ್ಲಿ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸುತ್ತೇವೆ” ಎಂದು ವೇದಿಕೆಯ ಅಧ್ಯಕ್ಷ ರಾಮೇಗೌಡ ಹೇಳಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಗಣೇಶೋತ್ಸವ ಆಚರಣೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿರುವ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಕೂಡಾ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ ಎಂದು ವರದಿಯಾಗಿದೆ.

ಕರ್ನಾಟಕ ವಕ್ಫ್ ಮಂಡಳಿಯ ಅರ್ಜಿಯ ಮೇರೆಗೆ ಸುಪ್ರೀಂಕೋರ್ಟ್‌ ಮಂಗಳವಾರ ಮಧ್ಯಂತರ ಆದೇಶ ನೀಡಿದ್ದು ‘ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ’ ಕಾಪಾಡಬೇಕು ಎಂದು ತೀರ್ಪು ನೀಡಿದ್ದು, ಗಣೇಶ ಚತುರ್ಥಿ ನಡೆಸಬಾರದೆಂದು ಹೇಳಿದೆ.

ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದ ಗಣೇಶ ಉತ್ಸವಕ್ಕೆ ತಡೆ ಇಲ್ಲ: ತಡರಾತ್ರಿ ವಿಚಾರಣೆಯಲ್ಲಿ ಹೈಕೋರ್ಟ್ ಹೇಳಿದ್ದೇನು?

ಈ ಹಿಂದೆ ಗಣೇಶ ಹಬ್ಬವನ್ನು ಇಲ್ಲಿ ಆಚರಿಸಲು ಸರ್ಕಾರ ಅನುಮತಿ ನೀಡಬಹುದು ಎಂದು ಹೈಕೋರ್ಟ್ ಇತ್ತೀಚೆಗೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ವಕ್ಫ್‌ ಬೋರ್ಡ್ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. “200 ವರ್ಷಗಳಿಂದ ಈ ಸ್ಥಳದಲ್ಲಿ ಇಂತಹ ಧಾರ್ಮಿಕ ಉತ್ಸವಗಳನ್ನು ನಡೆಸಿಲ್ಲ” ಎಂದು ವಕ್ಫ್‌ ಮಂಡಳಿ ವಾದಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...