Homeಮುಖಪುಟಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

- Advertisement -
- Advertisement -

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ.

ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದ ಹಕ್ಕುಗಳು ಮತ್ತು ಆಕ್ಷೇಪಣೆಗಳ ಬಗ್ಗೆ ಅಂತಿಮ ಆದೇಶಗಳನ್ನು ಹೊರಡಿಸುವ ಅಧಿಕಾರ ಕೇವಲ ಚುನಾವಣಾ ನೋಂದಣಾಧಿಕಾರಿಗಳಿಗೆ ಮಾತ್ರ ಇರುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಮೈಕ್ರೋ-ಅಬ್ಸರ್ವರ್‌ಗಳು ಕೇವಲ ಇವರಿಗೆ ಸಹಾಯ ಮಾಡಬಹುದಷ್ಟೇ ಹೊರತು, ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಇರುವುದಿಲ್ಲ ಎಂದಿದೆ.

ಇದೇ ವೇಳೆ, ಎಸ್‌ಐಆರ್ ಅಧಿಕಾರಿಗಳ ವಿರುದ್ಧದ ಬೆದರಿಕೆ ಮತ್ತು ಹಿಂಸಾಚಾರವನ್ನು ತಡೆಯುವಲ್ಲಿ ವಿಫಲವಾಗಿರುವ ಬಗ್ಗೆ ಚುನಾವಣಾ ಆಯೋಗ ವ್ಯಕ್ತಪಡಿಸಿರುವ ಕಳವಳಗಳಿಗೆ ಪ್ರತಿಕ್ರಿಯಿಸಿ, ವೈಯಕ್ತಿಕ ಅಫಿಡವಿಟ್ ಸಲ್ಲಿಸುವಂತೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ನ್ಯಾಯಾಲಯ ನಿರ್ದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು, ಫೆಬ್ರವರಿ 14 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲು ನಿಗದಿಯಾಗಿದ್ದ ಗಡುವನ್ನು ಕನಿಷ್ಠ ಒಂದು ವಾರಗಳ ಕಾಲ ವಿಸ್ತರಿಸಲು ನಿರ್ದೇಶಿಸಿದೆ. ದಾಖಲೆಗಳ ಪರಿಶೀಲನೆ ಮತ್ತು ಆಕ್ಷೇಪಣೆಗಳ ವಿಲೇವಾರಿಗೆ ಹೆಚ್ಚಿನ ಸಮಯ ಬೇಕಿರುವುದರಿಂದ ಈ ನಿರ್ದೇಶನ ನೀಡಿದೆ.

ಎಸ್‌ಐಆರ್ ಪ್ರಕ್ರಿಯೆಯನ್ನು ಸುಗಮಗೊಳಿಸಲು ಮತ್ತು ವಿವಿಧ ಪಕ್ಷಕಾರರಿಂದ ಉಂಟಾದ ಆತಂಕಗಳನ್ನು ಪರಿಹರಿಸುವ ಉದ್ದೇಶದಿಂದ ನ್ಯಾಯಾಲಯವು ಈ ಕೆಳಗಿನ ನಿರ್ದೇಶನಗಳನ್ನು ನೀಡಿದೆ.

1.ಇಂದು ಹಸ್ತಾಂತರಿಸಲಾದ ಪಟ್ಟಿಯಲ್ಲಿರುವ ಎಲ್ಲಾ 8,550 ಗ್ರೂಪ್ ಬಿ ಅಧಿಕಾರಿಗಳು ನಾಳೆ ಸಂಜೆ 5 ಗಂಟೆಯೊಳಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಅಥವಾ ಚುನಾವಣಾ ನೋಂದಣಾಧಿಕಾರಿಗಳ (ಇಆರ್‌ಒ) ಮುಂದೆ ಕರ್ತವ್ಯಕ್ಕೆ ಹಾಜರಾಗುವುದನ್ನು ರಾಜ್ಯ ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದೆ. ಈಗ ಒದಗಿಸಲಾದ ಈ ಅಧಿಕಾರಿಗಳ ಸೇವೆಯನ್ನು ಬಳಸಿಕೊಳ್ಳಲು ಅಥವಾ ಪ್ರಸ್ತುತ ಇರುವ ಇಆರ್‌ಒ ಮತ್ತು ಸಹಾಯಕ ಇಆರ್‌ಒಗಳನ್ನು ಅವರ ಅರ್ಹತೆಗೆ ಅನುಗುಣವಾಗಿ ಬದಲಾಯಿಸಲು ಚುನಾವಣಾ ಆಯೋಗಕ್ಕೆ ಸಂಪೂರ್ಣ ಅಧಿಕಾರ ಮತ್ತು ವಿವೇಚನೆಯನ್ನು ನೀಡಲಾಗಿದೆ.

2.ರಾಜ್ಯ ಸರ್ಕಾರ ಒದಗಿಸಿರುವ 8,500 ಅಧಿಕಾರಿಗಳ ಪಟ್ಟಿಯನ್ನು ಪರಿಶೀಲಿಸಿ, ಅವರ ಬಯೋಡೇಟಾ ಮತ್ತು ಕೆಲಸದ ಅನುಭವದ ಆಧಾರದ ಮೇಲೆ ಚುನಾವಣಾ ಆಯೋಗವು ಅಧಿಕಾರಿಗಳನ್ನು ಆಯ್ಕೆ ಮಾಡಬಹುದು. ಈ ಅಧಿಕಾರಿಗಳ ಸಂಖ್ಯೆಯು ಈಗಾಗಲೇ ನಿಯೋಜಿಸಲಾದ ಮೈಕ್ರೋ-ಅಬ್ಸರ್ವರ್‌ಗಳ ಸಂಖ್ಯೆಗೆ ಸಮನಾಗಿರಬೇಕು.

3.ಈಗಾಗಲೇ ಮೈಕ್ರೋ-ಅಬ್ಸರ್ವರ್‌ ಆಗಿ ನಿಯೋಜಿಸಲಾದವರ ಜವಾಬ್ದಾರಿಯು ಡಿಇಒ/ಇಆರ್‌ಒಗಳಿಗೆ ಸಹಾಯ ಮಾಡುವುದು ಮಾತ್ರವಾಗಿದೆ. ಅಂತಿಮ ನಿರ್ಧಾರವನ್ನು ಇಆರ್‌ಒಗಳು ಮಾತ್ರ ತೆಗೆದುಕೊಳ್ಳಬೇಕು.

4.ದಾಖಲೆಗಳ ಪರಿಶೀಲನೆಯನ್ನು ಪೂರ್ಣಗೊಳಿಸಲು ಮತ್ತು ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲು ಜಿಲ್ಲಾ ಚುನಾವಣಾಧಿಕಾರಿಗಳಿಗೆ (ಡಿಇಒ) ಮತ್ತು ಚುನಾವಣಾ ನೋಂದಣಾಧಿಕಾರಿಗಳಿಗೆ (ಇಆರ್‌ಒ), ನಿಗದಿತ ದಿನಾಂಕವಾದ ಫೆಬ್ರವರಿ 14 ರ ನಂತರ ಕನಿಷ್ಠ ಒಂದು ವಾರ ಹೆಚ್ಚುವರಿ ಕಾಲಾವಕಾಶವನ್ನು ನೀಡಬೇಕು ಎಂದು ನ್ಯಾಯಾಲಯವು ನಿರ್ದೇಶಿಸಿದೆ.

5.ಅರ್ಜಿದಾರರ ಪರವಾಗಿ ಹಾಜರಾದವರು ಕೆಲವು ದಾಖಲೆಗಳನ್ನು ಉಲ್ಲೇಖಿಸಿ, ಮೈಕ್ರೋ-ಅಬ್ಸರ್ವರ್‌ಗಳೇ (ಸೂಕ್ಷ್ಮ ವೀಕ್ಷಕರು) ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಹೊಂದಿದ್ದಾರೆ ಎಂದು ವಾದಿಸಿದ್ದರು. ಆದರೆ, ಈ ಬಗ್ಗೆ ಚುನಾವಣಾ ಆಯೋಗವು ಸ್ಪಷ್ಟನೆ ನೀಡಿದ್ದು, ಮೈಕ್ರೋ-ಅಬ್ಸರ್ವರ್‌ಗಳು ಕೇವಲ ನಿಗದಿತ ಶಾಸನಬದ್ಧ ಅಧಿಕಾರಿಗಳಿಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡುತ್ತಾರಷ್ಟೇ ಹೊರತು, ಅವರೇ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಹೊಂದಿಲ್ಲ ಎಂದು ತಿಳಿಸಿದೆ.

6.ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಹಿಂಸಾಚಾರ ನಡೆದಿದೆ ಎಂಬ ಚುನಾವಣಾ ಆಯೋಗದ ಹೇಳಿಕೆಗಳಿಗೆ ಸಂಬಂಧಿಸಿದಂತೆ, ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನ್ಯಾಯಾಲಯವು ಶೋಕಾಸ್ ನೋಟಿಸ್ ನೀಡಿದ್ದು, ವೈಯಕ್ತಿಕ ಅಫಿಡವಿಟ್ ಸಲ್ಲಿಸುವಂತೆ ನಿರ್ದೇಶಿಸಿದೆ. ಚುನಾವಣಾ ಆಯೋಗವು ದೂರು ನೀಡಿದ್ದರೂ ಸಹ ಯಾವುದೇ ಎಫ್‌ಐಆರ್ ದಾಖಲಿಸಿಲ್ಲ ಎಂಬ ಅಂಶವನ್ನು ನ್ಯಾಯಾಲಯವು ಗಂಭೀರವಾಗಿ ಪರಿಗಣಿಸಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದ ‘ಫಾರ್ಮ್ 7’ ಆಕ್ಷೇಪಣೆ ಪತ್ರಗಳನ್ನು ಸಾಮೂಹಿಕವಾಗಿ ಸುಟ್ಟುಹಾಕಲಾಗಿದೆ ಎಂಬ ಗಂಭೀರ ಆರೋಪಗಳನ್ನೂ ನ್ಯಾಯಾಲಯ ಗಮನಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಂತೆ ಜನವರಿ 19 ರಂದೇ ಡಿಜಿಪಿಗೆ ನಿರ್ದಿಷ್ಟ ನಿರ್ದೇಶನ ನೀಡಿದ್ದರೂ, ಅದನ್ನು ಪಾಲಿಸದಿರುವ ಬಗ್ಗೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

8.ಶಾಸನಬದ್ಧ ನಿಯಮಗಳ ಪ್ರಕಾರ ಸಲ್ಲಿಕೆಯಾಗಿರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದು ಚುನಾವಣಾ ನೋಂದಣಾಧಿಕಾರಿಗಳ (ಇಆರ್‌ಒ) ಕರ್ತವ್ಯವಾಗಿದೆ. ಆಕ್ಷೇಪಣೆ ಸಲ್ಲಿಸಿದ ವ್ಯಕ್ತಿಗಳು ವೈಯಕ್ತಿಕ ವಿಚಾರಣೆಗೆ ಹಾಜರಾಗಲಿ ಅಥವಾ ಬಿಡಲಿ, ಅವರ ಅನುಪಸ್ಥಿತಿಯಲ್ಲೂ ಆಕ್ಷೇಪಣೆಗಳನ್ನು ಪರಿಶೀಲಿಸುವುದು ಕಡ್ಡಾಯ ಎಂದು ನ್ಯಾಯಾಲಯ ತಿಳಿಸಿದೆ. ತೊಂದರೆಗೊಳಗಾದ ವ್ಯಕ್ತಿಗಳ ದಾಖಲೆಗಳನ್ನು ಹೇಗೆ ಪರಿಶೀಲಿಸಲಾಗುತ್ತದೆಯೋ, ಹಾಗೆಯೇ ಆಕ್ಷೇಪಣೆ ಸಲ್ಲಿಸಿದವರ ದಾಖಲೆಗಳ ನೈಜತೆಯನ್ನೂ ಅಧಿಕಾರಿಗಳು ಕಡ್ಡಾಯವಾಗಿ ಪರಿಶೀಲಿಸಬೇಕು ಎಂದಿದೆ.

9.ಕರ್ತವ್ಯ ನಿರ್ವಹಿಸದ ಅಧಿಕಾರಿಗಳನ್ನು ಬದಲಿಸಲು ಚುನಾವಣಾ ಆಯೋಗಕ್ಕೆ ಸ್ವಾತಂತ್ರ್ಯವಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

    14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

    ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

    ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

    ‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

    ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

    ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

    ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

    ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

    'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

    ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

    ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

    “ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

    2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

    ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

    ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

    ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

    ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

    ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

    ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...