Homeಮುಖಪುಟಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

- Advertisement -
- Advertisement -

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ.

ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದ ಹಕ್ಕುಗಳು ಮತ್ತು ಆಕ್ಷೇಪಣೆಗಳ ಬಗ್ಗೆ ಅಂತಿಮ ಆದೇಶಗಳನ್ನು ಹೊರಡಿಸುವ ಅಧಿಕಾರ ಕೇವಲ ಚುನಾವಣಾ ನೋಂದಣಾಧಿಕಾರಿಗಳಿಗೆ ಮಾತ್ರ ಇರುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಮೈಕ್ರೋ-ಅಬ್ಸರ್ವರ್‌ಗಳು ಕೇವಲ ಇವರಿಗೆ ಸಹಾಯ ಮಾಡಬಹುದಷ್ಟೇ ಹೊರತು, ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಇರುವುದಿಲ್ಲ ಎಂದಿದೆ.

ಇದೇ ವೇಳೆ, ಎಸ್‌ಐಆರ್ ಅಧಿಕಾರಿಗಳ ವಿರುದ್ಧದ ಬೆದರಿಕೆ ಮತ್ತು ಹಿಂಸಾಚಾರವನ್ನು ತಡೆಯುವಲ್ಲಿ ವಿಫಲವಾಗಿರುವ ಬಗ್ಗೆ ಚುನಾವಣಾ ಆಯೋಗ ವ್ಯಕ್ತಪಡಿಸಿರುವ ಕಳವಳಗಳಿಗೆ ಪ್ರತಿಕ್ರಿಯಿಸಿ, ವೈಯಕ್ತಿಕ ಅಫಿಡವಿಟ್ ಸಲ್ಲಿಸುವಂತೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ನ್ಯಾಯಾಲಯ ನಿರ್ದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು, ಫೆಬ್ರವರಿ 14 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲು ನಿಗದಿಯಾಗಿದ್ದ ಗಡುವನ್ನು ಕನಿಷ್ಠ ಒಂದು ವಾರಗಳ ಕಾಲ ವಿಸ್ತರಿಸಲು ನಿರ್ದೇಶಿಸಿದೆ. ದಾಖಲೆಗಳ ಪರಿಶೀಲನೆ ಮತ್ತು ಆಕ್ಷೇಪಣೆಗಳ ವಿಲೇವಾರಿಗೆ ಹೆಚ್ಚಿನ ಸಮಯ ಬೇಕಿರುವುದರಿಂದ ಈ ನಿರ್ದೇಶನ ನೀಡಿದೆ.

ಎಸ್‌ಐಆರ್ ಪ್ರಕ್ರಿಯೆಯನ್ನು ಸುಗಮಗೊಳಿಸಲು ಮತ್ತು ವಿವಿಧ ಪಕ್ಷಕಾರರಿಂದ ಉಂಟಾದ ಆತಂಕಗಳನ್ನು ಪರಿಹರಿಸುವ ಉದ್ದೇಶದಿಂದ ನ್ಯಾಯಾಲಯವು ಈ ಕೆಳಗಿನ ನಿರ್ದೇಶನಗಳನ್ನು ನೀಡಿದೆ.

1.ಇಂದು ಹಸ್ತಾಂತರಿಸಲಾದ ಪಟ್ಟಿಯಲ್ಲಿರುವ ಎಲ್ಲಾ 8,550 ಗ್ರೂಪ್ ಬಿ ಅಧಿಕಾರಿಗಳು ನಾಳೆ ಸಂಜೆ 5 ಗಂಟೆಯೊಳಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಅಥವಾ ಚುನಾವಣಾ ನೋಂದಣಾಧಿಕಾರಿಗಳ (ಇಆರ್‌ಒ) ಮುಂದೆ ಕರ್ತವ್ಯಕ್ಕೆ ಹಾಜರಾಗುವುದನ್ನು ರಾಜ್ಯ ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದೆ. ಈಗ ಒದಗಿಸಲಾದ ಈ ಅಧಿಕಾರಿಗಳ ಸೇವೆಯನ್ನು ಬಳಸಿಕೊಳ್ಳಲು ಅಥವಾ ಪ್ರಸ್ತುತ ಇರುವ ಇಆರ್‌ಒ ಮತ್ತು ಸಹಾಯಕ ಇಆರ್‌ಒಗಳನ್ನು ಅವರ ಅರ್ಹತೆಗೆ ಅನುಗುಣವಾಗಿ ಬದಲಾಯಿಸಲು ಚುನಾವಣಾ ಆಯೋಗಕ್ಕೆ ಸಂಪೂರ್ಣ ಅಧಿಕಾರ ಮತ್ತು ವಿವೇಚನೆಯನ್ನು ನೀಡಲಾಗಿದೆ.

2.ರಾಜ್ಯ ಸರ್ಕಾರ ಒದಗಿಸಿರುವ 8,500 ಅಧಿಕಾರಿಗಳ ಪಟ್ಟಿಯನ್ನು ಪರಿಶೀಲಿಸಿ, ಅವರ ಬಯೋಡೇಟಾ ಮತ್ತು ಕೆಲಸದ ಅನುಭವದ ಆಧಾರದ ಮೇಲೆ ಚುನಾವಣಾ ಆಯೋಗವು ಅಧಿಕಾರಿಗಳನ್ನು ಆಯ್ಕೆ ಮಾಡಬಹುದು. ಈ ಅಧಿಕಾರಿಗಳ ಸಂಖ್ಯೆಯು ಈಗಾಗಲೇ ನಿಯೋಜಿಸಲಾದ ಮೈಕ್ರೋ-ಅಬ್ಸರ್ವರ್‌ಗಳ ಸಂಖ್ಯೆಗೆ ಸಮನಾಗಿರಬೇಕು.

3.ಈಗಾಗಲೇ ಮೈಕ್ರೋ-ಅಬ್ಸರ್ವರ್‌ ಆಗಿ ನಿಯೋಜಿಸಲಾದವರ ಜವಾಬ್ದಾರಿಯು ಡಿಇಒ/ಇಆರ್‌ಒಗಳಿಗೆ ಸಹಾಯ ಮಾಡುವುದು ಮಾತ್ರವಾಗಿದೆ. ಅಂತಿಮ ನಿರ್ಧಾರವನ್ನು ಇಆರ್‌ಒಗಳು ಮಾತ್ರ ತೆಗೆದುಕೊಳ್ಳಬೇಕು.

4.ದಾಖಲೆಗಳ ಪರಿಶೀಲನೆಯನ್ನು ಪೂರ್ಣಗೊಳಿಸಲು ಮತ್ತು ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲು ಜಿಲ್ಲಾ ಚುನಾವಣಾಧಿಕಾರಿಗಳಿಗೆ (ಡಿಇಒ) ಮತ್ತು ಚುನಾವಣಾ ನೋಂದಣಾಧಿಕಾರಿಗಳಿಗೆ (ಇಆರ್‌ಒ), ನಿಗದಿತ ದಿನಾಂಕವಾದ ಫೆಬ್ರವರಿ 14 ರ ನಂತರ ಕನಿಷ್ಠ ಒಂದು ವಾರ ಹೆಚ್ಚುವರಿ ಕಾಲಾವಕಾಶವನ್ನು ನೀಡಬೇಕು ಎಂದು ನ್ಯಾಯಾಲಯವು ನಿರ್ದೇಶಿಸಿದೆ.

5.ಅರ್ಜಿದಾರರ ಪರವಾಗಿ ಹಾಜರಾದವರು ಕೆಲವು ದಾಖಲೆಗಳನ್ನು ಉಲ್ಲೇಖಿಸಿ, ಮೈಕ್ರೋ-ಅಬ್ಸರ್ವರ್‌ಗಳೇ (ಸೂಕ್ಷ್ಮ ವೀಕ್ಷಕರು) ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಹೊಂದಿದ್ದಾರೆ ಎಂದು ವಾದಿಸಿದ್ದರು. ಆದರೆ, ಈ ಬಗ್ಗೆ ಚುನಾವಣಾ ಆಯೋಗವು ಸ್ಪಷ್ಟನೆ ನೀಡಿದ್ದು, ಮೈಕ್ರೋ-ಅಬ್ಸರ್ವರ್‌ಗಳು ಕೇವಲ ನಿಗದಿತ ಶಾಸನಬದ್ಧ ಅಧಿಕಾರಿಗಳಿಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡುತ್ತಾರಷ್ಟೇ ಹೊರತು, ಅವರೇ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಹೊಂದಿಲ್ಲ ಎಂದು ತಿಳಿಸಿದೆ.

6.ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಹಿಂಸಾಚಾರ ನಡೆದಿದೆ ಎಂಬ ಚುನಾವಣಾ ಆಯೋಗದ ಹೇಳಿಕೆಗಳಿಗೆ ಸಂಬಂಧಿಸಿದಂತೆ, ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನ್ಯಾಯಾಲಯವು ಶೋಕಾಸ್ ನೋಟಿಸ್ ನೀಡಿದ್ದು, ವೈಯಕ್ತಿಕ ಅಫಿಡವಿಟ್ ಸಲ್ಲಿಸುವಂತೆ ನಿರ್ದೇಶಿಸಿದೆ. ಚುನಾವಣಾ ಆಯೋಗವು ದೂರು ನೀಡಿದ್ದರೂ ಸಹ ಯಾವುದೇ ಎಫ್‌ಐಆರ್ ದಾಖಲಿಸಿಲ್ಲ ಎಂಬ ಅಂಶವನ್ನು ನ್ಯಾಯಾಲಯವು ಗಂಭೀರವಾಗಿ ಪರಿಗಣಿಸಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದ ‘ಫಾರ್ಮ್ 7’ ಆಕ್ಷೇಪಣೆ ಪತ್ರಗಳನ್ನು ಸಾಮೂಹಿಕವಾಗಿ ಸುಟ್ಟುಹಾಕಲಾಗಿದೆ ಎಂಬ ಗಂಭೀರ ಆರೋಪಗಳನ್ನೂ ನ್ಯಾಯಾಲಯ ಗಮನಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಂತೆ ಜನವರಿ 19 ರಂದೇ ಡಿಜಿಪಿಗೆ ನಿರ್ದಿಷ್ಟ ನಿರ್ದೇಶನ ನೀಡಿದ್ದರೂ, ಅದನ್ನು ಪಾಲಿಸದಿರುವ ಬಗ್ಗೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

8.ಶಾಸನಬದ್ಧ ನಿಯಮಗಳ ಪ್ರಕಾರ ಸಲ್ಲಿಕೆಯಾಗಿರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದು ಚುನಾವಣಾ ನೋಂದಣಾಧಿಕಾರಿಗಳ (ಇಆರ್‌ಒ) ಕರ್ತವ್ಯವಾಗಿದೆ. ಆಕ್ಷೇಪಣೆ ಸಲ್ಲಿಸಿದ ವ್ಯಕ್ತಿಗಳು ವೈಯಕ್ತಿಕ ವಿಚಾರಣೆಗೆ ಹಾಜರಾಗಲಿ ಅಥವಾ ಬಿಡಲಿ, ಅವರ ಅನುಪಸ್ಥಿತಿಯಲ್ಲೂ ಆಕ್ಷೇಪಣೆಗಳನ್ನು ಪರಿಶೀಲಿಸುವುದು ಕಡ್ಡಾಯ ಎಂದು ನ್ಯಾಯಾಲಯ ತಿಳಿಸಿದೆ. ತೊಂದರೆಗೊಳಗಾದ ವ್ಯಕ್ತಿಗಳ ದಾಖಲೆಗಳನ್ನು ಹೇಗೆ ಪರಿಶೀಲಿಸಲಾಗುತ್ತದೆಯೋ, ಹಾಗೆಯೇ ಆಕ್ಷೇಪಣೆ ಸಲ್ಲಿಸಿದವರ ದಾಖಲೆಗಳ ನೈಜತೆಯನ್ನೂ ಅಧಿಕಾರಿಗಳು ಕಡ್ಡಾಯವಾಗಿ ಪರಿಶೀಲಿಸಬೇಕು ಎಂದಿದೆ.

9.ಕರ್ತವ್ಯ ನಿರ್ವಹಿಸದ ಅಧಿಕಾರಿಗಳನ್ನು ಬದಲಿಸಲು ಚುನಾವಣಾ ಆಯೋಗಕ್ಕೆ ಸ್ವಾತಂತ್ರ್ಯವಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

    ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

    ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

    ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

    ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

    ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

    ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

    ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

    ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

    ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

    ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

    2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

    ‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

    ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

    ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

    ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

    ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

    ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

    ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

    ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...