Homeಮುಖಪುಟನಿಮಿಷಾ ಪ್ರಿಯಾ ಮರಣದಂಡನೆ ಪ್ರಕರಣ: ಸಾರ್ವಜನಿಕ ಹೇಳಿಕೆಗಳ ವಿರುದ್ಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನಿಮಿಷಾ ಪ್ರಿಯಾ ಮರಣದಂಡನೆ ಪ್ರಕರಣ: ಸಾರ್ವಜನಿಕ ಹೇಳಿಕೆಗಳ ವಿರುದ್ಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ನವದೆಹಲಿ: ಯೆಮನ್‌ನಲ್ಲಿ ಮರಣದಂಡನೆ ಎದುರಿಸುತ್ತಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕ ಹೇಳಿಕೆಗಳು ಮತ್ತು ಮಾಧ್ಯಮ ವರದಿಗಳನ್ನು ನಿರ್ಬಂಧಿಸುವಂತೆ ಕೋರಿ ಧರ್ಮಪ್ರಚಾರಕ ಡಾ. ಕೆ.ಎ. ಪಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ ಎಂದು ಲೈವ್‌ ಲಾ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆಯ ವೇಳೆ, ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ಕೇಂದ್ರ ಸರ್ಕಾರವು ಈ ಪ್ರಕರಣದ ಕುರಿತು ನಿಯಮಿತವಾಗಿ ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿದ್ದು, ನಿಮಿಷಾ ಪ್ರಿಯಾ ಅವರ ಶಿಕ್ಷೆಯ ಅಂತಿಮ ಇತ್ಯರ್ಥವಾಗುವವರೆಗೆ ಮಾಧ್ಯಮ ವರದಿಗಳ ಬಗ್ಗೆ ಎಚ್ಚರಿಕೆ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ, ನಿಮಿಷಾ ಪ್ರಿಯಾಳನ್ನು ರಕ್ಷಿಸಲು ರಚನೆಯಾದ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ (ಮಾಜಿ ನ್ಯಾಯಾಧೀಶರು, ಸಂಸದರು, ಶಾಸಕರು ಇತ್ಯಾದಿಗಳನ್ನು ಒಳಗೊಂಡಿದೆ) ಕೂಡ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದರಿಂದ ದೂರವಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿತು. ಈ ಹಿನ್ನೆಲೆಯಲ್ಲಿ, ಡಾ. ಪಾಲ್ ಅವರ ಅರ್ಜಿಯನ್ನು ವಜಾ ಮಾಡಲಾಯಿತು.

ರಕ್ತದ ಹಣದ ಕುರಿತ ವಿವಾದ

ಡಾ. ಪಾಲ್ ಅವರು, ಪ್ರಿಯಾಳನ್ನು ಬಿಡುಗಡೆ ಮಾಡಲು ಸರ್ಕಾರಕ್ಕೆ ಸಹಾಯ ಮಾಡುತ್ತಿದ್ದು, ಸಂತ್ರಸ್ತನ ಕುಟುಂಬದೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ಸಂತ್ರಸ್ತನ ಕುಟುಂಬವು ಮೂರು ಷರತ್ತುಗಳಿಗೆ ಒಳಪಟ್ಟು ಪ್ರಿಯಾಳನ್ನು ಕ್ಷಮಿಸಲು ಸಿದ್ಧವಾಗಿದೆ. ಇದರಲ್ಲಿ ಎರಡು ಷರತ್ತುಗಳನ್ನು ಅವರು ಈಗಾಗಲೇ ಪೂರೈಸಿದ್ದಾರೆ ಎಂದು ಹೇಳಿಕೊಂಡರು. ರಕ್ತದ ಹಣ ಸಂಗ್ರಹಿಸಿ ಅವರಿಗೆ ಪಾವತಿಸಲಾಗಿದೆ ಎಂಬ ಮಾಧ್ಯಮ ವರದಿಗಳಿಂದ ಸಂತ್ರಸ್ತನ ಕುಟುಂಬ ಅಸಮಾಧಾನಗೊಂಡಿದೆ ಎಂದೂ ಅವರು ಸ್ಪಷ್ಟಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ ಪರ ವಕೀಲ ರಾಗೆಂತ್ ಬಸಂತ್, ಸಂತ್ರಸ್ತನ ಕುಟುಂಬವು ಪ್ರಿಯಾಳನ್ನು ಕ್ಷಮಿಸುವುದು ಮೊದಲ ಹಂತ. ಅದರ ನಂತರವಷ್ಟೇ ರಕ್ತದ ಹಣದ ಪ್ರಶ್ನೆ ಬರುತ್ತದೆ ಎಂದು ವಾದಿಸಿದರು.

ಪಕ್ಷಗಳ ವಾದಗಳನ್ನು ಆಲಿಸಿದ ಪೀಠವು, ಯೆಮನ್ ಮೇಲೆ ನಮಗೆ ಅಧಿಕಾರ ಇಲ್ಲ. ಹಾಗಿದ್ದ ಮೇಲೆ ಈ ಅರ್ಜಿಯನ್ನು ನಾವು ಏಕೆ ಪರಿಗಣಿಸಬೇಕು ಎಂದು ಪ್ರಶ್ನಿಸಿತು. ಕೇಂದ್ರದ ಭರವಸೆಯ ಹಿನ್ನೆಲೆಯಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವ ಆದೇಶ ನೀಡಲು ನ್ಯಾಯಾಲಯ ನಿರಾಕರಿಸಿತು, ಮತ್ತು ಅಂತಿಮವಾಗಿ ಅರ್ಜಿಯನ್ನು ವಜಾಗೊಳಿಸಲಾಯಿತು.

ಪ್ರಕರಣದ ಹಿನ್ನೆಲೆ

ಕೇರಳ ಮೂಲದ 36 ವರ್ಷದ ನರ್ಸ್ ನಿಮಿಷಾ ಪ್ರಿಯಾ, ಯೆಮನ್ ಪ್ರಜೆ ತಲಾಲ್ ಅಬ್ಡೋ ಮಹ್ದಿ ಹತ್ಯೆ ಪ್ರಕರಣದಲ್ಲಿ 2017 ರಿಂದ ಮರಣ ದಂಡನೆ ಎದುರಿಸುತ್ತಿದ್ದಾರೆ. ತನ್ನ ಪಾಸ್‌ಪೋರ್ಟ್ ಪಡೆಯಲು ತಲಾಲ್‌ನಿಗೆ ಕೆಟಮೈನ್‌ನಿಂದ ನಿದ್ರೆ ಮಾಡಲು ಪ್ರಯತ್ನಿಸಿದ್ದರು. ತಲಾಲ್ ಆಕೆಯ ಪಾಸ್‌ಪೋರ್ಟ್ ವಶಪಡಿಸಿಕೊಂಡಿದ್ದಲ್ಲದೆ, ಆಕೆಯೇ ತನ್ನ ಪತ್ನಿ ಎಂದು ನಕಲಿ ದಾಖಲೆ ಸೃಷ್ಟಿಸಿದ್ದ ಎಂದು ಆರೋಪಿಸಲಾಗಿದೆ. ಮಿತಿ ಮೀರಿದ ನಿದ್ರಾಜನಕದ ಡೋಸ್‌ನಿಂದ ತಲಾಲ್ ಸಾವನ್ನಪ್ಪಿದ್ದಾನೆ.

2018ರಲ್ಲಿ ಆಕೆಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಯಿತು, 2020ರಲ್ಲಿ ಪುನರ್ ವಿಚಾರಣೆ ನಡೆಸಿದರೂ ಅದೇ ಶಿಕ್ಷೆ ದೃಢವಾಯಿತು, ಮತ್ತು 2023ರಲ್ಲಿ ಯೆಮನ್‌ನ ಸುಪ್ರೀಂ ಜುಡಿಶಿಯಲ್ ಕೌನ್ಸಿಲ್‌ನಲ್ಲಿ ಮೇಲ್ಮನವಿ ತಿರಸ್ಕೃತಗೊಂಡಿತು. ನಂತರ ಯೆಮನ್ ಅಧ್ಯಕ್ಷರು ಮರಣ ದಂಡನೆಯನ್ನು ಅನುಮೋದಿಸಿದರು.

ಶರಿಯತ್ ಕಾನೂನಿನ ಪ್ರಕಾರ, ರಕ್ತದ ಹಣಕ್ಕೆ ಪ್ರತಿಯಾಗಿ ಸಂತ್ರಸ್ತನ ಕುಟುಂಬವು ಅಪರಾಧಿಯನ್ನು ಕ್ಷಮಿಸಿದರೆ ಮರಣ ದಂಡನೆಯನ್ನು ರದ್ದುಗೊಳಿಸಬಹುದು. ನಿಮಿಷಾ ಪ್ರಿಯಾ ಅವರ ಸಂಬಂಧಿಕರು ಮತ್ತು ಬೆಂಬಲಿಗರು ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ ಅನ್ನು ರಚಿಸಿದ್ದು, ರಕ್ತದ ಹಣ ಸಂಗ್ರಹಿಸಿ ಕ್ಷಮೆಗಾಗಿ ಪ್ರಯತ್ನಿಸುತ್ತಿದ್ದಾರೆ.

ಜುಲೈ 18ರಂದು, ಸುಪ್ರೀಂ ಕೋರ್ಟ್ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ಗೆ ಯೆಮನ್‌ಗೆ ತೆರಳಿ ತಲಾಲ್‌ನ ಕುಟುಂಬವನ್ನು ಭೇಟಿಯಾಗಲು ಸರ್ಕಾರದ ಅನುಮತಿ ಪಡೆಯಲು ಅನುಮತಿಸಿತು. ಇದರಲ್ಲಿ ಕೇರಳದ ಸುನ್ನಿ ಇಸ್ಲಾಮಿಕ್ ನಾಯಕ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಪ್ರತಿನಿಧಿಯೂ ಸೇರಿದ್ದಾರೆ. ಮುಸ್ಲಿಯಾರ್ ಅವರ ಹಿಂದಿನ ಮಧ್ಯಸ್ಥಿಕೆಯಿಂದಾಗಿ ಪ್ರಿಯಾಳ ಮರಣದಂಡನೆ ಜುಲೈ 16ರಿಂದ ಮುಂದೂಡಲ್ಪಟ್ಟಿತ್ತು ಎಂದು ಸಂಸ್ಥೆಯು ಹೇಳಿಕೊಂಡಿದೆ.

ಪ್ರಿಯಾಳ ಮರಣದಂಡನೆಯ ಒಂದು ದಿನ ಮುಂಚಿತವಾಗಿ, ಖಾಸಗಿ ಮಧ್ಯಸ್ಥಿಕೆಗಳಿಂದಾಗಿ ಶಿಕ್ಷೆಯನ್ನು ಮುಂದೂಡಲಾಗಿದೆ ಎಂಬ ವರದಿಗಳು ಬಂದವು. ಆದರೆ, ಸಂತ್ರಸ್ತ ತಲಾಲ್ ಅಬ್ಡೋ ಮಹ್ದಿ ಅವರ ಕುಟುಂಬ, ಪ್ರಿಯಾಳನ್ನು ಕ್ಷಮಿಸುವುದಿಲ್ಲ ಎಂದು ಹೇಳಿಕೆ ನೀಡಿ, ಈ ತಾತ್ಕಾಲಿಕ ನಿರಾಳತೆ ಹೆಚ್ಚು ಕಾಲ ಇರಲಿಲ್ಲ.

ಪ್ರಕರಣದ ಶೀರ್ಷಿಕೆ: ಡಾ. ಕೆ. ಎ. ಪಾಲ್ ಅಲಿಯಾಸ್ ಕಿಲಾರಿ ಆನಂದ್ ಪಾಲ್ v. ಯೂನಿಯನ್ ಆಫ್ ಇಂಡಿಯಾ, ಡಬ್ಲ್ಯೂ.ಪಿ.(ಸಿ) ನಂ. 803/2025.

ತ್ರಿಪುರಾ ಬುಡಕಟ್ಟು ಪ್ರದೇಶಗಳಲ್ಲಿ ಗ್ರಾಮ ಸಮಿತಿಗಳ ಚುನಾವಣೆ ವಿಳಂಬ; ಸುಪ್ರೀಂನಿಂದ ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...