Homeಮುಖಪುಟನರೇಂದ್ರ ದಾಭೋಲ್ಕರ್ ಹತ್ಯೆ: ತನಿಖೆಯ ಮೇಲ್ವಿಚಾರಣೆ ಕೋರಿ ಸಲ್ಲಿಸಿದ ಅರ್ಜಿ ತಿರಸ್ಕಾರ

ನರೇಂದ್ರ ದಾಭೋಲ್ಕರ್ ಹತ್ಯೆ: ತನಿಖೆಯ ಮೇಲ್ವಿಚಾರಣೆ ಕೋರಿ ಸಲ್ಲಿಸಿದ ಅರ್ಜಿ ತಿರಸ್ಕಾರ

- Advertisement -
- Advertisement -

ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆಗೆ ಸಂಬಂಧಿಸಿ ತನಿಖೆಯ ಮೇಲ್ವಿಚಾರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದ್ದು, ಬಾಂಬೆ ಹೈಕೋರ್ಟ್‌ ತನಿಖೆಯ ಮೇಲ್ವಿಚಾರಣೆಯನ್ನು  ಸ್ಥಗಿತಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ದಾಭೋಲ್ಕರ್ ಅವರ ಹತ್ಯೆಯ ತನಿಖೆಯ ಮೇಲೆ ಹೆಚ್ಚಿನ ನಿಗಾ ವಹಿಸಲು ನಿರಾಕರಿಸಿ ಬಾಂಬೆ ಹೈಕೋರ್ಟ್ ಏಪ್ರಿಲ್ 18ರಂದು ಆದೇಶವನ್ನು ನೀಡಿತ್ತು. ದಾಭೋಲ್ಕರ್ ಅವರ ಪುತ್ರಿ ಮುಕ್ತಾ ದಾಭೋಲ್ಕರ್ ಸೇರಿ ಇತರರು ತಮ್ಮ ತಂದೆಯ ಹತ್ಯೆಯ ತನಿಖೆಯ ಮೇಲ್ವಿಚಾರಣೆಯನ್ನು ನಿಲ್ಲಿಸಲು ನಿರ್ಧರಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ತಳ್ಳಿಹಾಕುವಂತೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠ, ಹೈಕೋರ್ಟ್‌ ತನಿಖೆಯ ಮೇಲೆ ನಿಗಾ ಇಡಲು ಉದ್ದೇಶಿಸಿಲ್ಲ. ಬಾಂಬೆ ಹೈಕೋರ್ಟ್ ಸಾಕಷ್ಟು ನಿಗಾ ವಹಿಸಿದೆ.  ಹೆಚ್ಚಿನ ಮೇಲ್ವಿಚಾರಣೆಯನ್ನು ನಿರಾಕರಿಸಿರುವುದು ನ್ಯಾಯೋಚಿತ ಆದೇಶವಾಗಿದೆ. ಈ ವಿಷಯದಲ್ಲಿ ಕಕ್ಷಿದಾರರು ಬಯಸಿದಂತೆ ಮೇಲ್ವಿಚಾರಣೆಯನ್ನು ಹೊಂದಲು ಸಾಧ್ಯವಿಲ್ಲ. ನಾವು ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಒಲವು ತೋರುವುದಿಲ್ಲ ಎಂದು ಹೇಳಿದೆ.

ದಾಭೋಲ್ಕರ್, ಗೋವಿಂದ್ ಪನ್ಸಾರೆ, ಎಂಎಂ ಕಲಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯಲ್ಲಿ ಸಾಮ್ಯತೆಯ ಬಗ್ಗೆ ಸಾಕ್ಷ್ಯಾಧಾರಗಳಿವೆ ಎಂದು ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಆನಂದ್ ಗ್ರೋವರ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ದೊಡ್ಡ ಪಿತೂರಿತ ಆಯಾಮವನ್ನು ಗಮನಿಸಿ ಸಿಬಿಐ ಸರಿಯಾಗಿ ತನಿಖೆ ಮಾಡದಿದ್ದರೆ, ಕೃತ್ಯದ ಹಿಂದಿರುವವರು ಶಿಕ್ಷಯಿಂದ ಪಾರಾಗುವ ಸಾಧ್ಯತೆ ಇದೆ ಎಂದು ಕೋರ್ಟ್‌ನಲ್ಲಿ ಹೇಳಿದ್ದಾರೆ.

ಸಿಬಿಐ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಐಶ್ವರ್ಯಾ ಭಾಟಿ, ವಿಚಾರಣೆ ಈಗಾಗಲೇ ಮುಂದುವರಿದ ಹಂತದಲ್ಲಿದೆ ಮತ್ತು ಪ್ರಕರಣದ ಸಾಕ್ಷಿಗಳನ್ನು ವಿಚಾರಣಾ ನ್ಯಾಯಾಲಯವು ಪರಿಶೀಲಿಸಿದೆ ಎಂದು ಕೋರ್ಟ್‌ಗೆ ಹೇಳಿದ್ದಾರೆ.

ಅರ್ಜಿದಾರರ ಕಡೆಗೆ ತಿರುಗಿದ ನ್ಯಾಯಮೂರ್ತಿಗಳು, ಸಿಬಿಐ ದೇಶದಲ್ಲಿ ನಮ್ಮಲ್ಲಿರುವ ಅತ್ಯುತ್ತಮ ತನಿಖಾ ಸಂಸ್ಥೆಯಾಗಿದೆ.  ವಿಚಾರಣೆ ಆರಂಭವಾಗಿದ್ದು, 23 ಸಾಕ್ಷಿಗಳಲ್ಲಿ 18 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆಯನ್ನು ಅರ್ಜಿದಾರರು ಸಿಬಿಐಗೆ ನೀಡಬಹುದು ಎಂದು ಕೋರ್ಟ್‌ ಹೇಳಿದ್ದು, ತನಿಖೆಯ ಕುರಿತು ಯಾವುದೇ ಹೆಚ್ಚಿನ ಆದೇಶಗಳನ್ನು ನೀಡಲು ನಿರಾಕರಿಸಿದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ನಾಲ್ಕು ಕೊಲೆಗಳ ಹಿಂದೆ ದೊಡ್ಡ ಪಿತೂರಿ ಇದೆ ಎಂಬ ಬಗ್ಗೆ ದಾಭೋಲ್ಕರ್ ಅವರ ಮಕ್ಕಳ ಮನವಿಯ ನಂತರ ಈ ಕುರಿತು ಪರಿಶೀಲಿಸುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ಹೇಳಿತ್ತು.

2013ರಲ್ಲಿ ಪುಣೆಯಲ್ಲಿ ಮೂಢನಂಬಿಕೆ ವಿರೋಧಿ ಹೋರಾಟಗಾರ, ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಇದಾದ ಎರಡು ವರ್ಷಗಳಲ್ಲಿ ಹೋರಾಟಗಾರ ಗೋವಿಂದ ಪನ್ಸಾರೆ ಅವರನ್ನು 2015ರಲ್ಲಿ ಹತ್ಯೆ ಮಾಡಲಾಗಿದೆ. ಅದೇ ವರ್ಷ ಕರ್ನಾಟಕದಲ್ಲಿ ಸಾಹಿತಿ ಎಂಎಂ ಕಲಬುರ್ಗಿ ಅವರನ್ನು ಹತ್ಯೆ ಮಾಡಲಾಯಿತು. 2017ರಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಬೆಂಗಳೂರಿನ ತಮ್ಮ ಮನೆಯ ಹೊರಗೆ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಎಸ್‌ಐಟಿ ನಡೆಸಿದ ತನಿಖೆಯಲ್ಲಿ ಒಬ್ಬ ಆರೋಪಿ ಅಮೋಲ್ ಕಾಳೆಯಿಂದ ಡೈರಿಯನ್ನು ವಶಪಡಿಸಿಕೊಳ್ಳಲಾಗಿದೆ. ಆತನ ಹಿಟ್‌ ಲಿಸ್ಟ್‌ನಲ್ಲಿ 34 ಮಂದಿ ಇದ್ದರು ಎನ್ನುವುದು ತಿಳಿದು ಬಂದಿತ್ತು. ನಾಲ್ಕು ಕೊಲೆ ನಡೆಸಿರುವ ಆರೋಪಿಗಳು ಸನಾತನ ಸಂಸ್ಥೆ ಜೊತೆ ನಂಟಿರುವುದು ತನಿಖೆಯ ವೇಳೆ ಬಯಲಾಗಿತ್ತು.

ಇದನ್ನು ಓದಿ: ರೇಪಿಸ್ಟ್‌ಗಳಿಗೆ ಮತ್ತೆ ಜೈಲು: ಸುಪ್ರೀಂಕೋರ್ಟ್‌ ತೀರ್ಪಿನ ಬಗ್ಗೆ ಬಿಲ್ಕಿಸ್‌ ಬಾನು ಪ್ರತಿಕ್ರಿಯೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...