Homeಮುಖಪುಟಅದಾನಿ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಅದಾನಿ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

- Advertisement -
- Advertisement -

ಅದಾನಿ ಗ್ರೂಪ್‌ನ ಸ್ಟಾಕ್ ಮ್ಯಾನಿಪ್ಯುಲೇಷನ್ ಆರೋಪಗಳ ಬಗ್ಗೆ ವರದಿ ಮಾಡದಂತೆ ಮಾಧ್ಯಮಗಳ ಬಾಯಿ ಮುಚ್ಚಿಸಲು ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಮುಂದೆ ವಕೀಲ ಎಂಎಲ್ ಶರ್ಮಾ ಅವರು ಅರ್ಜಿಯನ್ನು ಪ್ರಸ್ತಾಪಿಸಿದರು. ಶರ್ಮಾ ಅವರು, ಈ ವಿಷಯದ ಕುರಿತು ಮಾಧ್ಯಮ ವರದಿಗಳನ್ನು ನಿಲ್ಲಿಸುವಂತೆ ಮನವಿ ಮಾಡಿದಾಗ, ಸಿಜೆಐ ಡಿವೈ ಚಂದ್ರಚೂಡ್ ಅವರು, ”ನಾವು ಎಂದಿಗೂ ಮಾಧ್ಯಮದ ವಿರುದ್ಧ ಯಾವುದೇ ತಡೆಯಾಜ್ಞೆ ನೀಡುವುದಿಲ್ಲ” ಎಂದು ಹೇಳಿದ್ದಾರೆ.

ಹಿಂಡೆನ್‌ಬರ್ಗ್ ರಿಸರ್ಚ್ ವಿರುದ್ಧ ತನಿಖೆ ನಡೆಸುವಂತೆ ಕೋರಿ ಪಿಐಎಲ್ ಸಲ್ಲಿಸಿರುವ ಶರ್ಮಾ, ಮಾಧ್ಯಮವು ಸಮಾಜದಲ್ಲಿ ಅದಾನಿ ವಿರುದ್ಧ ಸಂಚಲನವನ್ನು ಸೃಷ್ಟಿಸುತ್ತಿದೆ. ಹಾಗಾಗಿ ಮಾಧ್ಯಮಗಳು ಆ ಬಗ್ಗೆ ವರದಿ ಮಾಡದಂತೆ ತಮ್ಮ ವಿನಂತಿಯನ್ನು ಪುನರಾವರ್ತಿಸಿದರು. ಆಗ ಸಿಜೆಐ ”ಸಮಂಜಸವಾದ ವಾದವನ್ನು ಮಾಡಿ, ಮಾಧ್ಯಮಕ್ಕೆ ತಡೆಯಾಜ್ಞೆ ನೀಡುವುದಿಲ್ಲ” ಎಂದು ಪುನರುಚ್ಚರಿಸಿದರು.

ಗೌತಮ್ ಅದಾನಿ ನೇತೃತ್ವದ ಪೋರ್ಟ್ಸ್-ಟು-ಎನರ್ಜಿ ಸಮೂಹವು ಜನವರಿ 24 ರಿಂದ ಬಿಕ್ಕಟ್ಟಿನಲ್ಲಿ ಮುಳುಗಿದೆ. ಹಿಂಡೆನ್‌ಬರ್ಗ್ ರಿಸರ್ಚ್ ವರದಿಯಲ್ಲಿ, ಅಧಿಕ ಮೌಲ್ಯದ ಷೇರುಗಳನ್ನು ವಾಗ್ದಾನ ಮಾಡುವ ಮೂಲಕ ಅದಾನಿ ಗ್ರೂಪ್ ಗಣನೀಯ ಸಾಲವನ್ನು ಸಂಗ್ರಹಿಸಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ:ಹಿಂಡೆನ್‌ಬರ್ಗ್ ಎಫೆಕ್ಟ್: ಮೊದಲ ಬಾರಿಗೆ ಅದಾನಿ ಕಂಪನಿಗಳಲ್ಲಿನ ಎಲ್ಐಸಿ ಹೂಡಿಕೆ ನಿವ್ವಳ ನಷ್ಟದಲ್ಲಿ

ಈ ವರದಿ ಬಿಡುಗಡೆಯಾದಾಗಿನಿಂದ, ಅದಾನಿ ಗ್ರೂಪ್ ಮಾರುಕಟ್ಟೆ ಬಂಡವಾಳದಲ್ಲಿ $136 ಶತಕೋಟಿ (ರೂ. 11.26 ಲಕ್ಷ ಕೋಟಿಗೂ ಹೆಚ್ಚು) ಕಳೆದುಕೊಂಡಿದೆ.

ಶರ್ಮಾ ಮತ್ತು ಮತ್ತೊಬ್ಬ ವಕೀಲ ವಿಶಾಲ್ ತಿವಾರಿ ಸಲ್ಲಿಸಿರುವ ಎರಡು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥಾಪಕ ನಾಥನ್ ಆಂಡರ್ಸನ್ ಮತ್ತು ಭಾರತದಲ್ಲಿನ ಅವರ ಸಹಚರರ ವಿರುದ್ಧ ತನಿಖೆ ನಡೆಸಲು ಮತ್ತು ಎಫ್‌ಐಆರ್‌ ದಾಖಲಿಸಲು ನ್ಯಾಯಾಲಯವು ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ನಿರ್ದೇಶನಗಳನ್ನು ಕೋರಿ ಶರ್ಮಾ ಅರ್ಜಿ ಸಲ್ಲಿಸಿದ್ದಾರೆ. ತಿವಾರಿ ಅವರು, ವರದಿಯನ್ನು ತನಿಖೆ ಮಾಡಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ಅಡಿಯಲ್ಲಿ ಸಮಿತಿಯ ರಚನೆ ಮಾಡಲು ಕೋರಿದ್ದಾರೆ.

ಹಿಂದಿನ ವಿಚಾರಣೆಗಳಲ್ಲಿ, ಹೂಡಿಕೆದಾರರನ್ನು ರಕ್ಷಿಸಲು ಸಮಿತಿಯನ್ನು ರಚಿಸಲು ಯಾವುದೇ ಅಭ್ಯಂತರವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿತ್ತು, ಆದರೆ ಸಮಿತಿಯ ಸದಸ್ಯರನ್ನು ಸರ್ಕಾರವೇ ಸೂಚಿಸುತ್ತದೆ ಎಂದು ಹೇಳಿತ್ತು.

ಫೆಬ್ರವರಿ 17ರಂದು, ಸರ್ಕಾರವು ಮುಚ್ಚಿದ ಲಕೋಟೆಯಲ್ಲಿ ಹೆಸರುಗಳನ್ನು ಸಲ್ಲಿಸಿತ್ತು, ಆದರೆ, ಅದನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಮತ್ತು ಸಮಿತಿಯನ್ನು ನೇಮಿಸುವ ವಿಚಾರದಲ್ಲಿ ನ್ಯಾಯಾಲಯ ತನ್ನ ಆದೇಶವನ್ನು ಸಹ ಕಾಯ್ದಿರಿಸಿತ್ತು.

ಜನವರಿ 24ರಂದು ಹಿಂಡೆನ್‌ಬರ್ಗ್ ರಿಸರ್ಚ್ ವರದಿಯನ್ನು ಪ್ರಕಟಿಸಿತು. ಈ ವರದಿಯಿಂದ ಅದಾನಿ ಗ್ರೂಪ್ ಷೇರುಗಳ ಕುಸಿತಕ್ಕೆ ಕಾರಣವಾಯಿತು. ಗೌತಮ್ ಅದಾನಿ ನೇತೃತ್ವದ ಸಮೂಹದ ಮಾರುಕಟ್ಟೆ ಬಂಡವಾಳೀಕರಣವು ಜನವರಿ 24 ರಂದು ರೂ 7.15 ಲಕ್ಷ ಕೋಟಿಗೆ ಕುಸಿದಿದೆ. ಒಟ್ಟು ರೂ. 12.02 ಲಕ್ಷ ಕೋಟಿ ನಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...