Homeಮುಖಪುಟಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ನಿಯಂತ್ರಣ ಮಂಡಳಿ ಸ್ಥಾಪಿಸಲು ಕೋರಿದ್ದ ಪಿಐಎಲ್‌ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ನಿಯಂತ್ರಣ ಮಂಡಳಿ ಸ್ಥಾಪಿಸಲು ಕೋರಿದ್ದ ಪಿಐಎಲ್‌ ವಜಾಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಭಾರತದಲ್ಲಿನ ಓವರ್-ದ-ಟಾಪ್ (ಒಟಿಟಿ) ಮತ್ತು ಇತರ ಪ್ಲಾಟ್‌ಫಾರ್ಮ್‌ಗಳಲ್ಲಿನ ವಿಡಿಯೋಗಳನ್ನು ನಿಯಂತ್ರಿಸಲು, ವಿಷಯವನ್ನು ಮೇಲ್ವಿಚಾರಣೆ ಮತ್ತು ಫಿಲ್ಟರ್ ಮಾಡಲು ಸ್ವಾಯತ್ತ ಸಂಸ್ಥೆಯನ್ನು ಸ್ಥಾಪಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಈ ವಿಷಯವು ಕಾರ್ಯಾಂಗದ ವ್ಯಾಪ್ತಿಗೆ ಬರುತ್ತದೆ. ಹಲವರೊಂದಿಗೆ ಚರ್ಚೆಯ ಅಗತ್ಯವಿದೆ ಎಂದು ಹೇಳಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ವಕೀಲ ಶಶಾಂಕ್ ಶೇಖರ್ ಝಾ ಅವರಿಗೆ ಅರ್ಜಿಯನ್ನು ಹಿಂಪಡೆಯಲು ಮತ್ತು ಕೇಂದ್ರ ಸರ್ಕಾರವನ್ನು ಸಂಪರ್ಕಿಸಲು ನ್ಯಾಯಾಲಯ ಅನುಮತಿ ನೀಡಿದೆ.

ಪಿಐಎಲ್‌ನಲ್ಲಿ, ‘ಕಂದಹಾರ್ ಹೈಜಾಕ್‌’ಎಂದೇ ಕುಖ್ಯಾತಿ ಪಡೆದಿರುವ 1999ರಲ್ಲಿ ನಡೆದ ಭಾರತದ ವಿಮಾನ ‘ಐಸಿ-814’ರ ಅಪಹರಣ ಘಟನೆ ಆಧರಿಸಿ ಒಟಿಟಿ ಫ್ಲ್ಯಾಟ್‌ ಫಾರ್ಮ್ ನೆಟ್‌ಫ್ಲಿಕ್ಸ್‌ನ‘ಐಸಿ-814’ಎಂಬ ವೆಬ್‌ ಸೀರಿಸ್ ಅನ್ನು ಪ್ರಮುಖವಾಗಿ ಉಲ್ಲೇಖಿಸಲಾಗಿತ್ತು. ಇಂತಹ ಸೀರಿಸ್‌ಗಳು ನೈಜ ಘಟನೆಯ ಆಧರಿತವಾಗಿತ್ತು. ಇವುಗಳನ್ನು ಫಿಲ್ಟರ್ ಮಾಡುವ ಅಗತ್ಯವಿದೆ ಎಂದು ಅರ್ಜಿದಾರರು ಹೇಳಿದ್ದರು.

ಸಿನಿಮಾಟೋಗ್ರಾಫ್ ಆಕ್ಟ್ ಅಡಿಯಲ್ಲಿ ಚಲನಚಿತ್ರಗಳ ಸಾರ್ವಜನಿಕ ಪ್ರದರ್ಶನವನ್ನು ನಿಯಂತ್ರಿಸುವ ಕಾರ್ಯವನ್ನು ಹೊಂದಿರುವ ಶಾಸನಬದ್ಧ ಚಲನಚಿತ್ರ ಪ್ರಮಾಣೀಕರಣ ಸಂಸ್ಥೆ – ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ಅಸ್ತಿತ್ವದಲ್ಲಿದೆ. ಸಿನಿಮಾಟೋಗ್ರಾಫ್ ಕಾನೂನು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲಾಗುವ ವಾಣಿಜ್ಯ ಚಲನಚಿತ್ರಗಳಿಗೆ ಪ್ರಮಾಣ ಪತ್ರವನ್ನು ನೀಡುತ್ತದೆ ಎಂದು ವಿವರಿಸಿದ್ದರು.

ಆದರೆ, ಒಟಿಟಿ ವಿಷಯಗಳನ್ನು ಮೇಲ್ವಿಚಾರಣೆ ಮಾಡಲು/ನಿಯಂತ್ರಿಸಲು ಅಂತಹ ಯಾವುದೇ ಸಂಸ್ಥೆಗಳು ಇಲ್ಲ. ಪ್ರಸ್ತುತ ಅವುಗಳು ಸ್ವಯಂ-ನಿಯಂತ್ರಣಗಳಿಗೆ ಮಾತ್ರ ಒಳಗೊಂಡಿದೆ. ವಿವಾದಾತ್ಮಕ ವಿಷಯಗಳನ್ನು ಯಾವುದೇ ಪರಿಶೀಲನೆ ಇಲ್ಲದೆ ಸಾರ್ವಜನಿಕರಿಗೆ ತೋರಿಸಲಾಗುತ್ತದೆ” ಎಂದಿದ್ದರು

ದೇಶದಲ್ಲಿ ಸುಮಾರು 40 ಕ್ಕೂ ಹೆಚ್ಚು ಒಟಿಟಿ ಮತ್ತು ವಿಡಿಯೋ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳು ನಾಗರಿಕರಿಗೆ ಪಾವತಿಸಿದ, ಜಾಹೀರಾತುಗಳನ್ನು ಒಳಗೊಂಡಿರುವ ಮತ್ತು ಉಚಿತ ವಿಷಯವನ್ನು ಒದಗಿಸುತ್ತಿವೆ. ಆರ್ಟಿಕಲ್ 19ರಲ್ಲಿ ನೀಡಲಾದ ಅಭಿವ್ಯಕ್ತಿಯ ಹಕ್ಕನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ ಎಂದು ಅರ್ಜಿದಾರರು ವಾದಿಸಿದ್ದರು.

ಇದನ್ನೂ ಓದಿ : ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿಗೆ ಅಗೌರವ; ಐಪಿಎಸ್ ಅಧಿಕಾರಿ ಪಾಂಡಿಯನ್ ವಿರುದ್ಧ ದಲಿತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...