Homeಮುಖಪುಟಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

- Advertisement -
- Advertisement -

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ.

ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದ ಹಕ್ಕುಗಳು ಮತ್ತು ಆಕ್ಷೇಪಣೆಗಳ ಬಗ್ಗೆ ಅಂತಿಮ ಆದೇಶಗಳನ್ನು ಹೊರಡಿಸುವ ಅಧಿಕಾರ ಕೇವಲ ಚುನಾವಣಾ ನೋಂದಣಾಧಿಕಾರಿಗಳಿಗೆ ಮಾತ್ರ ಇರುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಮೈಕ್ರೋ-ಅಬ್ಸರ್ವರ್‌ಗಳು ಕೇವಲ ಇವರಿಗೆ ಸಹಾಯ ಮಾಡಬಹುದಷ್ಟೇ ಹೊರತು, ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಇರುವುದಿಲ್ಲ ಎಂದಿದೆ.

ಇದೇ ವೇಳೆ, ಎಸ್‌ಐಆರ್ ಅಧಿಕಾರಿಗಳ ವಿರುದ್ಧದ ಬೆದರಿಕೆ ಮತ್ತು ಹಿಂಸಾಚಾರವನ್ನು ತಡೆಯುವಲ್ಲಿ ವಿಫಲವಾಗಿರುವ ಬಗ್ಗೆ ಚುನಾವಣಾ ಆಯೋಗ ವ್ಯಕ್ತಪಡಿಸಿರುವ ಕಳವಳಗಳಿಗೆ ಪ್ರತಿಕ್ರಿಯಿಸಿ, ವೈಯಕ್ತಿಕ ಅಫಿಡವಿಟ್ ಸಲ್ಲಿಸುವಂತೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ನ್ಯಾಯಾಲಯ ನಿರ್ದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು, ಫೆಬ್ರವರಿ 14 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲು ನಿಗದಿಯಾಗಿದ್ದ ಗಡುವನ್ನು ಕನಿಷ್ಠ ಒಂದು ವಾರಗಳ ಕಾಲ ವಿಸ್ತರಿಸಲು ನಿರ್ದೇಶಿಸಿದೆ. ದಾಖಲೆಗಳ ಪರಿಶೀಲನೆ ಮತ್ತು ಆಕ್ಷೇಪಣೆಗಳ ವಿಲೇವಾರಿಗೆ ಹೆಚ್ಚಿನ ಸಮಯ ಬೇಕಿರುವುದರಿಂದ ಈ ನಿರ್ದೇಶನ ನೀಡಿದೆ.

ಎಸ್‌ಐಆರ್ ಪ್ರಕ್ರಿಯೆಯನ್ನು ಸುಗಮಗೊಳಿಸಲು ಮತ್ತು ವಿವಿಧ ಪಕ್ಷಕಾರರಿಂದ ಉಂಟಾದ ಆತಂಕಗಳನ್ನು ಪರಿಹರಿಸುವ ಉದ್ದೇಶದಿಂದ ನ್ಯಾಯಾಲಯವು ಈ ಕೆಳಗಿನ ನಿರ್ದೇಶನಗಳನ್ನು ನೀಡಿದೆ.

1.ಇಂದು ಹಸ್ತಾಂತರಿಸಲಾದ ಪಟ್ಟಿಯಲ್ಲಿರುವ ಎಲ್ಲಾ 8,550 ಗ್ರೂಪ್ ಬಿ ಅಧಿಕಾರಿಗಳು ನಾಳೆ ಸಂಜೆ 5 ಗಂಟೆಯೊಳಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಅಥವಾ ಚುನಾವಣಾ ನೋಂದಣಾಧಿಕಾರಿಗಳ (ಇಆರ್‌ಒ) ಮುಂದೆ ಕರ್ತವ್ಯಕ್ಕೆ ಹಾಜರಾಗುವುದನ್ನು ರಾಜ್ಯ ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದೆ. ಈಗ ಒದಗಿಸಲಾದ ಈ ಅಧಿಕಾರಿಗಳ ಸೇವೆಯನ್ನು ಬಳಸಿಕೊಳ್ಳಲು ಅಥವಾ ಪ್ರಸ್ತುತ ಇರುವ ಇಆರ್‌ಒ ಮತ್ತು ಸಹಾಯಕ ಇಆರ್‌ಒಗಳನ್ನು ಅವರ ಅರ್ಹತೆಗೆ ಅನುಗುಣವಾಗಿ ಬದಲಾಯಿಸಲು ಚುನಾವಣಾ ಆಯೋಗಕ್ಕೆ ಸಂಪೂರ್ಣ ಅಧಿಕಾರ ಮತ್ತು ವಿವೇಚನೆಯನ್ನು ನೀಡಲಾಗಿದೆ.

2.ರಾಜ್ಯ ಸರ್ಕಾರ ಒದಗಿಸಿರುವ 8,500 ಅಧಿಕಾರಿಗಳ ಪಟ್ಟಿಯನ್ನು ಪರಿಶೀಲಿಸಿ, ಅವರ ಬಯೋಡೇಟಾ ಮತ್ತು ಕೆಲಸದ ಅನುಭವದ ಆಧಾರದ ಮೇಲೆ ಚುನಾವಣಾ ಆಯೋಗವು ಅಧಿಕಾರಿಗಳನ್ನು ಆಯ್ಕೆ ಮಾಡಬಹುದು. ಈ ಅಧಿಕಾರಿಗಳ ಸಂಖ್ಯೆಯು ಈಗಾಗಲೇ ನಿಯೋಜಿಸಲಾದ ಮೈಕ್ರೋ-ಅಬ್ಸರ್ವರ್‌ಗಳ ಸಂಖ್ಯೆಗೆ ಸಮನಾಗಿರಬೇಕು.

3.ಈಗಾಗಲೇ ಮೈಕ್ರೋ-ಅಬ್ಸರ್ವರ್‌ ಆಗಿ ನಿಯೋಜಿಸಲಾದವರ ಜವಾಬ್ದಾರಿಯು ಡಿಇಒ/ಇಆರ್‌ಒಗಳಿಗೆ ಸಹಾಯ ಮಾಡುವುದು ಮಾತ್ರವಾಗಿದೆ. ಅಂತಿಮ ನಿರ್ಧಾರವನ್ನು ಇಆರ್‌ಒಗಳು ಮಾತ್ರ ತೆಗೆದುಕೊಳ್ಳಬೇಕು.

4.ದಾಖಲೆಗಳ ಪರಿಶೀಲನೆಯನ್ನು ಪೂರ್ಣಗೊಳಿಸಲು ಮತ್ತು ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲು ಜಿಲ್ಲಾ ಚುನಾವಣಾಧಿಕಾರಿಗಳಿಗೆ (ಡಿಇಒ) ಮತ್ತು ಚುನಾವಣಾ ನೋಂದಣಾಧಿಕಾರಿಗಳಿಗೆ (ಇಆರ್‌ಒ), ನಿಗದಿತ ದಿನಾಂಕವಾದ ಫೆಬ್ರವರಿ 14 ರ ನಂತರ ಕನಿಷ್ಠ ಒಂದು ವಾರ ಹೆಚ್ಚುವರಿ ಕಾಲಾವಕಾಶವನ್ನು ನೀಡಬೇಕು ಎಂದು ನ್ಯಾಯಾಲಯವು ನಿರ್ದೇಶಿಸಿದೆ.

5.ಅರ್ಜಿದಾರರ ಪರವಾಗಿ ಹಾಜರಾದವರು ಕೆಲವು ದಾಖಲೆಗಳನ್ನು ಉಲ್ಲೇಖಿಸಿ, ಮೈಕ್ರೋ-ಅಬ್ಸರ್ವರ್‌ಗಳೇ (ಸೂಕ್ಷ್ಮ ವೀಕ್ಷಕರು) ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಹೊಂದಿದ್ದಾರೆ ಎಂದು ವಾದಿಸಿದ್ದರು. ಆದರೆ, ಈ ಬಗ್ಗೆ ಚುನಾವಣಾ ಆಯೋಗವು ಸ್ಪಷ್ಟನೆ ನೀಡಿದ್ದು, ಮೈಕ್ರೋ-ಅಬ್ಸರ್ವರ್‌ಗಳು ಕೇವಲ ನಿಗದಿತ ಶಾಸನಬದ್ಧ ಅಧಿಕಾರಿಗಳಿಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡುತ್ತಾರಷ್ಟೇ ಹೊರತು, ಅವರೇ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಹೊಂದಿಲ್ಲ ಎಂದು ತಿಳಿಸಿದೆ.

6.ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಹಿಂಸಾಚಾರ ನಡೆದಿದೆ ಎಂಬ ಚುನಾವಣಾ ಆಯೋಗದ ಹೇಳಿಕೆಗಳಿಗೆ ಸಂಬಂಧಿಸಿದಂತೆ, ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನ್ಯಾಯಾಲಯವು ಶೋಕಾಸ್ ನೋಟಿಸ್ ನೀಡಿದ್ದು, ವೈಯಕ್ತಿಕ ಅಫಿಡವಿಟ್ ಸಲ್ಲಿಸುವಂತೆ ನಿರ್ದೇಶಿಸಿದೆ. ಚುನಾವಣಾ ಆಯೋಗವು ದೂರು ನೀಡಿದ್ದರೂ ಸಹ ಯಾವುದೇ ಎಫ್‌ಐಆರ್ ದಾಖಲಿಸಿಲ್ಲ ಎಂಬ ಅಂಶವನ್ನು ನ್ಯಾಯಾಲಯವು ಗಂಭೀರವಾಗಿ ಪರಿಗಣಿಸಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದ ‘ಫಾರ್ಮ್ 7’ ಆಕ್ಷೇಪಣೆ ಪತ್ರಗಳನ್ನು ಸಾಮೂಹಿಕವಾಗಿ ಸುಟ್ಟುಹಾಕಲಾಗಿದೆ ಎಂಬ ಗಂಭೀರ ಆರೋಪಗಳನ್ನೂ ನ್ಯಾಯಾಲಯ ಗಮನಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಂತೆ ಜನವರಿ 19 ರಂದೇ ಡಿಜಿಪಿಗೆ ನಿರ್ದಿಷ್ಟ ನಿರ್ದೇಶನ ನೀಡಿದ್ದರೂ, ಅದನ್ನು ಪಾಲಿಸದಿರುವ ಬಗ್ಗೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

8.ಶಾಸನಬದ್ಧ ನಿಯಮಗಳ ಪ್ರಕಾರ ಸಲ್ಲಿಕೆಯಾಗಿರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದು ಚುನಾವಣಾ ನೋಂದಣಾಧಿಕಾರಿಗಳ (ಇಆರ್‌ಒ) ಕರ್ತವ್ಯವಾಗಿದೆ. ಆಕ್ಷೇಪಣೆ ಸಲ್ಲಿಸಿದ ವ್ಯಕ್ತಿಗಳು ವೈಯಕ್ತಿಕ ವಿಚಾರಣೆಗೆ ಹಾಜರಾಗಲಿ ಅಥವಾ ಬಿಡಲಿ, ಅವರ ಅನುಪಸ್ಥಿತಿಯಲ್ಲೂ ಆಕ್ಷೇಪಣೆಗಳನ್ನು ಪರಿಶೀಲಿಸುವುದು ಕಡ್ಡಾಯ ಎಂದು ನ್ಯಾಯಾಲಯ ತಿಳಿಸಿದೆ. ತೊಂದರೆಗೊಳಗಾದ ವ್ಯಕ್ತಿಗಳ ದಾಖಲೆಗಳನ್ನು ಹೇಗೆ ಪರಿಶೀಲಿಸಲಾಗುತ್ತದೆಯೋ, ಹಾಗೆಯೇ ಆಕ್ಷೇಪಣೆ ಸಲ್ಲಿಸಿದವರ ದಾಖಲೆಗಳ ನೈಜತೆಯನ್ನೂ ಅಧಿಕಾರಿಗಳು ಕಡ್ಡಾಯವಾಗಿ ಪರಿಶೀಲಿಸಬೇಕು ಎಂದಿದೆ.

9.ಕರ್ತವ್ಯ ನಿರ್ವಹಿಸದ ಅಧಿಕಾರಿಗಳನ್ನು ಬದಲಿಸಲು ಚುನಾವಣಾ ಆಯೋಗಕ್ಕೆ ಸ್ವಾತಂತ್ರ್ಯವಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

    ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

    ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

    ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

    ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

    ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

    SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

    ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

    ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

    ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

    ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

    ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

    ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

    ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

    ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

    ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

    ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

    ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

    ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

    ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...