Homeಮುಖಪುಟಸುದರ್ಶನ್ ಟಿವಿಯ ’ಯುಪಿಎಸ್ಸಿ ಜಿಹಾದ್’ ಕಾರ್ಯಕ್ರಮ ಪ್ರಸಾರಕ್ಕೆ ತಡೆ ನೀಡಿದ ಸುಪ್ರೀಂ

ಸುದರ್ಶನ್ ಟಿವಿಯ ’ಯುಪಿಎಸ್ಸಿ ಜಿಹಾದ್’ ಕಾರ್ಯಕ್ರಮ ಪ್ರಸಾರಕ್ಕೆ ತಡೆ ನೀಡಿದ ಸುಪ್ರೀಂ

ಆಂಕರ್‌ನ ಸಂಕಟವೇನೆಂದರೆ, ಒಂದು ನಿರ್ದಿಷ್ಟ ಗುಂಪು ನಾಗರಿಕ ಸೇವೆಗಳಿಗೆ ಪ್ರವೇಶ ಪಡೆಯುತ್ತಿದೆ ಎಂಬುವುದಾಗಿದೆ ಎಂದು ನ್ಯಾಯಮೂರ್ತಿ ಹೇಳಿದ್ದಾರೆ

- Advertisement -
- Advertisement -

ಬಲಪಂಥೀಯ ಮಾಧ್ಯಮವಾದ ಸುದರ್ಶನ್ ಟಿವಿಯಲ್ಲಿ ಪ್ರಸಾರಗೊಳ್ಳಲಿದ್ದ “ಯುಪಿಎಸ್ಸಿ ಜಿಹಾದ್” ಕಾರ್ಯಕ್ರಮದ ಪ್ರಸಾರವನ್ನು ಸುಪ್ರೀಂ ಕೋರ್ಟ್ ತಡೆದಿದ್ದು, ಇದು ಸಮುದಾಯವನ್ನು ಕೆಣಕುವ ಪ್ರಯತ್ನವೆಂದು ಆಕ್ರೋಶ ವ್ಯಕ್ತಪಡಿಸಿ, ಕಾರ್ಯಕ್ರಮವನ್ನು “ರೋಗಗ್ರಸ್ಥ” ಎಂದು ಕರೆದಿದೆ.

ಸುಪ್ರೀಂ ಕೋರ್ಟ್, “ಒಂದು ಸಮುದಾಯವನ್ನು ಗುರಿಯಾಗಿಸಲು ಮತ್ತು ನಿರ್ದಿಷ್ಟ ರೀತಿಯಲ್ಲಿ ಬ್ರಾಂಡ್ ಮಾಡಲು ಸಾಧ್ಯವಿಲ್ಲ” ಎಂದು ಸುದರ್ಶನ್ ಟಿವಿ‌ಗೆ ಹೇಳಿದೆ.

ಸಮುದಾಯವನ್ನು ಗುರಿಯಾಗಿಸಲು, ಪ್ರತಿಷ್ಠೆಯನ್ನು ಹಾಳುಮಾಡಲು, ವ್ಯಕ್ತಿತ್ವಕ್ಕೆ ಮಸಿಬಳಿಯುವಲ್ಲಿ ಎಲೆಕ್ಟ್ರಾನಿಕ್ ಮಾಧ್ಯಮದ ಪಾಲು ದೊಡ್ಡದಾಗಿದೆ ಎಂದು, ಪ್ರಕರಣದ ವಾದಗಳ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನೂಓದಿ: UPSC ಪಾಸಾದ ಜಾಮಿಯಾದ ಮುಸ್ಲಿಂ ವಿದ್ಯಾರ್ಥಿಗಳ ಅವಹೇಳನ: ಸುದರ್ಶನ್ ಚಾನೆಲ್ ನಿರೂಪಕನ ಮೇಲೆ ದೂರು ದಾಖಲು

ವಿಚಾರಣೆಯ ಸಂಧರ್ಭ ನ್ಯಾಯಾಧೀಶರೊಬ್ಬರು “ಎಲೆಕ್ಟ್ರಾನಿಕ್ ಮಾಧ್ಯಮದ ಸಮಸ್ಯೆ ಟಿಆರ್‌ಪಿಗಳದ್ದೇ ಆಗಿದೆ, ಇದು ಹೆಚ್ಚು ಹೆಚ್ಚು ಉದ್ರೇಕಗೊಳಿಸಿ ಜನರ ಪ್ರತಿಷ್ಠೆಯನ್ನು ಹಾಳು ಮಾಡುತ್ತದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಮೂರು ನ್ಯಾಯಾಧೀಶರ ಪೀಠವು ಐದು ಗಣ್ಯ ನಾಗರಿಕರ ಸಮಿತಿಯು ಎಲೆಕ್ಟ್ರಾನಿಕ್ ಮಾಧ್ಯಮಕ್ಕೆ ಮಾನದಂಡಗಳನ್ನು ತರಲು ಕರೆ ನೀಡಿತು. ಇದಕ್ಕೆ ಪ್ರತಿಕ್ರಿಯಿಸಿದ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಈಗಾಗಲೇ ನಿಯಮಗಳು ಜಾರಿಯಲ್ಲಿವೆ ಎಂದು ಹೇಳಿತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, “ನಿಜವಾಗಿಯೂ ಇದೆಯೆ? ಎಲ್ಲವೂ ಉತ್ಕೃಷ್ಟವಾಗಿ ನಡೆಯುತ್ತಿದ್ದರೆ ನಾವು ಟಿವಿಯಲ್ಲಿ ಪ್ರತಿದಿನ ನೋಡುವುದನ್ನು ನೋಡಬೇಕಾಗಿರಲಿಲ್ಲ” ಎಂದು ಚಾಟಿ ಬೀಸಿದ್ದಾರೆ.

ಸುದರ್ಶನ್ ಟಿವಿಯ ಕಾರ್ಯಕ್ರಮವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ, ಆಂಕರ್‌ನ ಸಂಕಟವೇನೆಂದರೆ, ಒಂದು ನಿರ್ದಿಷ್ಟ ಗುಂಪು ನಾಗರಿಕ ಸೇವೆಗಳಿಗೆ ಪ್ರವೇಶ ಪಡೆಯುತ್ತಿದೆ ಎಂಬುವುದಾಗಿದೆ ಎಂದು ಹೇಳಿದರು.

“ಇದು ಎಷ್ಟು ಕಪಟತನದಿಂದ ಕೂಡಿದೆ? ಇಂತಹ ಕಪಟ ಆರೋಪಗಳು ಯುಪಿಎಸ್ಸಿ ಪರೀಕ್ಷೆಗಳ ಬಗ್ಗೆ ಪ್ರಶ್ನಾರ್ಥಕ ಚಿಹ್ನೆಯನ್ನು ಮೂಡಿಸುತ್ತದೆ. ಇವುಗಳೆಲ್ಲವೂ ವಾಸ್ತವಿಕ ಆಧಾರವಿಲ್ಲದೆ ಆರೋಪಗಳು, ಇದನ್ನು ಹೇಗೆ ಅನುಮತಿಸಬಹುದು? ಮುಕ್ತ ಸಮಾಜದಲ್ಲಿ ಇಂತಹ ಕಾರ್ಯಕ್ರಮಗಳನ್ನು ಅನುಮತಿಸಬಹುದೇ” ಎಂದು ನ್ಯಾಯಾಮೂರ್ತಿ ಹೇಳಿದರು.

ಇದನ್ನೂ ಓದಿ: ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ಸುದರ್ಶನ್ ಟಿವಿ ವಕೀಲ ಶ್ಯಾಮ್ ದಿವಾನ್ ಅವರನ್ನು ಉದ್ದೇಶಿಸಿ “ನಿಮ್ಮ ಕಕ್ಷಿದಾರ ರಾಷ್ಟ್ರಕ್ಕೆ ಅಪಚಾರ ಮಾಡುತ್ತಿದ್ದಾರೆ. ವೈವಿಧ್ಯಮಯ ಸಂಸ್ಕೃತಿಯ ಸ್ಥಳವಾದ ಭಾರತವನ್ನು ಸ್ವೀಕರಿಸುತ್ತಿಲ್ಲ. ನಿಮ್ಮ ಕಕ್ಷಿದಾರ ತನ್ನ ಸ್ವಾತಂತ್ರ್ಯವನ್ನು ಎಚ್ಚರಿಕೆಯಿಂದ ಚಲಾಯಿಸಬೇಕಾಗಿದೆ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

ಸುದರ್ಶನ ಟಿವಿಯ ಸುರೇಶ್ ಚಾವಂಕೆ ಆಗಸ್ಟ್ 25 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಆರೆಸ್ಸೆಸ್‌ಗೆ ಟ್ಯಾಗ್ ಮಾಡಿ ವಿವಾದಾತ್ಮಕ ಪ್ರೋಮೋವನ್ನು ಟ್ವೀಟ್ ಮಾಡಿದ್ದರು. ಅದರಲ್ಲಿ ಭಾರತೀಯ ಅಧಿಕಾರಶಾಹಿಯಲ್ಲಿ ಮುಸ್ಲಿಮರ ನುಸುಳುಕೋರತನ ಎಂದು ಕರೆದು, ಮುಸ್ಲಿಮರು ಪ್ರತಿಷ್ಠಿತ ನಾಗರಿಕ ಸೇವೆಗಳ ಪರೀಕ್ಷೆಯನ್ನು ಭಾರಿ ಸಂಖ್ಯೆಯಲ್ಲಿ ಹೇಗೆ ಉತ್ತೀರ್ಣರಾಗುತ್ತಿದ್ದರೆ ಎಂದು ಪ್ರಶ್ನಿಸಿದ್ದಾರೆ. ಅವರು ಜಾಮಿಯಾದ ರೆಸಿಡೆನ್ಶಿಯಲ್ ಕೋಚಿಂಗ್ ಅಕಾಡೆಮಿಯ ವಿದ್ಯಾರ್ಥಿಗಳನ್ನು “ಜಿಹಾದಿಸ್ ಆಫ್ ಜಾಮಿಯಾ” ಎಂದು ಉಲ್ಲೇಖಿಸಿ, ‘ಯುಪಿಎಸ್‌ಸಿ ಜಿಹಾದ್’ ಎಂಬ ಹ್ಯಾಶ್‌ಟ್ಯಾಗ್ ಅನ್ನು ಕೂಡಾ ಬಳಸಿದ್ದರು.

ಇದನ್ನು ವಿರೋಧಿಸಿ ಮಾಜಿ ನಾಗರೀಕ ಸೇವಾ ಅಧಿಕಾರಿಗಳ ಗುಂಪಾದ “ಕಾನ್ಸ್ಟ್ಯೂಷನಲ್ ಕಂಡಕ್ಟ್” ಕಾರ್ಯಕ್ರಮವು ಧ್ವೇಷ ಕಾರುವ ವ್ಯಾಪ್ತಿಯಲ್ಲಿದ್ದು ಆದ್ದರಿಂದ ಹಸ್ತಕ್ಷೇಪ ನಡೆಸುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...