Homeಮುಖಪುಟಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ನಿಯಂತ್ರಣ ಮಂಡಳಿ ಸ್ಥಾಪಿಸಲು ಕೋರಿದ್ದ ಪಿಐಎಲ್‌ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ನಿಯಂತ್ರಣ ಮಂಡಳಿ ಸ್ಥಾಪಿಸಲು ಕೋರಿದ್ದ ಪಿಐಎಲ್‌ ವಜಾಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಭಾರತದಲ್ಲಿನ ಓವರ್-ದ-ಟಾಪ್ (ಒಟಿಟಿ) ಮತ್ತು ಇತರ ಪ್ಲಾಟ್‌ಫಾರ್ಮ್‌ಗಳಲ್ಲಿನ ವಿಡಿಯೋಗಳನ್ನು ನಿಯಂತ್ರಿಸಲು, ವಿಷಯವನ್ನು ಮೇಲ್ವಿಚಾರಣೆ ಮತ್ತು ಫಿಲ್ಟರ್ ಮಾಡಲು ಸ್ವಾಯತ್ತ ಸಂಸ್ಥೆಯನ್ನು ಸ್ಥಾಪಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಈ ವಿಷಯವು ಕಾರ್ಯಾಂಗದ ವ್ಯಾಪ್ತಿಗೆ ಬರುತ್ತದೆ. ಹಲವರೊಂದಿಗೆ ಚರ್ಚೆಯ ಅಗತ್ಯವಿದೆ ಎಂದು ಹೇಳಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ವಕೀಲ ಶಶಾಂಕ್ ಶೇಖರ್ ಝಾ ಅವರಿಗೆ ಅರ್ಜಿಯನ್ನು ಹಿಂಪಡೆಯಲು ಮತ್ತು ಕೇಂದ್ರ ಸರ್ಕಾರವನ್ನು ಸಂಪರ್ಕಿಸಲು ನ್ಯಾಯಾಲಯ ಅನುಮತಿ ನೀಡಿದೆ.

ಪಿಐಎಲ್‌ನಲ್ಲಿ, ‘ಕಂದಹಾರ್ ಹೈಜಾಕ್‌’ಎಂದೇ ಕುಖ್ಯಾತಿ ಪಡೆದಿರುವ 1999ರಲ್ಲಿ ನಡೆದ ಭಾರತದ ವಿಮಾನ ‘ಐಸಿ-814’ರ ಅಪಹರಣ ಘಟನೆ ಆಧರಿಸಿ ಒಟಿಟಿ ಫ್ಲ್ಯಾಟ್‌ ಫಾರ್ಮ್ ನೆಟ್‌ಫ್ಲಿಕ್ಸ್‌ನ‘ಐಸಿ-814’ಎಂಬ ವೆಬ್‌ ಸೀರಿಸ್ ಅನ್ನು ಪ್ರಮುಖವಾಗಿ ಉಲ್ಲೇಖಿಸಲಾಗಿತ್ತು. ಇಂತಹ ಸೀರಿಸ್‌ಗಳು ನೈಜ ಘಟನೆಯ ಆಧರಿತವಾಗಿತ್ತು. ಇವುಗಳನ್ನು ಫಿಲ್ಟರ್ ಮಾಡುವ ಅಗತ್ಯವಿದೆ ಎಂದು ಅರ್ಜಿದಾರರು ಹೇಳಿದ್ದರು.

ಸಿನಿಮಾಟೋಗ್ರಾಫ್ ಆಕ್ಟ್ ಅಡಿಯಲ್ಲಿ ಚಲನಚಿತ್ರಗಳ ಸಾರ್ವಜನಿಕ ಪ್ರದರ್ಶನವನ್ನು ನಿಯಂತ್ರಿಸುವ ಕಾರ್ಯವನ್ನು ಹೊಂದಿರುವ ಶಾಸನಬದ್ಧ ಚಲನಚಿತ್ರ ಪ್ರಮಾಣೀಕರಣ ಸಂಸ್ಥೆ – ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ಅಸ್ತಿತ್ವದಲ್ಲಿದೆ. ಸಿನಿಮಾಟೋಗ್ರಾಫ್ ಕಾನೂನು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲಾಗುವ ವಾಣಿಜ್ಯ ಚಲನಚಿತ್ರಗಳಿಗೆ ಪ್ರಮಾಣ ಪತ್ರವನ್ನು ನೀಡುತ್ತದೆ ಎಂದು ವಿವರಿಸಿದ್ದರು.

ಆದರೆ, ಒಟಿಟಿ ವಿಷಯಗಳನ್ನು ಮೇಲ್ವಿಚಾರಣೆ ಮಾಡಲು/ನಿಯಂತ್ರಿಸಲು ಅಂತಹ ಯಾವುದೇ ಸಂಸ್ಥೆಗಳು ಇಲ್ಲ. ಪ್ರಸ್ತುತ ಅವುಗಳು ಸ್ವಯಂ-ನಿಯಂತ್ರಣಗಳಿಗೆ ಮಾತ್ರ ಒಳಗೊಂಡಿದೆ. ವಿವಾದಾತ್ಮಕ ವಿಷಯಗಳನ್ನು ಯಾವುದೇ ಪರಿಶೀಲನೆ ಇಲ್ಲದೆ ಸಾರ್ವಜನಿಕರಿಗೆ ತೋರಿಸಲಾಗುತ್ತದೆ” ಎಂದಿದ್ದರು

ದೇಶದಲ್ಲಿ ಸುಮಾರು 40 ಕ್ಕೂ ಹೆಚ್ಚು ಒಟಿಟಿ ಮತ್ತು ವಿಡಿಯೋ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳು ನಾಗರಿಕರಿಗೆ ಪಾವತಿಸಿದ, ಜಾಹೀರಾತುಗಳನ್ನು ಒಳಗೊಂಡಿರುವ ಮತ್ತು ಉಚಿತ ವಿಷಯವನ್ನು ಒದಗಿಸುತ್ತಿವೆ. ಆರ್ಟಿಕಲ್ 19ರಲ್ಲಿ ನೀಡಲಾದ ಅಭಿವ್ಯಕ್ತಿಯ ಹಕ್ಕನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ ಎಂದು ಅರ್ಜಿದಾರರು ವಾದಿಸಿದ್ದರು.

ಇದನ್ನೂ ಓದಿ : ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿಗೆ ಅಗೌರವ; ಐಪಿಎಸ್ ಅಧಿಕಾರಿ ಪಾಂಡಿಯನ್ ವಿರುದ್ಧ ದಲಿತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...