Homeಮುಖಪುಟಅಟಾರ್ನಿ ಜನರಲ್ ಹೆಸರನ್ನೇ ಕೈಬಿಟ್ಟ ಸುಪ್ರೀಂಕೋರ್ಟ್: ಭಿನ್ನ ಅಭಿಪ್ರಾಯಕ್ಕೆ ಕತ್ತರಿಯೇ?

ಅಟಾರ್ನಿ ಜನರಲ್ ಹೆಸರನ್ನೇ ಕೈಬಿಟ್ಟ ಸುಪ್ರೀಂಕೋರ್ಟ್: ಭಿನ್ನ ಅಭಿಪ್ರಾಯಕ್ಕೆ ಕತ್ತರಿಯೇ?

ಆದರೆ ಅಟಾರ್ನಿ ಜನರಲ್‌ರವರು ಪ್ರಶಾಂತ್ ಭೂಷಣ್‌ರವರಿಗೆ ಶಿಕ್ಷೆ ನೀಡಬೇಡಿ, ಅವರು ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಪೀಠದ ಮುಂದೆ ಮನವಿ ಮಾಡಿದ್ದರು. ಆದರೆ ಪೀಠ ಅದನ್ನು ನಿರಾಕರಿಸಿತ್ತು.

- Advertisement -
- Advertisement -

ಖ್ಯಾತ ನ್ಯಾಯವಾದಿ ಪ್ರಶಾಂತ್ ಭೂಷಣ್‌ರವರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ‘ಭೂಷಣ್ ತಮ್ಮ ಹೇಳಿಕೆಯ ಕುರಿತು ಮರುಪರಿಶೀಲಿಸಲು’ ಮೂರು ದಿನಗಳ ಸಮಯ ನೀಡಿದೆ.

ಆಶ್ಚರ್ಯವೆಂದರೆ ಸುಪ್ರೀಂ ಕೋರ್ಟಿನ ಆರ್ಡರ್‌ ಶೀಟ್‌ಅನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದು, ವಿಚಾರಣೆಯ ಸಂದರ್ಭದಲ್ಲಿ ಹಾಜರಿದ್ದ, ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್‌ರವರನ್ನು ಅದರಲ್ಲಿ ಹೆಸರಿಸಲಾಗಿಲ್ಲ.

ಎರಡೂವರೆ ಗಂಟೆಗೂ ಹೆಚ್ಚು ವೇಳೆ ನಡೆದ ವಾದ-ವಿವಾದದಲ್ಲಿ ಅಟಾರ್ನಿ ಜನರಲ್ ಹಾಜರಿದ್ದರು ಮಾತ್ರವಲ್ಲ ಕೋರ್ಟಿಗೆ ಭೂಷಣ್ ಪರವಾಗಿ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿದ್ದರು.

ಪ್ರಶಾಂತ್ ಭೂಷಣ್‌ರವರ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಆಗಸ್ಟ್ 5 ರಂದು ನಡೆದ ಮೊದಲ ವಿಚಾರಣೆಯಲ್ಲಿ ಸಂದರ್ಭದಲ್ಲಿ ಅವರು ಹಾಜರಿದ್ದುದ್ದನ್ನು ಅಂದಿನ ನಡಾವಳಿಗಳಲ್ಲಿ ದಾಖಲಿಸಲಾಗಿತ್ತು. ಆದರೆ ನಿನ್ನೆಯ ತೀರ್ಪು ನೀಡುವ ವಿಚಾರಣೆಯಲ್ಲಿ ಅವರನ್ನು ಕೈಬಿಟ್ಟಿರುವುದು ಏಕೆ ಎಂಬ ಪ್ರಶ್ನೆ ಉದ್ಭವವಾಗಿದೆ.

ವಿಚಾರಣೆಯ ಸಂದರ್ಭದಲ್ಲಿ ಪ್ರಶಾಂತ್ ಭೂಷಣ್‌ರವರು ತಮ್ಮ ಹೇಳಿಕೆಯನ್ನು ದಾಖಲಿಸಿದ ನಂತರ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠವೇ ‘ಭೂಷಣ್ ಅವರಿಗೆ ತಮ್ಮ ಹೇಳಿಕೆಯನ್ನು ಮರುಪರಿಶೀಲಿಸಲು ಸಮಯ ನೀಡಬಹುದೇ’ ಎಂದು ಅಟಾರ್ನಿ ಜನರಲ್‌ರವರ ಸಲಹೆ ಕೇಳಿತ್ತು. ಆಗ ಅವರು ಸಮಯ ನೀಡಬಹುದು ಎಂದು ಅಭಿಪ್ರಾಯಪಟ್ಟಿದ್ದರು.

ಆದರೆ ಅಟಾರ್ನಿ ಜನರಲ್‌ರವರು ಪ್ರಶಾಂತ್ ಭೂಷಣ್‌ರವರಿಗೆ ಶಿಕ್ಷೆ ನೀಡಬೇಡಿ, ಅವರು ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಪೀಠದ ಮುಂದೆ ಮನವಿ ಮಾಡಿದ್ದರು. ಆದರೆ ಪೀಠ ಅದನ್ನು ನಿರಾಕರಿಸಿತ್ತು.

ಆಗಸ್ಟ್ 5 ರಂದು ನಡೆದ ವಿಚಾರಣೆಯಲ್ಲಿ ಅಟಾರ್ನಿ ಜನರಲ್ ಹೆಸರು ನಮೂದಿಸಿರುವುದು..

ವಿಚಾರಣೆಯ ಕೊನೆಯಲ್ಲಿ ಅಟಾರ್ನಿ ಜನರಲ್‌ರವರು “”ಉನ್ನತ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿರುವ 9 ನ್ಯಾಯಾಧೀಶರ ಪಟ್ಟಿ ನನ್ನ ಬಳಿ ಇದೆ. 1987ರಲ್ಲಿ ನಾನು ಕೂಡ ಹೇಳಿದ್ದೆ” ಎಂದು  ಹೇಳುತ್ತಿರುವಾಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಮಿಶ್ರಾರವರು “ಅದನ್ನೆಲ್ಲ ಕೇಳಲು ನಾವು ಇಲ್ಲಿ ಕೂತಿಲ್ಲ  ಮಿ.ಅಟಾರ್ನಿ” ಎಂದು ಹೇಳುವ ಮೂಲಕ ತಡೆದರು.

ವಿಚಾರಣೆಯ ಆರಂಭದಲ್ಲಿ ಭೂಷಣ್ ಪರ ವಕೀಲರಾದ ರಾಜೀವ್ ಧವನ್ ಮತ್ತು ದುಷ್ಯಂತ್ ದವೆಯವರು ಅಟಾರ್ನಿ ಜನರಲ್‌ರವರು ಸಹ ವಿಡಿಯೋ ಕಾನ್ಫರೆನ್ಸ್‌ನಲ್ಲಿದ್ದು, ತಮ್ಮ ಹೇಳಿಕೆಯನ್ನು ದಾಖಲಿಸಲು ಕಾಯುತ್ತಿದ್ದಾರೆ ಎಂದು ನೆನಪಿಸಿದ್ದರು. ಆದರೆ ನ್ಯಾಯಮೂರ್ತಿ ಮಿಶ್ರಾರವರು ಅದು ನಮಗೂ ಗೊತ್ತಿದೆ, ನೀವು ನೆನಪಿಸುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಒಟ್ಟಿನಲ್ಲಿ ಅಟಾರ್ನಿ ಜನರಲ್ ವಿಚಾರಣೆಯ ವೇಳೆ ಸಕ್ರಿಯರಾಗಿ ಭಾಗವಹಿಸಿದ್ದರು. ಅವರು ಪ್ರಶಾಂತ್ ಭೂಷಣ್ ಪರ ವಾದ ಮಂಡಿಸಿದರು. ನ್ಯಾಯಪೀಠ ಅವರ ಸಲಹೆಯನ್ನು ಸಹ ಪಡೆದುಕೊಂಡಿತು. ಆದರೆ ಸಂಜೆ ಪ್ರಕಟವಾದ ತೀರ್ಪು ಬರಹದಲ್ಲಿ ಮಾತ್ರ ಅವರ ಹೆಸರನ್ನು ನಮೂದಿಸಿಲ್ಲ.

ಒಂದು ವೇಳೆ ಅಟಾರ್ನಿಯವರ ಹೆಸರು ಹಾಕುವುದೇ ಇಲ್ಲ ಎಂದಾದಲ್ಲಿ, ಇದೇ ಕೇಸಿನಲ್ಲಿ ಹಿಂದೆ ಏಕೆ ಹಾಕಿದರು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಈ ದಿನದ ವಿಚಾರಣೆಯ ಸಂದರ್ಭದಲ್ಲಿ ಅವರ ಅಗತ್ಯವಿರಲಿಲ್ಲ ಎನ್ನುವುದಾದರೆ, ಸುಪ್ರೀಂಕೋರ್ಟಿನ ಪೀಠ ಅವರನ್ನು ಕರೆಸಿದ್ದೇಕೆ? ವಿಚಾರಣೆಯ ನಡುವೆ ಅವರ ಅನಿಸಿಕೆಯನ್ನು ಕೇಳಿದ್ದೇಕೆ ಎಂಬುದು ಸಹಜ ಪ್ರಶ್ನೆ.

ಅಂದರೆ ಸರ್ಕಾರದ ಪರವಾಗಿರುವ ವಕೀಲರೂ ಸಹಾ ಪ್ರಶಾಂತ್ ಭೂಷಣ್ ಹೇಳಿದ್ದನ್ನಾಗಲೀ, ಪ್ರಶಾಂತ್ ಭೂಷಣ್ ಅವರ ಕೊಡುಗೆಯನ್ನಾಗಲೀ ನಿರಾಕರಿಸುವ ಸ್ಥಿತಿಯಲ್ಲಿಲ್ಲ; ಬದಲಿಗೆ ಪೂರಕವಾದ ಮಾತುಗಳನ್ನಾಡಬೇಕಾದ ಅನಿವಾರ್ಯತೆ ಇದ್ದಂತಿದೆ. ಇದನ್ನು ನಿರೀಕ್ಷಿಸಿರದ ಪೀಠ ಎಡವಿಬಿಟ್ಟು, ಇದೀಗ ಆ ರೀತಿಯ ಭಿನ್ನ ಅಭಿಪ್ರಾಯವನ್ನು ದಾಖಲಿಸಿದ ಅಟಾರ್ನಿಯವರ ಹೆಸರನ್ನೇ ಆರ್ಡರ್ ಶೀಟ್‌ನಲ್ಲಿ ಕೈಬಿಟ್ಟಿದೆ.

ಈ ಕುರಿತು ನಾನುಗೌರಿ.ಕಾಂ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾದ ಸಂಜಯ್ ಹೆಗಡೆ ಮತ್ತು ಹಿರಿಯ ಕಾರ್ಮಿಕ ಮುಖಂಡರಾದ ಎಸ್‌.ಬಾಲನ್‌ರವರನ್ನು ಮಾತನಾಡಿಸಿತು. ಇದು ಸುಪ್ರೀಂ ಕೋರ್ಟ್ ಬೇಕಂತಲೇ ಮಾಡಿದ್ದಲ್ಲ, ಅಪ್ಪಿ ತಪ್ಪಿ ಆದ ತಪ್ಪಾಗಿದೆ. ಅದನ್ನು ಅವರು ಸರಿಪಡಿಸಿಕೊಳ್ಳಬಹುದು. ಆದರೆ ಉಳಿದ ವಿಷಯಗಳು ಚರ್ಚಾರ್ಹ ಎಂದಿದ್ದಾರೆ.


ಇದನ್ನೂ ಓದಿ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...