Homeಕರ್ನಾಟಕಹೊಸ ರೀತಿಯ ಅನೈತಿಕ ಪಕ್ಷಾಂತರಕ್ಕೆ ಮದ್ದು ನೀಡಲು ವಿಫಲವಾದ ಸುಪ್ರೀಂ.. : ಡಾ.ವಾಸು ಎಚ್.ವಿ

ಹೊಸ ರೀತಿಯ ಅನೈತಿಕ ಪಕ್ಷಾಂತರಕ್ಕೆ ಮದ್ದು ನೀಡಲು ವಿಫಲವಾದ ಸುಪ್ರೀಂ.. : ಡಾ.ವಾಸು ಎಚ್.ವಿ

- Advertisement -
- Advertisement -

ಬಹುನಿರೀಕ್ಷಿತವಾಗಿದ್ದ ಅನರ್ಹ ಶಾಸಕರ ಕುರಿತಾದ ಮೊಕದ್ದಮೆಯಲ್ಲಿ ಇಂದು ಸುಪ್ರೀಂಕೋರ್ಟು ನಿರೀಕ್ಷಿತ ತೀರ್ಪನ್ನು ನೀಡಿದೆ. ಅವರು ಅನರ್ಹರೇ, ಆದರೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಸುಪ್ರೀಂಕೋರ್ಟಿನ ತೀರ್ಪಿನ ಹಿಂದಿರಬಹುದಾದ ಸದುದ್ದೇಶವೇನಿರಬಹುದು? ಅನರ್ಹರು ಎನ್ನುವ ಟ್ಯಾಗ್ ಕೊಡೋಣ. ಆದರೆ, ಜನತಾ ನ್ಯಾಯಾಲಯಕ್ಕೆ ಹೋಗಿ ಸ್ಪರ್ಧೆ ಮಾಡಲಿ. ಜನರು ತೀರ್ಮಾನ ಮಾಡಲಿ ಎಂಬ ಸದುದ್ದೇಶವನ್ನು ಆರೋಪಿಸಬಹುದು.

ನಮ್ಮ ಸಂವಿಧಾನದ ಪ್ರಕಾರ ತೀವ್ರ ಸ್ವರೂಪದ ಕ್ರಿಮಿನಲ್ ಪ್ರಕರಣಗಳಲ್ಲಿ ಶಿಕ್ಷೆಯಾಗಿರುವವರು ಸ್ಪರ್ಧೆ ಮಾಡುವಂತಿಲ್ಲ. ಆದರೆ, ಅಂತಹ ವ್ಯಕ್ತಿಗಳು ಸ್ಪರ್ಧೆ ಮಾಡಿದರೆ ಜನರು ಅವರನ್ನು ಚುನಾಯಿಸುವುದಿಲ್ಲವೇ? ಚುನಾಯಿಸುವ ಸಾಧ್ಯತೆ ಹೆಚ್ಚೇ ಇರಬಹುದು. ಅಲ್ಲಿ ಒಂದು ನೈತಿಕ ನಿರ್ಬಂಧವನ್ನು ಸಂವಿಧಾನವು ಒಡ್ಡಿದೆ. ಈ ಹಿನ್ನೆಲೆಯಲ್ಲಿ ಒಂದು ವಿಶ್ಲೇಷಣೆ ಮಾಡುವ ಅಗತ್ಯ ಇದೆ.

ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗೆ ತಂದಾಗ ಎಲ್ಲಾ ಪಕ್ಷಗಳ ನಡುವೆ ಸಹಮತ ಇತ್ತು. ಹಾಗೆ ನೋಡಿದರೆ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಬಹುಮತವಿದ್ದು, ಯಾವ ಪಕ್ಷಾಂತರವೂ ಅಲುಗಾಡಿಸಲು ಸಾಧ್ಯವಿರದ ಸರ್ಕಾರವು (ರಾಜೀವ್ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ) ಪಕ್ಷಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ನಂತರದ ದಿನಗಳಲ್ಲಿ ಸುಪ್ರೀಂಕೋರ್ಟು ಸಹಾ ಅದಕ್ಕೆ ತನ್ನದೇ ರೀತಿಯಲ್ಲಿ ಮಾನ್ಯತೆಯನ್ನು ನೀಡಿತ್ತು.

ಮೂರನೇ ಒಂದು ಭಾಗದಷ್ಟು ಶಾಸಕರು ಒಟ್ಟಿಗೆ ಹೋದರೆ ಅದು ಪಕ್ಷಾಂತರವಾಗದು ಎಂಬುದು ನಂತರ ಮೂರನೇ ಎರಡು ಭಾಗ ಆದದ್ದಕ್ಕೂ ಕಾರಣವಿತ್ತು. ‘ಪಕ್ಷಾಂತರವನ್ನು ನಿಷೇಧಿಸಬೇಕು; ಏಕೆಂದರೆ ಇದು ಅನೈತಿಕವಾದುದು; ಗೆದ್ದ ಜನಪ್ರತಿನಿಧಿಗಳು ತಮ್ಮ ಸ್ವಂತ ಹಿತಾಸಕ್ತಿಗಾಗಿ ಮಾಡುತ್ತಿರುವ ಪಕ್ಷಾಂತರವಿದು’ ಎಂಬ ಕುರಿತು ಯಾರಿಗೂ ಅಸಮ್ಮತಿಯಿರಲಿಲ್ಲ. ಹೀಗಾಗಿ ಪಕ್ಷಾಂತರ ನಿಷೇಧ ಕಾನೂನನ್ನು ಗಟ್ಟಿ ಮಾಡುವ ಕೆಲಸ ನಡೆಯಿತು.

ಅದನ್ನೂ ಉಲ್ಲಂಘಿಸಲು ಕೆಲವು ದಾರಿಗಳನ್ನು ಅನೈತಿಕ ರಾಜಕಾರಣದಲ್ಲಿ ತೊಡಗಿರುವ ರಾಜಕೀಯ ಪಕ್ಷಗಳು ಕಂಡುಕೊಂಡವು. ಅದರಲ್ಲಿ ಒಂದು – ಸ್ಪೀಕರ್ ಅವರು ಪಕ್ಷಾಂತರಿಗಳ ಪರ ಇದ್ದರೆ, ವಿಳಂಬ ನೀತಿಯನ್ನು ಅನುಸರಿಸಿ ಶಾಸನಸಭೆಯ ಅವಧಿ ಮುಗಿಯುವತನಕ ಎಳೆದು ಅನರ್ಹಗೊಳಿಸಲು ಕೋರಿದ ದೂರೇ ಅಪ್ರಸ್ತುತವಾಗುವಂತೆ ಮಾಡುವುದು. ಎರಡು- ಆಡಳಿತ ಪಕ್ಷಕ್ಕೆ ಪಕ್ಷಾಂತರ ಮಾಡಿಸಲು ಶಾಸನಸಭೆಯ ಸದಸ್ಯರ ಕೈಯ್ಯಲ್ಲಿ ರಾಜೀನಾಮೆ ಕೊಡಿಸುವುದು. ನಂತರ ಅವರಿಗೆ ಅಧಿಕಾರ ನೀಡಿ, ಆಡಳಿತದ ಬಲದೊಂದಿಗೆ ಆಡಳಿತ ಪಕ್ಷದ ಟಿಕೆಟ್ ಮೇಲೆ ಸ್ಪರ್ಧಿಸಿ ಗೆಲ್ಲಿಸಿಕೊಂಡು ಬರುವುದು. ಇದನ್ನು ಬಿಜೆಪಿಯೇ ಶುರು ಮಾಡಿದ್ದರಿಂದ ಮತ್ತು ಹೆಚ್ಚು ಬಳಸಿದ್ದರಿಂದ ‘ಆಪರೇಷನ್ ಕಮಲ’ ಎಂಬ ಹೆಸರಿನಲ್ಲಿ ಚಾಲ್ತಿಯಲ್ಲಿದೆ.

ಅಂತಹ ಆಪರೇಷನ್ ಕಮಲಕ್ಕೆ ಮದ್ದು ಕಂಡುಕೊಳ್ಳುವುದು ಬಹಳ ಅಗತ್ಯವಿತ್ತು. ಆದರೆ, ಸ್ವತಃ ಬಿಜೆಪಿ (ಅಥವಾ ಇನ್ನಾವುದೋ ಪಕ್ಷ) ಅಧಿಕಾರದಲ್ಲಿದ್ದಾಗ ಅವರದ್ದೇ ಸ್ಪೀಕರ್ ಇರುವುದರಿಂದ ಅನರ್ಹತೆ ಆಗುತ್ತಿರಲಿಲ್ಲ. ಈ ಸಾರಿ ಕರ್ನಾಕಟದಲ್ಲಿ ಪರಿಸ್ಥಿತಿ ಸ್ವಲ್ಪ ಭಿನ್ನವಾಗಿತ್ತು. ಅಧಿಕಾರದಲ್ಲಿದ್ದ ಸಮ್ಮಿಶ್ರ ಸರ್ಕಾರದ ಶಾಸಕರನ್ನು ಸೆಳೆದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದು ರಾಜ್ಯದಲ್ಲಿ ವಿರೋಧ ಪಕ್ಷದಲ್ಲಿದ್ದ ಪಕ್ಷವಾದ ಬಿಜೆಪಿಯು ಪಕ್ಷಾಂತರ ಮಾಡಿಸಿತ್ತು. ಹೀಗಾಗಿ ಸಮ್ಮಿಶ್ರ ಸರ್ಕಾರದ ಪಕ್ಷಗಳ ಬೆಂಬಲದೊಂದಿಗೆ (ವಾಸ್ತವದಲ್ಲಿ ಸರ್ವಾನುಮತದಿಂದ) ಆಯ್ಕೆಯಾಗಿದ್ದ ಸ್ಪೀಕರ್ ರಮೇಶ್ ಕುಮಾರ್ ಅವರು ತೀರ್ಮಾನ ತೆಗೆದುಕೊಳ್ಳುವ ಸ್ಥಾನದಲ್ಲಿದ್ದರು. ಅವರು ಸದರಿ ಶಾಸಕರನ್ನು ಅನರ್ಹಗೊಳಿಸಿದರು ಮತ್ತು ಷೆಡ್ಯೂಲ್ 10ರ ಪ್ರಕಾರ ವಿಧಾನಸಭೆಯ ಈ ಅವಧಿ ಮುಗಿಯುವವರೆಗೆ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ತೀರ್ಪಿತ್ತಿದ್ದರು. ಒಂದು ರೀತಿಯಲ್ಲಿ ಅದು ಆಪರೇಷನ್ ಕಮಲಕ್ಕೆ ಮದ್ದಾಗಿತ್ತು.

ಅದು ನಂತರ ಸುಪ್ರೀಂಕೋರ್ಟಿನ ಮೆಟ್ಟಿಲೇರಿತ್ತು. ಇವೆಲ್ಲದರಿಂದ ಶಾಸಕರುಗಳು ಗುಂಪಾಗಿ, ಒಂದು ನಿರ್ದಿಷ್ಟ ಯೋಜನೆಯ ಭಾಗವಾಗಿ ವಿರೋಧ ಪಕ್ಷವನ್ನು ಸ್ವಂತ ಹಿತಾಸಕ್ತಿಗಾಗಿ ಅಧಿಕಾರಕ್ಕೆ ತರಲೆಂದೇ (ಅಂದರೆ ಪಕ್ಷಾಂತರ ಮಾಡಲೆಂದೇ) ರಾಜೀನಾಮೆಗೆ ಮುಂದಾಗಿದ್ದಾರೆ ಎಂಬುದು ಸ್ಪಷ್ಟವಿತ್ತು. ಅದಕ್ಕೆ ಯಡಿಯೂರಪ್ಪನವರ ಆಡಿಯೋ ಕಡೆಯ ಸಾಕ್ಷಿಯಾಗಿತ್ತೇ ಹೊರತು, ಬೇಕಾದಷ್ಟು ಸಾಂದರ್ಭಿಕ ಸಾಕ್ಷಿಗಳಿತ್ತು. ಹೀಗಿದ್ದುದರಿಂದ, ಸದರಿ ಶಾಸಕರನ್ನು ಹಾಲಿ ವಿಧಾನಸಭೆಯ ಅವಧಿ ಮುಗಿಯುವವರೆಗೂ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಂಕೋರ್ಟು ಯಾವ ನಿರ್ಬಂಧ ವಿಧಿಸುತ್ತದೆ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿತ್ತು. ಒಂದು ವೇಳೆ ಅದು ಸರಿ ಇಲ್ಲ ಎನ್ನುವುದಾದರೂ ಬೇರೆ ಯಾವ ಮದ್ದು ನೀಡಲಿದೆ ಎಂಬುದು ಪ್ರಜಾತಂತ್ರದ ಉಳಿವಿನ ದೃಷ್ಟಿಯಿಂದ ಮಹತ್ವದ್ದಾಗಿತ್ತು.

ರಾಜೀನಾಮೆ ನೀಡಿ ಬೇರೆ ಪಕ್ಷಕ್ಕೆ ಹೋಗಲು ತುದಿಗಾಲಿನಲ್ಲಿ ನಿಂತಿದ್ದ ಗುಂಪಿಗೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎನ್ನುವುದು ಉಡುಗೊರೆಯೇ ಹೊರತು ಶಿಕ್ಷೆಯಲ್ಲ. ಹೀಗಿರುವಾಗ ಅನರ್ಹತೆಯನ್ನು ಎತ್ತಿ ಹಿಡಿದಿದ್ದೇವೆ ಎನ್ನುವುದಕ್ಕೆ ಯಾವ ಅರ್ಥವೂ ಇದ್ದಂತಿಲ್ಲ.

ಅನೈತಿಕ ಪಕ್ಷಾಂತರವನ್ನು ತಡೆಯಬಲ್ಲ ಯಾವ ಮದ್ದನ್ನು ನೀಡುವಲ್ಲಿಯೂ ಸುಪ್ರೀಂಕೋರ್ಟು ಸಫಲವಾಗಿಲ್ಲ ಎಂಬುದು ವಿಷಾದದ ಸಂಗತಿಯಾಗಿದೆ. ಅನರ್ಹಗೊಂಡ ಬಹುತೇಕ ಶಾಸಕರು ಈಗ ಬಿಜೆಪಿ ಟಿಕೆಟ್ ಮೇಲೆ ಸ್ಪರ್ಧಿಸಲಿದ್ದಾರೆ ಎನ್ನುವುದು ಸುಪ್ರೀಂಕೋರ್ಟು ವಿಫಲವಾದದ್ದಕ್ಕೆ ಸಾಕ್ಷಿಯಾಗಲಿದೆ. ಒಂದು ರೀತಿಯಲ್ಲಿ ಬಿಜೆಪಿಯಿಂದ ಅನರ್ಹರಿಗೆ ಟಿಕೆಟ್ ನೀಡುವುದು ಮತ್ತು ಪಡೆಯುವುದು ಸುಪ್ರೀಂಕೋರ್ಟನ್ನೇ ಅಣಕ ಮಾಡಿದಂತೆಯೂ ಆಗುವ ಸಾಧ್ಯತೆ ಇದೆ. ಯಾವುದಕ್ಕೂ ಉಪಚುನಾವಣೆಯಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...