Homeಮುಖಪುಟಅಟಾರ್ನಿ ಜನರಲ್ ಹೆಸರನ್ನೇ ಕೈಬಿಟ್ಟ ಸುಪ್ರೀಂಕೋರ್ಟ್: ಭಿನ್ನ ಅಭಿಪ್ರಾಯಕ್ಕೆ ಕತ್ತರಿಯೇ?

ಅಟಾರ್ನಿ ಜನರಲ್ ಹೆಸರನ್ನೇ ಕೈಬಿಟ್ಟ ಸುಪ್ರೀಂಕೋರ್ಟ್: ಭಿನ್ನ ಅಭಿಪ್ರಾಯಕ್ಕೆ ಕತ್ತರಿಯೇ?

ಆದರೆ ಅಟಾರ್ನಿ ಜನರಲ್‌ರವರು ಪ್ರಶಾಂತ್ ಭೂಷಣ್‌ರವರಿಗೆ ಶಿಕ್ಷೆ ನೀಡಬೇಡಿ, ಅವರು ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಪೀಠದ ಮುಂದೆ ಮನವಿ ಮಾಡಿದ್ದರು. ಆದರೆ ಪೀಠ ಅದನ್ನು ನಿರಾಕರಿಸಿತ್ತು.

- Advertisement -
- Advertisement -

ಖ್ಯಾತ ನ್ಯಾಯವಾದಿ ಪ್ರಶಾಂತ್ ಭೂಷಣ್‌ರವರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ‘ಭೂಷಣ್ ತಮ್ಮ ಹೇಳಿಕೆಯ ಕುರಿತು ಮರುಪರಿಶೀಲಿಸಲು’ ಮೂರು ದಿನಗಳ ಸಮಯ ನೀಡಿದೆ.

ಆಶ್ಚರ್ಯವೆಂದರೆ ಸುಪ್ರೀಂ ಕೋರ್ಟಿನ ಆರ್ಡರ್‌ ಶೀಟ್‌ಅನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದು, ವಿಚಾರಣೆಯ ಸಂದರ್ಭದಲ್ಲಿ ಹಾಜರಿದ್ದ, ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್‌ರವರನ್ನು ಅದರಲ್ಲಿ ಹೆಸರಿಸಲಾಗಿಲ್ಲ.

ಎರಡೂವರೆ ಗಂಟೆಗೂ ಹೆಚ್ಚು ವೇಳೆ ನಡೆದ ವಾದ-ವಿವಾದದಲ್ಲಿ ಅಟಾರ್ನಿ ಜನರಲ್ ಹಾಜರಿದ್ದರು ಮಾತ್ರವಲ್ಲ ಕೋರ್ಟಿಗೆ ಭೂಷಣ್ ಪರವಾಗಿ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿದ್ದರು.

ಪ್ರಶಾಂತ್ ಭೂಷಣ್‌ರವರ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಆಗಸ್ಟ್ 5 ರಂದು ನಡೆದ ಮೊದಲ ವಿಚಾರಣೆಯಲ್ಲಿ ಸಂದರ್ಭದಲ್ಲಿ ಅವರು ಹಾಜರಿದ್ದುದ್ದನ್ನು ಅಂದಿನ ನಡಾವಳಿಗಳಲ್ಲಿ ದಾಖಲಿಸಲಾಗಿತ್ತು. ಆದರೆ ನಿನ್ನೆಯ ತೀರ್ಪು ನೀಡುವ ವಿಚಾರಣೆಯಲ್ಲಿ ಅವರನ್ನು ಕೈಬಿಟ್ಟಿರುವುದು ಏಕೆ ಎಂಬ ಪ್ರಶ್ನೆ ಉದ್ಭವವಾಗಿದೆ.

ವಿಚಾರಣೆಯ ಸಂದರ್ಭದಲ್ಲಿ ಪ್ರಶಾಂತ್ ಭೂಷಣ್‌ರವರು ತಮ್ಮ ಹೇಳಿಕೆಯನ್ನು ದಾಖಲಿಸಿದ ನಂತರ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠವೇ ‘ಭೂಷಣ್ ಅವರಿಗೆ ತಮ್ಮ ಹೇಳಿಕೆಯನ್ನು ಮರುಪರಿಶೀಲಿಸಲು ಸಮಯ ನೀಡಬಹುದೇ’ ಎಂದು ಅಟಾರ್ನಿ ಜನರಲ್‌ರವರ ಸಲಹೆ ಕೇಳಿತ್ತು. ಆಗ ಅವರು ಸಮಯ ನೀಡಬಹುದು ಎಂದು ಅಭಿಪ್ರಾಯಪಟ್ಟಿದ್ದರು.

ಆದರೆ ಅಟಾರ್ನಿ ಜನರಲ್‌ರವರು ಪ್ರಶಾಂತ್ ಭೂಷಣ್‌ರವರಿಗೆ ಶಿಕ್ಷೆ ನೀಡಬೇಡಿ, ಅವರು ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಪೀಠದ ಮುಂದೆ ಮನವಿ ಮಾಡಿದ್ದರು. ಆದರೆ ಪೀಠ ಅದನ್ನು ನಿರಾಕರಿಸಿತ್ತು.

ಆಗಸ್ಟ್ 5 ರಂದು ನಡೆದ ವಿಚಾರಣೆಯಲ್ಲಿ ಅಟಾರ್ನಿ ಜನರಲ್ ಹೆಸರು ನಮೂದಿಸಿರುವುದು..

ವಿಚಾರಣೆಯ ಕೊನೆಯಲ್ಲಿ ಅಟಾರ್ನಿ ಜನರಲ್‌ರವರು “”ಉನ್ನತ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿರುವ 9 ನ್ಯಾಯಾಧೀಶರ ಪಟ್ಟಿ ನನ್ನ ಬಳಿ ಇದೆ. 1987ರಲ್ಲಿ ನಾನು ಕೂಡ ಹೇಳಿದ್ದೆ” ಎಂದು  ಹೇಳುತ್ತಿರುವಾಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಮಿಶ್ರಾರವರು “ಅದನ್ನೆಲ್ಲ ಕೇಳಲು ನಾವು ಇಲ್ಲಿ ಕೂತಿಲ್ಲ  ಮಿ.ಅಟಾರ್ನಿ” ಎಂದು ಹೇಳುವ ಮೂಲಕ ತಡೆದರು.

ವಿಚಾರಣೆಯ ಆರಂಭದಲ್ಲಿ ಭೂಷಣ್ ಪರ ವಕೀಲರಾದ ರಾಜೀವ್ ಧವನ್ ಮತ್ತು ದುಷ್ಯಂತ್ ದವೆಯವರು ಅಟಾರ್ನಿ ಜನರಲ್‌ರವರು ಸಹ ವಿಡಿಯೋ ಕಾನ್ಫರೆನ್ಸ್‌ನಲ್ಲಿದ್ದು, ತಮ್ಮ ಹೇಳಿಕೆಯನ್ನು ದಾಖಲಿಸಲು ಕಾಯುತ್ತಿದ್ದಾರೆ ಎಂದು ನೆನಪಿಸಿದ್ದರು. ಆದರೆ ನ್ಯಾಯಮೂರ್ತಿ ಮಿಶ್ರಾರವರು ಅದು ನಮಗೂ ಗೊತ್ತಿದೆ, ನೀವು ನೆನಪಿಸುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಒಟ್ಟಿನಲ್ಲಿ ಅಟಾರ್ನಿ ಜನರಲ್ ವಿಚಾರಣೆಯ ವೇಳೆ ಸಕ್ರಿಯರಾಗಿ ಭಾಗವಹಿಸಿದ್ದರು. ಅವರು ಪ್ರಶಾಂತ್ ಭೂಷಣ್ ಪರ ವಾದ ಮಂಡಿಸಿದರು. ನ್ಯಾಯಪೀಠ ಅವರ ಸಲಹೆಯನ್ನು ಸಹ ಪಡೆದುಕೊಂಡಿತು. ಆದರೆ ಸಂಜೆ ಪ್ರಕಟವಾದ ತೀರ್ಪು ಬರಹದಲ್ಲಿ ಮಾತ್ರ ಅವರ ಹೆಸರನ್ನು ನಮೂದಿಸಿಲ್ಲ.

ಒಂದು ವೇಳೆ ಅಟಾರ್ನಿಯವರ ಹೆಸರು ಹಾಕುವುದೇ ಇಲ್ಲ ಎಂದಾದಲ್ಲಿ, ಇದೇ ಕೇಸಿನಲ್ಲಿ ಹಿಂದೆ ಏಕೆ ಹಾಕಿದರು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಈ ದಿನದ ವಿಚಾರಣೆಯ ಸಂದರ್ಭದಲ್ಲಿ ಅವರ ಅಗತ್ಯವಿರಲಿಲ್ಲ ಎನ್ನುವುದಾದರೆ, ಸುಪ್ರೀಂಕೋರ್ಟಿನ ಪೀಠ ಅವರನ್ನು ಕರೆಸಿದ್ದೇಕೆ? ವಿಚಾರಣೆಯ ನಡುವೆ ಅವರ ಅನಿಸಿಕೆಯನ್ನು ಕೇಳಿದ್ದೇಕೆ ಎಂಬುದು ಸಹಜ ಪ್ರಶ್ನೆ.

ಅಂದರೆ ಸರ್ಕಾರದ ಪರವಾಗಿರುವ ವಕೀಲರೂ ಸಹಾ ಪ್ರಶಾಂತ್ ಭೂಷಣ್ ಹೇಳಿದ್ದನ್ನಾಗಲೀ, ಪ್ರಶಾಂತ್ ಭೂಷಣ್ ಅವರ ಕೊಡುಗೆಯನ್ನಾಗಲೀ ನಿರಾಕರಿಸುವ ಸ್ಥಿತಿಯಲ್ಲಿಲ್ಲ; ಬದಲಿಗೆ ಪೂರಕವಾದ ಮಾತುಗಳನ್ನಾಡಬೇಕಾದ ಅನಿವಾರ್ಯತೆ ಇದ್ದಂತಿದೆ. ಇದನ್ನು ನಿರೀಕ್ಷಿಸಿರದ ಪೀಠ ಎಡವಿಬಿಟ್ಟು, ಇದೀಗ ಆ ರೀತಿಯ ಭಿನ್ನ ಅಭಿಪ್ರಾಯವನ್ನು ದಾಖಲಿಸಿದ ಅಟಾರ್ನಿಯವರ ಹೆಸರನ್ನೇ ಆರ್ಡರ್ ಶೀಟ್‌ನಲ್ಲಿ ಕೈಬಿಟ್ಟಿದೆ.

ಈ ಕುರಿತು ನಾನುಗೌರಿ.ಕಾಂ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾದ ಸಂಜಯ್ ಹೆಗಡೆ ಮತ್ತು ಹಿರಿಯ ಕಾರ್ಮಿಕ ಮುಖಂಡರಾದ ಎಸ್‌.ಬಾಲನ್‌ರವರನ್ನು ಮಾತನಾಡಿಸಿತು. ಇದು ಸುಪ್ರೀಂ ಕೋರ್ಟ್ ಬೇಕಂತಲೇ ಮಾಡಿದ್ದಲ್ಲ, ಅಪ್ಪಿ ತಪ್ಪಿ ಆದ ತಪ್ಪಾಗಿದೆ. ಅದನ್ನು ಅವರು ಸರಿಪಡಿಸಿಕೊಳ್ಳಬಹುದು. ಆದರೆ ಉಳಿದ ವಿಷಯಗಳು ಚರ್ಚಾರ್ಹ ಎಂದಿದ್ದಾರೆ.


ಇದನ್ನೂ ಓದಿ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....