Homeಕರ್ನಾಟಕಹೊಸ ರೀತಿಯ ಅನೈತಿಕ ಪಕ್ಷಾಂತರಕ್ಕೆ ಮದ್ದು ನೀಡಲು ವಿಫಲವಾದ ಸುಪ್ರೀಂ.. : ಡಾ.ವಾಸು ಎಚ್.ವಿ

ಹೊಸ ರೀತಿಯ ಅನೈತಿಕ ಪಕ್ಷಾಂತರಕ್ಕೆ ಮದ್ದು ನೀಡಲು ವಿಫಲವಾದ ಸುಪ್ರೀಂ.. : ಡಾ.ವಾಸು ಎಚ್.ವಿ

- Advertisement -
- Advertisement -

ಬಹುನಿರೀಕ್ಷಿತವಾಗಿದ್ದ ಅನರ್ಹ ಶಾಸಕರ ಕುರಿತಾದ ಮೊಕದ್ದಮೆಯಲ್ಲಿ ಇಂದು ಸುಪ್ರೀಂಕೋರ್ಟು ನಿರೀಕ್ಷಿತ ತೀರ್ಪನ್ನು ನೀಡಿದೆ. ಅವರು ಅನರ್ಹರೇ, ಆದರೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಸುಪ್ರೀಂಕೋರ್ಟಿನ ತೀರ್ಪಿನ ಹಿಂದಿರಬಹುದಾದ ಸದುದ್ದೇಶವೇನಿರಬಹುದು? ಅನರ್ಹರು ಎನ್ನುವ ಟ್ಯಾಗ್ ಕೊಡೋಣ. ಆದರೆ, ಜನತಾ ನ್ಯಾಯಾಲಯಕ್ಕೆ ಹೋಗಿ ಸ್ಪರ್ಧೆ ಮಾಡಲಿ. ಜನರು ತೀರ್ಮಾನ ಮಾಡಲಿ ಎಂಬ ಸದುದ್ದೇಶವನ್ನು ಆರೋಪಿಸಬಹುದು.

ನಮ್ಮ ಸಂವಿಧಾನದ ಪ್ರಕಾರ ತೀವ್ರ ಸ್ವರೂಪದ ಕ್ರಿಮಿನಲ್ ಪ್ರಕರಣಗಳಲ್ಲಿ ಶಿಕ್ಷೆಯಾಗಿರುವವರು ಸ್ಪರ್ಧೆ ಮಾಡುವಂತಿಲ್ಲ. ಆದರೆ, ಅಂತಹ ವ್ಯಕ್ತಿಗಳು ಸ್ಪರ್ಧೆ ಮಾಡಿದರೆ ಜನರು ಅವರನ್ನು ಚುನಾಯಿಸುವುದಿಲ್ಲವೇ? ಚುನಾಯಿಸುವ ಸಾಧ್ಯತೆ ಹೆಚ್ಚೇ ಇರಬಹುದು. ಅಲ್ಲಿ ಒಂದು ನೈತಿಕ ನಿರ್ಬಂಧವನ್ನು ಸಂವಿಧಾನವು ಒಡ್ಡಿದೆ. ಈ ಹಿನ್ನೆಲೆಯಲ್ಲಿ ಒಂದು ವಿಶ್ಲೇಷಣೆ ಮಾಡುವ ಅಗತ್ಯ ಇದೆ.

ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗೆ ತಂದಾಗ ಎಲ್ಲಾ ಪಕ್ಷಗಳ ನಡುವೆ ಸಹಮತ ಇತ್ತು. ಹಾಗೆ ನೋಡಿದರೆ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಬಹುಮತವಿದ್ದು, ಯಾವ ಪಕ್ಷಾಂತರವೂ ಅಲುಗಾಡಿಸಲು ಸಾಧ್ಯವಿರದ ಸರ್ಕಾರವು (ರಾಜೀವ್ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ) ಪಕ್ಷಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ನಂತರದ ದಿನಗಳಲ್ಲಿ ಸುಪ್ರೀಂಕೋರ್ಟು ಸಹಾ ಅದಕ್ಕೆ ತನ್ನದೇ ರೀತಿಯಲ್ಲಿ ಮಾನ್ಯತೆಯನ್ನು ನೀಡಿತ್ತು.

ಮೂರನೇ ಒಂದು ಭಾಗದಷ್ಟು ಶಾಸಕರು ಒಟ್ಟಿಗೆ ಹೋದರೆ ಅದು ಪಕ್ಷಾಂತರವಾಗದು ಎಂಬುದು ನಂತರ ಮೂರನೇ ಎರಡು ಭಾಗ ಆದದ್ದಕ್ಕೂ ಕಾರಣವಿತ್ತು. ‘ಪಕ್ಷಾಂತರವನ್ನು ನಿಷೇಧಿಸಬೇಕು; ಏಕೆಂದರೆ ಇದು ಅನೈತಿಕವಾದುದು; ಗೆದ್ದ ಜನಪ್ರತಿನಿಧಿಗಳು ತಮ್ಮ ಸ್ವಂತ ಹಿತಾಸಕ್ತಿಗಾಗಿ ಮಾಡುತ್ತಿರುವ ಪಕ್ಷಾಂತರವಿದು’ ಎಂಬ ಕುರಿತು ಯಾರಿಗೂ ಅಸಮ್ಮತಿಯಿರಲಿಲ್ಲ. ಹೀಗಾಗಿ ಪಕ್ಷಾಂತರ ನಿಷೇಧ ಕಾನೂನನ್ನು ಗಟ್ಟಿ ಮಾಡುವ ಕೆಲಸ ನಡೆಯಿತು.

ಅದನ್ನೂ ಉಲ್ಲಂಘಿಸಲು ಕೆಲವು ದಾರಿಗಳನ್ನು ಅನೈತಿಕ ರಾಜಕಾರಣದಲ್ಲಿ ತೊಡಗಿರುವ ರಾಜಕೀಯ ಪಕ್ಷಗಳು ಕಂಡುಕೊಂಡವು. ಅದರಲ್ಲಿ ಒಂದು – ಸ್ಪೀಕರ್ ಅವರು ಪಕ್ಷಾಂತರಿಗಳ ಪರ ಇದ್ದರೆ, ವಿಳಂಬ ನೀತಿಯನ್ನು ಅನುಸರಿಸಿ ಶಾಸನಸಭೆಯ ಅವಧಿ ಮುಗಿಯುವತನಕ ಎಳೆದು ಅನರ್ಹಗೊಳಿಸಲು ಕೋರಿದ ದೂರೇ ಅಪ್ರಸ್ತುತವಾಗುವಂತೆ ಮಾಡುವುದು. ಎರಡು- ಆಡಳಿತ ಪಕ್ಷಕ್ಕೆ ಪಕ್ಷಾಂತರ ಮಾಡಿಸಲು ಶಾಸನಸಭೆಯ ಸದಸ್ಯರ ಕೈಯ್ಯಲ್ಲಿ ರಾಜೀನಾಮೆ ಕೊಡಿಸುವುದು. ನಂತರ ಅವರಿಗೆ ಅಧಿಕಾರ ನೀಡಿ, ಆಡಳಿತದ ಬಲದೊಂದಿಗೆ ಆಡಳಿತ ಪಕ್ಷದ ಟಿಕೆಟ್ ಮೇಲೆ ಸ್ಪರ್ಧಿಸಿ ಗೆಲ್ಲಿಸಿಕೊಂಡು ಬರುವುದು. ಇದನ್ನು ಬಿಜೆಪಿಯೇ ಶುರು ಮಾಡಿದ್ದರಿಂದ ಮತ್ತು ಹೆಚ್ಚು ಬಳಸಿದ್ದರಿಂದ ‘ಆಪರೇಷನ್ ಕಮಲ’ ಎಂಬ ಹೆಸರಿನಲ್ಲಿ ಚಾಲ್ತಿಯಲ್ಲಿದೆ.

ಅಂತಹ ಆಪರೇಷನ್ ಕಮಲಕ್ಕೆ ಮದ್ದು ಕಂಡುಕೊಳ್ಳುವುದು ಬಹಳ ಅಗತ್ಯವಿತ್ತು. ಆದರೆ, ಸ್ವತಃ ಬಿಜೆಪಿ (ಅಥವಾ ಇನ್ನಾವುದೋ ಪಕ್ಷ) ಅಧಿಕಾರದಲ್ಲಿದ್ದಾಗ ಅವರದ್ದೇ ಸ್ಪೀಕರ್ ಇರುವುದರಿಂದ ಅನರ್ಹತೆ ಆಗುತ್ತಿರಲಿಲ್ಲ. ಈ ಸಾರಿ ಕರ್ನಾಕಟದಲ್ಲಿ ಪರಿಸ್ಥಿತಿ ಸ್ವಲ್ಪ ಭಿನ್ನವಾಗಿತ್ತು. ಅಧಿಕಾರದಲ್ಲಿದ್ದ ಸಮ್ಮಿಶ್ರ ಸರ್ಕಾರದ ಶಾಸಕರನ್ನು ಸೆಳೆದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದು ರಾಜ್ಯದಲ್ಲಿ ವಿರೋಧ ಪಕ್ಷದಲ್ಲಿದ್ದ ಪಕ್ಷವಾದ ಬಿಜೆಪಿಯು ಪಕ್ಷಾಂತರ ಮಾಡಿಸಿತ್ತು. ಹೀಗಾಗಿ ಸಮ್ಮಿಶ್ರ ಸರ್ಕಾರದ ಪಕ್ಷಗಳ ಬೆಂಬಲದೊಂದಿಗೆ (ವಾಸ್ತವದಲ್ಲಿ ಸರ್ವಾನುಮತದಿಂದ) ಆಯ್ಕೆಯಾಗಿದ್ದ ಸ್ಪೀಕರ್ ರಮೇಶ್ ಕುಮಾರ್ ಅವರು ತೀರ್ಮಾನ ತೆಗೆದುಕೊಳ್ಳುವ ಸ್ಥಾನದಲ್ಲಿದ್ದರು. ಅವರು ಸದರಿ ಶಾಸಕರನ್ನು ಅನರ್ಹಗೊಳಿಸಿದರು ಮತ್ತು ಷೆಡ್ಯೂಲ್ 10ರ ಪ್ರಕಾರ ವಿಧಾನಸಭೆಯ ಈ ಅವಧಿ ಮುಗಿಯುವವರೆಗೆ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ತೀರ್ಪಿತ್ತಿದ್ದರು. ಒಂದು ರೀತಿಯಲ್ಲಿ ಅದು ಆಪರೇಷನ್ ಕಮಲಕ್ಕೆ ಮದ್ದಾಗಿತ್ತು.

ಅದು ನಂತರ ಸುಪ್ರೀಂಕೋರ್ಟಿನ ಮೆಟ್ಟಿಲೇರಿತ್ತು. ಇವೆಲ್ಲದರಿಂದ ಶಾಸಕರುಗಳು ಗುಂಪಾಗಿ, ಒಂದು ನಿರ್ದಿಷ್ಟ ಯೋಜನೆಯ ಭಾಗವಾಗಿ ವಿರೋಧ ಪಕ್ಷವನ್ನು ಸ್ವಂತ ಹಿತಾಸಕ್ತಿಗಾಗಿ ಅಧಿಕಾರಕ್ಕೆ ತರಲೆಂದೇ (ಅಂದರೆ ಪಕ್ಷಾಂತರ ಮಾಡಲೆಂದೇ) ರಾಜೀನಾಮೆಗೆ ಮುಂದಾಗಿದ್ದಾರೆ ಎಂಬುದು ಸ್ಪಷ್ಟವಿತ್ತು. ಅದಕ್ಕೆ ಯಡಿಯೂರಪ್ಪನವರ ಆಡಿಯೋ ಕಡೆಯ ಸಾಕ್ಷಿಯಾಗಿತ್ತೇ ಹೊರತು, ಬೇಕಾದಷ್ಟು ಸಾಂದರ್ಭಿಕ ಸಾಕ್ಷಿಗಳಿತ್ತು. ಹೀಗಿದ್ದುದರಿಂದ, ಸದರಿ ಶಾಸಕರನ್ನು ಹಾಲಿ ವಿಧಾನಸಭೆಯ ಅವಧಿ ಮುಗಿಯುವವರೆಗೂ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಂಕೋರ್ಟು ಯಾವ ನಿರ್ಬಂಧ ವಿಧಿಸುತ್ತದೆ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿತ್ತು. ಒಂದು ವೇಳೆ ಅದು ಸರಿ ಇಲ್ಲ ಎನ್ನುವುದಾದರೂ ಬೇರೆ ಯಾವ ಮದ್ದು ನೀಡಲಿದೆ ಎಂಬುದು ಪ್ರಜಾತಂತ್ರದ ಉಳಿವಿನ ದೃಷ್ಟಿಯಿಂದ ಮಹತ್ವದ್ದಾಗಿತ್ತು.

ರಾಜೀನಾಮೆ ನೀಡಿ ಬೇರೆ ಪಕ್ಷಕ್ಕೆ ಹೋಗಲು ತುದಿಗಾಲಿನಲ್ಲಿ ನಿಂತಿದ್ದ ಗುಂಪಿಗೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎನ್ನುವುದು ಉಡುಗೊರೆಯೇ ಹೊರತು ಶಿಕ್ಷೆಯಲ್ಲ. ಹೀಗಿರುವಾಗ ಅನರ್ಹತೆಯನ್ನು ಎತ್ತಿ ಹಿಡಿದಿದ್ದೇವೆ ಎನ್ನುವುದಕ್ಕೆ ಯಾವ ಅರ್ಥವೂ ಇದ್ದಂತಿಲ್ಲ.

ಅನೈತಿಕ ಪಕ್ಷಾಂತರವನ್ನು ತಡೆಯಬಲ್ಲ ಯಾವ ಮದ್ದನ್ನು ನೀಡುವಲ್ಲಿಯೂ ಸುಪ್ರೀಂಕೋರ್ಟು ಸಫಲವಾಗಿಲ್ಲ ಎಂಬುದು ವಿಷಾದದ ಸಂಗತಿಯಾಗಿದೆ. ಅನರ್ಹಗೊಂಡ ಬಹುತೇಕ ಶಾಸಕರು ಈಗ ಬಿಜೆಪಿ ಟಿಕೆಟ್ ಮೇಲೆ ಸ್ಪರ್ಧಿಸಲಿದ್ದಾರೆ ಎನ್ನುವುದು ಸುಪ್ರೀಂಕೋರ್ಟು ವಿಫಲವಾದದ್ದಕ್ಕೆ ಸಾಕ್ಷಿಯಾಗಲಿದೆ. ಒಂದು ರೀತಿಯಲ್ಲಿ ಬಿಜೆಪಿಯಿಂದ ಅನರ್ಹರಿಗೆ ಟಿಕೆಟ್ ನೀಡುವುದು ಮತ್ತು ಪಡೆಯುವುದು ಸುಪ್ರೀಂಕೋರ್ಟನ್ನೇ ಅಣಕ ಮಾಡಿದಂತೆಯೂ ಆಗುವ ಸಾಧ್ಯತೆ ಇದೆ. ಯಾವುದಕ್ಕೂ ಉಪಚುನಾವಣೆಯಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...