Homeಮುಖಪುಟನಿಮಿಷಾ ಪ್ರಿಯಾ ಮರಣದಂಡನೆ ಪ್ರಕರಣ: ಸಾರ್ವಜನಿಕ ಹೇಳಿಕೆಗಳ ವಿರುದ್ಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನಿಮಿಷಾ ಪ್ರಿಯಾ ಮರಣದಂಡನೆ ಪ್ರಕರಣ: ಸಾರ್ವಜನಿಕ ಹೇಳಿಕೆಗಳ ವಿರುದ್ಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ನವದೆಹಲಿ: ಯೆಮನ್‌ನಲ್ಲಿ ಮರಣದಂಡನೆ ಎದುರಿಸುತ್ತಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕ ಹೇಳಿಕೆಗಳು ಮತ್ತು ಮಾಧ್ಯಮ ವರದಿಗಳನ್ನು ನಿರ್ಬಂಧಿಸುವಂತೆ ಕೋರಿ ಧರ್ಮಪ್ರಚಾರಕ ಡಾ. ಕೆ.ಎ. ಪಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ ಎಂದು ಲೈವ್‌ ಲಾ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆಯ ವೇಳೆ, ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ಕೇಂದ್ರ ಸರ್ಕಾರವು ಈ ಪ್ರಕರಣದ ಕುರಿತು ನಿಯಮಿತವಾಗಿ ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿದ್ದು, ನಿಮಿಷಾ ಪ್ರಿಯಾ ಅವರ ಶಿಕ್ಷೆಯ ಅಂತಿಮ ಇತ್ಯರ್ಥವಾಗುವವರೆಗೆ ಮಾಧ್ಯಮ ವರದಿಗಳ ಬಗ್ಗೆ ಎಚ್ಚರಿಕೆ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ, ನಿಮಿಷಾ ಪ್ರಿಯಾಳನ್ನು ರಕ್ಷಿಸಲು ರಚನೆಯಾದ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ (ಮಾಜಿ ನ್ಯಾಯಾಧೀಶರು, ಸಂಸದರು, ಶಾಸಕರು ಇತ್ಯಾದಿಗಳನ್ನು ಒಳಗೊಂಡಿದೆ) ಕೂಡ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದರಿಂದ ದೂರವಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿತು. ಈ ಹಿನ್ನೆಲೆಯಲ್ಲಿ, ಡಾ. ಪಾಲ್ ಅವರ ಅರ್ಜಿಯನ್ನು ವಜಾ ಮಾಡಲಾಯಿತು.

ರಕ್ತದ ಹಣದ ಕುರಿತ ವಿವಾದ

ಡಾ. ಪಾಲ್ ಅವರು, ಪ್ರಿಯಾಳನ್ನು ಬಿಡುಗಡೆ ಮಾಡಲು ಸರ್ಕಾರಕ್ಕೆ ಸಹಾಯ ಮಾಡುತ್ತಿದ್ದು, ಸಂತ್ರಸ್ತನ ಕುಟುಂಬದೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ಸಂತ್ರಸ್ತನ ಕುಟುಂಬವು ಮೂರು ಷರತ್ತುಗಳಿಗೆ ಒಳಪಟ್ಟು ಪ್ರಿಯಾಳನ್ನು ಕ್ಷಮಿಸಲು ಸಿದ್ಧವಾಗಿದೆ. ಇದರಲ್ಲಿ ಎರಡು ಷರತ್ತುಗಳನ್ನು ಅವರು ಈಗಾಗಲೇ ಪೂರೈಸಿದ್ದಾರೆ ಎಂದು ಹೇಳಿಕೊಂಡರು. ರಕ್ತದ ಹಣ ಸಂಗ್ರಹಿಸಿ ಅವರಿಗೆ ಪಾವತಿಸಲಾಗಿದೆ ಎಂಬ ಮಾಧ್ಯಮ ವರದಿಗಳಿಂದ ಸಂತ್ರಸ್ತನ ಕುಟುಂಬ ಅಸಮಾಧಾನಗೊಂಡಿದೆ ಎಂದೂ ಅವರು ಸ್ಪಷ್ಟಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ ಪರ ವಕೀಲ ರಾಗೆಂತ್ ಬಸಂತ್, ಸಂತ್ರಸ್ತನ ಕುಟುಂಬವು ಪ್ರಿಯಾಳನ್ನು ಕ್ಷಮಿಸುವುದು ಮೊದಲ ಹಂತ. ಅದರ ನಂತರವಷ್ಟೇ ರಕ್ತದ ಹಣದ ಪ್ರಶ್ನೆ ಬರುತ್ತದೆ ಎಂದು ವಾದಿಸಿದರು.

ಪಕ್ಷಗಳ ವಾದಗಳನ್ನು ಆಲಿಸಿದ ಪೀಠವು, ಯೆಮನ್ ಮೇಲೆ ನಮಗೆ ಅಧಿಕಾರ ಇಲ್ಲ. ಹಾಗಿದ್ದ ಮೇಲೆ ಈ ಅರ್ಜಿಯನ್ನು ನಾವು ಏಕೆ ಪರಿಗಣಿಸಬೇಕು ಎಂದು ಪ್ರಶ್ನಿಸಿತು. ಕೇಂದ್ರದ ಭರವಸೆಯ ಹಿನ್ನೆಲೆಯಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವ ಆದೇಶ ನೀಡಲು ನ್ಯಾಯಾಲಯ ನಿರಾಕರಿಸಿತು, ಮತ್ತು ಅಂತಿಮವಾಗಿ ಅರ್ಜಿಯನ್ನು ವಜಾಗೊಳಿಸಲಾಯಿತು.

ಪ್ರಕರಣದ ಹಿನ್ನೆಲೆ

ಕೇರಳ ಮೂಲದ 36 ವರ್ಷದ ನರ್ಸ್ ನಿಮಿಷಾ ಪ್ರಿಯಾ, ಯೆಮನ್ ಪ್ರಜೆ ತಲಾಲ್ ಅಬ್ಡೋ ಮಹ್ದಿ ಹತ್ಯೆ ಪ್ರಕರಣದಲ್ಲಿ 2017 ರಿಂದ ಮರಣ ದಂಡನೆ ಎದುರಿಸುತ್ತಿದ್ದಾರೆ. ತನ್ನ ಪಾಸ್‌ಪೋರ್ಟ್ ಪಡೆಯಲು ತಲಾಲ್‌ನಿಗೆ ಕೆಟಮೈನ್‌ನಿಂದ ನಿದ್ರೆ ಮಾಡಲು ಪ್ರಯತ್ನಿಸಿದ್ದರು. ತಲಾಲ್ ಆಕೆಯ ಪಾಸ್‌ಪೋರ್ಟ್ ವಶಪಡಿಸಿಕೊಂಡಿದ್ದಲ್ಲದೆ, ಆಕೆಯೇ ತನ್ನ ಪತ್ನಿ ಎಂದು ನಕಲಿ ದಾಖಲೆ ಸೃಷ್ಟಿಸಿದ್ದ ಎಂದು ಆರೋಪಿಸಲಾಗಿದೆ. ಮಿತಿ ಮೀರಿದ ನಿದ್ರಾಜನಕದ ಡೋಸ್‌ನಿಂದ ತಲಾಲ್ ಸಾವನ್ನಪ್ಪಿದ್ದಾನೆ.

2018ರಲ್ಲಿ ಆಕೆಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಯಿತು, 2020ರಲ್ಲಿ ಪುನರ್ ವಿಚಾರಣೆ ನಡೆಸಿದರೂ ಅದೇ ಶಿಕ್ಷೆ ದೃಢವಾಯಿತು, ಮತ್ತು 2023ರಲ್ಲಿ ಯೆಮನ್‌ನ ಸುಪ್ರೀಂ ಜುಡಿಶಿಯಲ್ ಕೌನ್ಸಿಲ್‌ನಲ್ಲಿ ಮೇಲ್ಮನವಿ ತಿರಸ್ಕೃತಗೊಂಡಿತು. ನಂತರ ಯೆಮನ್ ಅಧ್ಯಕ್ಷರು ಮರಣ ದಂಡನೆಯನ್ನು ಅನುಮೋದಿಸಿದರು.

ಶರಿಯತ್ ಕಾನೂನಿನ ಪ್ರಕಾರ, ರಕ್ತದ ಹಣಕ್ಕೆ ಪ್ರತಿಯಾಗಿ ಸಂತ್ರಸ್ತನ ಕುಟುಂಬವು ಅಪರಾಧಿಯನ್ನು ಕ್ಷಮಿಸಿದರೆ ಮರಣ ದಂಡನೆಯನ್ನು ರದ್ದುಗೊಳಿಸಬಹುದು. ನಿಮಿಷಾ ಪ್ರಿಯಾ ಅವರ ಸಂಬಂಧಿಕರು ಮತ್ತು ಬೆಂಬಲಿಗರು ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ ಅನ್ನು ರಚಿಸಿದ್ದು, ರಕ್ತದ ಹಣ ಸಂಗ್ರಹಿಸಿ ಕ್ಷಮೆಗಾಗಿ ಪ್ರಯತ್ನಿಸುತ್ತಿದ್ದಾರೆ.

ಜುಲೈ 18ರಂದು, ಸುಪ್ರೀಂ ಕೋರ್ಟ್ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ಗೆ ಯೆಮನ್‌ಗೆ ತೆರಳಿ ತಲಾಲ್‌ನ ಕುಟುಂಬವನ್ನು ಭೇಟಿಯಾಗಲು ಸರ್ಕಾರದ ಅನುಮತಿ ಪಡೆಯಲು ಅನುಮತಿಸಿತು. ಇದರಲ್ಲಿ ಕೇರಳದ ಸುನ್ನಿ ಇಸ್ಲಾಮಿಕ್ ನಾಯಕ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಪ್ರತಿನಿಧಿಯೂ ಸೇರಿದ್ದಾರೆ. ಮುಸ್ಲಿಯಾರ್ ಅವರ ಹಿಂದಿನ ಮಧ್ಯಸ್ಥಿಕೆಯಿಂದಾಗಿ ಪ್ರಿಯಾಳ ಮರಣದಂಡನೆ ಜುಲೈ 16ರಿಂದ ಮುಂದೂಡಲ್ಪಟ್ಟಿತ್ತು ಎಂದು ಸಂಸ್ಥೆಯು ಹೇಳಿಕೊಂಡಿದೆ.

ಪ್ರಿಯಾಳ ಮರಣದಂಡನೆಯ ಒಂದು ದಿನ ಮುಂಚಿತವಾಗಿ, ಖಾಸಗಿ ಮಧ್ಯಸ್ಥಿಕೆಗಳಿಂದಾಗಿ ಶಿಕ್ಷೆಯನ್ನು ಮುಂದೂಡಲಾಗಿದೆ ಎಂಬ ವರದಿಗಳು ಬಂದವು. ಆದರೆ, ಸಂತ್ರಸ್ತ ತಲಾಲ್ ಅಬ್ಡೋ ಮಹ್ದಿ ಅವರ ಕುಟುಂಬ, ಪ್ರಿಯಾಳನ್ನು ಕ್ಷಮಿಸುವುದಿಲ್ಲ ಎಂದು ಹೇಳಿಕೆ ನೀಡಿ, ಈ ತಾತ್ಕಾಲಿಕ ನಿರಾಳತೆ ಹೆಚ್ಚು ಕಾಲ ಇರಲಿಲ್ಲ.

ಪ್ರಕರಣದ ಶೀರ್ಷಿಕೆ: ಡಾ. ಕೆ. ಎ. ಪಾಲ್ ಅಲಿಯಾಸ್ ಕಿಲಾರಿ ಆನಂದ್ ಪಾಲ್ v. ಯೂನಿಯನ್ ಆಫ್ ಇಂಡಿಯಾ, ಡಬ್ಲ್ಯೂ.ಪಿ.(ಸಿ) ನಂ. 803/2025.

ತ್ರಿಪುರಾ ಬುಡಕಟ್ಟು ಪ್ರದೇಶಗಳಲ್ಲಿ ಗ್ರಾಮ ಸಮಿತಿಗಳ ಚುನಾವಣೆ ವಿಳಂಬ; ಸುಪ್ರೀಂನಿಂದ ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...