Homeಮುಖಪುಟಕಂಗನಾ ಪೋಸ್ಟ್‌ಗಳಿಗೆ ಸೆನ್ಸಾರ್‌ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಕಂಗನಾ ಪೋಸ್ಟ್‌ಗಳಿಗೆ ಸೆನ್ಸಾರ್‌ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

- Advertisement -
- Advertisement -

ನಟಿ ಕಂಗನಾ ರಣಾವತ್ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಮಾಡುವ ಪೋಸ್ಟ್‌ಗಳನ್ನು ಇನ್ನು ಮುಂದೆ ಸೆನ್ಸಾರ್ ಮಾಡಬೇಕು ಎಂದು ಒತ್ತಾಯಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ ಎಂದು ಬಾರ್ ಅಂಡ್‌‌ ಬೆಂಚ್ ವರದಿ ಮಾಡಿದೆ.

ಈಗ ರದ್ದಾದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು “ಖಲಿಸ್ತಾನಿ ಭಯೋತ್ಪಾದಕರು” ಎಂದು ಆರೋಪಿಸಿ ಕಂಗನಾ ಅವರು ಮಾಡಿರುವ ಪೋಸ್ಟ್‌ಗೆ ಅರ್ಜಿದಾರರಾದ ವಕೀಲ ಚಂದರ್ಜಿತ್ ಸಿಂಗ್ ಚಂದರ್‌ಪಾಲ್ ಆಕ್ಷೇಪ ವ್ಯಕ್ತಪಡಿಸಿದ್ದರು.

ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುಂಚಿತವಾಗಿ ಘೋಷಿಸಿದ ಒಂದು ದಿನದ ನಂತರ ಕಂಗನಾ ಈ ಹೇಳಿಕೆ ನೀಡಿದ್ದರು.

ಆದಾಗ್ಯೂ, ಅಂತಹ ಪ್ರಕರಣಗಳಲ್ಲಿ ಯಾವುದೇ ಮೂರನೇ ವ್ಯಕ್ತಿಯಿಂದ ಅರ್ಜಿಗಳನ್ನು ಅನುಮತಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ವಿಚಾರಣೆಯ ಸಂದರ್ಭದಲ್ಲಿ, ನಟಿಯ ಹೇಳಿಕೆಗಳನ್ನು ಓದದಂತೆ ನ್ಯಾಯಾಲಯವು ಅರ್ಜಿದಾರರಿಗೆ ಸಲಹೆ ನೀಡಿತು. “ನೀವು ಅವರ ಹೇಳಿಕೆಗಳನ್ನು ಹೆಚ್ಚು ಪ್ರಚಾರ ಮಾಡುತ್ತೀರಿ, ನೀವು ಅವರ ಉದ್ದೇಶಕ್ಕಾಗಿ ಹೆಚ್ಚು ಸೇವೆ ಸಲ್ಲಿಸುತ್ತೀರಿ” ಎಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. “ನೀವು ನಿಮ್ಮ ಸ್ವಂತ ಉದ್ದೇಶಕ್ಕೂ ಅಪಚಾರ ಮಾಡುತ್ತಿದ್ದೀರಿ” ಎಂದೂ ಕೋರ್ಟ್ ತಿಳಿಸಿದೆ.

“ಅವರು ಹೇಳಿದ್ದನ್ನು ಪ್ರಚಾರ ಮಾಡುವ ಮೂಲಕ ನೀವು ನಿಮ್ಮ ಉದ್ದೇಶಕ್ಕೆ ಅಪಚಾರ ಮಾಡುತ್ತಿದ್ದೀರಿ. ನೀವು ಅದನ್ನು ಹೆಚ್ಚು ಪ್ರಚಾರ ಮಾಡಿದರೆ, ನೀವು ಅವರ ಉದ್ದೇಶಕ್ಕಾಗಿ ಹೆಚ್ಚು ಸೇವೆ ಸಲ್ಲಿಸುತ್ತೀರಿ. ಆದ್ದರಿಂದ, ದಯವಿಟ್ಟು ಪುನರಾವರ್ತಿಸುವುದನ್ನು ನಿಲ್ಲಿಸಿ” ಎಂದು ನ್ಯಾಯಮೂರ್ತಿ ಸೂಚಿಸಿದ್ದಾರೆ.

“ಸಾಮಾನ್ಯ ಭಾರತೀಯ ನಾಗರಿಕರು ಇದನ್ನು ಅರ್ಥಮಾಡಿಕೊಳ್ಳುತ್ತಾರೆ ಮತ್ತು ವ್ಯತ್ಯಾಸಗಳನ್ನು ತಿಳಿದಿದ್ದಾರೆ ಎಂದು ನೀವು ಭಾವಿಸುವುದಿಲ್ಲವೇ?” ಎಂದು ಪೀಠವು ಅರ್ಜಿದಾರರನ್ನು ಕೇಳಿದೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಕಂಗನಾ ವಿರುದ್ಧ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಮುಂಬೈನ ಖಾರ್ ಪೊಲೀಸ್ ಠಾಣೆಗೆ ವರ್ಗಾಯಿಸಬೇಕು ಎಂದು ಚಂದ್ರಪಾಲ್ ಒತ್ತಾಯಿಸಿದರು. ಈ ಪ್ರಕರಣಗಳ ದೋಷಾರೋಪ ಪಟ್ಟಿಯನ್ನು ಆರು ತಿಂಗಳೊಳಗೆ ಸಲ್ಲಿಸಬೇಕು ಮತ್ತು ಎರಡು ವರ್ಷಗಳಲ್ಲಿ ವಿಚಾರಣೆಯನ್ನು ಪೂರ್ಣಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ರಣಾವತ್‌‌ ಅವರ ಪೋಸ್ಟ್ 1984ರ ಸಿಖ್ ವಿರೋಧಿ ದಂಗೆಯನ್ನು ಸಮರ್ಥಿಸುತ್ತದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಅಂತಹ ಹೇಳಿಕೆಗಳು ಜನಾಂಗೀಯ ತಾರತಮ್ಯಕ್ಕೆ, ಗಲಭೆಗಳಿಗೆ ಕಾರಣವಾಗಬಹುದು ಎಂದು ಅವರು ಹೇಳಿದರು.

“ಟೀಕೆಗಳು ನಮ್ಮ ದೇಶದ ಏಕತೆಗೆ ಸಂಪೂರ್ಣವಾಗಿ ವಿರುದ್ಧವಾಗಿವೆ. ಕಂಗನಾ ಅವರು ಕಠಿಣ ಶಿಕ್ಷೆಗೆ ಅರ್ಹರಾಗಿದ್ದಾರೆ” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. “ಅವರನ್ನು ಕ್ಷಮಿಸಲು ಸಾಧ್ಯವಿಲ್ಲ” ಎಂದು ಹೇಳಲಾಗಿದೆ.

ದೆಹಲಿ ಸರ್ಕಾರದ ಶಾಂತಿ ಮತ್ತು ಸೌಹಾರ್ದ ಸಮಿತಿಯು ನವೆಂಬರ್ 25 ರಂದು ಕಂಗನಾ ಅವರ ಪ್ರತಿಕ್ರಿಯೆಗಳಿಗೆ ಸಮನ್ಸ್ ನೀಡಿತ್ತು.

ಇತ್ತೀಚಿನ ವರ್ಷಗಳಲ್ಲಿ, ರಣಾವತ್‌ ಅವರು ತಮ್ಮ ಕಾಮೆಂಟ್‌ಗಳು ಮತ್ತು ಆಧಾರರಹಿತ ಆರೋಪಗಳ ಕಾರಣಕ್ಕೆ ಪದೇ ಪದೇ ವಿವಾದಗಳನ್ನು ಎದುರಿಸುತ್ತಿದ್ದಾರೆ. ಗೀತರಚನೆಕಾರ ಜಾವೇದ್ ಅಖ್ತರ್ ಅವರ ಬಗ್ಗೆ ಹೇಳಿಕೆ ನೀಡಿ ಮಾನನಷ್ಟ ಮೊಕದ್ದಮೆಯನ್ನೂ ಎದುರಿಸುತ್ತಿದ್ದಾರೆ.

ಟ್ವಿಟರ್ ಸಂಸ್ಥೆಯು ಕಂಗನಾ ಅವರ ಖಾತೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಿದೆ. “ದ್ವೇಷಪೂರಿತ ಮತ್ತು ನಿಂದನೀಯ ನಡವಳಿಕೆ ಕುರಿತ ಕಂಪನಿಯ ನಿಯಮವನ್ನು ಕಂಗನಾ ಪದೇ ಪದೇ ಉಲ್ಲಂಘಿಸಿದ್ದಾರೆ” ಎಂದು ಟ್ವಿಟರ್ ವಕ್ತಾರರು ಹೇಳಿದ್ದರು.


ಇದನ್ನೂ ಓದಿರಿ: ಗಾಂಧೀಜಿಗೆ ಅವಹೇಳನ ಪ್ರಕರಣ: 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಾಳಿಚರಣ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...