Homeಮುಖಪುಟಅಟಾರ್ನಿ ಜನರಲ್ ಹೆಸರನ್ನೇ ಕೈಬಿಟ್ಟ ಸುಪ್ರೀಂಕೋರ್ಟ್: ಭಿನ್ನ ಅಭಿಪ್ರಾಯಕ್ಕೆ ಕತ್ತರಿಯೇ?

ಅಟಾರ್ನಿ ಜನರಲ್ ಹೆಸರನ್ನೇ ಕೈಬಿಟ್ಟ ಸುಪ್ರೀಂಕೋರ್ಟ್: ಭಿನ್ನ ಅಭಿಪ್ರಾಯಕ್ಕೆ ಕತ್ತರಿಯೇ?

ಆದರೆ ಅಟಾರ್ನಿ ಜನರಲ್‌ರವರು ಪ್ರಶಾಂತ್ ಭೂಷಣ್‌ರವರಿಗೆ ಶಿಕ್ಷೆ ನೀಡಬೇಡಿ, ಅವರು ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಪೀಠದ ಮುಂದೆ ಮನವಿ ಮಾಡಿದ್ದರು. ಆದರೆ ಪೀಠ ಅದನ್ನು ನಿರಾಕರಿಸಿತ್ತು.

- Advertisement -
- Advertisement -

ಖ್ಯಾತ ನ್ಯಾಯವಾದಿ ಪ್ರಶಾಂತ್ ಭೂಷಣ್‌ರವರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ‘ಭೂಷಣ್ ತಮ್ಮ ಹೇಳಿಕೆಯ ಕುರಿತು ಮರುಪರಿಶೀಲಿಸಲು’ ಮೂರು ದಿನಗಳ ಸಮಯ ನೀಡಿದೆ.

ಆಶ್ಚರ್ಯವೆಂದರೆ ಸುಪ್ರೀಂ ಕೋರ್ಟಿನ ಆರ್ಡರ್‌ ಶೀಟ್‌ಅನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದು, ವಿಚಾರಣೆಯ ಸಂದರ್ಭದಲ್ಲಿ ಹಾಜರಿದ್ದ, ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್‌ರವರನ್ನು ಅದರಲ್ಲಿ ಹೆಸರಿಸಲಾಗಿಲ್ಲ.

ಎರಡೂವರೆ ಗಂಟೆಗೂ ಹೆಚ್ಚು ವೇಳೆ ನಡೆದ ವಾದ-ವಿವಾದದಲ್ಲಿ ಅಟಾರ್ನಿ ಜನರಲ್ ಹಾಜರಿದ್ದರು ಮಾತ್ರವಲ್ಲ ಕೋರ್ಟಿಗೆ ಭೂಷಣ್ ಪರವಾಗಿ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿದ್ದರು.

ಪ್ರಶಾಂತ್ ಭೂಷಣ್‌ರವರ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಆಗಸ್ಟ್ 5 ರಂದು ನಡೆದ ಮೊದಲ ವಿಚಾರಣೆಯಲ್ಲಿ ಸಂದರ್ಭದಲ್ಲಿ ಅವರು ಹಾಜರಿದ್ದುದ್ದನ್ನು ಅಂದಿನ ನಡಾವಳಿಗಳಲ್ಲಿ ದಾಖಲಿಸಲಾಗಿತ್ತು. ಆದರೆ ನಿನ್ನೆಯ ತೀರ್ಪು ನೀಡುವ ವಿಚಾರಣೆಯಲ್ಲಿ ಅವರನ್ನು ಕೈಬಿಟ್ಟಿರುವುದು ಏಕೆ ಎಂಬ ಪ್ರಶ್ನೆ ಉದ್ಭವವಾಗಿದೆ.

ವಿಚಾರಣೆಯ ಸಂದರ್ಭದಲ್ಲಿ ಪ್ರಶಾಂತ್ ಭೂಷಣ್‌ರವರು ತಮ್ಮ ಹೇಳಿಕೆಯನ್ನು ದಾಖಲಿಸಿದ ನಂತರ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠವೇ ‘ಭೂಷಣ್ ಅವರಿಗೆ ತಮ್ಮ ಹೇಳಿಕೆಯನ್ನು ಮರುಪರಿಶೀಲಿಸಲು ಸಮಯ ನೀಡಬಹುದೇ’ ಎಂದು ಅಟಾರ್ನಿ ಜನರಲ್‌ರವರ ಸಲಹೆ ಕೇಳಿತ್ತು. ಆಗ ಅವರು ಸಮಯ ನೀಡಬಹುದು ಎಂದು ಅಭಿಪ್ರಾಯಪಟ್ಟಿದ್ದರು.

ಆದರೆ ಅಟಾರ್ನಿ ಜನರಲ್‌ರವರು ಪ್ರಶಾಂತ್ ಭೂಷಣ್‌ರವರಿಗೆ ಶಿಕ್ಷೆ ನೀಡಬೇಡಿ, ಅವರು ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಪೀಠದ ಮುಂದೆ ಮನವಿ ಮಾಡಿದ್ದರು. ಆದರೆ ಪೀಠ ಅದನ್ನು ನಿರಾಕರಿಸಿತ್ತು.

ಆಗಸ್ಟ್ 5 ರಂದು ನಡೆದ ವಿಚಾರಣೆಯಲ್ಲಿ ಅಟಾರ್ನಿ ಜನರಲ್ ಹೆಸರು ನಮೂದಿಸಿರುವುದು..

ವಿಚಾರಣೆಯ ಕೊನೆಯಲ್ಲಿ ಅಟಾರ್ನಿ ಜನರಲ್‌ರವರು “”ಉನ್ನತ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿರುವ 9 ನ್ಯಾಯಾಧೀಶರ ಪಟ್ಟಿ ನನ್ನ ಬಳಿ ಇದೆ. 1987ರಲ್ಲಿ ನಾನು ಕೂಡ ಹೇಳಿದ್ದೆ” ಎಂದು  ಹೇಳುತ್ತಿರುವಾಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಮಿಶ್ರಾರವರು “ಅದನ್ನೆಲ್ಲ ಕೇಳಲು ನಾವು ಇಲ್ಲಿ ಕೂತಿಲ್ಲ  ಮಿ.ಅಟಾರ್ನಿ” ಎಂದು ಹೇಳುವ ಮೂಲಕ ತಡೆದರು.

ವಿಚಾರಣೆಯ ಆರಂಭದಲ್ಲಿ ಭೂಷಣ್ ಪರ ವಕೀಲರಾದ ರಾಜೀವ್ ಧವನ್ ಮತ್ತು ದುಷ್ಯಂತ್ ದವೆಯವರು ಅಟಾರ್ನಿ ಜನರಲ್‌ರವರು ಸಹ ವಿಡಿಯೋ ಕಾನ್ಫರೆನ್ಸ್‌ನಲ್ಲಿದ್ದು, ತಮ್ಮ ಹೇಳಿಕೆಯನ್ನು ದಾಖಲಿಸಲು ಕಾಯುತ್ತಿದ್ದಾರೆ ಎಂದು ನೆನಪಿಸಿದ್ದರು. ಆದರೆ ನ್ಯಾಯಮೂರ್ತಿ ಮಿಶ್ರಾರವರು ಅದು ನಮಗೂ ಗೊತ್ತಿದೆ, ನೀವು ನೆನಪಿಸುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಒಟ್ಟಿನಲ್ಲಿ ಅಟಾರ್ನಿ ಜನರಲ್ ವಿಚಾರಣೆಯ ವೇಳೆ ಸಕ್ರಿಯರಾಗಿ ಭಾಗವಹಿಸಿದ್ದರು. ಅವರು ಪ್ರಶಾಂತ್ ಭೂಷಣ್ ಪರ ವಾದ ಮಂಡಿಸಿದರು. ನ್ಯಾಯಪೀಠ ಅವರ ಸಲಹೆಯನ್ನು ಸಹ ಪಡೆದುಕೊಂಡಿತು. ಆದರೆ ಸಂಜೆ ಪ್ರಕಟವಾದ ತೀರ್ಪು ಬರಹದಲ್ಲಿ ಮಾತ್ರ ಅವರ ಹೆಸರನ್ನು ನಮೂದಿಸಿಲ್ಲ.

ಒಂದು ವೇಳೆ ಅಟಾರ್ನಿಯವರ ಹೆಸರು ಹಾಕುವುದೇ ಇಲ್ಲ ಎಂದಾದಲ್ಲಿ, ಇದೇ ಕೇಸಿನಲ್ಲಿ ಹಿಂದೆ ಏಕೆ ಹಾಕಿದರು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಈ ದಿನದ ವಿಚಾರಣೆಯ ಸಂದರ್ಭದಲ್ಲಿ ಅವರ ಅಗತ್ಯವಿರಲಿಲ್ಲ ಎನ್ನುವುದಾದರೆ, ಸುಪ್ರೀಂಕೋರ್ಟಿನ ಪೀಠ ಅವರನ್ನು ಕರೆಸಿದ್ದೇಕೆ? ವಿಚಾರಣೆಯ ನಡುವೆ ಅವರ ಅನಿಸಿಕೆಯನ್ನು ಕೇಳಿದ್ದೇಕೆ ಎಂಬುದು ಸಹಜ ಪ್ರಶ್ನೆ.

ಅಂದರೆ ಸರ್ಕಾರದ ಪರವಾಗಿರುವ ವಕೀಲರೂ ಸಹಾ ಪ್ರಶಾಂತ್ ಭೂಷಣ್ ಹೇಳಿದ್ದನ್ನಾಗಲೀ, ಪ್ರಶಾಂತ್ ಭೂಷಣ್ ಅವರ ಕೊಡುಗೆಯನ್ನಾಗಲೀ ನಿರಾಕರಿಸುವ ಸ್ಥಿತಿಯಲ್ಲಿಲ್ಲ; ಬದಲಿಗೆ ಪೂರಕವಾದ ಮಾತುಗಳನ್ನಾಡಬೇಕಾದ ಅನಿವಾರ್ಯತೆ ಇದ್ದಂತಿದೆ. ಇದನ್ನು ನಿರೀಕ್ಷಿಸಿರದ ಪೀಠ ಎಡವಿಬಿಟ್ಟು, ಇದೀಗ ಆ ರೀತಿಯ ಭಿನ್ನ ಅಭಿಪ್ರಾಯವನ್ನು ದಾಖಲಿಸಿದ ಅಟಾರ್ನಿಯವರ ಹೆಸರನ್ನೇ ಆರ್ಡರ್ ಶೀಟ್‌ನಲ್ಲಿ ಕೈಬಿಟ್ಟಿದೆ.

ಈ ಕುರಿತು ನಾನುಗೌರಿ.ಕಾಂ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾದ ಸಂಜಯ್ ಹೆಗಡೆ ಮತ್ತು ಹಿರಿಯ ಕಾರ್ಮಿಕ ಮುಖಂಡರಾದ ಎಸ್‌.ಬಾಲನ್‌ರವರನ್ನು ಮಾತನಾಡಿಸಿತು. ಇದು ಸುಪ್ರೀಂ ಕೋರ್ಟ್ ಬೇಕಂತಲೇ ಮಾಡಿದ್ದಲ್ಲ, ಅಪ್ಪಿ ತಪ್ಪಿ ಆದ ತಪ್ಪಾಗಿದೆ. ಅದನ್ನು ಅವರು ಸರಿಪಡಿಸಿಕೊಳ್ಳಬಹುದು. ಆದರೆ ಉಳಿದ ವಿಷಯಗಳು ಚರ್ಚಾರ್ಹ ಎಂದಿದ್ದಾರೆ.


ಇದನ್ನೂ ಓದಿ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...