Homeಮುಖಪುಟಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

- Advertisement -
- Advertisement -

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ.

ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದ ಹಕ್ಕುಗಳು ಮತ್ತು ಆಕ್ಷೇಪಣೆಗಳ ಬಗ್ಗೆ ಅಂತಿಮ ಆದೇಶಗಳನ್ನು ಹೊರಡಿಸುವ ಅಧಿಕಾರ ಕೇವಲ ಚುನಾವಣಾ ನೋಂದಣಾಧಿಕಾರಿಗಳಿಗೆ ಮಾತ್ರ ಇರುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಮೈಕ್ರೋ-ಅಬ್ಸರ್ವರ್‌ಗಳು ಕೇವಲ ಇವರಿಗೆ ಸಹಾಯ ಮಾಡಬಹುದಷ್ಟೇ ಹೊರತು, ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಇರುವುದಿಲ್ಲ ಎಂದಿದೆ.

ಇದೇ ವೇಳೆ, ಎಸ್‌ಐಆರ್ ಅಧಿಕಾರಿಗಳ ವಿರುದ್ಧದ ಬೆದರಿಕೆ ಮತ್ತು ಹಿಂಸಾಚಾರವನ್ನು ತಡೆಯುವಲ್ಲಿ ವಿಫಲವಾಗಿರುವ ಬಗ್ಗೆ ಚುನಾವಣಾ ಆಯೋಗ ವ್ಯಕ್ತಪಡಿಸಿರುವ ಕಳವಳಗಳಿಗೆ ಪ್ರತಿಕ್ರಿಯಿಸಿ, ವೈಯಕ್ತಿಕ ಅಫಿಡವಿಟ್ ಸಲ್ಲಿಸುವಂತೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ನ್ಯಾಯಾಲಯ ನಿರ್ದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು, ಫೆಬ್ರವರಿ 14 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲು ನಿಗದಿಯಾಗಿದ್ದ ಗಡುವನ್ನು ಕನಿಷ್ಠ ಒಂದು ವಾರಗಳ ಕಾಲ ವಿಸ್ತರಿಸಲು ನಿರ್ದೇಶಿಸಿದೆ. ದಾಖಲೆಗಳ ಪರಿಶೀಲನೆ ಮತ್ತು ಆಕ್ಷೇಪಣೆಗಳ ವಿಲೇವಾರಿಗೆ ಹೆಚ್ಚಿನ ಸಮಯ ಬೇಕಿರುವುದರಿಂದ ಈ ನಿರ್ದೇಶನ ನೀಡಿದೆ.

ಎಸ್‌ಐಆರ್ ಪ್ರಕ್ರಿಯೆಯನ್ನು ಸುಗಮಗೊಳಿಸಲು ಮತ್ತು ವಿವಿಧ ಪಕ್ಷಕಾರರಿಂದ ಉಂಟಾದ ಆತಂಕಗಳನ್ನು ಪರಿಹರಿಸುವ ಉದ್ದೇಶದಿಂದ ನ್ಯಾಯಾಲಯವು ಈ ಕೆಳಗಿನ ನಿರ್ದೇಶನಗಳನ್ನು ನೀಡಿದೆ.

1.ಇಂದು ಹಸ್ತಾಂತರಿಸಲಾದ ಪಟ್ಟಿಯಲ್ಲಿರುವ ಎಲ್ಲಾ 8,550 ಗ್ರೂಪ್ ಬಿ ಅಧಿಕಾರಿಗಳು ನಾಳೆ ಸಂಜೆ 5 ಗಂಟೆಯೊಳಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಅಥವಾ ಚುನಾವಣಾ ನೋಂದಣಾಧಿಕಾರಿಗಳ (ಇಆರ್‌ಒ) ಮುಂದೆ ಕರ್ತವ್ಯಕ್ಕೆ ಹಾಜರಾಗುವುದನ್ನು ರಾಜ್ಯ ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದೆ. ಈಗ ಒದಗಿಸಲಾದ ಈ ಅಧಿಕಾರಿಗಳ ಸೇವೆಯನ್ನು ಬಳಸಿಕೊಳ್ಳಲು ಅಥವಾ ಪ್ರಸ್ತುತ ಇರುವ ಇಆರ್‌ಒ ಮತ್ತು ಸಹಾಯಕ ಇಆರ್‌ಒಗಳನ್ನು ಅವರ ಅರ್ಹತೆಗೆ ಅನುಗುಣವಾಗಿ ಬದಲಾಯಿಸಲು ಚುನಾವಣಾ ಆಯೋಗಕ್ಕೆ ಸಂಪೂರ್ಣ ಅಧಿಕಾರ ಮತ್ತು ವಿವೇಚನೆಯನ್ನು ನೀಡಲಾಗಿದೆ.

2.ರಾಜ್ಯ ಸರ್ಕಾರ ಒದಗಿಸಿರುವ 8,500 ಅಧಿಕಾರಿಗಳ ಪಟ್ಟಿಯನ್ನು ಪರಿಶೀಲಿಸಿ, ಅವರ ಬಯೋಡೇಟಾ ಮತ್ತು ಕೆಲಸದ ಅನುಭವದ ಆಧಾರದ ಮೇಲೆ ಚುನಾವಣಾ ಆಯೋಗವು ಅಧಿಕಾರಿಗಳನ್ನು ಆಯ್ಕೆ ಮಾಡಬಹುದು. ಈ ಅಧಿಕಾರಿಗಳ ಸಂಖ್ಯೆಯು ಈಗಾಗಲೇ ನಿಯೋಜಿಸಲಾದ ಮೈಕ್ರೋ-ಅಬ್ಸರ್ವರ್‌ಗಳ ಸಂಖ್ಯೆಗೆ ಸಮನಾಗಿರಬೇಕು.

3.ಈಗಾಗಲೇ ಮೈಕ್ರೋ-ಅಬ್ಸರ್ವರ್‌ ಆಗಿ ನಿಯೋಜಿಸಲಾದವರ ಜವಾಬ್ದಾರಿಯು ಡಿಇಒ/ಇಆರ್‌ಒಗಳಿಗೆ ಸಹಾಯ ಮಾಡುವುದು ಮಾತ್ರವಾಗಿದೆ. ಅಂತಿಮ ನಿರ್ಧಾರವನ್ನು ಇಆರ್‌ಒಗಳು ಮಾತ್ರ ತೆಗೆದುಕೊಳ್ಳಬೇಕು.

4.ದಾಖಲೆಗಳ ಪರಿಶೀಲನೆಯನ್ನು ಪೂರ್ಣಗೊಳಿಸಲು ಮತ್ತು ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲು ಜಿಲ್ಲಾ ಚುನಾವಣಾಧಿಕಾರಿಗಳಿಗೆ (ಡಿಇಒ) ಮತ್ತು ಚುನಾವಣಾ ನೋಂದಣಾಧಿಕಾರಿಗಳಿಗೆ (ಇಆರ್‌ಒ), ನಿಗದಿತ ದಿನಾಂಕವಾದ ಫೆಬ್ರವರಿ 14 ರ ನಂತರ ಕನಿಷ್ಠ ಒಂದು ವಾರ ಹೆಚ್ಚುವರಿ ಕಾಲಾವಕಾಶವನ್ನು ನೀಡಬೇಕು ಎಂದು ನ್ಯಾಯಾಲಯವು ನಿರ್ದೇಶಿಸಿದೆ.

5.ಅರ್ಜಿದಾರರ ಪರವಾಗಿ ಹಾಜರಾದವರು ಕೆಲವು ದಾಖಲೆಗಳನ್ನು ಉಲ್ಲೇಖಿಸಿ, ಮೈಕ್ರೋ-ಅಬ್ಸರ್ವರ್‌ಗಳೇ (ಸೂಕ್ಷ್ಮ ವೀಕ್ಷಕರು) ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಹೊಂದಿದ್ದಾರೆ ಎಂದು ವಾದಿಸಿದ್ದರು. ಆದರೆ, ಈ ಬಗ್ಗೆ ಚುನಾವಣಾ ಆಯೋಗವು ಸ್ಪಷ್ಟನೆ ನೀಡಿದ್ದು, ಮೈಕ್ರೋ-ಅಬ್ಸರ್ವರ್‌ಗಳು ಕೇವಲ ನಿಗದಿತ ಶಾಸನಬದ್ಧ ಅಧಿಕಾರಿಗಳಿಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡುತ್ತಾರಷ್ಟೇ ಹೊರತು, ಅವರೇ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಹೊಂದಿಲ್ಲ ಎಂದು ತಿಳಿಸಿದೆ.

6.ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಹಿಂಸಾಚಾರ ನಡೆದಿದೆ ಎಂಬ ಚುನಾವಣಾ ಆಯೋಗದ ಹೇಳಿಕೆಗಳಿಗೆ ಸಂಬಂಧಿಸಿದಂತೆ, ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನ್ಯಾಯಾಲಯವು ಶೋಕಾಸ್ ನೋಟಿಸ್ ನೀಡಿದ್ದು, ವೈಯಕ್ತಿಕ ಅಫಿಡವಿಟ್ ಸಲ್ಲಿಸುವಂತೆ ನಿರ್ದೇಶಿಸಿದೆ. ಚುನಾವಣಾ ಆಯೋಗವು ದೂರು ನೀಡಿದ್ದರೂ ಸಹ ಯಾವುದೇ ಎಫ್‌ಐಆರ್ ದಾಖಲಿಸಿಲ್ಲ ಎಂಬ ಅಂಶವನ್ನು ನ್ಯಾಯಾಲಯವು ಗಂಭೀರವಾಗಿ ಪರಿಗಣಿಸಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದ ‘ಫಾರ್ಮ್ 7’ ಆಕ್ಷೇಪಣೆ ಪತ್ರಗಳನ್ನು ಸಾಮೂಹಿಕವಾಗಿ ಸುಟ್ಟುಹಾಕಲಾಗಿದೆ ಎಂಬ ಗಂಭೀರ ಆರೋಪಗಳನ್ನೂ ನ್ಯಾಯಾಲಯ ಗಮನಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಂತೆ ಜನವರಿ 19 ರಂದೇ ಡಿಜಿಪಿಗೆ ನಿರ್ದಿಷ್ಟ ನಿರ್ದೇಶನ ನೀಡಿದ್ದರೂ, ಅದನ್ನು ಪಾಲಿಸದಿರುವ ಬಗ್ಗೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

8.ಶಾಸನಬದ್ಧ ನಿಯಮಗಳ ಪ್ರಕಾರ ಸಲ್ಲಿಕೆಯಾಗಿರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದು ಚುನಾವಣಾ ನೋಂದಣಾಧಿಕಾರಿಗಳ (ಇಆರ್‌ಒ) ಕರ್ತವ್ಯವಾಗಿದೆ. ಆಕ್ಷೇಪಣೆ ಸಲ್ಲಿಸಿದ ವ್ಯಕ್ತಿಗಳು ವೈಯಕ್ತಿಕ ವಿಚಾರಣೆಗೆ ಹಾಜರಾಗಲಿ ಅಥವಾ ಬಿಡಲಿ, ಅವರ ಅನುಪಸ್ಥಿತಿಯಲ್ಲೂ ಆಕ್ಷೇಪಣೆಗಳನ್ನು ಪರಿಶೀಲಿಸುವುದು ಕಡ್ಡಾಯ ಎಂದು ನ್ಯಾಯಾಲಯ ತಿಳಿಸಿದೆ. ತೊಂದರೆಗೊಳಗಾದ ವ್ಯಕ್ತಿಗಳ ದಾಖಲೆಗಳನ್ನು ಹೇಗೆ ಪರಿಶೀಲಿಸಲಾಗುತ್ತದೆಯೋ, ಹಾಗೆಯೇ ಆಕ್ಷೇಪಣೆ ಸಲ್ಲಿಸಿದವರ ದಾಖಲೆಗಳ ನೈಜತೆಯನ್ನೂ ಅಧಿಕಾರಿಗಳು ಕಡ್ಡಾಯವಾಗಿ ಪರಿಶೀಲಿಸಬೇಕು ಎಂದಿದೆ.

9.ಕರ್ತವ್ಯ ನಿರ್ವಹಿಸದ ಅಧಿಕಾರಿಗಳನ್ನು ಬದಲಿಸಲು ಚುನಾವಣಾ ಆಯೋಗಕ್ಕೆ ಸ್ವಾತಂತ್ರ್ಯವಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

    ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

    ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

    ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

    ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

    ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

    ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

    ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

    “ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

    2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

    ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

    ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

    ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

    ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

    ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

    ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

    ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

    ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

    ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

    ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...