Homeಮುಖಪುಟನಿಮಿಷಾ ಪ್ರಿಯಾ ಮರಣದಂಡನೆ ಪ್ರಕರಣ: ಸಾರ್ವಜನಿಕ ಹೇಳಿಕೆಗಳ ವಿರುದ್ಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನಿಮಿಷಾ ಪ್ರಿಯಾ ಮರಣದಂಡನೆ ಪ್ರಕರಣ: ಸಾರ್ವಜನಿಕ ಹೇಳಿಕೆಗಳ ವಿರುದ್ಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ನವದೆಹಲಿ: ಯೆಮನ್‌ನಲ್ಲಿ ಮರಣದಂಡನೆ ಎದುರಿಸುತ್ತಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕ ಹೇಳಿಕೆಗಳು ಮತ್ತು ಮಾಧ್ಯಮ ವರದಿಗಳನ್ನು ನಿರ್ಬಂಧಿಸುವಂತೆ ಕೋರಿ ಧರ್ಮಪ್ರಚಾರಕ ಡಾ. ಕೆ.ಎ. ಪಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ ಎಂದು ಲೈವ್‌ ಲಾ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆಯ ವೇಳೆ, ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ಕೇಂದ್ರ ಸರ್ಕಾರವು ಈ ಪ್ರಕರಣದ ಕುರಿತು ನಿಯಮಿತವಾಗಿ ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿದ್ದು, ನಿಮಿಷಾ ಪ್ರಿಯಾ ಅವರ ಶಿಕ್ಷೆಯ ಅಂತಿಮ ಇತ್ಯರ್ಥವಾಗುವವರೆಗೆ ಮಾಧ್ಯಮ ವರದಿಗಳ ಬಗ್ಗೆ ಎಚ್ಚರಿಕೆ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ, ನಿಮಿಷಾ ಪ್ರಿಯಾಳನ್ನು ರಕ್ಷಿಸಲು ರಚನೆಯಾದ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ (ಮಾಜಿ ನ್ಯಾಯಾಧೀಶರು, ಸಂಸದರು, ಶಾಸಕರು ಇತ್ಯಾದಿಗಳನ್ನು ಒಳಗೊಂಡಿದೆ) ಕೂಡ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದರಿಂದ ದೂರವಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿತು. ಈ ಹಿನ್ನೆಲೆಯಲ್ಲಿ, ಡಾ. ಪಾಲ್ ಅವರ ಅರ್ಜಿಯನ್ನು ವಜಾ ಮಾಡಲಾಯಿತು.

ರಕ್ತದ ಹಣದ ಕುರಿತ ವಿವಾದ

ಡಾ. ಪಾಲ್ ಅವರು, ಪ್ರಿಯಾಳನ್ನು ಬಿಡುಗಡೆ ಮಾಡಲು ಸರ್ಕಾರಕ್ಕೆ ಸಹಾಯ ಮಾಡುತ್ತಿದ್ದು, ಸಂತ್ರಸ್ತನ ಕುಟುಂಬದೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ಸಂತ್ರಸ್ತನ ಕುಟುಂಬವು ಮೂರು ಷರತ್ತುಗಳಿಗೆ ಒಳಪಟ್ಟು ಪ್ರಿಯಾಳನ್ನು ಕ್ಷಮಿಸಲು ಸಿದ್ಧವಾಗಿದೆ. ಇದರಲ್ಲಿ ಎರಡು ಷರತ್ತುಗಳನ್ನು ಅವರು ಈಗಾಗಲೇ ಪೂರೈಸಿದ್ದಾರೆ ಎಂದು ಹೇಳಿಕೊಂಡರು. ರಕ್ತದ ಹಣ ಸಂಗ್ರಹಿಸಿ ಅವರಿಗೆ ಪಾವತಿಸಲಾಗಿದೆ ಎಂಬ ಮಾಧ್ಯಮ ವರದಿಗಳಿಂದ ಸಂತ್ರಸ್ತನ ಕುಟುಂಬ ಅಸಮಾಧಾನಗೊಂಡಿದೆ ಎಂದೂ ಅವರು ಸ್ಪಷ್ಟಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ ಪರ ವಕೀಲ ರಾಗೆಂತ್ ಬಸಂತ್, ಸಂತ್ರಸ್ತನ ಕುಟುಂಬವು ಪ್ರಿಯಾಳನ್ನು ಕ್ಷಮಿಸುವುದು ಮೊದಲ ಹಂತ. ಅದರ ನಂತರವಷ್ಟೇ ರಕ್ತದ ಹಣದ ಪ್ರಶ್ನೆ ಬರುತ್ತದೆ ಎಂದು ವಾದಿಸಿದರು.

ಪಕ್ಷಗಳ ವಾದಗಳನ್ನು ಆಲಿಸಿದ ಪೀಠವು, ಯೆಮನ್ ಮೇಲೆ ನಮಗೆ ಅಧಿಕಾರ ಇಲ್ಲ. ಹಾಗಿದ್ದ ಮೇಲೆ ಈ ಅರ್ಜಿಯನ್ನು ನಾವು ಏಕೆ ಪರಿಗಣಿಸಬೇಕು ಎಂದು ಪ್ರಶ್ನಿಸಿತು. ಕೇಂದ್ರದ ಭರವಸೆಯ ಹಿನ್ನೆಲೆಯಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವ ಆದೇಶ ನೀಡಲು ನ್ಯಾಯಾಲಯ ನಿರಾಕರಿಸಿತು, ಮತ್ತು ಅಂತಿಮವಾಗಿ ಅರ್ಜಿಯನ್ನು ವಜಾಗೊಳಿಸಲಾಯಿತು.

ಪ್ರಕರಣದ ಹಿನ್ನೆಲೆ

ಕೇರಳ ಮೂಲದ 36 ವರ್ಷದ ನರ್ಸ್ ನಿಮಿಷಾ ಪ್ರಿಯಾ, ಯೆಮನ್ ಪ್ರಜೆ ತಲಾಲ್ ಅಬ್ಡೋ ಮಹ್ದಿ ಹತ್ಯೆ ಪ್ರಕರಣದಲ್ಲಿ 2017 ರಿಂದ ಮರಣ ದಂಡನೆ ಎದುರಿಸುತ್ತಿದ್ದಾರೆ. ತನ್ನ ಪಾಸ್‌ಪೋರ್ಟ್ ಪಡೆಯಲು ತಲಾಲ್‌ನಿಗೆ ಕೆಟಮೈನ್‌ನಿಂದ ನಿದ್ರೆ ಮಾಡಲು ಪ್ರಯತ್ನಿಸಿದ್ದರು. ತಲಾಲ್ ಆಕೆಯ ಪಾಸ್‌ಪೋರ್ಟ್ ವಶಪಡಿಸಿಕೊಂಡಿದ್ದಲ್ಲದೆ, ಆಕೆಯೇ ತನ್ನ ಪತ್ನಿ ಎಂದು ನಕಲಿ ದಾಖಲೆ ಸೃಷ್ಟಿಸಿದ್ದ ಎಂದು ಆರೋಪಿಸಲಾಗಿದೆ. ಮಿತಿ ಮೀರಿದ ನಿದ್ರಾಜನಕದ ಡೋಸ್‌ನಿಂದ ತಲಾಲ್ ಸಾವನ್ನಪ್ಪಿದ್ದಾನೆ.

2018ರಲ್ಲಿ ಆಕೆಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಯಿತು, 2020ರಲ್ಲಿ ಪುನರ್ ವಿಚಾರಣೆ ನಡೆಸಿದರೂ ಅದೇ ಶಿಕ್ಷೆ ದೃಢವಾಯಿತು, ಮತ್ತು 2023ರಲ್ಲಿ ಯೆಮನ್‌ನ ಸುಪ್ರೀಂ ಜುಡಿಶಿಯಲ್ ಕೌನ್ಸಿಲ್‌ನಲ್ಲಿ ಮೇಲ್ಮನವಿ ತಿರಸ್ಕೃತಗೊಂಡಿತು. ನಂತರ ಯೆಮನ್ ಅಧ್ಯಕ್ಷರು ಮರಣ ದಂಡನೆಯನ್ನು ಅನುಮೋದಿಸಿದರು.

ಶರಿಯತ್ ಕಾನೂನಿನ ಪ್ರಕಾರ, ರಕ್ತದ ಹಣಕ್ಕೆ ಪ್ರತಿಯಾಗಿ ಸಂತ್ರಸ್ತನ ಕುಟುಂಬವು ಅಪರಾಧಿಯನ್ನು ಕ್ಷಮಿಸಿದರೆ ಮರಣ ದಂಡನೆಯನ್ನು ರದ್ದುಗೊಳಿಸಬಹುದು. ನಿಮಿಷಾ ಪ್ರಿಯಾ ಅವರ ಸಂಬಂಧಿಕರು ಮತ್ತು ಬೆಂಬಲಿಗರು ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ ಅನ್ನು ರಚಿಸಿದ್ದು, ರಕ್ತದ ಹಣ ಸಂಗ್ರಹಿಸಿ ಕ್ಷಮೆಗಾಗಿ ಪ್ರಯತ್ನಿಸುತ್ತಿದ್ದಾರೆ.

ಜುಲೈ 18ರಂದು, ಸುಪ್ರೀಂ ಕೋರ್ಟ್ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ಗೆ ಯೆಮನ್‌ಗೆ ತೆರಳಿ ತಲಾಲ್‌ನ ಕುಟುಂಬವನ್ನು ಭೇಟಿಯಾಗಲು ಸರ್ಕಾರದ ಅನುಮತಿ ಪಡೆಯಲು ಅನುಮತಿಸಿತು. ಇದರಲ್ಲಿ ಕೇರಳದ ಸುನ್ನಿ ಇಸ್ಲಾಮಿಕ್ ನಾಯಕ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಪ್ರತಿನಿಧಿಯೂ ಸೇರಿದ್ದಾರೆ. ಮುಸ್ಲಿಯಾರ್ ಅವರ ಹಿಂದಿನ ಮಧ್ಯಸ್ಥಿಕೆಯಿಂದಾಗಿ ಪ್ರಿಯಾಳ ಮರಣದಂಡನೆ ಜುಲೈ 16ರಿಂದ ಮುಂದೂಡಲ್ಪಟ್ಟಿತ್ತು ಎಂದು ಸಂಸ್ಥೆಯು ಹೇಳಿಕೊಂಡಿದೆ.

ಪ್ರಿಯಾಳ ಮರಣದಂಡನೆಯ ಒಂದು ದಿನ ಮುಂಚಿತವಾಗಿ, ಖಾಸಗಿ ಮಧ್ಯಸ್ಥಿಕೆಗಳಿಂದಾಗಿ ಶಿಕ್ಷೆಯನ್ನು ಮುಂದೂಡಲಾಗಿದೆ ಎಂಬ ವರದಿಗಳು ಬಂದವು. ಆದರೆ, ಸಂತ್ರಸ್ತ ತಲಾಲ್ ಅಬ್ಡೋ ಮಹ್ದಿ ಅವರ ಕುಟುಂಬ, ಪ್ರಿಯಾಳನ್ನು ಕ್ಷಮಿಸುವುದಿಲ್ಲ ಎಂದು ಹೇಳಿಕೆ ನೀಡಿ, ಈ ತಾತ್ಕಾಲಿಕ ನಿರಾಳತೆ ಹೆಚ್ಚು ಕಾಲ ಇರಲಿಲ್ಲ.

ಪ್ರಕರಣದ ಶೀರ್ಷಿಕೆ: ಡಾ. ಕೆ. ಎ. ಪಾಲ್ ಅಲಿಯಾಸ್ ಕಿಲಾರಿ ಆನಂದ್ ಪಾಲ್ v. ಯೂನಿಯನ್ ಆಫ್ ಇಂಡಿಯಾ, ಡಬ್ಲ್ಯೂ.ಪಿ.(ಸಿ) ನಂ. 803/2025.

ತ್ರಿಪುರಾ ಬುಡಕಟ್ಟು ಪ್ರದೇಶಗಳಲ್ಲಿ ಗ್ರಾಮ ಸಮಿತಿಗಳ ಚುನಾವಣೆ ವಿಳಂಬ; ಸುಪ್ರೀಂನಿಂದ ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಪಿ ರಾಮಚಂದ್ರ ರಾವ್ ವಿಡಿಯೋ ಪ್ರಕರಣ | ವಿಚಾರಣೆ ನಡೆಸಿ ಶಿಸ್ತು ಕ್ರಮ : ಸಿಎಂ ಸಿದ್ದರಾಮಯ್ಯ

ಡಿಜಿಪಿ ರಾಮಚಂದ್ರರಾವ್ ಅವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋಗಳು ವೈರಲ್ ಆಗಿದ್ದು, ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಣೆ ನಡೆಸಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು. ಬೆಳಗಾವಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ...

ಕರ್ನಲ್ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ‘ವಿಜಯ್ ಶಾ ವಿರುದ್ಧ 2 ವಾರಗಳಲ್ಲಿ ವಿಚಾರಣೆಗೆ ಅನುಮತಿ ನೀಡುವ ಬಗ್ಗೆ ನಿರ್ಧರಿಸಿ’: ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಆಪರೇಷನ್ ಸಿಂಧೂರ್ ನಂತರ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ರಾಜ್ಯ ಸಚಿವ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಮೊಕದ್ದಮೆ ಹೂಡಲು ಅನುಮತಿ...

ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಆರೋಪಗಳನ್ನು ರೂಪಿಸಲು ಸಂತ್ರಸ್ತ ವ್ಯಕ್ತಿಯ ಹೇಳಿಕೆ ಸಾಕು : ಕೇರಳ ಹೈಕೋರ್ಟ್

ಸಾಕ್ಷಿಗಳ ಹೇಳಿಕೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 2018 ರ ಸೆಕ್ಷನ್ 3(1)(ಆರ್) ಮತ್ತು 3(1)(ಎಸ್‌) ಅಡಿಯಲ್ಲಿ ಅಪರಾಧದ ಅಂಶಗಳನ್ನು ಬಹಿರಂಗಪಡಿಸುವುದಿಲ್ಲ ಎಂಬ ಕಾರಣಕ್ಕೆ ಆರೋಪಿಯನ್ನು ದೋಷಮುಕ್ತಗೊಳಿಸಲು...

ಕೇರಳ| ಮಹಿಳೆಯಿಂದ ಲೈಂಗಿಕ ಕಿರುಕುಳ ಆರೋಪ; ಅವಮಾನ ಸಹಿಸದೆ ವ್ಯಕ್ತಿ ಆತ್ಮಹತ್ಯೆ

ಮಹಿಳೆಯೊಬ್ಬರಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ವಿಡಿಯೋ ವೈರಲ್ ಆದ ಬಳಿಕ ಮನನೊಂದ ಆರೋಪಿತ ವ್ಯಕ್ತಿಯು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇರಳದ ಕೋಝಿಕೋಡ್ ಮೂಲದ ವ್ಯಕ್ತಿಯ ಕುಟುಂಬವು ದೂರುದಾರ ಮಹಿಳೆ ವಿರುದ್ಧ...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ (ಜ.19) ವಜಾಗೊಳಿಸಿದೆ....

ತೆಲಂಗಾಣದಲ್ಲಿ ಹೊಸ ಪಕ್ಷ ಸ್ಥಾಪನೆಗೆ ಮುಂದಾದ ಕೆ.ಕವಿತಾ: ಪ್ರಶಾಂತ್ ಕಿಶೋರ್ ಜೊತೆಗೆ ಮಾತುಕತೆ!

ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ (BRS) ಪಕ್ಷದಿಂದ ಉಚ್ಛಾಟಿಸಲಾಗಿದ್ದ ಕೆ.ಕವಿತಾ ಅವರು ತೆಲಂಗಾಣದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕವಿತಾ ಅವರು ಈ...

ಉತ್ತರ ಪ್ರದೇಶ| ಹಣಕಾಸಿನ ವಿವಾದ: ದಲಿತ ವ್ಯಕ್ತಿಗೆ ಸಾರ್ವಜನಿಕವಾಗಿ ತಲೆ ಬೋಳಿಸಿ ಅಪಮಾನ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ನವಾಬ್‌ಗಂಜ್ ಪ್ರದೇಶದಲ್ಲಿ, ಪಪ್ಪು ದಿವಾಕರ್ ಎಂಬ ದಲಿತ ವ್ಯಕ್ತಿಯನ್ನು ಶನಿವಾರ ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿ, ತಲೆ ಬೋಳಿಸಿ ಸಾರ್ವಜನಿಕ ಅವಮಾನಕ್ಕೆ ಒಳಪಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಸಂತ್ರಸ್ತ...

ಎನ್‌ಡಿಟಿವಿ ಪ್ರಕರಣ : ಪ್ರಣಯ್, ರಾಧಿಕಾ ರಾಯ್‌ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ; ಐಟಿ ಇಲಾಖೆಗೆ 2 ಲಕ್ಷ ರೂ. ದಂಡ

ಎನ್‌ಡಿಟಿವಿ ಪ್ರವರ್ತಕರಾದ ಆರ್‌ಆರ್‌ಪಿಆರ್ ಹೋಲ್ಡಿಂಗ್‌ಗೆ ನೀಡಿದ ಕೆಲವು ಬಡ್ಡಿರಹಿತ ಸಾಲಗಳಿಗೆ ಸಂಬಂಧಿಸಿದಂತೆ ಮಾರ್ಚ್ 2016ರಲ್ಲಿ ಎನ್‌ಡಿಟಿವಿ ಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ನೀಡಲಾಗಿದ್ದ ಆದಾಯ ತೆರಿಗೆ ಮರುಮೌಲ್ಯಮಾಪನ ನೋಟಿಸ್‌ಗಳನ್ನು...

ಕುರ್ದಿಶ್‌ ಪಡೆಗಳ ಜೊತೆ ಕದನ ವಿರಾಮ : ಹಲವು ಪ್ರದೇಶಗಳ ಮೇಲೆ ಹಿಡಿತ ಸಾಧಿಸಿದ ಸಿರಿಯಾ ಸೇನೆ

ಕುರ್ದಿಶ್ ನೇತೃತ್ವದ ಸಿರಿಯನ್ ಡೆಮಾಕ್ರಟಿಕ್ ಫೋರ್ಸಸ್ (ಎಸ್‌ಡಿಎಫ್‌) ಜೊತೆಗಿನ ಎರಡು ವಾರಗಳ ಭಾರೀ ಕಾದಾಟದ ನಂತರ, ಸಿರಿಯಾದ ಸರ್ಕಾರಿ ಪಡೆಗಳು ಉತ್ತರ ಮತ್ತು ಈಶಾನ್ಯ ಸಿರಿಯಾದ ಹಲವಾರು ಪ್ರಮುಖ ಪ್ರದೇಶಗಳ ಮೇಲೆ ಹಿಡಿತ...

ಖಮೇನಿ ಮೇಲಿನ ದಾಳಿಯು ‘ಸಂಪೂರ್ಣ ಯುದ್ಧ’ಕ್ಕೆ ಕಾರಣವಾಗುತ್ತದೆ: ಇರಾನ್ ಅಧ್ಯಕ್ಷರ ಎಚ್ಚರಿಕೆ

ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಮೇಲಿನ ಯಾವುದೇ ದಾಳಿಯನ್ನು ಇರಾನ್ ರಾಷ್ಟ್ರದ ವಿರುದ್ಧ "ಸಂಪೂರ್ಣ ಯುದ್ಧ" ಘೋಷಣೆ ಎಂದು ಪರಿಗಣಿಸಲಾಗುತ್ತದೆ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಎಚ್ಚರಿಸಿದ್ದಾರೆ. "ಇರಾನ್‌ನಲ್ಲಿ ಹೊಸ ನಾಯಕತ್ವವನ್ನು...