Homeಮುಖಪುಟನಿಮಿಷಾ ಪ್ರಿಯಾ ಮರಣದಂಡನೆ ಪ್ರಕರಣ: ಸಾರ್ವಜನಿಕ ಹೇಳಿಕೆಗಳ ವಿರುದ್ಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನಿಮಿಷಾ ಪ್ರಿಯಾ ಮರಣದಂಡನೆ ಪ್ರಕರಣ: ಸಾರ್ವಜನಿಕ ಹೇಳಿಕೆಗಳ ವಿರುದ್ಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ನವದೆಹಲಿ: ಯೆಮನ್‌ನಲ್ಲಿ ಮರಣದಂಡನೆ ಎದುರಿಸುತ್ತಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕ ಹೇಳಿಕೆಗಳು ಮತ್ತು ಮಾಧ್ಯಮ ವರದಿಗಳನ್ನು ನಿರ್ಬಂಧಿಸುವಂತೆ ಕೋರಿ ಧರ್ಮಪ್ರಚಾರಕ ಡಾ. ಕೆ.ಎ. ಪಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ ಎಂದು ಲೈವ್‌ ಲಾ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆಯ ವೇಳೆ, ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ಕೇಂದ್ರ ಸರ್ಕಾರವು ಈ ಪ್ರಕರಣದ ಕುರಿತು ನಿಯಮಿತವಾಗಿ ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿದ್ದು, ನಿಮಿಷಾ ಪ್ರಿಯಾ ಅವರ ಶಿಕ್ಷೆಯ ಅಂತಿಮ ಇತ್ಯರ್ಥವಾಗುವವರೆಗೆ ಮಾಧ್ಯಮ ವರದಿಗಳ ಬಗ್ಗೆ ಎಚ್ಚರಿಕೆ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ, ನಿಮಿಷಾ ಪ್ರಿಯಾಳನ್ನು ರಕ್ಷಿಸಲು ರಚನೆಯಾದ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ (ಮಾಜಿ ನ್ಯಾಯಾಧೀಶರು, ಸಂಸದರು, ಶಾಸಕರು ಇತ್ಯಾದಿಗಳನ್ನು ಒಳಗೊಂಡಿದೆ) ಕೂಡ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದರಿಂದ ದೂರವಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿತು. ಈ ಹಿನ್ನೆಲೆಯಲ್ಲಿ, ಡಾ. ಪಾಲ್ ಅವರ ಅರ್ಜಿಯನ್ನು ವಜಾ ಮಾಡಲಾಯಿತು.

ರಕ್ತದ ಹಣದ ಕುರಿತ ವಿವಾದ

ಡಾ. ಪಾಲ್ ಅವರು, ಪ್ರಿಯಾಳನ್ನು ಬಿಡುಗಡೆ ಮಾಡಲು ಸರ್ಕಾರಕ್ಕೆ ಸಹಾಯ ಮಾಡುತ್ತಿದ್ದು, ಸಂತ್ರಸ್ತನ ಕುಟುಂಬದೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ಸಂತ್ರಸ್ತನ ಕುಟುಂಬವು ಮೂರು ಷರತ್ತುಗಳಿಗೆ ಒಳಪಟ್ಟು ಪ್ರಿಯಾಳನ್ನು ಕ್ಷಮಿಸಲು ಸಿದ್ಧವಾಗಿದೆ. ಇದರಲ್ಲಿ ಎರಡು ಷರತ್ತುಗಳನ್ನು ಅವರು ಈಗಾಗಲೇ ಪೂರೈಸಿದ್ದಾರೆ ಎಂದು ಹೇಳಿಕೊಂಡರು. ರಕ್ತದ ಹಣ ಸಂಗ್ರಹಿಸಿ ಅವರಿಗೆ ಪಾವತಿಸಲಾಗಿದೆ ಎಂಬ ಮಾಧ್ಯಮ ವರದಿಗಳಿಂದ ಸಂತ್ರಸ್ತನ ಕುಟುಂಬ ಅಸಮಾಧಾನಗೊಂಡಿದೆ ಎಂದೂ ಅವರು ಸ್ಪಷ್ಟಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ ಪರ ವಕೀಲ ರಾಗೆಂತ್ ಬಸಂತ್, ಸಂತ್ರಸ್ತನ ಕುಟುಂಬವು ಪ್ರಿಯಾಳನ್ನು ಕ್ಷಮಿಸುವುದು ಮೊದಲ ಹಂತ. ಅದರ ನಂತರವಷ್ಟೇ ರಕ್ತದ ಹಣದ ಪ್ರಶ್ನೆ ಬರುತ್ತದೆ ಎಂದು ವಾದಿಸಿದರು.

ಪಕ್ಷಗಳ ವಾದಗಳನ್ನು ಆಲಿಸಿದ ಪೀಠವು, ಯೆಮನ್ ಮೇಲೆ ನಮಗೆ ಅಧಿಕಾರ ಇಲ್ಲ. ಹಾಗಿದ್ದ ಮೇಲೆ ಈ ಅರ್ಜಿಯನ್ನು ನಾವು ಏಕೆ ಪರಿಗಣಿಸಬೇಕು ಎಂದು ಪ್ರಶ್ನಿಸಿತು. ಕೇಂದ್ರದ ಭರವಸೆಯ ಹಿನ್ನೆಲೆಯಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವ ಆದೇಶ ನೀಡಲು ನ್ಯಾಯಾಲಯ ನಿರಾಕರಿಸಿತು, ಮತ್ತು ಅಂತಿಮವಾಗಿ ಅರ್ಜಿಯನ್ನು ವಜಾಗೊಳಿಸಲಾಯಿತು.

ಪ್ರಕರಣದ ಹಿನ್ನೆಲೆ

ಕೇರಳ ಮೂಲದ 36 ವರ್ಷದ ನರ್ಸ್ ನಿಮಿಷಾ ಪ್ರಿಯಾ, ಯೆಮನ್ ಪ್ರಜೆ ತಲಾಲ್ ಅಬ್ಡೋ ಮಹ್ದಿ ಹತ್ಯೆ ಪ್ರಕರಣದಲ್ಲಿ 2017 ರಿಂದ ಮರಣ ದಂಡನೆ ಎದುರಿಸುತ್ತಿದ್ದಾರೆ. ತನ್ನ ಪಾಸ್‌ಪೋರ್ಟ್ ಪಡೆಯಲು ತಲಾಲ್‌ನಿಗೆ ಕೆಟಮೈನ್‌ನಿಂದ ನಿದ್ರೆ ಮಾಡಲು ಪ್ರಯತ್ನಿಸಿದ್ದರು. ತಲಾಲ್ ಆಕೆಯ ಪಾಸ್‌ಪೋರ್ಟ್ ವಶಪಡಿಸಿಕೊಂಡಿದ್ದಲ್ಲದೆ, ಆಕೆಯೇ ತನ್ನ ಪತ್ನಿ ಎಂದು ನಕಲಿ ದಾಖಲೆ ಸೃಷ್ಟಿಸಿದ್ದ ಎಂದು ಆರೋಪಿಸಲಾಗಿದೆ. ಮಿತಿ ಮೀರಿದ ನಿದ್ರಾಜನಕದ ಡೋಸ್‌ನಿಂದ ತಲಾಲ್ ಸಾವನ್ನಪ್ಪಿದ್ದಾನೆ.

2018ರಲ್ಲಿ ಆಕೆಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಯಿತು, 2020ರಲ್ಲಿ ಪುನರ್ ವಿಚಾರಣೆ ನಡೆಸಿದರೂ ಅದೇ ಶಿಕ್ಷೆ ದೃಢವಾಯಿತು, ಮತ್ತು 2023ರಲ್ಲಿ ಯೆಮನ್‌ನ ಸುಪ್ರೀಂ ಜುಡಿಶಿಯಲ್ ಕೌನ್ಸಿಲ್‌ನಲ್ಲಿ ಮೇಲ್ಮನವಿ ತಿರಸ್ಕೃತಗೊಂಡಿತು. ನಂತರ ಯೆಮನ್ ಅಧ್ಯಕ್ಷರು ಮರಣ ದಂಡನೆಯನ್ನು ಅನುಮೋದಿಸಿದರು.

ಶರಿಯತ್ ಕಾನೂನಿನ ಪ್ರಕಾರ, ರಕ್ತದ ಹಣಕ್ಕೆ ಪ್ರತಿಯಾಗಿ ಸಂತ್ರಸ್ತನ ಕುಟುಂಬವು ಅಪರಾಧಿಯನ್ನು ಕ್ಷಮಿಸಿದರೆ ಮರಣ ದಂಡನೆಯನ್ನು ರದ್ದುಗೊಳಿಸಬಹುದು. ನಿಮಿಷಾ ಪ್ರಿಯಾ ಅವರ ಸಂಬಂಧಿಕರು ಮತ್ತು ಬೆಂಬಲಿಗರು ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ ಅನ್ನು ರಚಿಸಿದ್ದು, ರಕ್ತದ ಹಣ ಸಂಗ್ರಹಿಸಿ ಕ್ಷಮೆಗಾಗಿ ಪ್ರಯತ್ನಿಸುತ್ತಿದ್ದಾರೆ.

ಜುಲೈ 18ರಂದು, ಸುಪ್ರೀಂ ಕೋರ್ಟ್ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ಗೆ ಯೆಮನ್‌ಗೆ ತೆರಳಿ ತಲಾಲ್‌ನ ಕುಟುಂಬವನ್ನು ಭೇಟಿಯಾಗಲು ಸರ್ಕಾರದ ಅನುಮತಿ ಪಡೆಯಲು ಅನುಮತಿಸಿತು. ಇದರಲ್ಲಿ ಕೇರಳದ ಸುನ್ನಿ ಇಸ್ಲಾಮಿಕ್ ನಾಯಕ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಪ್ರತಿನಿಧಿಯೂ ಸೇರಿದ್ದಾರೆ. ಮುಸ್ಲಿಯಾರ್ ಅವರ ಹಿಂದಿನ ಮಧ್ಯಸ್ಥಿಕೆಯಿಂದಾಗಿ ಪ್ರಿಯಾಳ ಮರಣದಂಡನೆ ಜುಲೈ 16ರಿಂದ ಮುಂದೂಡಲ್ಪಟ್ಟಿತ್ತು ಎಂದು ಸಂಸ್ಥೆಯು ಹೇಳಿಕೊಂಡಿದೆ.

ಪ್ರಿಯಾಳ ಮರಣದಂಡನೆಯ ಒಂದು ದಿನ ಮುಂಚಿತವಾಗಿ, ಖಾಸಗಿ ಮಧ್ಯಸ್ಥಿಕೆಗಳಿಂದಾಗಿ ಶಿಕ್ಷೆಯನ್ನು ಮುಂದೂಡಲಾಗಿದೆ ಎಂಬ ವರದಿಗಳು ಬಂದವು. ಆದರೆ, ಸಂತ್ರಸ್ತ ತಲಾಲ್ ಅಬ್ಡೋ ಮಹ್ದಿ ಅವರ ಕುಟುಂಬ, ಪ್ರಿಯಾಳನ್ನು ಕ್ಷಮಿಸುವುದಿಲ್ಲ ಎಂದು ಹೇಳಿಕೆ ನೀಡಿ, ಈ ತಾತ್ಕಾಲಿಕ ನಿರಾಳತೆ ಹೆಚ್ಚು ಕಾಲ ಇರಲಿಲ್ಲ.

ಪ್ರಕರಣದ ಶೀರ್ಷಿಕೆ: ಡಾ. ಕೆ. ಎ. ಪಾಲ್ ಅಲಿಯಾಸ್ ಕಿಲಾರಿ ಆನಂದ್ ಪಾಲ್ v. ಯೂನಿಯನ್ ಆಫ್ ಇಂಡಿಯಾ, ಡಬ್ಲ್ಯೂ.ಪಿ.(ಸಿ) ನಂ. 803/2025.

ತ್ರಿಪುರಾ ಬುಡಕಟ್ಟು ಪ್ರದೇಶಗಳಲ್ಲಿ ಗ್ರಾಮ ಸಮಿತಿಗಳ ಚುನಾವಣೆ ವಿಳಂಬ; ಸುಪ್ರೀಂನಿಂದ ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...