Homeಕರ್ನಾಟಕಹೊಸ ರೀತಿಯ ಅನೈತಿಕ ಪಕ್ಷಾಂತರಕ್ಕೆ ಮದ್ದು ನೀಡಲು ವಿಫಲವಾದ ಸುಪ್ರೀಂ.. : ಡಾ.ವಾಸು ಎಚ್.ವಿ

ಹೊಸ ರೀತಿಯ ಅನೈತಿಕ ಪಕ್ಷಾಂತರಕ್ಕೆ ಮದ್ದು ನೀಡಲು ವಿಫಲವಾದ ಸುಪ್ರೀಂ.. : ಡಾ.ವಾಸು ಎಚ್.ವಿ

- Advertisement -
- Advertisement -

ಬಹುನಿರೀಕ್ಷಿತವಾಗಿದ್ದ ಅನರ್ಹ ಶಾಸಕರ ಕುರಿತಾದ ಮೊಕದ್ದಮೆಯಲ್ಲಿ ಇಂದು ಸುಪ್ರೀಂಕೋರ್ಟು ನಿರೀಕ್ಷಿತ ತೀರ್ಪನ್ನು ನೀಡಿದೆ. ಅವರು ಅನರ್ಹರೇ, ಆದರೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಸುಪ್ರೀಂಕೋರ್ಟಿನ ತೀರ್ಪಿನ ಹಿಂದಿರಬಹುದಾದ ಸದುದ್ದೇಶವೇನಿರಬಹುದು? ಅನರ್ಹರು ಎನ್ನುವ ಟ್ಯಾಗ್ ಕೊಡೋಣ. ಆದರೆ, ಜನತಾ ನ್ಯಾಯಾಲಯಕ್ಕೆ ಹೋಗಿ ಸ್ಪರ್ಧೆ ಮಾಡಲಿ. ಜನರು ತೀರ್ಮಾನ ಮಾಡಲಿ ಎಂಬ ಸದುದ್ದೇಶವನ್ನು ಆರೋಪಿಸಬಹುದು.

ನಮ್ಮ ಸಂವಿಧಾನದ ಪ್ರಕಾರ ತೀವ್ರ ಸ್ವರೂಪದ ಕ್ರಿಮಿನಲ್ ಪ್ರಕರಣಗಳಲ್ಲಿ ಶಿಕ್ಷೆಯಾಗಿರುವವರು ಸ್ಪರ್ಧೆ ಮಾಡುವಂತಿಲ್ಲ. ಆದರೆ, ಅಂತಹ ವ್ಯಕ್ತಿಗಳು ಸ್ಪರ್ಧೆ ಮಾಡಿದರೆ ಜನರು ಅವರನ್ನು ಚುನಾಯಿಸುವುದಿಲ್ಲವೇ? ಚುನಾಯಿಸುವ ಸಾಧ್ಯತೆ ಹೆಚ್ಚೇ ಇರಬಹುದು. ಅಲ್ಲಿ ಒಂದು ನೈತಿಕ ನಿರ್ಬಂಧವನ್ನು ಸಂವಿಧಾನವು ಒಡ್ಡಿದೆ. ಈ ಹಿನ್ನೆಲೆಯಲ್ಲಿ ಒಂದು ವಿಶ್ಲೇಷಣೆ ಮಾಡುವ ಅಗತ್ಯ ಇದೆ.

ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗೆ ತಂದಾಗ ಎಲ್ಲಾ ಪಕ್ಷಗಳ ನಡುವೆ ಸಹಮತ ಇತ್ತು. ಹಾಗೆ ನೋಡಿದರೆ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಬಹುಮತವಿದ್ದು, ಯಾವ ಪಕ್ಷಾಂತರವೂ ಅಲುಗಾಡಿಸಲು ಸಾಧ್ಯವಿರದ ಸರ್ಕಾರವು (ರಾಜೀವ್ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ) ಪಕ್ಷಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ನಂತರದ ದಿನಗಳಲ್ಲಿ ಸುಪ್ರೀಂಕೋರ್ಟು ಸಹಾ ಅದಕ್ಕೆ ತನ್ನದೇ ರೀತಿಯಲ್ಲಿ ಮಾನ್ಯತೆಯನ್ನು ನೀಡಿತ್ತು.

ಮೂರನೇ ಒಂದು ಭಾಗದಷ್ಟು ಶಾಸಕರು ಒಟ್ಟಿಗೆ ಹೋದರೆ ಅದು ಪಕ್ಷಾಂತರವಾಗದು ಎಂಬುದು ನಂತರ ಮೂರನೇ ಎರಡು ಭಾಗ ಆದದ್ದಕ್ಕೂ ಕಾರಣವಿತ್ತು. ‘ಪಕ್ಷಾಂತರವನ್ನು ನಿಷೇಧಿಸಬೇಕು; ಏಕೆಂದರೆ ಇದು ಅನೈತಿಕವಾದುದು; ಗೆದ್ದ ಜನಪ್ರತಿನಿಧಿಗಳು ತಮ್ಮ ಸ್ವಂತ ಹಿತಾಸಕ್ತಿಗಾಗಿ ಮಾಡುತ್ತಿರುವ ಪಕ್ಷಾಂತರವಿದು’ ಎಂಬ ಕುರಿತು ಯಾರಿಗೂ ಅಸಮ್ಮತಿಯಿರಲಿಲ್ಲ. ಹೀಗಾಗಿ ಪಕ್ಷಾಂತರ ನಿಷೇಧ ಕಾನೂನನ್ನು ಗಟ್ಟಿ ಮಾಡುವ ಕೆಲಸ ನಡೆಯಿತು.

ಅದನ್ನೂ ಉಲ್ಲಂಘಿಸಲು ಕೆಲವು ದಾರಿಗಳನ್ನು ಅನೈತಿಕ ರಾಜಕಾರಣದಲ್ಲಿ ತೊಡಗಿರುವ ರಾಜಕೀಯ ಪಕ್ಷಗಳು ಕಂಡುಕೊಂಡವು. ಅದರಲ್ಲಿ ಒಂದು – ಸ್ಪೀಕರ್ ಅವರು ಪಕ್ಷಾಂತರಿಗಳ ಪರ ಇದ್ದರೆ, ವಿಳಂಬ ನೀತಿಯನ್ನು ಅನುಸರಿಸಿ ಶಾಸನಸಭೆಯ ಅವಧಿ ಮುಗಿಯುವತನಕ ಎಳೆದು ಅನರ್ಹಗೊಳಿಸಲು ಕೋರಿದ ದೂರೇ ಅಪ್ರಸ್ತುತವಾಗುವಂತೆ ಮಾಡುವುದು. ಎರಡು- ಆಡಳಿತ ಪಕ್ಷಕ್ಕೆ ಪಕ್ಷಾಂತರ ಮಾಡಿಸಲು ಶಾಸನಸಭೆಯ ಸದಸ್ಯರ ಕೈಯ್ಯಲ್ಲಿ ರಾಜೀನಾಮೆ ಕೊಡಿಸುವುದು. ನಂತರ ಅವರಿಗೆ ಅಧಿಕಾರ ನೀಡಿ, ಆಡಳಿತದ ಬಲದೊಂದಿಗೆ ಆಡಳಿತ ಪಕ್ಷದ ಟಿಕೆಟ್ ಮೇಲೆ ಸ್ಪರ್ಧಿಸಿ ಗೆಲ್ಲಿಸಿಕೊಂಡು ಬರುವುದು. ಇದನ್ನು ಬಿಜೆಪಿಯೇ ಶುರು ಮಾಡಿದ್ದರಿಂದ ಮತ್ತು ಹೆಚ್ಚು ಬಳಸಿದ್ದರಿಂದ ‘ಆಪರೇಷನ್ ಕಮಲ’ ಎಂಬ ಹೆಸರಿನಲ್ಲಿ ಚಾಲ್ತಿಯಲ್ಲಿದೆ.

ಅಂತಹ ಆಪರೇಷನ್ ಕಮಲಕ್ಕೆ ಮದ್ದು ಕಂಡುಕೊಳ್ಳುವುದು ಬಹಳ ಅಗತ್ಯವಿತ್ತು. ಆದರೆ, ಸ್ವತಃ ಬಿಜೆಪಿ (ಅಥವಾ ಇನ್ನಾವುದೋ ಪಕ್ಷ) ಅಧಿಕಾರದಲ್ಲಿದ್ದಾಗ ಅವರದ್ದೇ ಸ್ಪೀಕರ್ ಇರುವುದರಿಂದ ಅನರ್ಹತೆ ಆಗುತ್ತಿರಲಿಲ್ಲ. ಈ ಸಾರಿ ಕರ್ನಾಕಟದಲ್ಲಿ ಪರಿಸ್ಥಿತಿ ಸ್ವಲ್ಪ ಭಿನ್ನವಾಗಿತ್ತು. ಅಧಿಕಾರದಲ್ಲಿದ್ದ ಸಮ್ಮಿಶ್ರ ಸರ್ಕಾರದ ಶಾಸಕರನ್ನು ಸೆಳೆದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದು ರಾಜ್ಯದಲ್ಲಿ ವಿರೋಧ ಪಕ್ಷದಲ್ಲಿದ್ದ ಪಕ್ಷವಾದ ಬಿಜೆಪಿಯು ಪಕ್ಷಾಂತರ ಮಾಡಿಸಿತ್ತು. ಹೀಗಾಗಿ ಸಮ್ಮಿಶ್ರ ಸರ್ಕಾರದ ಪಕ್ಷಗಳ ಬೆಂಬಲದೊಂದಿಗೆ (ವಾಸ್ತವದಲ್ಲಿ ಸರ್ವಾನುಮತದಿಂದ) ಆಯ್ಕೆಯಾಗಿದ್ದ ಸ್ಪೀಕರ್ ರಮೇಶ್ ಕುಮಾರ್ ಅವರು ತೀರ್ಮಾನ ತೆಗೆದುಕೊಳ್ಳುವ ಸ್ಥಾನದಲ್ಲಿದ್ದರು. ಅವರು ಸದರಿ ಶಾಸಕರನ್ನು ಅನರ್ಹಗೊಳಿಸಿದರು ಮತ್ತು ಷೆಡ್ಯೂಲ್ 10ರ ಪ್ರಕಾರ ವಿಧಾನಸಭೆಯ ಈ ಅವಧಿ ಮುಗಿಯುವವರೆಗೆ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ತೀರ್ಪಿತ್ತಿದ್ದರು. ಒಂದು ರೀತಿಯಲ್ಲಿ ಅದು ಆಪರೇಷನ್ ಕಮಲಕ್ಕೆ ಮದ್ದಾಗಿತ್ತು.

ಅದು ನಂತರ ಸುಪ್ರೀಂಕೋರ್ಟಿನ ಮೆಟ್ಟಿಲೇರಿತ್ತು. ಇವೆಲ್ಲದರಿಂದ ಶಾಸಕರುಗಳು ಗುಂಪಾಗಿ, ಒಂದು ನಿರ್ದಿಷ್ಟ ಯೋಜನೆಯ ಭಾಗವಾಗಿ ವಿರೋಧ ಪಕ್ಷವನ್ನು ಸ್ವಂತ ಹಿತಾಸಕ್ತಿಗಾಗಿ ಅಧಿಕಾರಕ್ಕೆ ತರಲೆಂದೇ (ಅಂದರೆ ಪಕ್ಷಾಂತರ ಮಾಡಲೆಂದೇ) ರಾಜೀನಾಮೆಗೆ ಮುಂದಾಗಿದ್ದಾರೆ ಎಂಬುದು ಸ್ಪಷ್ಟವಿತ್ತು. ಅದಕ್ಕೆ ಯಡಿಯೂರಪ್ಪನವರ ಆಡಿಯೋ ಕಡೆಯ ಸಾಕ್ಷಿಯಾಗಿತ್ತೇ ಹೊರತು, ಬೇಕಾದಷ್ಟು ಸಾಂದರ್ಭಿಕ ಸಾಕ್ಷಿಗಳಿತ್ತು. ಹೀಗಿದ್ದುದರಿಂದ, ಸದರಿ ಶಾಸಕರನ್ನು ಹಾಲಿ ವಿಧಾನಸಭೆಯ ಅವಧಿ ಮುಗಿಯುವವರೆಗೂ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಂಕೋರ್ಟು ಯಾವ ನಿರ್ಬಂಧ ವಿಧಿಸುತ್ತದೆ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿತ್ತು. ಒಂದು ವೇಳೆ ಅದು ಸರಿ ಇಲ್ಲ ಎನ್ನುವುದಾದರೂ ಬೇರೆ ಯಾವ ಮದ್ದು ನೀಡಲಿದೆ ಎಂಬುದು ಪ್ರಜಾತಂತ್ರದ ಉಳಿವಿನ ದೃಷ್ಟಿಯಿಂದ ಮಹತ್ವದ್ದಾಗಿತ್ತು.

ರಾಜೀನಾಮೆ ನೀಡಿ ಬೇರೆ ಪಕ್ಷಕ್ಕೆ ಹೋಗಲು ತುದಿಗಾಲಿನಲ್ಲಿ ನಿಂತಿದ್ದ ಗುಂಪಿಗೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎನ್ನುವುದು ಉಡುಗೊರೆಯೇ ಹೊರತು ಶಿಕ್ಷೆಯಲ್ಲ. ಹೀಗಿರುವಾಗ ಅನರ್ಹತೆಯನ್ನು ಎತ್ತಿ ಹಿಡಿದಿದ್ದೇವೆ ಎನ್ನುವುದಕ್ಕೆ ಯಾವ ಅರ್ಥವೂ ಇದ್ದಂತಿಲ್ಲ.

ಅನೈತಿಕ ಪಕ್ಷಾಂತರವನ್ನು ತಡೆಯಬಲ್ಲ ಯಾವ ಮದ್ದನ್ನು ನೀಡುವಲ್ಲಿಯೂ ಸುಪ್ರೀಂಕೋರ್ಟು ಸಫಲವಾಗಿಲ್ಲ ಎಂಬುದು ವಿಷಾದದ ಸಂಗತಿಯಾಗಿದೆ. ಅನರ್ಹಗೊಂಡ ಬಹುತೇಕ ಶಾಸಕರು ಈಗ ಬಿಜೆಪಿ ಟಿಕೆಟ್ ಮೇಲೆ ಸ್ಪರ್ಧಿಸಲಿದ್ದಾರೆ ಎನ್ನುವುದು ಸುಪ್ರೀಂಕೋರ್ಟು ವಿಫಲವಾದದ್ದಕ್ಕೆ ಸಾಕ್ಷಿಯಾಗಲಿದೆ. ಒಂದು ರೀತಿಯಲ್ಲಿ ಬಿಜೆಪಿಯಿಂದ ಅನರ್ಹರಿಗೆ ಟಿಕೆಟ್ ನೀಡುವುದು ಮತ್ತು ಪಡೆಯುವುದು ಸುಪ್ರೀಂಕೋರ್ಟನ್ನೇ ಅಣಕ ಮಾಡಿದಂತೆಯೂ ಆಗುವ ಸಾಧ್ಯತೆ ಇದೆ. ಯಾವುದಕ್ಕೂ ಉಪಚುನಾವಣೆಯಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...