Homeಕರೋನಾ ತಲ್ಲಣಸೆಂಟ್ರಲ್ ವಿಸ್ತಾ ಯೋಜನೆ ತಡೆಗೆ ಸುಪ್ರೀಂ ನಕಾರ: ಮೇಲ್ಮನವಿ ವಜಾ

ಸೆಂಟ್ರಲ್ ವಿಸ್ತಾ ಯೋಜನೆ ತಡೆಗೆ ಸುಪ್ರೀಂ ನಕಾರ: ಮೇಲ್ಮನವಿ ವಜಾ

- Advertisement -
- Advertisement -

ಕೇಂದ್ರ ಸರ್ಕಾರದ ಸೆಂಟ್ರಲ್ ವಿಸ್ತಾ ಯೋಜನೆ ಜಾರಿಗಾಗಿ ದೆಹಲಿಯ ಚಾರಿತ್ರಿಕ ಕಟ್ಟಡಗಳನ್ನು ಕೆಡವಲಾಗುತ್ತಿದೆ. ಕರೊನಾ ಸಾಂಕ್ರಾಮಿಕದ ನಡುವೆಯೂ ಕೇಂದ್ರದ ಸೆಂಟ್ರಲ್ ವಿಸ್ತಾ ಕಾಮಗಾರಿ ಬರದಿಂದ ಸಾಗುತ್ತಿದೆ. ದೆಹಲಿಯ ಚಾರಿತ್ರಿಕ ಇತಿಹಾಸವನ್ನು ಬದಲಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಳ್ಳುತ್ತಿರುವ ನಿರ್ಮಾಣ ಕಾಮಗಾರಿ ನಿಲ್ಲಿಸಬೇಕೆಂದು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ದಾಖಲಾಗಿತ್ತು. ದೆಹಲಿ ಹೈಕೋರ್ಟ್ ಕಳೆದ ತಿಂಗಳು ಸೆಂಟ್ರಲ್ ವಿಸ್ತಾ ಯೋಜನೆ ರಾಷ್ಟ್ರೀಯ ಹಿತಾಸಕ್ತಿಯ ಯೋಜನೆಯಾಗಿದ್ದು ಕಾಮಗಾರಿಯನ್ನು ನಿಲ್ಲಿಸುವಂತೆ ಆದೇಶ ನೀಡಲು ಸಾಧ್ಯವಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿದೆ. ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಸಿ ನ್ಯಾಯವಾದಿ ಪ್ರದೀಪ್ ಕುಮಾರ್ ಯಾದವ್, ಅನನ್ಯಾ ಮಲ್ಹೋತ್ರಾ, ಸೋಹೇಲ್ ಹಶ್ಮಿಯವರು  ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇಂದು ಸುಪ್ರೀಂ ಕೋರ್ಟ್ ಕೂಡ ಅವರ ಮೇಲ್ಮನವಿ ವಜಾಗೊಳಿಸಿದೆ.

ಇಂದು ಮೇಲ್ಮನವಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಜಸ್ಟಿಸ್ ಎ ಎಮ್ ಖಾನ್ವಿಲ್ಕರ್, ಜಸ್ಟಿಸ್ ದಿನೇಶ್ ಮಾಹೇಶ್ವರಿ, ಜಸ್ಟಿಸ್ ಅನಿರುದ್ಧ್ ಬೋಸ್ ಅವರಿದ್ದ ಸುಪ್ರೀಂ ಕೋರ್ಟ್ ಪೀಠ “ದೆಹಲಿ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಅರ್ಜಿದಾರರು ಸೆಂಟ್ರಲ್ ವಿಸ್ತಾ ಯೋಜನೆಯ ಬಗ್ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸುವ ಸ್ಥಾನದಲ್ಲಿ ಇಲ್ಲ. ಇವರು ಅನ್ಯ ವಿಷಯದಲ್ಲಿ ಸಂಶೊಧನೆಯನ್ನು ನಡೆಸಿದ್ದು ವಾಸ್ತಶಿಲ್ಪಕ್ಕೆ ಸಂಬಂಧಿಸಿದ ವಿಷಯದ ತಜ್ಞರಲ್ಲ” ಎಂದು ಅಭಿಪ್ರಾಯಪಟ್ಟಿದೆ.

ಅನನ್ಯ ಮಲ್ಹೋತ್ರಾ ಅವರು ಅನುವಾದಕರಾಗಿದ್ದು ಸೋಹೆಲ್ ಹಶ್ಮಿ ಅವರು ಇತಿಹಾಸಕಾರರಾಗಿದ್ದಾರೆ. ಅನನ್ಯ ಮಲ್ಹೋತ್ರಾ, ಸೋಹೆಲ್ ಹಶ್ಮಿಯವರು ದೆಹಲಿ ಹೈಕೋರ್ಟ್‌ನಲ್ಲಿ ಸೆಂಟ್ರಲ್ ವಿಸ್ತಾ ಯೋಜನೆಗೆ ತಡೆ ಕೋರಿ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಕರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸುರಕ್ಷತೆಯಿಲ್ಲ. ಅವರ ಜೀವ ಅಪಾಯದಲ್ಲಿದೆ ಎಂದು ಅರ್ಜಿದಾರರು ಹೈಕೋರ್ಟ್‌ನಲ್ಲಿ ವಾದಿಸಿದ್ದರು. ಸೆಂಟ್ರಲ್ ವಿಸ್ತಾ ಯೋಜನೆ ರಾಷ್ಟ್ರೀಯ ಹಿತಾಸಕ್ತಿಯಿಂದ ಕೂಡಿದ್ದು, ದೇಶದ ಸಂಸತ್ತಿನ ನಿರ್ಮಾಣ ಕಾರ್ಯವೂ ಯೋಜನೆಯಲ್ಲಿ ಒಳಗೊಂಡಿದೆ. ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಾಂಟ್ರಾಕ್ಟರ್‌ಗಳು ಅಳವಡಿಸಿಕೊಂಡಿದ್ದಾರೆ. ನಿಗದಿತ ಗಡುವಿನೊಳಗೆ  ಯೋಜನೆಯನ್ನು ಪೂರ್ಣಗೊಳ್ಳಬೇಕು ಎಂದು ಹೇಳಿ ಮೇ 30 ರಂದು ಸೆಂಟ್ರಲ್ ವಿಸ್ತಾ ಯೋಜನೆ ವಿರುದ್ಧದ ಮನವಿಯನ್ನು ವಜಾಗೊಳಿಸಿತ್ತು.  ದುರುದ್ಧೇಶಪೂರಿತ ಅರ್ಜಿ ಸಲ್ಲಿಸಿದ್ದಾರೆ ಎಂದು ಅವರಿಗೆ 1 ಲಕ್ಷ ರೂ ದಂಡವನ್ನು ಸಹ ದೆಹಲಿ ಹೈಕೋರ್ಟ್ ವಿಧಿಸಿತ್ತು.


ಇದನ್ನೂ ಓದಿ : ಕೇರಳದ ಗ್ರಾಮಗಳ ಹೆಸರು ಬದಲಾವಣೆ ಇಲ್ಲವೆಂದು ಶಾಸಕ ಎ.ಕೆ.ಎಂ. ಅಶ್ರಫ್ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...