Homeಮುಖಪುಟಅಟಾರ್ನಿ ಜನರಲ್ ಹೆಸರನ್ನೇ ಕೈಬಿಟ್ಟ ಸುಪ್ರೀಂಕೋರ್ಟ್: ಭಿನ್ನ ಅಭಿಪ್ರಾಯಕ್ಕೆ ಕತ್ತರಿಯೇ?

ಅಟಾರ್ನಿ ಜನರಲ್ ಹೆಸರನ್ನೇ ಕೈಬಿಟ್ಟ ಸುಪ್ರೀಂಕೋರ್ಟ್: ಭಿನ್ನ ಅಭಿಪ್ರಾಯಕ್ಕೆ ಕತ್ತರಿಯೇ?

ಆದರೆ ಅಟಾರ್ನಿ ಜನರಲ್‌ರವರು ಪ್ರಶಾಂತ್ ಭೂಷಣ್‌ರವರಿಗೆ ಶಿಕ್ಷೆ ನೀಡಬೇಡಿ, ಅವರು ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಪೀಠದ ಮುಂದೆ ಮನವಿ ಮಾಡಿದ್ದರು. ಆದರೆ ಪೀಠ ಅದನ್ನು ನಿರಾಕರಿಸಿತ್ತು.

- Advertisement -
- Advertisement -

ಖ್ಯಾತ ನ್ಯಾಯವಾದಿ ಪ್ರಶಾಂತ್ ಭೂಷಣ್‌ರವರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ‘ಭೂಷಣ್ ತಮ್ಮ ಹೇಳಿಕೆಯ ಕುರಿತು ಮರುಪರಿಶೀಲಿಸಲು’ ಮೂರು ದಿನಗಳ ಸಮಯ ನೀಡಿದೆ.

ಆಶ್ಚರ್ಯವೆಂದರೆ ಸುಪ್ರೀಂ ಕೋರ್ಟಿನ ಆರ್ಡರ್‌ ಶೀಟ್‌ಅನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದು, ವಿಚಾರಣೆಯ ಸಂದರ್ಭದಲ್ಲಿ ಹಾಜರಿದ್ದ, ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್‌ರವರನ್ನು ಅದರಲ್ಲಿ ಹೆಸರಿಸಲಾಗಿಲ್ಲ.

ಎರಡೂವರೆ ಗಂಟೆಗೂ ಹೆಚ್ಚು ವೇಳೆ ನಡೆದ ವಾದ-ವಿವಾದದಲ್ಲಿ ಅಟಾರ್ನಿ ಜನರಲ್ ಹಾಜರಿದ್ದರು ಮಾತ್ರವಲ್ಲ ಕೋರ್ಟಿಗೆ ಭೂಷಣ್ ಪರವಾಗಿ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿದ್ದರು.

ಪ್ರಶಾಂತ್ ಭೂಷಣ್‌ರವರ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಆಗಸ್ಟ್ 5 ರಂದು ನಡೆದ ಮೊದಲ ವಿಚಾರಣೆಯಲ್ಲಿ ಸಂದರ್ಭದಲ್ಲಿ ಅವರು ಹಾಜರಿದ್ದುದ್ದನ್ನು ಅಂದಿನ ನಡಾವಳಿಗಳಲ್ಲಿ ದಾಖಲಿಸಲಾಗಿತ್ತು. ಆದರೆ ನಿನ್ನೆಯ ತೀರ್ಪು ನೀಡುವ ವಿಚಾರಣೆಯಲ್ಲಿ ಅವರನ್ನು ಕೈಬಿಟ್ಟಿರುವುದು ಏಕೆ ಎಂಬ ಪ್ರಶ್ನೆ ಉದ್ಭವವಾಗಿದೆ.

ವಿಚಾರಣೆಯ ಸಂದರ್ಭದಲ್ಲಿ ಪ್ರಶಾಂತ್ ಭೂಷಣ್‌ರವರು ತಮ್ಮ ಹೇಳಿಕೆಯನ್ನು ದಾಖಲಿಸಿದ ನಂತರ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠವೇ ‘ಭೂಷಣ್ ಅವರಿಗೆ ತಮ್ಮ ಹೇಳಿಕೆಯನ್ನು ಮರುಪರಿಶೀಲಿಸಲು ಸಮಯ ನೀಡಬಹುದೇ’ ಎಂದು ಅಟಾರ್ನಿ ಜನರಲ್‌ರವರ ಸಲಹೆ ಕೇಳಿತ್ತು. ಆಗ ಅವರು ಸಮಯ ನೀಡಬಹುದು ಎಂದು ಅಭಿಪ್ರಾಯಪಟ್ಟಿದ್ದರು.

ಆದರೆ ಅಟಾರ್ನಿ ಜನರಲ್‌ರವರು ಪ್ರಶಾಂತ್ ಭೂಷಣ್‌ರವರಿಗೆ ಶಿಕ್ಷೆ ನೀಡಬೇಡಿ, ಅವರು ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಪೀಠದ ಮುಂದೆ ಮನವಿ ಮಾಡಿದ್ದರು. ಆದರೆ ಪೀಠ ಅದನ್ನು ನಿರಾಕರಿಸಿತ್ತು.

ಆಗಸ್ಟ್ 5 ರಂದು ನಡೆದ ವಿಚಾರಣೆಯಲ್ಲಿ ಅಟಾರ್ನಿ ಜನರಲ್ ಹೆಸರು ನಮೂದಿಸಿರುವುದು..

ವಿಚಾರಣೆಯ ಕೊನೆಯಲ್ಲಿ ಅಟಾರ್ನಿ ಜನರಲ್‌ರವರು “”ಉನ್ನತ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿರುವ 9 ನ್ಯಾಯಾಧೀಶರ ಪಟ್ಟಿ ನನ್ನ ಬಳಿ ಇದೆ. 1987ರಲ್ಲಿ ನಾನು ಕೂಡ ಹೇಳಿದ್ದೆ” ಎಂದು  ಹೇಳುತ್ತಿರುವಾಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಮಿಶ್ರಾರವರು “ಅದನ್ನೆಲ್ಲ ಕೇಳಲು ನಾವು ಇಲ್ಲಿ ಕೂತಿಲ್ಲ  ಮಿ.ಅಟಾರ್ನಿ” ಎಂದು ಹೇಳುವ ಮೂಲಕ ತಡೆದರು.

ವಿಚಾರಣೆಯ ಆರಂಭದಲ್ಲಿ ಭೂಷಣ್ ಪರ ವಕೀಲರಾದ ರಾಜೀವ್ ಧವನ್ ಮತ್ತು ದುಷ್ಯಂತ್ ದವೆಯವರು ಅಟಾರ್ನಿ ಜನರಲ್‌ರವರು ಸಹ ವಿಡಿಯೋ ಕಾನ್ಫರೆನ್ಸ್‌ನಲ್ಲಿದ್ದು, ತಮ್ಮ ಹೇಳಿಕೆಯನ್ನು ದಾಖಲಿಸಲು ಕಾಯುತ್ತಿದ್ದಾರೆ ಎಂದು ನೆನಪಿಸಿದ್ದರು. ಆದರೆ ನ್ಯಾಯಮೂರ್ತಿ ಮಿಶ್ರಾರವರು ಅದು ನಮಗೂ ಗೊತ್ತಿದೆ, ನೀವು ನೆನಪಿಸುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಒಟ್ಟಿನಲ್ಲಿ ಅಟಾರ್ನಿ ಜನರಲ್ ವಿಚಾರಣೆಯ ವೇಳೆ ಸಕ್ರಿಯರಾಗಿ ಭಾಗವಹಿಸಿದ್ದರು. ಅವರು ಪ್ರಶಾಂತ್ ಭೂಷಣ್ ಪರ ವಾದ ಮಂಡಿಸಿದರು. ನ್ಯಾಯಪೀಠ ಅವರ ಸಲಹೆಯನ್ನು ಸಹ ಪಡೆದುಕೊಂಡಿತು. ಆದರೆ ಸಂಜೆ ಪ್ರಕಟವಾದ ತೀರ್ಪು ಬರಹದಲ್ಲಿ ಮಾತ್ರ ಅವರ ಹೆಸರನ್ನು ನಮೂದಿಸಿಲ್ಲ.

ಒಂದು ವೇಳೆ ಅಟಾರ್ನಿಯವರ ಹೆಸರು ಹಾಕುವುದೇ ಇಲ್ಲ ಎಂದಾದಲ್ಲಿ, ಇದೇ ಕೇಸಿನಲ್ಲಿ ಹಿಂದೆ ಏಕೆ ಹಾಕಿದರು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಈ ದಿನದ ವಿಚಾರಣೆಯ ಸಂದರ್ಭದಲ್ಲಿ ಅವರ ಅಗತ್ಯವಿರಲಿಲ್ಲ ಎನ್ನುವುದಾದರೆ, ಸುಪ್ರೀಂಕೋರ್ಟಿನ ಪೀಠ ಅವರನ್ನು ಕರೆಸಿದ್ದೇಕೆ? ವಿಚಾರಣೆಯ ನಡುವೆ ಅವರ ಅನಿಸಿಕೆಯನ್ನು ಕೇಳಿದ್ದೇಕೆ ಎಂಬುದು ಸಹಜ ಪ್ರಶ್ನೆ.

ಅಂದರೆ ಸರ್ಕಾರದ ಪರವಾಗಿರುವ ವಕೀಲರೂ ಸಹಾ ಪ್ರಶಾಂತ್ ಭೂಷಣ್ ಹೇಳಿದ್ದನ್ನಾಗಲೀ, ಪ್ರಶಾಂತ್ ಭೂಷಣ್ ಅವರ ಕೊಡುಗೆಯನ್ನಾಗಲೀ ನಿರಾಕರಿಸುವ ಸ್ಥಿತಿಯಲ್ಲಿಲ್ಲ; ಬದಲಿಗೆ ಪೂರಕವಾದ ಮಾತುಗಳನ್ನಾಡಬೇಕಾದ ಅನಿವಾರ್ಯತೆ ಇದ್ದಂತಿದೆ. ಇದನ್ನು ನಿರೀಕ್ಷಿಸಿರದ ಪೀಠ ಎಡವಿಬಿಟ್ಟು, ಇದೀಗ ಆ ರೀತಿಯ ಭಿನ್ನ ಅಭಿಪ್ರಾಯವನ್ನು ದಾಖಲಿಸಿದ ಅಟಾರ್ನಿಯವರ ಹೆಸರನ್ನೇ ಆರ್ಡರ್ ಶೀಟ್‌ನಲ್ಲಿ ಕೈಬಿಟ್ಟಿದೆ.

ಈ ಕುರಿತು ನಾನುಗೌರಿ.ಕಾಂ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾದ ಸಂಜಯ್ ಹೆಗಡೆ ಮತ್ತು ಹಿರಿಯ ಕಾರ್ಮಿಕ ಮುಖಂಡರಾದ ಎಸ್‌.ಬಾಲನ್‌ರವರನ್ನು ಮಾತನಾಡಿಸಿತು. ಇದು ಸುಪ್ರೀಂ ಕೋರ್ಟ್ ಬೇಕಂತಲೇ ಮಾಡಿದ್ದಲ್ಲ, ಅಪ್ಪಿ ತಪ್ಪಿ ಆದ ತಪ್ಪಾಗಿದೆ. ಅದನ್ನು ಅವರು ಸರಿಪಡಿಸಿಕೊಳ್ಳಬಹುದು. ಆದರೆ ಉಳಿದ ವಿಷಯಗಳು ಚರ್ಚಾರ್ಹ ಎಂದಿದ್ದಾರೆ.


ಇದನ್ನೂ ಓದಿ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...