Homeಮುಖಪುಟನರೇಂದ್ರ ದಾಭೋಲ್ಕರ್ ಹತ್ಯೆ: ತನಿಖೆಯ ಮೇಲ್ವಿಚಾರಣೆ ಕೋರಿ ಸಲ್ಲಿಸಿದ ಅರ್ಜಿ ತಿರಸ್ಕಾರ

ನರೇಂದ್ರ ದಾಭೋಲ್ಕರ್ ಹತ್ಯೆ: ತನಿಖೆಯ ಮೇಲ್ವಿಚಾರಣೆ ಕೋರಿ ಸಲ್ಲಿಸಿದ ಅರ್ಜಿ ತಿರಸ್ಕಾರ

- Advertisement -
- Advertisement -

ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆಗೆ ಸಂಬಂಧಿಸಿ ತನಿಖೆಯ ಮೇಲ್ವಿಚಾರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದ್ದು, ಬಾಂಬೆ ಹೈಕೋರ್ಟ್‌ ತನಿಖೆಯ ಮೇಲ್ವಿಚಾರಣೆಯನ್ನು  ಸ್ಥಗಿತಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ದಾಭೋಲ್ಕರ್ ಅವರ ಹತ್ಯೆಯ ತನಿಖೆಯ ಮೇಲೆ ಹೆಚ್ಚಿನ ನಿಗಾ ವಹಿಸಲು ನಿರಾಕರಿಸಿ ಬಾಂಬೆ ಹೈಕೋರ್ಟ್ ಏಪ್ರಿಲ್ 18ರಂದು ಆದೇಶವನ್ನು ನೀಡಿತ್ತು. ದಾಭೋಲ್ಕರ್ ಅವರ ಪುತ್ರಿ ಮುಕ್ತಾ ದಾಭೋಲ್ಕರ್ ಸೇರಿ ಇತರರು ತಮ್ಮ ತಂದೆಯ ಹತ್ಯೆಯ ತನಿಖೆಯ ಮೇಲ್ವಿಚಾರಣೆಯನ್ನು ನಿಲ್ಲಿಸಲು ನಿರ್ಧರಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ತಳ್ಳಿಹಾಕುವಂತೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠ, ಹೈಕೋರ್ಟ್‌ ತನಿಖೆಯ ಮೇಲೆ ನಿಗಾ ಇಡಲು ಉದ್ದೇಶಿಸಿಲ್ಲ. ಬಾಂಬೆ ಹೈಕೋರ್ಟ್ ಸಾಕಷ್ಟು ನಿಗಾ ವಹಿಸಿದೆ.  ಹೆಚ್ಚಿನ ಮೇಲ್ವಿಚಾರಣೆಯನ್ನು ನಿರಾಕರಿಸಿರುವುದು ನ್ಯಾಯೋಚಿತ ಆದೇಶವಾಗಿದೆ. ಈ ವಿಷಯದಲ್ಲಿ ಕಕ್ಷಿದಾರರು ಬಯಸಿದಂತೆ ಮೇಲ್ವಿಚಾರಣೆಯನ್ನು ಹೊಂದಲು ಸಾಧ್ಯವಿಲ್ಲ. ನಾವು ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಒಲವು ತೋರುವುದಿಲ್ಲ ಎಂದು ಹೇಳಿದೆ.

ದಾಭೋಲ್ಕರ್, ಗೋವಿಂದ್ ಪನ್ಸಾರೆ, ಎಂಎಂ ಕಲಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯಲ್ಲಿ ಸಾಮ್ಯತೆಯ ಬಗ್ಗೆ ಸಾಕ್ಷ್ಯಾಧಾರಗಳಿವೆ ಎಂದು ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಆನಂದ್ ಗ್ರೋವರ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ದೊಡ್ಡ ಪಿತೂರಿತ ಆಯಾಮವನ್ನು ಗಮನಿಸಿ ಸಿಬಿಐ ಸರಿಯಾಗಿ ತನಿಖೆ ಮಾಡದಿದ್ದರೆ, ಕೃತ್ಯದ ಹಿಂದಿರುವವರು ಶಿಕ್ಷಯಿಂದ ಪಾರಾಗುವ ಸಾಧ್ಯತೆ ಇದೆ ಎಂದು ಕೋರ್ಟ್‌ನಲ್ಲಿ ಹೇಳಿದ್ದಾರೆ.

ಸಿಬಿಐ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಐಶ್ವರ್ಯಾ ಭಾಟಿ, ವಿಚಾರಣೆ ಈಗಾಗಲೇ ಮುಂದುವರಿದ ಹಂತದಲ್ಲಿದೆ ಮತ್ತು ಪ್ರಕರಣದ ಸಾಕ್ಷಿಗಳನ್ನು ವಿಚಾರಣಾ ನ್ಯಾಯಾಲಯವು ಪರಿಶೀಲಿಸಿದೆ ಎಂದು ಕೋರ್ಟ್‌ಗೆ ಹೇಳಿದ್ದಾರೆ.

ಅರ್ಜಿದಾರರ ಕಡೆಗೆ ತಿರುಗಿದ ನ್ಯಾಯಮೂರ್ತಿಗಳು, ಸಿಬಿಐ ದೇಶದಲ್ಲಿ ನಮ್ಮಲ್ಲಿರುವ ಅತ್ಯುತ್ತಮ ತನಿಖಾ ಸಂಸ್ಥೆಯಾಗಿದೆ.  ವಿಚಾರಣೆ ಆರಂಭವಾಗಿದ್ದು, 23 ಸಾಕ್ಷಿಗಳಲ್ಲಿ 18 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆಯನ್ನು ಅರ್ಜಿದಾರರು ಸಿಬಿಐಗೆ ನೀಡಬಹುದು ಎಂದು ಕೋರ್ಟ್‌ ಹೇಳಿದ್ದು, ತನಿಖೆಯ ಕುರಿತು ಯಾವುದೇ ಹೆಚ್ಚಿನ ಆದೇಶಗಳನ್ನು ನೀಡಲು ನಿರಾಕರಿಸಿದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ನಾಲ್ಕು ಕೊಲೆಗಳ ಹಿಂದೆ ದೊಡ್ಡ ಪಿತೂರಿ ಇದೆ ಎಂಬ ಬಗ್ಗೆ ದಾಭೋಲ್ಕರ್ ಅವರ ಮಕ್ಕಳ ಮನವಿಯ ನಂತರ ಈ ಕುರಿತು ಪರಿಶೀಲಿಸುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ಹೇಳಿತ್ತು.

2013ರಲ್ಲಿ ಪುಣೆಯಲ್ಲಿ ಮೂಢನಂಬಿಕೆ ವಿರೋಧಿ ಹೋರಾಟಗಾರ, ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಇದಾದ ಎರಡು ವರ್ಷಗಳಲ್ಲಿ ಹೋರಾಟಗಾರ ಗೋವಿಂದ ಪನ್ಸಾರೆ ಅವರನ್ನು 2015ರಲ್ಲಿ ಹತ್ಯೆ ಮಾಡಲಾಗಿದೆ. ಅದೇ ವರ್ಷ ಕರ್ನಾಟಕದಲ್ಲಿ ಸಾಹಿತಿ ಎಂಎಂ ಕಲಬುರ್ಗಿ ಅವರನ್ನು ಹತ್ಯೆ ಮಾಡಲಾಯಿತು. 2017ರಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಬೆಂಗಳೂರಿನ ತಮ್ಮ ಮನೆಯ ಹೊರಗೆ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಎಸ್‌ಐಟಿ ನಡೆಸಿದ ತನಿಖೆಯಲ್ಲಿ ಒಬ್ಬ ಆರೋಪಿ ಅಮೋಲ್ ಕಾಳೆಯಿಂದ ಡೈರಿಯನ್ನು ವಶಪಡಿಸಿಕೊಳ್ಳಲಾಗಿದೆ. ಆತನ ಹಿಟ್‌ ಲಿಸ್ಟ್‌ನಲ್ಲಿ 34 ಮಂದಿ ಇದ್ದರು ಎನ್ನುವುದು ತಿಳಿದು ಬಂದಿತ್ತು. ನಾಲ್ಕು ಕೊಲೆ ನಡೆಸಿರುವ ಆರೋಪಿಗಳು ಸನಾತನ ಸಂಸ್ಥೆ ಜೊತೆ ನಂಟಿರುವುದು ತನಿಖೆಯ ವೇಳೆ ಬಯಲಾಗಿತ್ತು.

ಇದನ್ನು ಓದಿ: ರೇಪಿಸ್ಟ್‌ಗಳಿಗೆ ಮತ್ತೆ ಜೈಲು: ಸುಪ್ರೀಂಕೋರ್ಟ್‌ ತೀರ್ಪಿನ ಬಗ್ಗೆ ಬಿಲ್ಕಿಸ್‌ ಬಾನು ಪ್ರತಿಕ್ರಿಯೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...