Homeಮುಖಪುಟಸುದರ್ಶನ್ ಟಿವಿಯ ’ಯುಪಿಎಸ್ಸಿ ಜಿಹಾದ್’ ಕಾರ್ಯಕ್ರಮ ಪ್ರಸಾರಕ್ಕೆ ತಡೆ ನೀಡಿದ ಸುಪ್ರೀಂ

ಸುದರ್ಶನ್ ಟಿವಿಯ ’ಯುಪಿಎಸ್ಸಿ ಜಿಹಾದ್’ ಕಾರ್ಯಕ್ರಮ ಪ್ರಸಾರಕ್ಕೆ ತಡೆ ನೀಡಿದ ಸುಪ್ರೀಂ

ಆಂಕರ್‌ನ ಸಂಕಟವೇನೆಂದರೆ, ಒಂದು ನಿರ್ದಿಷ್ಟ ಗುಂಪು ನಾಗರಿಕ ಸೇವೆಗಳಿಗೆ ಪ್ರವೇಶ ಪಡೆಯುತ್ತಿದೆ ಎಂಬುವುದಾಗಿದೆ ಎಂದು ನ್ಯಾಯಮೂರ್ತಿ ಹೇಳಿದ್ದಾರೆ

- Advertisement -
- Advertisement -

ಬಲಪಂಥೀಯ ಮಾಧ್ಯಮವಾದ ಸುದರ್ಶನ್ ಟಿವಿಯಲ್ಲಿ ಪ್ರಸಾರಗೊಳ್ಳಲಿದ್ದ “ಯುಪಿಎಸ್ಸಿ ಜಿಹಾದ್” ಕಾರ್ಯಕ್ರಮದ ಪ್ರಸಾರವನ್ನು ಸುಪ್ರೀಂ ಕೋರ್ಟ್ ತಡೆದಿದ್ದು, ಇದು ಸಮುದಾಯವನ್ನು ಕೆಣಕುವ ಪ್ರಯತ್ನವೆಂದು ಆಕ್ರೋಶ ವ್ಯಕ್ತಪಡಿಸಿ, ಕಾರ್ಯಕ್ರಮವನ್ನು “ರೋಗಗ್ರಸ್ಥ” ಎಂದು ಕರೆದಿದೆ.

ಸುಪ್ರೀಂ ಕೋರ್ಟ್, “ಒಂದು ಸಮುದಾಯವನ್ನು ಗುರಿಯಾಗಿಸಲು ಮತ್ತು ನಿರ್ದಿಷ್ಟ ರೀತಿಯಲ್ಲಿ ಬ್ರಾಂಡ್ ಮಾಡಲು ಸಾಧ್ಯವಿಲ್ಲ” ಎಂದು ಸುದರ್ಶನ್ ಟಿವಿ‌ಗೆ ಹೇಳಿದೆ.

ಸಮುದಾಯವನ್ನು ಗುರಿಯಾಗಿಸಲು, ಪ್ರತಿಷ್ಠೆಯನ್ನು ಹಾಳುಮಾಡಲು, ವ್ಯಕ್ತಿತ್ವಕ್ಕೆ ಮಸಿಬಳಿಯುವಲ್ಲಿ ಎಲೆಕ್ಟ್ರಾನಿಕ್ ಮಾಧ್ಯಮದ ಪಾಲು ದೊಡ್ಡದಾಗಿದೆ ಎಂದು, ಪ್ರಕರಣದ ವಾದಗಳ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನೂಓದಿ: UPSC ಪಾಸಾದ ಜಾಮಿಯಾದ ಮುಸ್ಲಿಂ ವಿದ್ಯಾರ್ಥಿಗಳ ಅವಹೇಳನ: ಸುದರ್ಶನ್ ಚಾನೆಲ್ ನಿರೂಪಕನ ಮೇಲೆ ದೂರು ದಾಖಲು

ವಿಚಾರಣೆಯ ಸಂಧರ್ಭ ನ್ಯಾಯಾಧೀಶರೊಬ್ಬರು “ಎಲೆಕ್ಟ್ರಾನಿಕ್ ಮಾಧ್ಯಮದ ಸಮಸ್ಯೆ ಟಿಆರ್‌ಪಿಗಳದ್ದೇ ಆಗಿದೆ, ಇದು ಹೆಚ್ಚು ಹೆಚ್ಚು ಉದ್ರೇಕಗೊಳಿಸಿ ಜನರ ಪ್ರತಿಷ್ಠೆಯನ್ನು ಹಾಳು ಮಾಡುತ್ತದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಮೂರು ನ್ಯಾಯಾಧೀಶರ ಪೀಠವು ಐದು ಗಣ್ಯ ನಾಗರಿಕರ ಸಮಿತಿಯು ಎಲೆಕ್ಟ್ರಾನಿಕ್ ಮಾಧ್ಯಮಕ್ಕೆ ಮಾನದಂಡಗಳನ್ನು ತರಲು ಕರೆ ನೀಡಿತು. ಇದಕ್ಕೆ ಪ್ರತಿಕ್ರಿಯಿಸಿದ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಈಗಾಗಲೇ ನಿಯಮಗಳು ಜಾರಿಯಲ್ಲಿವೆ ಎಂದು ಹೇಳಿತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, “ನಿಜವಾಗಿಯೂ ಇದೆಯೆ? ಎಲ್ಲವೂ ಉತ್ಕೃಷ್ಟವಾಗಿ ನಡೆಯುತ್ತಿದ್ದರೆ ನಾವು ಟಿವಿಯಲ್ಲಿ ಪ್ರತಿದಿನ ನೋಡುವುದನ್ನು ನೋಡಬೇಕಾಗಿರಲಿಲ್ಲ” ಎಂದು ಚಾಟಿ ಬೀಸಿದ್ದಾರೆ.

ಸುದರ್ಶನ್ ಟಿವಿಯ ಕಾರ್ಯಕ್ರಮವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ, ಆಂಕರ್‌ನ ಸಂಕಟವೇನೆಂದರೆ, ಒಂದು ನಿರ್ದಿಷ್ಟ ಗುಂಪು ನಾಗರಿಕ ಸೇವೆಗಳಿಗೆ ಪ್ರವೇಶ ಪಡೆಯುತ್ತಿದೆ ಎಂಬುವುದಾಗಿದೆ ಎಂದು ಹೇಳಿದರು.

“ಇದು ಎಷ್ಟು ಕಪಟತನದಿಂದ ಕೂಡಿದೆ? ಇಂತಹ ಕಪಟ ಆರೋಪಗಳು ಯುಪಿಎಸ್ಸಿ ಪರೀಕ್ಷೆಗಳ ಬಗ್ಗೆ ಪ್ರಶ್ನಾರ್ಥಕ ಚಿಹ್ನೆಯನ್ನು ಮೂಡಿಸುತ್ತದೆ. ಇವುಗಳೆಲ್ಲವೂ ವಾಸ್ತವಿಕ ಆಧಾರವಿಲ್ಲದೆ ಆರೋಪಗಳು, ಇದನ್ನು ಹೇಗೆ ಅನುಮತಿಸಬಹುದು? ಮುಕ್ತ ಸಮಾಜದಲ್ಲಿ ಇಂತಹ ಕಾರ್ಯಕ್ರಮಗಳನ್ನು ಅನುಮತಿಸಬಹುದೇ” ಎಂದು ನ್ಯಾಯಾಮೂರ್ತಿ ಹೇಳಿದರು.

ಇದನ್ನೂ ಓದಿ: ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ಸುದರ್ಶನ್ ಟಿವಿ ವಕೀಲ ಶ್ಯಾಮ್ ದಿವಾನ್ ಅವರನ್ನು ಉದ್ದೇಶಿಸಿ “ನಿಮ್ಮ ಕಕ್ಷಿದಾರ ರಾಷ್ಟ್ರಕ್ಕೆ ಅಪಚಾರ ಮಾಡುತ್ತಿದ್ದಾರೆ. ವೈವಿಧ್ಯಮಯ ಸಂಸ್ಕೃತಿಯ ಸ್ಥಳವಾದ ಭಾರತವನ್ನು ಸ್ವೀಕರಿಸುತ್ತಿಲ್ಲ. ನಿಮ್ಮ ಕಕ್ಷಿದಾರ ತನ್ನ ಸ್ವಾತಂತ್ರ್ಯವನ್ನು ಎಚ್ಚರಿಕೆಯಿಂದ ಚಲಾಯಿಸಬೇಕಾಗಿದೆ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

ಸುದರ್ಶನ ಟಿವಿಯ ಸುರೇಶ್ ಚಾವಂಕೆ ಆಗಸ್ಟ್ 25 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಆರೆಸ್ಸೆಸ್‌ಗೆ ಟ್ಯಾಗ್ ಮಾಡಿ ವಿವಾದಾತ್ಮಕ ಪ್ರೋಮೋವನ್ನು ಟ್ವೀಟ್ ಮಾಡಿದ್ದರು. ಅದರಲ್ಲಿ ಭಾರತೀಯ ಅಧಿಕಾರಶಾಹಿಯಲ್ಲಿ ಮುಸ್ಲಿಮರ ನುಸುಳುಕೋರತನ ಎಂದು ಕರೆದು, ಮುಸ್ಲಿಮರು ಪ್ರತಿಷ್ಠಿತ ನಾಗರಿಕ ಸೇವೆಗಳ ಪರೀಕ್ಷೆಯನ್ನು ಭಾರಿ ಸಂಖ್ಯೆಯಲ್ಲಿ ಹೇಗೆ ಉತ್ತೀರ್ಣರಾಗುತ್ತಿದ್ದರೆ ಎಂದು ಪ್ರಶ್ನಿಸಿದ್ದಾರೆ. ಅವರು ಜಾಮಿಯಾದ ರೆಸಿಡೆನ್ಶಿಯಲ್ ಕೋಚಿಂಗ್ ಅಕಾಡೆಮಿಯ ವಿದ್ಯಾರ್ಥಿಗಳನ್ನು “ಜಿಹಾದಿಸ್ ಆಫ್ ಜಾಮಿಯಾ” ಎಂದು ಉಲ್ಲೇಖಿಸಿ, ‘ಯುಪಿಎಸ್‌ಸಿ ಜಿಹಾದ್’ ಎಂಬ ಹ್ಯಾಶ್‌ಟ್ಯಾಗ್ ಅನ್ನು ಕೂಡಾ ಬಳಸಿದ್ದರು.

ಇದನ್ನು ವಿರೋಧಿಸಿ ಮಾಜಿ ನಾಗರೀಕ ಸೇವಾ ಅಧಿಕಾರಿಗಳ ಗುಂಪಾದ “ಕಾನ್ಸ್ಟ್ಯೂಷನಲ್ ಕಂಡಕ್ಟ್” ಕಾರ್ಯಕ್ರಮವು ಧ್ವೇಷ ಕಾರುವ ವ್ಯಾಪ್ತಿಯಲ್ಲಿದ್ದು ಆದ್ದರಿಂದ ಹಸ್ತಕ್ಷೇಪ ನಡೆಸುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...