Homeಕರೋನಾ ತಲ್ಲಣಸೆಂಟ್ರಲ್ ವಿಸ್ತಾ ಯೋಜನೆ ತಡೆಗೆ ಸುಪ್ರೀಂ ನಕಾರ: ಮೇಲ್ಮನವಿ ವಜಾ

ಸೆಂಟ್ರಲ್ ವಿಸ್ತಾ ಯೋಜನೆ ತಡೆಗೆ ಸುಪ್ರೀಂ ನಕಾರ: ಮೇಲ್ಮನವಿ ವಜಾ

- Advertisement -
- Advertisement -

ಕೇಂದ್ರ ಸರ್ಕಾರದ ಸೆಂಟ್ರಲ್ ವಿಸ್ತಾ ಯೋಜನೆ ಜಾರಿಗಾಗಿ ದೆಹಲಿಯ ಚಾರಿತ್ರಿಕ ಕಟ್ಟಡಗಳನ್ನು ಕೆಡವಲಾಗುತ್ತಿದೆ. ಕರೊನಾ ಸಾಂಕ್ರಾಮಿಕದ ನಡುವೆಯೂ ಕೇಂದ್ರದ ಸೆಂಟ್ರಲ್ ವಿಸ್ತಾ ಕಾಮಗಾರಿ ಬರದಿಂದ ಸಾಗುತ್ತಿದೆ. ದೆಹಲಿಯ ಚಾರಿತ್ರಿಕ ಇತಿಹಾಸವನ್ನು ಬದಲಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಳ್ಳುತ್ತಿರುವ ನಿರ್ಮಾಣ ಕಾಮಗಾರಿ ನಿಲ್ಲಿಸಬೇಕೆಂದು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ದಾಖಲಾಗಿತ್ತು. ದೆಹಲಿ ಹೈಕೋರ್ಟ್ ಕಳೆದ ತಿಂಗಳು ಸೆಂಟ್ರಲ್ ವಿಸ್ತಾ ಯೋಜನೆ ರಾಷ್ಟ್ರೀಯ ಹಿತಾಸಕ್ತಿಯ ಯೋಜನೆಯಾಗಿದ್ದು ಕಾಮಗಾರಿಯನ್ನು ನಿಲ್ಲಿಸುವಂತೆ ಆದೇಶ ನೀಡಲು ಸಾಧ್ಯವಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿದೆ. ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಸಿ ನ್ಯಾಯವಾದಿ ಪ್ರದೀಪ್ ಕುಮಾರ್ ಯಾದವ್, ಅನನ್ಯಾ ಮಲ್ಹೋತ್ರಾ, ಸೋಹೇಲ್ ಹಶ್ಮಿಯವರು  ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇಂದು ಸುಪ್ರೀಂ ಕೋರ್ಟ್ ಕೂಡ ಅವರ ಮೇಲ್ಮನವಿ ವಜಾಗೊಳಿಸಿದೆ.

ಇಂದು ಮೇಲ್ಮನವಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಜಸ್ಟಿಸ್ ಎ ಎಮ್ ಖಾನ್ವಿಲ್ಕರ್, ಜಸ್ಟಿಸ್ ದಿನೇಶ್ ಮಾಹೇಶ್ವರಿ, ಜಸ್ಟಿಸ್ ಅನಿರುದ್ಧ್ ಬೋಸ್ ಅವರಿದ್ದ ಸುಪ್ರೀಂ ಕೋರ್ಟ್ ಪೀಠ “ದೆಹಲಿ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಅರ್ಜಿದಾರರು ಸೆಂಟ್ರಲ್ ವಿಸ್ತಾ ಯೋಜನೆಯ ಬಗ್ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸುವ ಸ್ಥಾನದಲ್ಲಿ ಇಲ್ಲ. ಇವರು ಅನ್ಯ ವಿಷಯದಲ್ಲಿ ಸಂಶೊಧನೆಯನ್ನು ನಡೆಸಿದ್ದು ವಾಸ್ತಶಿಲ್ಪಕ್ಕೆ ಸಂಬಂಧಿಸಿದ ವಿಷಯದ ತಜ್ಞರಲ್ಲ” ಎಂದು ಅಭಿಪ್ರಾಯಪಟ್ಟಿದೆ.

ಅನನ್ಯ ಮಲ್ಹೋತ್ರಾ ಅವರು ಅನುವಾದಕರಾಗಿದ್ದು ಸೋಹೆಲ್ ಹಶ್ಮಿ ಅವರು ಇತಿಹಾಸಕಾರರಾಗಿದ್ದಾರೆ. ಅನನ್ಯ ಮಲ್ಹೋತ್ರಾ, ಸೋಹೆಲ್ ಹಶ್ಮಿಯವರು ದೆಹಲಿ ಹೈಕೋರ್ಟ್‌ನಲ್ಲಿ ಸೆಂಟ್ರಲ್ ವಿಸ್ತಾ ಯೋಜನೆಗೆ ತಡೆ ಕೋರಿ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಕರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸುರಕ್ಷತೆಯಿಲ್ಲ. ಅವರ ಜೀವ ಅಪಾಯದಲ್ಲಿದೆ ಎಂದು ಅರ್ಜಿದಾರರು ಹೈಕೋರ್ಟ್‌ನಲ್ಲಿ ವಾದಿಸಿದ್ದರು. ಸೆಂಟ್ರಲ್ ವಿಸ್ತಾ ಯೋಜನೆ ರಾಷ್ಟ್ರೀಯ ಹಿತಾಸಕ್ತಿಯಿಂದ ಕೂಡಿದ್ದು, ದೇಶದ ಸಂಸತ್ತಿನ ನಿರ್ಮಾಣ ಕಾರ್ಯವೂ ಯೋಜನೆಯಲ್ಲಿ ಒಳಗೊಂಡಿದೆ. ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಾಂಟ್ರಾಕ್ಟರ್‌ಗಳು ಅಳವಡಿಸಿಕೊಂಡಿದ್ದಾರೆ. ನಿಗದಿತ ಗಡುವಿನೊಳಗೆ  ಯೋಜನೆಯನ್ನು ಪೂರ್ಣಗೊಳ್ಳಬೇಕು ಎಂದು ಹೇಳಿ ಮೇ 30 ರಂದು ಸೆಂಟ್ರಲ್ ವಿಸ್ತಾ ಯೋಜನೆ ವಿರುದ್ಧದ ಮನವಿಯನ್ನು ವಜಾಗೊಳಿಸಿತ್ತು.  ದುರುದ್ಧೇಶಪೂರಿತ ಅರ್ಜಿ ಸಲ್ಲಿಸಿದ್ದಾರೆ ಎಂದು ಅವರಿಗೆ 1 ಲಕ್ಷ ರೂ ದಂಡವನ್ನು ಸಹ ದೆಹಲಿ ಹೈಕೋರ್ಟ್ ವಿಧಿಸಿತ್ತು.


ಇದನ್ನೂ ಓದಿ : ಕೇರಳದ ಗ್ರಾಮಗಳ ಹೆಸರು ಬದಲಾವಣೆ ಇಲ್ಲವೆಂದು ಶಾಸಕ ಎ.ಕೆ.ಎಂ. ಅಶ್ರಫ್ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...