Homeಮುಖಪುಟಅಟಾರ್ನಿ ಜನರಲ್ ಹೆಸರನ್ನೇ ಕೈಬಿಟ್ಟ ಸುಪ್ರೀಂಕೋರ್ಟ್: ಭಿನ್ನ ಅಭಿಪ್ರಾಯಕ್ಕೆ ಕತ್ತರಿಯೇ?

ಅಟಾರ್ನಿ ಜನರಲ್ ಹೆಸರನ್ನೇ ಕೈಬಿಟ್ಟ ಸುಪ್ರೀಂಕೋರ್ಟ್: ಭಿನ್ನ ಅಭಿಪ್ರಾಯಕ್ಕೆ ಕತ್ತರಿಯೇ?

ಆದರೆ ಅಟಾರ್ನಿ ಜನರಲ್‌ರವರು ಪ್ರಶಾಂತ್ ಭೂಷಣ್‌ರವರಿಗೆ ಶಿಕ್ಷೆ ನೀಡಬೇಡಿ, ಅವರು ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಪೀಠದ ಮುಂದೆ ಮನವಿ ಮಾಡಿದ್ದರು. ಆದರೆ ಪೀಠ ಅದನ್ನು ನಿರಾಕರಿಸಿತ್ತು.

- Advertisement -
- Advertisement -

ಖ್ಯಾತ ನ್ಯಾಯವಾದಿ ಪ್ರಶಾಂತ್ ಭೂಷಣ್‌ರವರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ‘ಭೂಷಣ್ ತಮ್ಮ ಹೇಳಿಕೆಯ ಕುರಿತು ಮರುಪರಿಶೀಲಿಸಲು’ ಮೂರು ದಿನಗಳ ಸಮಯ ನೀಡಿದೆ.

ಆಶ್ಚರ್ಯವೆಂದರೆ ಸುಪ್ರೀಂ ಕೋರ್ಟಿನ ಆರ್ಡರ್‌ ಶೀಟ್‌ಅನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದು, ವಿಚಾರಣೆಯ ಸಂದರ್ಭದಲ್ಲಿ ಹಾಜರಿದ್ದ, ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್‌ರವರನ್ನು ಅದರಲ್ಲಿ ಹೆಸರಿಸಲಾಗಿಲ್ಲ.

ಎರಡೂವರೆ ಗಂಟೆಗೂ ಹೆಚ್ಚು ವೇಳೆ ನಡೆದ ವಾದ-ವಿವಾದದಲ್ಲಿ ಅಟಾರ್ನಿ ಜನರಲ್ ಹಾಜರಿದ್ದರು ಮಾತ್ರವಲ್ಲ ಕೋರ್ಟಿಗೆ ಭೂಷಣ್ ಪರವಾಗಿ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿದ್ದರು.

ಪ್ರಶಾಂತ್ ಭೂಷಣ್‌ರವರ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಆಗಸ್ಟ್ 5 ರಂದು ನಡೆದ ಮೊದಲ ವಿಚಾರಣೆಯಲ್ಲಿ ಸಂದರ್ಭದಲ್ಲಿ ಅವರು ಹಾಜರಿದ್ದುದ್ದನ್ನು ಅಂದಿನ ನಡಾವಳಿಗಳಲ್ಲಿ ದಾಖಲಿಸಲಾಗಿತ್ತು. ಆದರೆ ನಿನ್ನೆಯ ತೀರ್ಪು ನೀಡುವ ವಿಚಾರಣೆಯಲ್ಲಿ ಅವರನ್ನು ಕೈಬಿಟ್ಟಿರುವುದು ಏಕೆ ಎಂಬ ಪ್ರಶ್ನೆ ಉದ್ಭವವಾಗಿದೆ.

ವಿಚಾರಣೆಯ ಸಂದರ್ಭದಲ್ಲಿ ಪ್ರಶಾಂತ್ ಭೂಷಣ್‌ರವರು ತಮ್ಮ ಹೇಳಿಕೆಯನ್ನು ದಾಖಲಿಸಿದ ನಂತರ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠವೇ ‘ಭೂಷಣ್ ಅವರಿಗೆ ತಮ್ಮ ಹೇಳಿಕೆಯನ್ನು ಮರುಪರಿಶೀಲಿಸಲು ಸಮಯ ನೀಡಬಹುದೇ’ ಎಂದು ಅಟಾರ್ನಿ ಜನರಲ್‌ರವರ ಸಲಹೆ ಕೇಳಿತ್ತು. ಆಗ ಅವರು ಸಮಯ ನೀಡಬಹುದು ಎಂದು ಅಭಿಪ್ರಾಯಪಟ್ಟಿದ್ದರು.

ಆದರೆ ಅಟಾರ್ನಿ ಜನರಲ್‌ರವರು ಪ್ರಶಾಂತ್ ಭೂಷಣ್‌ರವರಿಗೆ ಶಿಕ್ಷೆ ನೀಡಬೇಡಿ, ಅವರು ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಪೀಠದ ಮುಂದೆ ಮನವಿ ಮಾಡಿದ್ದರು. ಆದರೆ ಪೀಠ ಅದನ್ನು ನಿರಾಕರಿಸಿತ್ತು.

ಆಗಸ್ಟ್ 5 ರಂದು ನಡೆದ ವಿಚಾರಣೆಯಲ್ಲಿ ಅಟಾರ್ನಿ ಜನರಲ್ ಹೆಸರು ನಮೂದಿಸಿರುವುದು..

ವಿಚಾರಣೆಯ ಕೊನೆಯಲ್ಲಿ ಅಟಾರ್ನಿ ಜನರಲ್‌ರವರು “”ಉನ್ನತ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿರುವ 9 ನ್ಯಾಯಾಧೀಶರ ಪಟ್ಟಿ ನನ್ನ ಬಳಿ ಇದೆ. 1987ರಲ್ಲಿ ನಾನು ಕೂಡ ಹೇಳಿದ್ದೆ” ಎಂದು  ಹೇಳುತ್ತಿರುವಾಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಮಿಶ್ರಾರವರು “ಅದನ್ನೆಲ್ಲ ಕೇಳಲು ನಾವು ಇಲ್ಲಿ ಕೂತಿಲ್ಲ  ಮಿ.ಅಟಾರ್ನಿ” ಎಂದು ಹೇಳುವ ಮೂಲಕ ತಡೆದರು.

ವಿಚಾರಣೆಯ ಆರಂಭದಲ್ಲಿ ಭೂಷಣ್ ಪರ ವಕೀಲರಾದ ರಾಜೀವ್ ಧವನ್ ಮತ್ತು ದುಷ್ಯಂತ್ ದವೆಯವರು ಅಟಾರ್ನಿ ಜನರಲ್‌ರವರು ಸಹ ವಿಡಿಯೋ ಕಾನ್ಫರೆನ್ಸ್‌ನಲ್ಲಿದ್ದು, ತಮ್ಮ ಹೇಳಿಕೆಯನ್ನು ದಾಖಲಿಸಲು ಕಾಯುತ್ತಿದ್ದಾರೆ ಎಂದು ನೆನಪಿಸಿದ್ದರು. ಆದರೆ ನ್ಯಾಯಮೂರ್ತಿ ಮಿಶ್ರಾರವರು ಅದು ನಮಗೂ ಗೊತ್ತಿದೆ, ನೀವು ನೆನಪಿಸುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಒಟ್ಟಿನಲ್ಲಿ ಅಟಾರ್ನಿ ಜನರಲ್ ವಿಚಾರಣೆಯ ವೇಳೆ ಸಕ್ರಿಯರಾಗಿ ಭಾಗವಹಿಸಿದ್ದರು. ಅವರು ಪ್ರಶಾಂತ್ ಭೂಷಣ್ ಪರ ವಾದ ಮಂಡಿಸಿದರು. ನ್ಯಾಯಪೀಠ ಅವರ ಸಲಹೆಯನ್ನು ಸಹ ಪಡೆದುಕೊಂಡಿತು. ಆದರೆ ಸಂಜೆ ಪ್ರಕಟವಾದ ತೀರ್ಪು ಬರಹದಲ್ಲಿ ಮಾತ್ರ ಅವರ ಹೆಸರನ್ನು ನಮೂದಿಸಿಲ್ಲ.

ಒಂದು ವೇಳೆ ಅಟಾರ್ನಿಯವರ ಹೆಸರು ಹಾಕುವುದೇ ಇಲ್ಲ ಎಂದಾದಲ್ಲಿ, ಇದೇ ಕೇಸಿನಲ್ಲಿ ಹಿಂದೆ ಏಕೆ ಹಾಕಿದರು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಈ ದಿನದ ವಿಚಾರಣೆಯ ಸಂದರ್ಭದಲ್ಲಿ ಅವರ ಅಗತ್ಯವಿರಲಿಲ್ಲ ಎನ್ನುವುದಾದರೆ, ಸುಪ್ರೀಂಕೋರ್ಟಿನ ಪೀಠ ಅವರನ್ನು ಕರೆಸಿದ್ದೇಕೆ? ವಿಚಾರಣೆಯ ನಡುವೆ ಅವರ ಅನಿಸಿಕೆಯನ್ನು ಕೇಳಿದ್ದೇಕೆ ಎಂಬುದು ಸಹಜ ಪ್ರಶ್ನೆ.

ಅಂದರೆ ಸರ್ಕಾರದ ಪರವಾಗಿರುವ ವಕೀಲರೂ ಸಹಾ ಪ್ರಶಾಂತ್ ಭೂಷಣ್ ಹೇಳಿದ್ದನ್ನಾಗಲೀ, ಪ್ರಶಾಂತ್ ಭೂಷಣ್ ಅವರ ಕೊಡುಗೆಯನ್ನಾಗಲೀ ನಿರಾಕರಿಸುವ ಸ್ಥಿತಿಯಲ್ಲಿಲ್ಲ; ಬದಲಿಗೆ ಪೂರಕವಾದ ಮಾತುಗಳನ್ನಾಡಬೇಕಾದ ಅನಿವಾರ್ಯತೆ ಇದ್ದಂತಿದೆ. ಇದನ್ನು ನಿರೀಕ್ಷಿಸಿರದ ಪೀಠ ಎಡವಿಬಿಟ್ಟು, ಇದೀಗ ಆ ರೀತಿಯ ಭಿನ್ನ ಅಭಿಪ್ರಾಯವನ್ನು ದಾಖಲಿಸಿದ ಅಟಾರ್ನಿಯವರ ಹೆಸರನ್ನೇ ಆರ್ಡರ್ ಶೀಟ್‌ನಲ್ಲಿ ಕೈಬಿಟ್ಟಿದೆ.

ಈ ಕುರಿತು ನಾನುಗೌರಿ.ಕಾಂ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾದ ಸಂಜಯ್ ಹೆಗಡೆ ಮತ್ತು ಹಿರಿಯ ಕಾರ್ಮಿಕ ಮುಖಂಡರಾದ ಎಸ್‌.ಬಾಲನ್‌ರವರನ್ನು ಮಾತನಾಡಿಸಿತು. ಇದು ಸುಪ್ರೀಂ ಕೋರ್ಟ್ ಬೇಕಂತಲೇ ಮಾಡಿದ್ದಲ್ಲ, ಅಪ್ಪಿ ತಪ್ಪಿ ಆದ ತಪ್ಪಾಗಿದೆ. ಅದನ್ನು ಅವರು ಸರಿಪಡಿಸಿಕೊಳ್ಳಬಹುದು. ಆದರೆ ಉಳಿದ ವಿಷಯಗಳು ಚರ್ಚಾರ್ಹ ಎಂದಿದ್ದಾರೆ.


ಇದನ್ನೂ ಓದಿ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...