Homeಮುಖಪುಟನಿಮಿಷಾ ಪ್ರಿಯಾ ಮರಣದಂಡನೆ ಪ್ರಕರಣ: ಸಾರ್ವಜನಿಕ ಹೇಳಿಕೆಗಳ ವಿರುದ್ಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನಿಮಿಷಾ ಪ್ರಿಯಾ ಮರಣದಂಡನೆ ಪ್ರಕರಣ: ಸಾರ್ವಜನಿಕ ಹೇಳಿಕೆಗಳ ವಿರುದ್ಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ನವದೆಹಲಿ: ಯೆಮನ್‌ನಲ್ಲಿ ಮರಣದಂಡನೆ ಎದುರಿಸುತ್ತಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕ ಹೇಳಿಕೆಗಳು ಮತ್ತು ಮಾಧ್ಯಮ ವರದಿಗಳನ್ನು ನಿರ್ಬಂಧಿಸುವಂತೆ ಕೋರಿ ಧರ್ಮಪ್ರಚಾರಕ ಡಾ. ಕೆ.ಎ. ಪಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ ಎಂದು ಲೈವ್‌ ಲಾ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆಯ ವೇಳೆ, ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ಕೇಂದ್ರ ಸರ್ಕಾರವು ಈ ಪ್ರಕರಣದ ಕುರಿತು ನಿಯಮಿತವಾಗಿ ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿದ್ದು, ನಿಮಿಷಾ ಪ್ರಿಯಾ ಅವರ ಶಿಕ್ಷೆಯ ಅಂತಿಮ ಇತ್ಯರ್ಥವಾಗುವವರೆಗೆ ಮಾಧ್ಯಮ ವರದಿಗಳ ಬಗ್ಗೆ ಎಚ್ಚರಿಕೆ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ, ನಿಮಿಷಾ ಪ್ರಿಯಾಳನ್ನು ರಕ್ಷಿಸಲು ರಚನೆಯಾದ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ (ಮಾಜಿ ನ್ಯಾಯಾಧೀಶರು, ಸಂಸದರು, ಶಾಸಕರು ಇತ್ಯಾದಿಗಳನ್ನು ಒಳಗೊಂಡಿದೆ) ಕೂಡ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದರಿಂದ ದೂರವಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿತು. ಈ ಹಿನ್ನೆಲೆಯಲ್ಲಿ, ಡಾ. ಪಾಲ್ ಅವರ ಅರ್ಜಿಯನ್ನು ವಜಾ ಮಾಡಲಾಯಿತು.

ರಕ್ತದ ಹಣದ ಕುರಿತ ವಿವಾದ

ಡಾ. ಪಾಲ್ ಅವರು, ಪ್ರಿಯಾಳನ್ನು ಬಿಡುಗಡೆ ಮಾಡಲು ಸರ್ಕಾರಕ್ಕೆ ಸಹಾಯ ಮಾಡುತ್ತಿದ್ದು, ಸಂತ್ರಸ್ತನ ಕುಟುಂಬದೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ಸಂತ್ರಸ್ತನ ಕುಟುಂಬವು ಮೂರು ಷರತ್ತುಗಳಿಗೆ ಒಳಪಟ್ಟು ಪ್ರಿಯಾಳನ್ನು ಕ್ಷಮಿಸಲು ಸಿದ್ಧವಾಗಿದೆ. ಇದರಲ್ಲಿ ಎರಡು ಷರತ್ತುಗಳನ್ನು ಅವರು ಈಗಾಗಲೇ ಪೂರೈಸಿದ್ದಾರೆ ಎಂದು ಹೇಳಿಕೊಂಡರು. ರಕ್ತದ ಹಣ ಸಂಗ್ರಹಿಸಿ ಅವರಿಗೆ ಪಾವತಿಸಲಾಗಿದೆ ಎಂಬ ಮಾಧ್ಯಮ ವರದಿಗಳಿಂದ ಸಂತ್ರಸ್ತನ ಕುಟುಂಬ ಅಸಮಾಧಾನಗೊಂಡಿದೆ ಎಂದೂ ಅವರು ಸ್ಪಷ್ಟಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ ಪರ ವಕೀಲ ರಾಗೆಂತ್ ಬಸಂತ್, ಸಂತ್ರಸ್ತನ ಕುಟುಂಬವು ಪ್ರಿಯಾಳನ್ನು ಕ್ಷಮಿಸುವುದು ಮೊದಲ ಹಂತ. ಅದರ ನಂತರವಷ್ಟೇ ರಕ್ತದ ಹಣದ ಪ್ರಶ್ನೆ ಬರುತ್ತದೆ ಎಂದು ವಾದಿಸಿದರು.

ಪಕ್ಷಗಳ ವಾದಗಳನ್ನು ಆಲಿಸಿದ ಪೀಠವು, ಯೆಮನ್ ಮೇಲೆ ನಮಗೆ ಅಧಿಕಾರ ಇಲ್ಲ. ಹಾಗಿದ್ದ ಮೇಲೆ ಈ ಅರ್ಜಿಯನ್ನು ನಾವು ಏಕೆ ಪರಿಗಣಿಸಬೇಕು ಎಂದು ಪ್ರಶ್ನಿಸಿತು. ಕೇಂದ್ರದ ಭರವಸೆಯ ಹಿನ್ನೆಲೆಯಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವ ಆದೇಶ ನೀಡಲು ನ್ಯಾಯಾಲಯ ನಿರಾಕರಿಸಿತು, ಮತ್ತು ಅಂತಿಮವಾಗಿ ಅರ್ಜಿಯನ್ನು ವಜಾಗೊಳಿಸಲಾಯಿತು.

ಪ್ರಕರಣದ ಹಿನ್ನೆಲೆ

ಕೇರಳ ಮೂಲದ 36 ವರ್ಷದ ನರ್ಸ್ ನಿಮಿಷಾ ಪ್ರಿಯಾ, ಯೆಮನ್ ಪ್ರಜೆ ತಲಾಲ್ ಅಬ್ಡೋ ಮಹ್ದಿ ಹತ್ಯೆ ಪ್ರಕರಣದಲ್ಲಿ 2017 ರಿಂದ ಮರಣ ದಂಡನೆ ಎದುರಿಸುತ್ತಿದ್ದಾರೆ. ತನ್ನ ಪಾಸ್‌ಪೋರ್ಟ್ ಪಡೆಯಲು ತಲಾಲ್‌ನಿಗೆ ಕೆಟಮೈನ್‌ನಿಂದ ನಿದ್ರೆ ಮಾಡಲು ಪ್ರಯತ್ನಿಸಿದ್ದರು. ತಲಾಲ್ ಆಕೆಯ ಪಾಸ್‌ಪೋರ್ಟ್ ವಶಪಡಿಸಿಕೊಂಡಿದ್ದಲ್ಲದೆ, ಆಕೆಯೇ ತನ್ನ ಪತ್ನಿ ಎಂದು ನಕಲಿ ದಾಖಲೆ ಸೃಷ್ಟಿಸಿದ್ದ ಎಂದು ಆರೋಪಿಸಲಾಗಿದೆ. ಮಿತಿ ಮೀರಿದ ನಿದ್ರಾಜನಕದ ಡೋಸ್‌ನಿಂದ ತಲಾಲ್ ಸಾವನ್ನಪ್ಪಿದ್ದಾನೆ.

2018ರಲ್ಲಿ ಆಕೆಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಯಿತು, 2020ರಲ್ಲಿ ಪುನರ್ ವಿಚಾರಣೆ ನಡೆಸಿದರೂ ಅದೇ ಶಿಕ್ಷೆ ದೃಢವಾಯಿತು, ಮತ್ತು 2023ರಲ್ಲಿ ಯೆಮನ್‌ನ ಸುಪ್ರೀಂ ಜುಡಿಶಿಯಲ್ ಕೌನ್ಸಿಲ್‌ನಲ್ಲಿ ಮೇಲ್ಮನವಿ ತಿರಸ್ಕೃತಗೊಂಡಿತು. ನಂತರ ಯೆಮನ್ ಅಧ್ಯಕ್ಷರು ಮರಣ ದಂಡನೆಯನ್ನು ಅನುಮೋದಿಸಿದರು.

ಶರಿಯತ್ ಕಾನೂನಿನ ಪ್ರಕಾರ, ರಕ್ತದ ಹಣಕ್ಕೆ ಪ್ರತಿಯಾಗಿ ಸಂತ್ರಸ್ತನ ಕುಟುಂಬವು ಅಪರಾಧಿಯನ್ನು ಕ್ಷಮಿಸಿದರೆ ಮರಣ ದಂಡನೆಯನ್ನು ರದ್ದುಗೊಳಿಸಬಹುದು. ನಿಮಿಷಾ ಪ್ರಿಯಾ ಅವರ ಸಂಬಂಧಿಕರು ಮತ್ತು ಬೆಂಬಲಿಗರು ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ ಅನ್ನು ರಚಿಸಿದ್ದು, ರಕ್ತದ ಹಣ ಸಂಗ್ರಹಿಸಿ ಕ್ಷಮೆಗಾಗಿ ಪ್ರಯತ್ನಿಸುತ್ತಿದ್ದಾರೆ.

ಜುಲೈ 18ರಂದು, ಸುಪ್ರೀಂ ಕೋರ್ಟ್ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ಗೆ ಯೆಮನ್‌ಗೆ ತೆರಳಿ ತಲಾಲ್‌ನ ಕುಟುಂಬವನ್ನು ಭೇಟಿಯಾಗಲು ಸರ್ಕಾರದ ಅನುಮತಿ ಪಡೆಯಲು ಅನುಮತಿಸಿತು. ಇದರಲ್ಲಿ ಕೇರಳದ ಸುನ್ನಿ ಇಸ್ಲಾಮಿಕ್ ನಾಯಕ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಪ್ರತಿನಿಧಿಯೂ ಸೇರಿದ್ದಾರೆ. ಮುಸ್ಲಿಯಾರ್ ಅವರ ಹಿಂದಿನ ಮಧ್ಯಸ್ಥಿಕೆಯಿಂದಾಗಿ ಪ್ರಿಯಾಳ ಮರಣದಂಡನೆ ಜುಲೈ 16ರಿಂದ ಮುಂದೂಡಲ್ಪಟ್ಟಿತ್ತು ಎಂದು ಸಂಸ್ಥೆಯು ಹೇಳಿಕೊಂಡಿದೆ.

ಪ್ರಿಯಾಳ ಮರಣದಂಡನೆಯ ಒಂದು ದಿನ ಮುಂಚಿತವಾಗಿ, ಖಾಸಗಿ ಮಧ್ಯಸ್ಥಿಕೆಗಳಿಂದಾಗಿ ಶಿಕ್ಷೆಯನ್ನು ಮುಂದೂಡಲಾಗಿದೆ ಎಂಬ ವರದಿಗಳು ಬಂದವು. ಆದರೆ, ಸಂತ್ರಸ್ತ ತಲಾಲ್ ಅಬ್ಡೋ ಮಹ್ದಿ ಅವರ ಕುಟುಂಬ, ಪ್ರಿಯಾಳನ್ನು ಕ್ಷಮಿಸುವುದಿಲ್ಲ ಎಂದು ಹೇಳಿಕೆ ನೀಡಿ, ಈ ತಾತ್ಕಾಲಿಕ ನಿರಾಳತೆ ಹೆಚ್ಚು ಕಾಲ ಇರಲಿಲ್ಲ.

ಪ್ರಕರಣದ ಶೀರ್ಷಿಕೆ: ಡಾ. ಕೆ. ಎ. ಪಾಲ್ ಅಲಿಯಾಸ್ ಕಿಲಾರಿ ಆನಂದ್ ಪಾಲ್ v. ಯೂನಿಯನ್ ಆಫ್ ಇಂಡಿಯಾ, ಡಬ್ಲ್ಯೂ.ಪಿ.(ಸಿ) ನಂ. 803/2025.

ತ್ರಿಪುರಾ ಬುಡಕಟ್ಟು ಪ್ರದೇಶಗಳಲ್ಲಿ ಗ್ರಾಮ ಸಮಿತಿಗಳ ಚುನಾವಣೆ ವಿಳಂಬ; ಸುಪ್ರೀಂನಿಂದ ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...