Homeಕರ್ನಾಟಕರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಳಂಬ: ಕೇಂದ್ರದಿಂದ ಪ್ರತಿಕ್ರಿಯೆ ಕೋರಿದ ಸುಪ್ರೀಂಕೋರ್ಟ್‌

ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಳಂಬ: ಕೇಂದ್ರದಿಂದ ಪ್ರತಿಕ್ರಿಯೆ ಕೋರಿದ ಸುಪ್ರೀಂಕೋರ್ಟ್‌

- Advertisement -
- Advertisement -

ಬರ ಪರಿಹಾರ ಬಿಡುಗಡೆಗೆ ನಿರ್ದೇಶನ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರಕ್ಕೆ ನೋಟಿಸ್‌ ನೀಡಿದ್ದು, ಎರಡು ವಾರಗಳಲ್ಲಿ ಈ ಕುರಿತು ಪ್ರತಿಕ್ರಿಯಿಸುವಂತೆ ಕೇಂದ್ರ ಸರಕಾರಕ್ಕೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಬಿ ಆರ್‌ ಗವಾಯಿ ಮತ್ತು ಸಂದೀಪ್‌ ಮೆಹ್ತಾ ಅವರ ಪೀಠ ಈ ಕುರಿತು ಅರ್ಜಿಯನ್ನು ವಿಚಾರಣೆ ನಡೆಸಿದೆ. ಈ ಬಗ್ಗೆ ಕೇಂದ್ರಕ್ಕೆ ಸಮಯಾವಕಾಶ ನೀಡಬೇಕೆಂದು ಕೇಂದ್ರ ಪರ ಹಾಜರಿದ್ದ ಅಟಾರ್ನಿ ಜನರಲ್‌ ಆರ್‌ ವೆಂಕಟರಮಣಿ ಮತ್ತು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಕೋರಿದ್ದಾರೆ. ಅನುದಾನ ಬಿಡುಗಡೆ ವಿಚಾರದ ನಿರ್ಧಾರ ಒಂದು ತಿಂಗಳೊಳಗೆ ಅಂದರೆ ಡಿಸೆಂಬರ್‌ ಒಳಗೆ ತೆಗೆದುಕೊಳ್ಳಬೇಕಾಗಿತ್ತು ಆದರೆ ಕೋರ್ಟ್‌ ಹಸ್ತಕ್ಷೇಪದಿಂದ ಸಮಸ್ಯೆ ಪರಿಹಾರವಾಗಬಹುದೆಂಬ ನಿರೀಕ್ಷೆಯಿದೆ ಎಂದು ಕರ್ನಾಟಕ ಸರ್ಕಾರದ ಪರ ವಾದ ಮಂಡಿಸಿದ ಕಪಿಲ್‌ ಸಿಬಲ್‌ ಹೇಳಿದ್ದಾರೆ.

ಈ ಕುರಿತ ಸಚಿವ ಕೃಷ್ಣಬೈರೇಗೌಡ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಗೌರವಾನ್ವಿತ ಸುಪ್ರೀಂಕೋರ್ಟ್‌ ಈ ಕುರಿತು ನಿರ್ಧಾರ ತೆಗೆದುಕೊಂಡು 2 ವಾರಗಳಲ್ಲಿ ಪ್ರತಿಕ್ರಿಯಿಸಬೇಕು ಎಂದು ಸೂಚಿಸಿದೆ. ರಾಜ್ಯ ಸರಕಾರಗಳು ಎಷ್ಟು ಬಾರಿ ನ್ಯಾಯಾಲಯಕ್ಕೆ ಬರಬೇಕು? ಎಂದು ಸುಪ್ರೀಂ ಕೋರ್ಟ್ ಕೇಳಿದೆ. ಈ ವೇಳೆ ಭಾರತ ಸರ್ಕಾರದ ಪರ ವಕೀಲರು ಸಮಸ್ಯೆಯನ್ನು ಪರಿಹರಿಸಿ ಮತ್ತೆ ನ್ಯಾಯಾಲಯಕ್ಕೆ ಬರುತ್ತೇವೆ ಎಂದು ಹೇಳಿದರು ಎಂದು ಬರೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸುವಂತೆ ಕರ್ನಾಟಕ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.  ಈ ಬಗ್ಗೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಐದು ತಿಂಗಳು ಕಾದರೂ ಕೇಂದ್ರ ಸರ್ಕಾರ ಬರ ಪರಿಹಾರ ಕೊಟ್ಟಿಲ್ಲ. ಹಾಗಾಗಿ, ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ. ಸರ್ಕಾರದ ವಿರುದ್ದ ಸಂವಿಧಾನದ ವಿಧಿ 32ರ ಅಡಿ ಕೇಂದ್ರ ನಾವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದೇವೆ. ಇಂದು ಬೆಳಿಗ್ಗೆ ಅರ್ಜಿ ಹಾಕಿದ್ದೇವೆ. ನಮಗೆ ಸಿಗಬೇಕಾದ ಪರಿಹಾರ ಸಿಗಬೇಕು ಎಂದು ಹೇಳಿದ್ದರು.

ಅಕ್ಟೋಬರ್‌ನಲ್ಲಿ ಕೇಂದ್ರ ತಂಡ ರಾಜ್ಯಕ್ಕೆ ಬಂದು‌ ಬರ ಪರಿಶೀಲನೆ ನಡೆಸಿ ಕೇಂದ್ರಕ್ಕೆ ವರದಿ ನೀಡಿದೆ. ಈ ವರದಿ ಕೊಟ್ಟ ಒಂದು ತಿಂಗಳಲ್ಲಿ ರಾಜ್ಯಕ್ಕೆ ಬರ ಪರಿಹಾರ ಕೊಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎನ್ನುವುದು ನಿಯಮ. ಆದರೆ ಪರಿಹಾರವನ್ನು ಬಿಡಿಗಡೆ ಮಾಡಿರಲಿಲ್ಲ.

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ದೆಹಲಿಗೆ ಹೋಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದರು. ಬೆಂಗಳೂರಿನಲ್ಲಿ ಪ್ರಧಾನಿ ಮೋದಿಯನ್ನು  ಸಿಎಂ ಭೇಟಿ ಮಾಡಿ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದರು. ಆದರೆ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ಇದಲ್ಲದೆ ಸಿಎಂ ಸಿದ್ದರಾಮಯ್ಯ ಅವರು, ಸಚಿವರು, ಶಾಸಕರ ದಂಡಿನೊಂದಿಗೆ ದೆಹಲಿಯ ಜಂತರ್‌ ಮಂತರ್‌ನಲ್ಲಿ ಧರಣಿಯನ್ನೂ ನಡೆಸಿ ದೇಶದ ಗಮನ ಸೆಳೆದಿದ್ದರು.

ಇದನ್ನು ಓದಿ: ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ ಜೋಷಿ ವಿರುದ್ಧ ಸಿಡಿದೆದ್ದ ದಿಂಗಾಲೇಶ್ವರ ಸ್ವಾಮೀಜಿ; ಸ್ವತಂತ್ರವಾಗಿ ಸ್ಪರ್ಧೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...