Homeಮುಖಪುಟರಾಜ್ಯಕ್ಕೆ ಆಮ್ಲಜನಕ ನೀಡುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶ- ’ಬೆಡ್’ ವಿಚಾರದಲ್ಲೇ ಇರುವ BJP ಸಂಸದರು!

ರಾಜ್ಯಕ್ಕೆ ಆಮ್ಲಜನಕ ನೀಡುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶ- ’ಬೆಡ್’ ವಿಚಾರದಲ್ಲೇ ಇರುವ BJP ಸಂಸದರು!

ಪತ್ರಕರ್ತರ ಫೋನ್‌ ಕರೆಗೆ ಬಿಜೆಪಿ ಸಂಸದರು ಮತ್ತು ನಾಯಕರು ಹೇಳಿದ್ದೇನು?

- Advertisement -
- Advertisement -

“ರಾಜ್ಯಕ್ಕೆ ಆಮ್ಲಜನಕ ನೀಡುವ ಬಗ್ಗೆ ಕರ್ನಾಟಕ ಹೈಕೋರ್ಟ್ ಆದೇಶವು ಎಚ್ಚರಿಕೆಯಿಂದ ಕೂಡಿದ್ದು, ಎಲ್ಲ ಆಯಾಮ, ಅಂಕಿಸಂಖ್ಯೆಗಳನ್ನು ಒಳಗೊಂಡಿದೆ. ಇದರ ವಿರುದ್ಧದ ಕೇಂದ್ರದ ಮನವಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ” ಎಂದು ಸುಪ್ರೀಂಕೋರ್ಟ್ ಇಂದು ಶುಕ್ರವಾರ ಹೇಳಿದೆ. 1,200 ಮೆಟ್ರಿಕ್ ಟನ್ ಆಮ್ಲಜನಕವನ್ನು ಕರ್ನಾಟಕಕ್ಕೆ ಕಳುಹಿಸುವಂತೆ ಕೋರಿ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ನಿನ್ನೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ತಿರಸ್ಕರಿಸಿದೆ ಎಂದು ಲೈವ್ ಲಾ, ಬಾರ್ & ಬೆಂಚ್ ಮತ್ತು ಇತರೆಲ್ಲ ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ.

ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಕರ್ನಾಟಕದ ದೈನಂದಿನ ದ್ರವ ವೈದ್ಯಕೀಯ ಆಮ್ಲಜನಕದ ಹಂಚಿಕೆಯನ್ನು 965 ಮೆಟ್ರಿಕ್ ಟನ್ನಿಂದ 1,200 ಮೆಟ್ರಿಕ್ ಟನ್‌ಗೆ ಹೆಚ್ಚಿಸುವಂತೆ ಮೊನ್ನೆ ಹೈಕೋರ್ಟ್ ಆದೇಶ ನೀಡಿತ್ತು. ಆದರೆ ಈ ಆದೇಶದ ವಿರುದ್ಧ ಕೇಂದ್ರ ಸರ್ಕಾರವು ನಿನ್ನೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

‘ರಾಜ್ಯಗಳ ಸಮಂಜಸವಾದ ಬೇಡಿಕೆಗಳಿಗೆ ಕೇಂದ್ರವು ಹಿಂಜರಿಯುವುದಿಲ್ಲ. ನಾವು ಹೈಕೋರ್ಟ್ ಆದೇಶದ ಬಗ್ಗೆ ಕಾಳಜಿ ವಹಿಸುತ್ತೇವೆ ಮತ್ತು ಪ್ರತಿ ಹೈಕೋರ್ಟ್ ನಿರ್ದೇಶಿಸಿದ ಎಲ್ಲವನ್ನೂ ಕಾರ್ಯಸಾಧ್ಯ ಮಾಡಲಾಗದು’ಎಂದು ಕೇಂದ್ರ ವಾದಿಸಿತ್ತು.

ದೆಹಲಿ ಸರ್ಕಾರದ ಮನವಿಯನ್ನೂ ಪರಿಗಣಿಸಿರುವ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್, ಆ ರಾಜ್ಯಕ್ಕೆ ನಿದಿಪಡಿಸಿದ ಬೇಡಿಕೆಯ ಆಮ್ಲಜನಕ ಪೂರೈಸಬೇಕು ಎಂದು ಆದೇಶ ಮಾಡಿದೆ.

ನಾಲ್ಕು ದಿನದ ಹಿಂದೆ, ರಾಜ್ಯದ ಚಾಮರಾಜನಗರದ ಸರ್ಕಾರಿ ಆಸ್ಪತ್ರೆಯಲ್ಲಿ 24 ಕೋವಿಡ್ ರೋಗಿಗಳು ಆಮ್ಲಜನಕ ಕೊರತೆಯಿಂದ ಅಸು ನೀಗಿದ್ದು, ಬೇರೆ ಜಿಲ್ಲೆಗಳಿಂದಲೂ ಆಮ್ಲಜನಕ ಕೊರತೆಯಿಂದ ಸಾಚವುಗಳು ಸಂಭವಿಸಿರುವ ವರದಿಗಳು ಬರುತ್ತಿವೆ.

`ಬೆಡ್‌’ನಲ್ಲಿ ಹೊರಳಾಡುತ್ತಿರುವ ರಾಜ್ಯದ ಸಂಸದರು!

ರಾಜ್ಯದಲ್ಲಿ ಆಮ್ಲಜನಕ ಕೊರತೆ ಹೋಗಲಾಡಿಸಲು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದೊಂದಿಗೆ ಕೇಳುವ ಧೈರ್ಯವೆ ಇಲ್ಲ. ಕೊನೆಗೆ ಹೈಕೋರ್ಟ್ ಆ ಕೆಲಸ ಮಾಡಿ ರಾಜ್ಯದ ನೆರವಿಗೆ ಬಂದರೆ, ಅದನ್ನು ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸುವ ಮೂಲ ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಬಗೆಯಲು ಯತ್ನಿಸಿದೆ. ಹಾಗಾದರೆ ಬಿಜೆಪಿಯಂದ ಚುನಾಯಿತರಾದ 25 ಸಂಸದರು ಎಲ್ಲಿದ್ದಾರೆ? ಇವರ ಅಭಿಪ್ರಾಯ ಕೇಳದೇ ಕೇಂದ್ರ ಸರ್ಕಾರ ಸುಪ್ರೀಂಕೋರ್ಟಿಗೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದು ಏಕೆ?

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಈ ಕುರಿತಂತೆ, ನಿನ್ನೆ ಮತ್ತು ಇವತ್ತು ಹಲವು ಬಿಜೆಪಿ ಸಂಸದರು ಮತ್ತು ನಾಯಕರನ್ನು ನಾನುಗೌರಿ.ಕಾಂ ಸಂಪರ್ಕಿಸಲು ಯತ್ನಿಸಿದೆ. ಬಹುತೇಕರು ಫೋನ್ ರಿಸೀವ್ ಮಾಡಿತ್ತಿಲ್ಲ ಅಥವಾ ಅವರ ಸೆಕ್ರೆಟರಿಗಳು ರಿಸೀವ್ ಮಾಡಿ, ವಿಷಯ ಇದು ಎಂದು ಗೊತ್ತಾದ ತಕ್ಷಣ ಸಮಂದರ ಸಂಪರ್ಕ ನೀಡುತ್ತಿಲ್ಲ. ಇದು ಕೂಡ ಈ ಹೊಣೆಗೇಡಿ ಸಂಸದರ ಕುತಂತ್ರವಾಗಿದೆ. ‘ಬೆಡ್’ ಬಗ್ಗೆ ಹಾರಾಡಿದ್ದ ಸೂರ್ಯರಿಗೆ ಆಕ್ಸಿಜನ್ ಮುಖ್ಯವೇ ಆಗುವುದಿಲ್ಲ.

ಉಳಿದೆಲ್ಲ ಬಿಜೆಪಿ ಸಂಸದರೂ ಈಗ ‘ಬೆಡ್’ ವಿಚಾರದಲ್ಲೇ ಇರುವುದರಿಂದ ಸುಪ್ರೀಂಕೋರ್ಟ್ ಆದೇಶದ ನಂತರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರಿಗೆ ಕರೆ ಮಾಡಿದರೆ, ತಾನೇ ‘ಜೋಶಿ’ ಎಂಬಂತೆ ಮಾತನಾಡಿದ ಅವರ ಪರ್ಸನಲ್ ಸೆಕ್ರೆಟರಿ, ಮೊದಲಿಗೆ ಪ್ರಶ್ನೆಯನ್ನು ಕೇಳಿಸಿಕೊಳ್ಳುತ್ತಾರೆ. ನಂತರ ನಾನುಗೌರಿ.ಕಾಂ ಕಡೆಯಿಂದ ಫೋನ್ ಎಂಬುದು ಗೊತ್ತಾಗುತ್ತಿದ್ದಂತೆ, ‘ಸರ್, ನಾನು ಜೋಶಿ ಸಾಹೇಬರು ಅಲ್ಲ, ಅವರ ಪಿ.ಎಸ್…ಆಮೇಲೆ ಅವರ ಕಡೆಯಿಂದ ಫೋನ್ ಮಾಡಿಸುತ್ತೇನೆ’ ಎಂದು ತಪ್ಪಿಸಿಕೊಳ್ಳುತ್ತಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನಿನ್ನೆ ಕರೆ ಸ್ವೀಕರಿಸಿದ್ದರು, ಆದರೆ ರಾಜ್ಯದ ಹಿತಾಸಕ್ತಿ ವಿರುದ್ಧ ಕೇಂದ್ರ ಸುಪ್ರೀಂಕೋರ್ಟಿಗೆ ಹೋಗಿದೆ ಎಂಬ ವಿಷಯ ಎತ್ತಿದ ಕೂಡಲೇ, ‘ಈಗ ತುರ್ತಾದ ಕೆಲಸದಲ್ಲಿ ಇದ್ದೇನೆ’ ಎಂದು ಕರೆ ಕಟ್ ಮಾಡಿದ್ದಾರೆ.

ಇದನ್ನೂ ಓದಿ: ಬೆಡ್‌ಬ್ಲಾಕ್‌ ದಂಧೆಯಲ್ಲಿ ಬಿಜೆಪಿ ಶಾಸಕ ಭಾಗಿ; ಸಂಬಂಧವಿಲ್ಲದ 17 ಸಿಬ್ಬಂದಿಗಳು `ಮುಸ್ಲಿಂ’ ಎಂಬ ಕಾರಣಕ್ಕೆ ವಜಾ

ಇಂದು ಮುಂಜಾನೆ ಕೂಡಾ ಸುಪ್ರೀಂ ಆದೇಶ ಬರುವ ಮುಂಚೆ ಅವರಿಗೆ ಮತ್ತೆ ಕರೆ ಮಾಡಿದಾಗ ಅವರ ಪಿಎಸ್ ತಾನೆ ಸಿ.ಟಿ. ರವಿ ಎಂಬಂತೆ ಮಾತನಾಡಿ, ಪ್ರಶ್ನೆ ತಿಳಿಯುತ್ತಿದ್ದಂತೆ, ‘ಸಾಹೇಬರು ಮೀಟಿಂಗಿನಲ್ಲಿ ಇದ್ದಾರೆ, ನಂತರ ಫೋನ್ ಮಾಡಿ ಕೊಡುವೆ’ ಎಂದರು.

ತೀರ್ಪು ಬಂದು 4 ತಾಸು ಆದರೂ ಅವರ ಫೋನ್ ಬಂದಿಲ್ಲ. ಕಲಬುರಗಿಯ ಸಂಸದ ಉಮೇಶ್ ಜಾಧವ್ ಅವರಿಗೆ ನಿನ್ನೆ ರಾತ್ರಿ ಕರೆ ಮಾಡಿ ಮಾತನಾಡಿದಾಗ, ಅವರು ವಿಷಯವೇ ಗೊತ್ತಿಲ್ಲ ಎಂಬಂತೆ ನುಣುಚಿಕೊಂಡರು. ಇವತ್ತು ಐದು ಫೋನ್ ಕರೆ ಮಾಡಿದರೂ ಅವರು ರಿಸೀವ್ ಮಾಡಿಲ್ಲ.

ಬಳ್ಳಾರಿ ಸಂಸದ ವೈ ದೇವೇಂದ್ರಪ್ಪ ಕೂಡ ಕಾಲ್ ರಿಸೀವ್ ಮಾಡುತ್ತಿಲ್ಲ. ಸಂದೇಶ ಕಳಿಸಿ ಎಂದು ಅವರು ಮೆಸೆಜ್ ಹಾಕಿದ್ದಾರೆ. ಪ್ರಶ್ನೆಗಳನ್ನು ಹಾಕಿ ನಾಲ್ಕು ತಾಸಾದರೂ ಉತ್ತರವಿಲ್ಲ.

ಪ್ರಶ್ನಿಸಿದ ಎಲ್ಲ ಸಂಸದರಲ್ಲೂ ಸರಿಯಾದ ಉತ್ತರವಿಲ್ಲ. ಎಲ್ಲರೂ ತಮ್ಮ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಾ ಇಡೀ ರಾಜ್ಯದ ಜನರಿಗೆ ದ್ರೋಹ ಬಗೆಯುತ್ತಿದ್ದಾರೆಯೆ ಎಂಬ ಸಂಶಯ ವ್ಯಕ್ತವಾಗಿದೆ.

ಇದನ್ನೂ ಓದಿ: Explainer: ಸದ್ಯಕ್ಕೆ ಲಭ್ಯವಿರುವ ಲಸಿಕೆಗಳೆಷ್ಟು? ತಡವಾಗಲು ಕಾರಣವೇನು?

ಈ ಬಗ್ಗೆ ರಾಜ್ಯದ ಜನತೆ ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕನ್ನಡ ಪರ ಹೋರಾಟಗಾರ ಜಾವಗಲ್ ಶ್ರೀನಾಥ್ ಸೇರಿದಂತೆ ಹಲವರು ಎತ್ತಿರುವ ಪ್ರಶ್ನೆಗಳನ್ನೆಲ್ಲಾ ಸಾರಾಂಶೀಕರಿಸಿ ನಾನುಗೌರಿ.ಕಾಂ ಓದುಗರಿಗಾಗಿ ನೀಡಿದ್ದೇವೆ, ಓದಿ:

“ರಾಜ್ಯಕ್ಕೆ ನಿತ್ಯ 1,700 ಟನ್ ಆಮ್ಲಜನಕದ ಅಗತ್ಯವಿದೆ. ಆದರೂ, 1,200 ಟನ್ ಆಮ್ಲಜನಕ ಇದ್ದರೆ ಪರಿಸ್ಥಿತಿ ಹೇಗೋ ನಿಭಾಯಿಸಬಹುದು. ಕರ್ನಾಟಕದಲ್ಲಿ ಹೆಚ್ಚು ಕಡಿಮೆ 1,200 ಟನ್‌ಗೂ ಅಧಿಕ ಪ್ರಮಾಣದ ಆಮ್ಲಜನಕವೂ ಉತ್ಪಾದನೆಯಾಗುತ್ತಿದೆ. ಆದರೆ, ನಮ್ಮಿಂದ ಆಮ್ಲಜನಕ ಕಿತ್ತುಕೊಳ್ಳುತ್ತಿರುವ ಕೇಂದ್ರ ಪೂರೈಸುತ್ತಿರುವುದು 895-965 ಟನ್ ಮಾತ್ರ!.

ಅನುದಾನದಲ್ಲಿ ತಾರತಮ್ಯ, ಜಿಎಸ್‌ಟಿ ಬಾಕಿಯಲ್ಲಿ ತಾರತಮ್ಯ, ನೆರೆ-ಬರ ಪರಿಹಾರದಲ್ಲಿ ಮಾಡಲಾದ ತಾರತಮ್ಯವನ್ನು ಕರ್ನಾಟಕ, ಕನ್ನಡಿಗರು ಹೇಗೋ ಸಹಿಸಿದ್ದಾರೆ. ಆದರೆ, ಉಸಿರನ್ನೇ ಕಿತ್ತುಕೊಳ್ಳುವ ಕೇಂದ್ರದ ಈ ಮಾರಕ ತಾರತಮ್ಯವನ್ನು ಸಹಿಸುವುದಾದರೂ ಹೇಗೆ? ಇದು ಕನ್ನಡಿಗರ ಜೀವ, ಜೀವನದ ಪ್ರಶ್ನೆ ಎಂಬುದನ್ನು ಕೇಂದ್ರ ಸರ್ಕಾರ ಅರಿಯುತ್ತಿಲ್ಲ ಏಕೆ?

ಇದನ್ನೂ ಓದಿ: ಅನ್ಯಾಯಕ್ಕೆ ಒಳಗಾದವರು ಇಲ್ಲದಿದ್ದಾಗ ತೆರಳಿ ಕ್ಷಮೆ ಯಾಚಿಸಿದ ತೇಜಸ್ವಿ ಸೂರ್ಯ

ಅಷ್ಟಕ್ಕೂ ನಾವು ಅಧಿಕವಾಗಿ ಏನೂ ಕೇಳುತ್ತಿಲ್ಲ. ನಮ್ಮಲ್ಲಿ ಉತ್ಪಾದನೆಯಾಗುತ್ತಿರುವ ಆಮ್ಲಜನಕವನ್ನು ನಮಗೇ ನೀಡಿ ಎಂಬುದು ನಮ್ಮ ಬೇಡಿಕೆ. ನಮ್ಮವರ ಜೀವವನ್ನೇ ಕಿತ್ತು ಗುಜರಾತ್ ಮತ್ತಿತರ ರಾಜ್ಯಗಳ ಜನರ ಜೀವ ಉಳಿಸಬೇಕಾದ ಅನಿವಾರ್ಯತೆ, ತ್ಯಾಗ ಮಾಡಬೇಕಾದ ಸಂದಿಗ್ಧತೆಯಲ್ಲಿ ನಮ್ಮನ್ನು ಸಿಲುಕಿಸಬಾರದು. ಕೇಂದ್ರ ನಮ್ಮ ಪಾಲನ್ನು ನಮಗೆ ನೀಡಲಿ.

ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ಕೇಂದ್ರದ ಇಂತಹ ತಾರತಮ್ಯವನ್ನು ಪ್ರಶ್ನಿಸಬೇಕು. ಇಲ್ಲಿವರೆಗೆ ಬಾಯಿಗೆ ಬೀಗ ಹಾಕಿಕೊಂಡಿರುವ ಬಿಜೆಪಿ ಸಂಸದರು ಈಗ ಜನರ ಜೀವ ಉಳಿಸುವುದಕ್ಕಾದರೂ ಬಾಯಿ ಬಿಡಲಿ. ರಾಜ್ಯದಿಂದ ಶಕ್ತಿ ಪಡೆದಿರುವ ಕೇಂದ್ರ ಅದೇ ಶಕ್ತಿಯನ್ನು ಬಳಸಿಕೊಂಡು ರಾಜ್ಯದ ಮೇಲೆ ಗದಾಪ್ರಹಾರ ನಡೆಸುತ್ತಿರುವುದನ್ನು ಜನ ಗಮನಿಸಲಿ.

25 ಬೇಜವಾಬ್ದಾರಿ, ಹೋಪ್‌ಲೆಸ್ ಸಂಸದರನ್ನು ಕಂಡಲ್ಲಿ ಪ್ರಶ್ನಿಸುವುದಷ್ಟೇ ಕೆಲಸ. ಅವರು `ಬೆಡ್’ ಆಚೆ ಬರದೇ ಇದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ನಿಮ್ಮ ಸಂಸದ ಏನು ಮಾಡುತ್ತಿದ್ದಾರೆ ಅಥವಾ ಏನೂ ಮಾಡೇ ಇಲ್ಲ ಎಂಬುದನ್ನು ಬರೆಯುತ್ತ ಹೋಗಿ”

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನಮ್ಮ ರಾಜ್ಯದ ಸಂಸದರು ಜನಪ್ರತಿನಿಧಿಗಳಂತೆ ವರ್ತಿಸುವುದನ್ನು ಬಿಟ್ಟು, ಒಕ್ಕೂಟ ಸರ್ಕಾರದ ಗುಲಾಮರಾಗಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...