Homeಮುಖಪುಟಅಟಾರ್ನಿ ಜನರಲ್ ಹೆಸರನ್ನೇ ಕೈಬಿಟ್ಟ ಸುಪ್ರೀಂಕೋರ್ಟ್: ಭಿನ್ನ ಅಭಿಪ್ರಾಯಕ್ಕೆ ಕತ್ತರಿಯೇ?

ಅಟಾರ್ನಿ ಜನರಲ್ ಹೆಸರನ್ನೇ ಕೈಬಿಟ್ಟ ಸುಪ್ರೀಂಕೋರ್ಟ್: ಭಿನ್ನ ಅಭಿಪ್ರಾಯಕ್ಕೆ ಕತ್ತರಿಯೇ?

ಆದರೆ ಅಟಾರ್ನಿ ಜನರಲ್‌ರವರು ಪ್ರಶಾಂತ್ ಭೂಷಣ್‌ರವರಿಗೆ ಶಿಕ್ಷೆ ನೀಡಬೇಡಿ, ಅವರು ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಪೀಠದ ಮುಂದೆ ಮನವಿ ಮಾಡಿದ್ದರು. ಆದರೆ ಪೀಠ ಅದನ್ನು ನಿರಾಕರಿಸಿತ್ತು.

- Advertisement -
- Advertisement -

ಖ್ಯಾತ ನ್ಯಾಯವಾದಿ ಪ್ರಶಾಂತ್ ಭೂಷಣ್‌ರವರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ‘ಭೂಷಣ್ ತಮ್ಮ ಹೇಳಿಕೆಯ ಕುರಿತು ಮರುಪರಿಶೀಲಿಸಲು’ ಮೂರು ದಿನಗಳ ಸಮಯ ನೀಡಿದೆ.

ಆಶ್ಚರ್ಯವೆಂದರೆ ಸುಪ್ರೀಂ ಕೋರ್ಟಿನ ಆರ್ಡರ್‌ ಶೀಟ್‌ಅನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದು, ವಿಚಾರಣೆಯ ಸಂದರ್ಭದಲ್ಲಿ ಹಾಜರಿದ್ದ, ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್‌ರವರನ್ನು ಅದರಲ್ಲಿ ಹೆಸರಿಸಲಾಗಿಲ್ಲ.

ಎರಡೂವರೆ ಗಂಟೆಗೂ ಹೆಚ್ಚು ವೇಳೆ ನಡೆದ ವಾದ-ವಿವಾದದಲ್ಲಿ ಅಟಾರ್ನಿ ಜನರಲ್ ಹಾಜರಿದ್ದರು ಮಾತ್ರವಲ್ಲ ಕೋರ್ಟಿಗೆ ಭೂಷಣ್ ಪರವಾಗಿ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿದ್ದರು.

ಪ್ರಶಾಂತ್ ಭೂಷಣ್‌ರವರ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಆಗಸ್ಟ್ 5 ರಂದು ನಡೆದ ಮೊದಲ ವಿಚಾರಣೆಯಲ್ಲಿ ಸಂದರ್ಭದಲ್ಲಿ ಅವರು ಹಾಜರಿದ್ದುದ್ದನ್ನು ಅಂದಿನ ನಡಾವಳಿಗಳಲ್ಲಿ ದಾಖಲಿಸಲಾಗಿತ್ತು. ಆದರೆ ನಿನ್ನೆಯ ತೀರ್ಪು ನೀಡುವ ವಿಚಾರಣೆಯಲ್ಲಿ ಅವರನ್ನು ಕೈಬಿಟ್ಟಿರುವುದು ಏಕೆ ಎಂಬ ಪ್ರಶ್ನೆ ಉದ್ಭವವಾಗಿದೆ.

ವಿಚಾರಣೆಯ ಸಂದರ್ಭದಲ್ಲಿ ಪ್ರಶಾಂತ್ ಭೂಷಣ್‌ರವರು ತಮ್ಮ ಹೇಳಿಕೆಯನ್ನು ದಾಖಲಿಸಿದ ನಂತರ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠವೇ ‘ಭೂಷಣ್ ಅವರಿಗೆ ತಮ್ಮ ಹೇಳಿಕೆಯನ್ನು ಮರುಪರಿಶೀಲಿಸಲು ಸಮಯ ನೀಡಬಹುದೇ’ ಎಂದು ಅಟಾರ್ನಿ ಜನರಲ್‌ರವರ ಸಲಹೆ ಕೇಳಿತ್ತು. ಆಗ ಅವರು ಸಮಯ ನೀಡಬಹುದು ಎಂದು ಅಭಿಪ್ರಾಯಪಟ್ಟಿದ್ದರು.

ಆದರೆ ಅಟಾರ್ನಿ ಜನರಲ್‌ರವರು ಪ್ರಶಾಂತ್ ಭೂಷಣ್‌ರವರಿಗೆ ಶಿಕ್ಷೆ ನೀಡಬೇಡಿ, ಅವರು ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಪೀಠದ ಮುಂದೆ ಮನವಿ ಮಾಡಿದ್ದರು. ಆದರೆ ಪೀಠ ಅದನ್ನು ನಿರಾಕರಿಸಿತ್ತು.

ಆಗಸ್ಟ್ 5 ರಂದು ನಡೆದ ವಿಚಾರಣೆಯಲ್ಲಿ ಅಟಾರ್ನಿ ಜನರಲ್ ಹೆಸರು ನಮೂದಿಸಿರುವುದು..

ವಿಚಾರಣೆಯ ಕೊನೆಯಲ್ಲಿ ಅಟಾರ್ನಿ ಜನರಲ್‌ರವರು “”ಉನ್ನತ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿರುವ 9 ನ್ಯಾಯಾಧೀಶರ ಪಟ್ಟಿ ನನ್ನ ಬಳಿ ಇದೆ. 1987ರಲ್ಲಿ ನಾನು ಕೂಡ ಹೇಳಿದ್ದೆ” ಎಂದು  ಹೇಳುತ್ತಿರುವಾಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಮಿಶ್ರಾರವರು “ಅದನ್ನೆಲ್ಲ ಕೇಳಲು ನಾವು ಇಲ್ಲಿ ಕೂತಿಲ್ಲ  ಮಿ.ಅಟಾರ್ನಿ” ಎಂದು ಹೇಳುವ ಮೂಲಕ ತಡೆದರು.

ವಿಚಾರಣೆಯ ಆರಂಭದಲ್ಲಿ ಭೂಷಣ್ ಪರ ವಕೀಲರಾದ ರಾಜೀವ್ ಧವನ್ ಮತ್ತು ದುಷ್ಯಂತ್ ದವೆಯವರು ಅಟಾರ್ನಿ ಜನರಲ್‌ರವರು ಸಹ ವಿಡಿಯೋ ಕಾನ್ಫರೆನ್ಸ್‌ನಲ್ಲಿದ್ದು, ತಮ್ಮ ಹೇಳಿಕೆಯನ್ನು ದಾಖಲಿಸಲು ಕಾಯುತ್ತಿದ್ದಾರೆ ಎಂದು ನೆನಪಿಸಿದ್ದರು. ಆದರೆ ನ್ಯಾಯಮೂರ್ತಿ ಮಿಶ್ರಾರವರು ಅದು ನಮಗೂ ಗೊತ್ತಿದೆ, ನೀವು ನೆನಪಿಸುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಒಟ್ಟಿನಲ್ಲಿ ಅಟಾರ್ನಿ ಜನರಲ್ ವಿಚಾರಣೆಯ ವೇಳೆ ಸಕ್ರಿಯರಾಗಿ ಭಾಗವಹಿಸಿದ್ದರು. ಅವರು ಪ್ರಶಾಂತ್ ಭೂಷಣ್ ಪರ ವಾದ ಮಂಡಿಸಿದರು. ನ್ಯಾಯಪೀಠ ಅವರ ಸಲಹೆಯನ್ನು ಸಹ ಪಡೆದುಕೊಂಡಿತು. ಆದರೆ ಸಂಜೆ ಪ್ರಕಟವಾದ ತೀರ್ಪು ಬರಹದಲ್ಲಿ ಮಾತ್ರ ಅವರ ಹೆಸರನ್ನು ನಮೂದಿಸಿಲ್ಲ.

ಒಂದು ವೇಳೆ ಅಟಾರ್ನಿಯವರ ಹೆಸರು ಹಾಕುವುದೇ ಇಲ್ಲ ಎಂದಾದಲ್ಲಿ, ಇದೇ ಕೇಸಿನಲ್ಲಿ ಹಿಂದೆ ಏಕೆ ಹಾಕಿದರು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಈ ದಿನದ ವಿಚಾರಣೆಯ ಸಂದರ್ಭದಲ್ಲಿ ಅವರ ಅಗತ್ಯವಿರಲಿಲ್ಲ ಎನ್ನುವುದಾದರೆ, ಸುಪ್ರೀಂಕೋರ್ಟಿನ ಪೀಠ ಅವರನ್ನು ಕರೆಸಿದ್ದೇಕೆ? ವಿಚಾರಣೆಯ ನಡುವೆ ಅವರ ಅನಿಸಿಕೆಯನ್ನು ಕೇಳಿದ್ದೇಕೆ ಎಂಬುದು ಸಹಜ ಪ್ರಶ್ನೆ.

ಅಂದರೆ ಸರ್ಕಾರದ ಪರವಾಗಿರುವ ವಕೀಲರೂ ಸಹಾ ಪ್ರಶಾಂತ್ ಭೂಷಣ್ ಹೇಳಿದ್ದನ್ನಾಗಲೀ, ಪ್ರಶಾಂತ್ ಭೂಷಣ್ ಅವರ ಕೊಡುಗೆಯನ್ನಾಗಲೀ ನಿರಾಕರಿಸುವ ಸ್ಥಿತಿಯಲ್ಲಿಲ್ಲ; ಬದಲಿಗೆ ಪೂರಕವಾದ ಮಾತುಗಳನ್ನಾಡಬೇಕಾದ ಅನಿವಾರ್ಯತೆ ಇದ್ದಂತಿದೆ. ಇದನ್ನು ನಿರೀಕ್ಷಿಸಿರದ ಪೀಠ ಎಡವಿಬಿಟ್ಟು, ಇದೀಗ ಆ ರೀತಿಯ ಭಿನ್ನ ಅಭಿಪ್ರಾಯವನ್ನು ದಾಖಲಿಸಿದ ಅಟಾರ್ನಿಯವರ ಹೆಸರನ್ನೇ ಆರ್ಡರ್ ಶೀಟ್‌ನಲ್ಲಿ ಕೈಬಿಟ್ಟಿದೆ.

ಈ ಕುರಿತು ನಾನುಗೌರಿ.ಕಾಂ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾದ ಸಂಜಯ್ ಹೆಗಡೆ ಮತ್ತು ಹಿರಿಯ ಕಾರ್ಮಿಕ ಮುಖಂಡರಾದ ಎಸ್‌.ಬಾಲನ್‌ರವರನ್ನು ಮಾತನಾಡಿಸಿತು. ಇದು ಸುಪ್ರೀಂ ಕೋರ್ಟ್ ಬೇಕಂತಲೇ ಮಾಡಿದ್ದಲ್ಲ, ಅಪ್ಪಿ ತಪ್ಪಿ ಆದ ತಪ್ಪಾಗಿದೆ. ಅದನ್ನು ಅವರು ಸರಿಪಡಿಸಿಕೊಳ್ಳಬಹುದು. ಆದರೆ ಉಳಿದ ವಿಷಯಗಳು ಚರ್ಚಾರ್ಹ ಎಂದಿದ್ದಾರೆ.


ಇದನ್ನೂ ಓದಿ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...