Homeಮುಖಪುಟಅಟಾರ್ನಿ ಜನರಲ್ ಹೆಸರನ್ನೇ ಕೈಬಿಟ್ಟ ಸುಪ್ರೀಂಕೋರ್ಟ್: ಭಿನ್ನ ಅಭಿಪ್ರಾಯಕ್ಕೆ ಕತ್ತರಿಯೇ?

ಅಟಾರ್ನಿ ಜನರಲ್ ಹೆಸರನ್ನೇ ಕೈಬಿಟ್ಟ ಸುಪ್ರೀಂಕೋರ್ಟ್: ಭಿನ್ನ ಅಭಿಪ್ರಾಯಕ್ಕೆ ಕತ್ತರಿಯೇ?

ಆದರೆ ಅಟಾರ್ನಿ ಜನರಲ್‌ರವರು ಪ್ರಶಾಂತ್ ಭೂಷಣ್‌ರವರಿಗೆ ಶಿಕ್ಷೆ ನೀಡಬೇಡಿ, ಅವರು ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಪೀಠದ ಮುಂದೆ ಮನವಿ ಮಾಡಿದ್ದರು. ಆದರೆ ಪೀಠ ಅದನ್ನು ನಿರಾಕರಿಸಿತ್ತು.

- Advertisement -
- Advertisement -

ಖ್ಯಾತ ನ್ಯಾಯವಾದಿ ಪ್ರಶಾಂತ್ ಭೂಷಣ್‌ರವರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ‘ಭೂಷಣ್ ತಮ್ಮ ಹೇಳಿಕೆಯ ಕುರಿತು ಮರುಪರಿಶೀಲಿಸಲು’ ಮೂರು ದಿನಗಳ ಸಮಯ ನೀಡಿದೆ.

ಆಶ್ಚರ್ಯವೆಂದರೆ ಸುಪ್ರೀಂ ಕೋರ್ಟಿನ ಆರ್ಡರ್‌ ಶೀಟ್‌ಅನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದು, ವಿಚಾರಣೆಯ ಸಂದರ್ಭದಲ್ಲಿ ಹಾಜರಿದ್ದ, ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್‌ರವರನ್ನು ಅದರಲ್ಲಿ ಹೆಸರಿಸಲಾಗಿಲ್ಲ.

ಎರಡೂವರೆ ಗಂಟೆಗೂ ಹೆಚ್ಚು ವೇಳೆ ನಡೆದ ವಾದ-ವಿವಾದದಲ್ಲಿ ಅಟಾರ್ನಿ ಜನರಲ್ ಹಾಜರಿದ್ದರು ಮಾತ್ರವಲ್ಲ ಕೋರ್ಟಿಗೆ ಭೂಷಣ್ ಪರವಾಗಿ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿದ್ದರು.

ಪ್ರಶಾಂತ್ ಭೂಷಣ್‌ರವರ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಆಗಸ್ಟ್ 5 ರಂದು ನಡೆದ ಮೊದಲ ವಿಚಾರಣೆಯಲ್ಲಿ ಸಂದರ್ಭದಲ್ಲಿ ಅವರು ಹಾಜರಿದ್ದುದ್ದನ್ನು ಅಂದಿನ ನಡಾವಳಿಗಳಲ್ಲಿ ದಾಖಲಿಸಲಾಗಿತ್ತು. ಆದರೆ ನಿನ್ನೆಯ ತೀರ್ಪು ನೀಡುವ ವಿಚಾರಣೆಯಲ್ಲಿ ಅವರನ್ನು ಕೈಬಿಟ್ಟಿರುವುದು ಏಕೆ ಎಂಬ ಪ್ರಶ್ನೆ ಉದ್ಭವವಾಗಿದೆ.

ವಿಚಾರಣೆಯ ಸಂದರ್ಭದಲ್ಲಿ ಪ್ರಶಾಂತ್ ಭೂಷಣ್‌ರವರು ತಮ್ಮ ಹೇಳಿಕೆಯನ್ನು ದಾಖಲಿಸಿದ ನಂತರ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠವೇ ‘ಭೂಷಣ್ ಅವರಿಗೆ ತಮ್ಮ ಹೇಳಿಕೆಯನ್ನು ಮರುಪರಿಶೀಲಿಸಲು ಸಮಯ ನೀಡಬಹುದೇ’ ಎಂದು ಅಟಾರ್ನಿ ಜನರಲ್‌ರವರ ಸಲಹೆ ಕೇಳಿತ್ತು. ಆಗ ಅವರು ಸಮಯ ನೀಡಬಹುದು ಎಂದು ಅಭಿಪ್ರಾಯಪಟ್ಟಿದ್ದರು.

ಆದರೆ ಅಟಾರ್ನಿ ಜನರಲ್‌ರವರು ಪ್ರಶಾಂತ್ ಭೂಷಣ್‌ರವರಿಗೆ ಶಿಕ್ಷೆ ನೀಡಬೇಡಿ, ಅವರು ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಪೀಠದ ಮುಂದೆ ಮನವಿ ಮಾಡಿದ್ದರು. ಆದರೆ ಪೀಠ ಅದನ್ನು ನಿರಾಕರಿಸಿತ್ತು.

ಆಗಸ್ಟ್ 5 ರಂದು ನಡೆದ ವಿಚಾರಣೆಯಲ್ಲಿ ಅಟಾರ್ನಿ ಜನರಲ್ ಹೆಸರು ನಮೂದಿಸಿರುವುದು..

ವಿಚಾರಣೆಯ ಕೊನೆಯಲ್ಲಿ ಅಟಾರ್ನಿ ಜನರಲ್‌ರವರು “”ಉನ್ನತ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿರುವ 9 ನ್ಯಾಯಾಧೀಶರ ಪಟ್ಟಿ ನನ್ನ ಬಳಿ ಇದೆ. 1987ರಲ್ಲಿ ನಾನು ಕೂಡ ಹೇಳಿದ್ದೆ” ಎಂದು  ಹೇಳುತ್ತಿರುವಾಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಮಿಶ್ರಾರವರು “ಅದನ್ನೆಲ್ಲ ಕೇಳಲು ನಾವು ಇಲ್ಲಿ ಕೂತಿಲ್ಲ  ಮಿ.ಅಟಾರ್ನಿ” ಎಂದು ಹೇಳುವ ಮೂಲಕ ತಡೆದರು.

ವಿಚಾರಣೆಯ ಆರಂಭದಲ್ಲಿ ಭೂಷಣ್ ಪರ ವಕೀಲರಾದ ರಾಜೀವ್ ಧವನ್ ಮತ್ತು ದುಷ್ಯಂತ್ ದವೆಯವರು ಅಟಾರ್ನಿ ಜನರಲ್‌ರವರು ಸಹ ವಿಡಿಯೋ ಕಾನ್ಫರೆನ್ಸ್‌ನಲ್ಲಿದ್ದು, ತಮ್ಮ ಹೇಳಿಕೆಯನ್ನು ದಾಖಲಿಸಲು ಕಾಯುತ್ತಿದ್ದಾರೆ ಎಂದು ನೆನಪಿಸಿದ್ದರು. ಆದರೆ ನ್ಯಾಯಮೂರ್ತಿ ಮಿಶ್ರಾರವರು ಅದು ನಮಗೂ ಗೊತ್ತಿದೆ, ನೀವು ನೆನಪಿಸುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಒಟ್ಟಿನಲ್ಲಿ ಅಟಾರ್ನಿ ಜನರಲ್ ವಿಚಾರಣೆಯ ವೇಳೆ ಸಕ್ರಿಯರಾಗಿ ಭಾಗವಹಿಸಿದ್ದರು. ಅವರು ಪ್ರಶಾಂತ್ ಭೂಷಣ್ ಪರ ವಾದ ಮಂಡಿಸಿದರು. ನ್ಯಾಯಪೀಠ ಅವರ ಸಲಹೆಯನ್ನು ಸಹ ಪಡೆದುಕೊಂಡಿತು. ಆದರೆ ಸಂಜೆ ಪ್ರಕಟವಾದ ತೀರ್ಪು ಬರಹದಲ್ಲಿ ಮಾತ್ರ ಅವರ ಹೆಸರನ್ನು ನಮೂದಿಸಿಲ್ಲ.

ಒಂದು ವೇಳೆ ಅಟಾರ್ನಿಯವರ ಹೆಸರು ಹಾಕುವುದೇ ಇಲ್ಲ ಎಂದಾದಲ್ಲಿ, ಇದೇ ಕೇಸಿನಲ್ಲಿ ಹಿಂದೆ ಏಕೆ ಹಾಕಿದರು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಈ ದಿನದ ವಿಚಾರಣೆಯ ಸಂದರ್ಭದಲ್ಲಿ ಅವರ ಅಗತ್ಯವಿರಲಿಲ್ಲ ಎನ್ನುವುದಾದರೆ, ಸುಪ್ರೀಂಕೋರ್ಟಿನ ಪೀಠ ಅವರನ್ನು ಕರೆಸಿದ್ದೇಕೆ? ವಿಚಾರಣೆಯ ನಡುವೆ ಅವರ ಅನಿಸಿಕೆಯನ್ನು ಕೇಳಿದ್ದೇಕೆ ಎಂಬುದು ಸಹಜ ಪ್ರಶ್ನೆ.

ಅಂದರೆ ಸರ್ಕಾರದ ಪರವಾಗಿರುವ ವಕೀಲರೂ ಸಹಾ ಪ್ರಶಾಂತ್ ಭೂಷಣ್ ಹೇಳಿದ್ದನ್ನಾಗಲೀ, ಪ್ರಶಾಂತ್ ಭೂಷಣ್ ಅವರ ಕೊಡುಗೆಯನ್ನಾಗಲೀ ನಿರಾಕರಿಸುವ ಸ್ಥಿತಿಯಲ್ಲಿಲ್ಲ; ಬದಲಿಗೆ ಪೂರಕವಾದ ಮಾತುಗಳನ್ನಾಡಬೇಕಾದ ಅನಿವಾರ್ಯತೆ ಇದ್ದಂತಿದೆ. ಇದನ್ನು ನಿರೀಕ್ಷಿಸಿರದ ಪೀಠ ಎಡವಿಬಿಟ್ಟು, ಇದೀಗ ಆ ರೀತಿಯ ಭಿನ್ನ ಅಭಿಪ್ರಾಯವನ್ನು ದಾಖಲಿಸಿದ ಅಟಾರ್ನಿಯವರ ಹೆಸರನ್ನೇ ಆರ್ಡರ್ ಶೀಟ್‌ನಲ್ಲಿ ಕೈಬಿಟ್ಟಿದೆ.

ಈ ಕುರಿತು ನಾನುಗೌರಿ.ಕಾಂ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾದ ಸಂಜಯ್ ಹೆಗಡೆ ಮತ್ತು ಹಿರಿಯ ಕಾರ್ಮಿಕ ಮುಖಂಡರಾದ ಎಸ್‌.ಬಾಲನ್‌ರವರನ್ನು ಮಾತನಾಡಿಸಿತು. ಇದು ಸುಪ್ರೀಂ ಕೋರ್ಟ್ ಬೇಕಂತಲೇ ಮಾಡಿದ್ದಲ್ಲ, ಅಪ್ಪಿ ತಪ್ಪಿ ಆದ ತಪ್ಪಾಗಿದೆ. ಅದನ್ನು ಅವರು ಸರಿಪಡಿಸಿಕೊಳ್ಳಬಹುದು. ಆದರೆ ಉಳಿದ ವಿಷಯಗಳು ಚರ್ಚಾರ್ಹ ಎಂದಿದ್ದಾರೆ.


ಇದನ್ನೂ ಓದಿ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...