Homeಮುಖಪುಟನಿಮಿಷಾ ಪ್ರಿಯಾ ಮರಣದಂಡನೆ ಪ್ರಕರಣ: ಸಾರ್ವಜನಿಕ ಹೇಳಿಕೆಗಳ ವಿರುದ್ಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನಿಮಿಷಾ ಪ್ರಿಯಾ ಮರಣದಂಡನೆ ಪ್ರಕರಣ: ಸಾರ್ವಜನಿಕ ಹೇಳಿಕೆಗಳ ವಿರುದ್ಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ನವದೆಹಲಿ: ಯೆಮನ್‌ನಲ್ಲಿ ಮರಣದಂಡನೆ ಎದುರಿಸುತ್ತಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕ ಹೇಳಿಕೆಗಳು ಮತ್ತು ಮಾಧ್ಯಮ ವರದಿಗಳನ್ನು ನಿರ್ಬಂಧಿಸುವಂತೆ ಕೋರಿ ಧರ್ಮಪ್ರಚಾರಕ ಡಾ. ಕೆ.ಎ. ಪಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ ಎಂದು ಲೈವ್‌ ಲಾ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆಯ ವೇಳೆ, ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ಕೇಂದ್ರ ಸರ್ಕಾರವು ಈ ಪ್ರಕರಣದ ಕುರಿತು ನಿಯಮಿತವಾಗಿ ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿದ್ದು, ನಿಮಿಷಾ ಪ್ರಿಯಾ ಅವರ ಶಿಕ್ಷೆಯ ಅಂತಿಮ ಇತ್ಯರ್ಥವಾಗುವವರೆಗೆ ಮಾಧ್ಯಮ ವರದಿಗಳ ಬಗ್ಗೆ ಎಚ್ಚರಿಕೆ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ, ನಿಮಿಷಾ ಪ್ರಿಯಾಳನ್ನು ರಕ್ಷಿಸಲು ರಚನೆಯಾದ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ (ಮಾಜಿ ನ್ಯಾಯಾಧೀಶರು, ಸಂಸದರು, ಶಾಸಕರು ಇತ್ಯಾದಿಗಳನ್ನು ಒಳಗೊಂಡಿದೆ) ಕೂಡ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದರಿಂದ ದೂರವಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿತು. ಈ ಹಿನ್ನೆಲೆಯಲ್ಲಿ, ಡಾ. ಪಾಲ್ ಅವರ ಅರ್ಜಿಯನ್ನು ವಜಾ ಮಾಡಲಾಯಿತು.

ರಕ್ತದ ಹಣದ ಕುರಿತ ವಿವಾದ

ಡಾ. ಪಾಲ್ ಅವರು, ಪ್ರಿಯಾಳನ್ನು ಬಿಡುಗಡೆ ಮಾಡಲು ಸರ್ಕಾರಕ್ಕೆ ಸಹಾಯ ಮಾಡುತ್ತಿದ್ದು, ಸಂತ್ರಸ್ತನ ಕುಟುಂಬದೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ಸಂತ್ರಸ್ತನ ಕುಟುಂಬವು ಮೂರು ಷರತ್ತುಗಳಿಗೆ ಒಳಪಟ್ಟು ಪ್ರಿಯಾಳನ್ನು ಕ್ಷಮಿಸಲು ಸಿದ್ಧವಾಗಿದೆ. ಇದರಲ್ಲಿ ಎರಡು ಷರತ್ತುಗಳನ್ನು ಅವರು ಈಗಾಗಲೇ ಪೂರೈಸಿದ್ದಾರೆ ಎಂದು ಹೇಳಿಕೊಂಡರು. ರಕ್ತದ ಹಣ ಸಂಗ್ರಹಿಸಿ ಅವರಿಗೆ ಪಾವತಿಸಲಾಗಿದೆ ಎಂಬ ಮಾಧ್ಯಮ ವರದಿಗಳಿಂದ ಸಂತ್ರಸ್ತನ ಕುಟುಂಬ ಅಸಮಾಧಾನಗೊಂಡಿದೆ ಎಂದೂ ಅವರು ಸ್ಪಷ್ಟಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ ಪರ ವಕೀಲ ರಾಗೆಂತ್ ಬಸಂತ್, ಸಂತ್ರಸ್ತನ ಕುಟುಂಬವು ಪ್ರಿಯಾಳನ್ನು ಕ್ಷಮಿಸುವುದು ಮೊದಲ ಹಂತ. ಅದರ ನಂತರವಷ್ಟೇ ರಕ್ತದ ಹಣದ ಪ್ರಶ್ನೆ ಬರುತ್ತದೆ ಎಂದು ವಾದಿಸಿದರು.

ಪಕ್ಷಗಳ ವಾದಗಳನ್ನು ಆಲಿಸಿದ ಪೀಠವು, ಯೆಮನ್ ಮೇಲೆ ನಮಗೆ ಅಧಿಕಾರ ಇಲ್ಲ. ಹಾಗಿದ್ದ ಮೇಲೆ ಈ ಅರ್ಜಿಯನ್ನು ನಾವು ಏಕೆ ಪರಿಗಣಿಸಬೇಕು ಎಂದು ಪ್ರಶ್ನಿಸಿತು. ಕೇಂದ್ರದ ಭರವಸೆಯ ಹಿನ್ನೆಲೆಯಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವ ಆದೇಶ ನೀಡಲು ನ್ಯಾಯಾಲಯ ನಿರಾಕರಿಸಿತು, ಮತ್ತು ಅಂತಿಮವಾಗಿ ಅರ್ಜಿಯನ್ನು ವಜಾಗೊಳಿಸಲಾಯಿತು.

ಪ್ರಕರಣದ ಹಿನ್ನೆಲೆ

ಕೇರಳ ಮೂಲದ 36 ವರ್ಷದ ನರ್ಸ್ ನಿಮಿಷಾ ಪ್ರಿಯಾ, ಯೆಮನ್ ಪ್ರಜೆ ತಲಾಲ್ ಅಬ್ಡೋ ಮಹ್ದಿ ಹತ್ಯೆ ಪ್ರಕರಣದಲ್ಲಿ 2017 ರಿಂದ ಮರಣ ದಂಡನೆ ಎದುರಿಸುತ್ತಿದ್ದಾರೆ. ತನ್ನ ಪಾಸ್‌ಪೋರ್ಟ್ ಪಡೆಯಲು ತಲಾಲ್‌ನಿಗೆ ಕೆಟಮೈನ್‌ನಿಂದ ನಿದ್ರೆ ಮಾಡಲು ಪ್ರಯತ್ನಿಸಿದ್ದರು. ತಲಾಲ್ ಆಕೆಯ ಪಾಸ್‌ಪೋರ್ಟ್ ವಶಪಡಿಸಿಕೊಂಡಿದ್ದಲ್ಲದೆ, ಆಕೆಯೇ ತನ್ನ ಪತ್ನಿ ಎಂದು ನಕಲಿ ದಾಖಲೆ ಸೃಷ್ಟಿಸಿದ್ದ ಎಂದು ಆರೋಪಿಸಲಾಗಿದೆ. ಮಿತಿ ಮೀರಿದ ನಿದ್ರಾಜನಕದ ಡೋಸ್‌ನಿಂದ ತಲಾಲ್ ಸಾವನ್ನಪ್ಪಿದ್ದಾನೆ.

2018ರಲ್ಲಿ ಆಕೆಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಯಿತು, 2020ರಲ್ಲಿ ಪುನರ್ ವಿಚಾರಣೆ ನಡೆಸಿದರೂ ಅದೇ ಶಿಕ್ಷೆ ದೃಢವಾಯಿತು, ಮತ್ತು 2023ರಲ್ಲಿ ಯೆಮನ್‌ನ ಸುಪ್ರೀಂ ಜುಡಿಶಿಯಲ್ ಕೌನ್ಸಿಲ್‌ನಲ್ಲಿ ಮೇಲ್ಮನವಿ ತಿರಸ್ಕೃತಗೊಂಡಿತು. ನಂತರ ಯೆಮನ್ ಅಧ್ಯಕ್ಷರು ಮರಣ ದಂಡನೆಯನ್ನು ಅನುಮೋದಿಸಿದರು.

ಶರಿಯತ್ ಕಾನೂನಿನ ಪ್ರಕಾರ, ರಕ್ತದ ಹಣಕ್ಕೆ ಪ್ರತಿಯಾಗಿ ಸಂತ್ರಸ್ತನ ಕುಟುಂಬವು ಅಪರಾಧಿಯನ್ನು ಕ್ಷಮಿಸಿದರೆ ಮರಣ ದಂಡನೆಯನ್ನು ರದ್ದುಗೊಳಿಸಬಹುದು. ನಿಮಿಷಾ ಪ್ರಿಯಾ ಅವರ ಸಂಬಂಧಿಕರು ಮತ್ತು ಬೆಂಬಲಿಗರು ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ ಅನ್ನು ರಚಿಸಿದ್ದು, ರಕ್ತದ ಹಣ ಸಂಗ್ರಹಿಸಿ ಕ್ಷಮೆಗಾಗಿ ಪ್ರಯತ್ನಿಸುತ್ತಿದ್ದಾರೆ.

ಜುಲೈ 18ರಂದು, ಸುಪ್ರೀಂ ಕೋರ್ಟ್ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ಗೆ ಯೆಮನ್‌ಗೆ ತೆರಳಿ ತಲಾಲ್‌ನ ಕುಟುಂಬವನ್ನು ಭೇಟಿಯಾಗಲು ಸರ್ಕಾರದ ಅನುಮತಿ ಪಡೆಯಲು ಅನುಮತಿಸಿತು. ಇದರಲ್ಲಿ ಕೇರಳದ ಸುನ್ನಿ ಇಸ್ಲಾಮಿಕ್ ನಾಯಕ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಪ್ರತಿನಿಧಿಯೂ ಸೇರಿದ್ದಾರೆ. ಮುಸ್ಲಿಯಾರ್ ಅವರ ಹಿಂದಿನ ಮಧ್ಯಸ್ಥಿಕೆಯಿಂದಾಗಿ ಪ್ರಿಯಾಳ ಮರಣದಂಡನೆ ಜುಲೈ 16ರಿಂದ ಮುಂದೂಡಲ್ಪಟ್ಟಿತ್ತು ಎಂದು ಸಂಸ್ಥೆಯು ಹೇಳಿಕೊಂಡಿದೆ.

ಪ್ರಿಯಾಳ ಮರಣದಂಡನೆಯ ಒಂದು ದಿನ ಮುಂಚಿತವಾಗಿ, ಖಾಸಗಿ ಮಧ್ಯಸ್ಥಿಕೆಗಳಿಂದಾಗಿ ಶಿಕ್ಷೆಯನ್ನು ಮುಂದೂಡಲಾಗಿದೆ ಎಂಬ ವರದಿಗಳು ಬಂದವು. ಆದರೆ, ಸಂತ್ರಸ್ತ ತಲಾಲ್ ಅಬ್ಡೋ ಮಹ್ದಿ ಅವರ ಕುಟುಂಬ, ಪ್ರಿಯಾಳನ್ನು ಕ್ಷಮಿಸುವುದಿಲ್ಲ ಎಂದು ಹೇಳಿಕೆ ನೀಡಿ, ಈ ತಾತ್ಕಾಲಿಕ ನಿರಾಳತೆ ಹೆಚ್ಚು ಕಾಲ ಇರಲಿಲ್ಲ.

ಪ್ರಕರಣದ ಶೀರ್ಷಿಕೆ: ಡಾ. ಕೆ. ಎ. ಪಾಲ್ ಅಲಿಯಾಸ್ ಕಿಲಾರಿ ಆನಂದ್ ಪಾಲ್ v. ಯೂನಿಯನ್ ಆಫ್ ಇಂಡಿಯಾ, ಡಬ್ಲ್ಯೂ.ಪಿ.(ಸಿ) ನಂ. 803/2025.

ತ್ರಿಪುರಾ ಬುಡಕಟ್ಟು ಪ್ರದೇಶಗಳಲ್ಲಿ ಗ್ರಾಮ ಸಮಿತಿಗಳ ಚುನಾವಣೆ ವಿಳಂಬ; ಸುಪ್ರೀಂನಿಂದ ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...