Homeಕರೋನಾ ತಲ್ಲಣಸೆಂಟ್ರಲ್ ವಿಸ್ತಾ ಯೋಜನೆ ತಡೆಗೆ ಸುಪ್ರೀಂ ನಕಾರ: ಮೇಲ್ಮನವಿ ವಜಾ

ಸೆಂಟ್ರಲ್ ವಿಸ್ತಾ ಯೋಜನೆ ತಡೆಗೆ ಸುಪ್ರೀಂ ನಕಾರ: ಮೇಲ್ಮನವಿ ವಜಾ

- Advertisement -
- Advertisement -

ಕೇಂದ್ರ ಸರ್ಕಾರದ ಸೆಂಟ್ರಲ್ ವಿಸ್ತಾ ಯೋಜನೆ ಜಾರಿಗಾಗಿ ದೆಹಲಿಯ ಚಾರಿತ್ರಿಕ ಕಟ್ಟಡಗಳನ್ನು ಕೆಡವಲಾಗುತ್ತಿದೆ. ಕರೊನಾ ಸಾಂಕ್ರಾಮಿಕದ ನಡುವೆಯೂ ಕೇಂದ್ರದ ಸೆಂಟ್ರಲ್ ವಿಸ್ತಾ ಕಾಮಗಾರಿ ಬರದಿಂದ ಸಾಗುತ್ತಿದೆ. ದೆಹಲಿಯ ಚಾರಿತ್ರಿಕ ಇತಿಹಾಸವನ್ನು ಬದಲಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಳ್ಳುತ್ತಿರುವ ನಿರ್ಮಾಣ ಕಾಮಗಾರಿ ನಿಲ್ಲಿಸಬೇಕೆಂದು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ದಾಖಲಾಗಿತ್ತು. ದೆಹಲಿ ಹೈಕೋರ್ಟ್ ಕಳೆದ ತಿಂಗಳು ಸೆಂಟ್ರಲ್ ವಿಸ್ತಾ ಯೋಜನೆ ರಾಷ್ಟ್ರೀಯ ಹಿತಾಸಕ್ತಿಯ ಯೋಜನೆಯಾಗಿದ್ದು ಕಾಮಗಾರಿಯನ್ನು ನಿಲ್ಲಿಸುವಂತೆ ಆದೇಶ ನೀಡಲು ಸಾಧ್ಯವಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿದೆ. ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಸಿ ನ್ಯಾಯವಾದಿ ಪ್ರದೀಪ್ ಕುಮಾರ್ ಯಾದವ್, ಅನನ್ಯಾ ಮಲ್ಹೋತ್ರಾ, ಸೋಹೇಲ್ ಹಶ್ಮಿಯವರು  ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇಂದು ಸುಪ್ರೀಂ ಕೋರ್ಟ್ ಕೂಡ ಅವರ ಮೇಲ್ಮನವಿ ವಜಾಗೊಳಿಸಿದೆ.

ಇಂದು ಮೇಲ್ಮನವಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಜಸ್ಟಿಸ್ ಎ ಎಮ್ ಖಾನ್ವಿಲ್ಕರ್, ಜಸ್ಟಿಸ್ ದಿನೇಶ್ ಮಾಹೇಶ್ವರಿ, ಜಸ್ಟಿಸ್ ಅನಿರುದ್ಧ್ ಬೋಸ್ ಅವರಿದ್ದ ಸುಪ್ರೀಂ ಕೋರ್ಟ್ ಪೀಠ “ದೆಹಲಿ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಅರ್ಜಿದಾರರು ಸೆಂಟ್ರಲ್ ವಿಸ್ತಾ ಯೋಜನೆಯ ಬಗ್ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸುವ ಸ್ಥಾನದಲ್ಲಿ ಇಲ್ಲ. ಇವರು ಅನ್ಯ ವಿಷಯದಲ್ಲಿ ಸಂಶೊಧನೆಯನ್ನು ನಡೆಸಿದ್ದು ವಾಸ್ತಶಿಲ್ಪಕ್ಕೆ ಸಂಬಂಧಿಸಿದ ವಿಷಯದ ತಜ್ಞರಲ್ಲ” ಎಂದು ಅಭಿಪ್ರಾಯಪಟ್ಟಿದೆ.

ಅನನ್ಯ ಮಲ್ಹೋತ್ರಾ ಅವರು ಅನುವಾದಕರಾಗಿದ್ದು ಸೋಹೆಲ್ ಹಶ್ಮಿ ಅವರು ಇತಿಹಾಸಕಾರರಾಗಿದ್ದಾರೆ. ಅನನ್ಯ ಮಲ್ಹೋತ್ರಾ, ಸೋಹೆಲ್ ಹಶ್ಮಿಯವರು ದೆಹಲಿ ಹೈಕೋರ್ಟ್‌ನಲ್ಲಿ ಸೆಂಟ್ರಲ್ ವಿಸ್ತಾ ಯೋಜನೆಗೆ ತಡೆ ಕೋರಿ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಕರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸುರಕ್ಷತೆಯಿಲ್ಲ. ಅವರ ಜೀವ ಅಪಾಯದಲ್ಲಿದೆ ಎಂದು ಅರ್ಜಿದಾರರು ಹೈಕೋರ್ಟ್‌ನಲ್ಲಿ ವಾದಿಸಿದ್ದರು. ಸೆಂಟ್ರಲ್ ವಿಸ್ತಾ ಯೋಜನೆ ರಾಷ್ಟ್ರೀಯ ಹಿತಾಸಕ್ತಿಯಿಂದ ಕೂಡಿದ್ದು, ದೇಶದ ಸಂಸತ್ತಿನ ನಿರ್ಮಾಣ ಕಾರ್ಯವೂ ಯೋಜನೆಯಲ್ಲಿ ಒಳಗೊಂಡಿದೆ. ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಾಂಟ್ರಾಕ್ಟರ್‌ಗಳು ಅಳವಡಿಸಿಕೊಂಡಿದ್ದಾರೆ. ನಿಗದಿತ ಗಡುವಿನೊಳಗೆ  ಯೋಜನೆಯನ್ನು ಪೂರ್ಣಗೊಳ್ಳಬೇಕು ಎಂದು ಹೇಳಿ ಮೇ 30 ರಂದು ಸೆಂಟ್ರಲ್ ವಿಸ್ತಾ ಯೋಜನೆ ವಿರುದ್ಧದ ಮನವಿಯನ್ನು ವಜಾಗೊಳಿಸಿತ್ತು.  ದುರುದ್ಧೇಶಪೂರಿತ ಅರ್ಜಿ ಸಲ್ಲಿಸಿದ್ದಾರೆ ಎಂದು ಅವರಿಗೆ 1 ಲಕ್ಷ ರೂ ದಂಡವನ್ನು ಸಹ ದೆಹಲಿ ಹೈಕೋರ್ಟ್ ವಿಧಿಸಿತ್ತು.


ಇದನ್ನೂ ಓದಿ : ಕೇರಳದ ಗ್ರಾಮಗಳ ಹೆಸರು ಬದಲಾವಣೆ ಇಲ್ಲವೆಂದು ಶಾಸಕ ಎ.ಕೆ.ಎಂ. ಅಶ್ರಫ್ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...