Homeಕರ್ನಾಟಕಹೊಸ ರೀತಿಯ ಅನೈತಿಕ ಪಕ್ಷಾಂತರಕ್ಕೆ ಮದ್ದು ನೀಡಲು ವಿಫಲವಾದ ಸುಪ್ರೀಂ.. : ಡಾ.ವಾಸು ಎಚ್.ವಿ

ಹೊಸ ರೀತಿಯ ಅನೈತಿಕ ಪಕ್ಷಾಂತರಕ್ಕೆ ಮದ್ದು ನೀಡಲು ವಿಫಲವಾದ ಸುಪ್ರೀಂ.. : ಡಾ.ವಾಸು ಎಚ್.ವಿ

- Advertisement -
- Advertisement -

ಬಹುನಿರೀಕ್ಷಿತವಾಗಿದ್ದ ಅನರ್ಹ ಶಾಸಕರ ಕುರಿತಾದ ಮೊಕದ್ದಮೆಯಲ್ಲಿ ಇಂದು ಸುಪ್ರೀಂಕೋರ್ಟು ನಿರೀಕ್ಷಿತ ತೀರ್ಪನ್ನು ನೀಡಿದೆ. ಅವರು ಅನರ್ಹರೇ, ಆದರೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಸುಪ್ರೀಂಕೋರ್ಟಿನ ತೀರ್ಪಿನ ಹಿಂದಿರಬಹುದಾದ ಸದುದ್ದೇಶವೇನಿರಬಹುದು? ಅನರ್ಹರು ಎನ್ನುವ ಟ್ಯಾಗ್ ಕೊಡೋಣ. ಆದರೆ, ಜನತಾ ನ್ಯಾಯಾಲಯಕ್ಕೆ ಹೋಗಿ ಸ್ಪರ್ಧೆ ಮಾಡಲಿ. ಜನರು ತೀರ್ಮಾನ ಮಾಡಲಿ ಎಂಬ ಸದುದ್ದೇಶವನ್ನು ಆರೋಪಿಸಬಹುದು.

ನಮ್ಮ ಸಂವಿಧಾನದ ಪ್ರಕಾರ ತೀವ್ರ ಸ್ವರೂಪದ ಕ್ರಿಮಿನಲ್ ಪ್ರಕರಣಗಳಲ್ಲಿ ಶಿಕ್ಷೆಯಾಗಿರುವವರು ಸ್ಪರ್ಧೆ ಮಾಡುವಂತಿಲ್ಲ. ಆದರೆ, ಅಂತಹ ವ್ಯಕ್ತಿಗಳು ಸ್ಪರ್ಧೆ ಮಾಡಿದರೆ ಜನರು ಅವರನ್ನು ಚುನಾಯಿಸುವುದಿಲ್ಲವೇ? ಚುನಾಯಿಸುವ ಸಾಧ್ಯತೆ ಹೆಚ್ಚೇ ಇರಬಹುದು. ಅಲ್ಲಿ ಒಂದು ನೈತಿಕ ನಿರ್ಬಂಧವನ್ನು ಸಂವಿಧಾನವು ಒಡ್ಡಿದೆ. ಈ ಹಿನ್ನೆಲೆಯಲ್ಲಿ ಒಂದು ವಿಶ್ಲೇಷಣೆ ಮಾಡುವ ಅಗತ್ಯ ಇದೆ.

ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗೆ ತಂದಾಗ ಎಲ್ಲಾ ಪಕ್ಷಗಳ ನಡುವೆ ಸಹಮತ ಇತ್ತು. ಹಾಗೆ ನೋಡಿದರೆ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಬಹುಮತವಿದ್ದು, ಯಾವ ಪಕ್ಷಾಂತರವೂ ಅಲುಗಾಡಿಸಲು ಸಾಧ್ಯವಿರದ ಸರ್ಕಾರವು (ರಾಜೀವ್ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ) ಪಕ್ಷಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ನಂತರದ ದಿನಗಳಲ್ಲಿ ಸುಪ್ರೀಂಕೋರ್ಟು ಸಹಾ ಅದಕ್ಕೆ ತನ್ನದೇ ರೀತಿಯಲ್ಲಿ ಮಾನ್ಯತೆಯನ್ನು ನೀಡಿತ್ತು.

ಮೂರನೇ ಒಂದು ಭಾಗದಷ್ಟು ಶಾಸಕರು ಒಟ್ಟಿಗೆ ಹೋದರೆ ಅದು ಪಕ್ಷಾಂತರವಾಗದು ಎಂಬುದು ನಂತರ ಮೂರನೇ ಎರಡು ಭಾಗ ಆದದ್ದಕ್ಕೂ ಕಾರಣವಿತ್ತು. ‘ಪಕ್ಷಾಂತರವನ್ನು ನಿಷೇಧಿಸಬೇಕು; ಏಕೆಂದರೆ ಇದು ಅನೈತಿಕವಾದುದು; ಗೆದ್ದ ಜನಪ್ರತಿನಿಧಿಗಳು ತಮ್ಮ ಸ್ವಂತ ಹಿತಾಸಕ್ತಿಗಾಗಿ ಮಾಡುತ್ತಿರುವ ಪಕ್ಷಾಂತರವಿದು’ ಎಂಬ ಕುರಿತು ಯಾರಿಗೂ ಅಸಮ್ಮತಿಯಿರಲಿಲ್ಲ. ಹೀಗಾಗಿ ಪಕ್ಷಾಂತರ ನಿಷೇಧ ಕಾನೂನನ್ನು ಗಟ್ಟಿ ಮಾಡುವ ಕೆಲಸ ನಡೆಯಿತು.

ಅದನ್ನೂ ಉಲ್ಲಂಘಿಸಲು ಕೆಲವು ದಾರಿಗಳನ್ನು ಅನೈತಿಕ ರಾಜಕಾರಣದಲ್ಲಿ ತೊಡಗಿರುವ ರಾಜಕೀಯ ಪಕ್ಷಗಳು ಕಂಡುಕೊಂಡವು. ಅದರಲ್ಲಿ ಒಂದು – ಸ್ಪೀಕರ್ ಅವರು ಪಕ್ಷಾಂತರಿಗಳ ಪರ ಇದ್ದರೆ, ವಿಳಂಬ ನೀತಿಯನ್ನು ಅನುಸರಿಸಿ ಶಾಸನಸಭೆಯ ಅವಧಿ ಮುಗಿಯುವತನಕ ಎಳೆದು ಅನರ್ಹಗೊಳಿಸಲು ಕೋರಿದ ದೂರೇ ಅಪ್ರಸ್ತುತವಾಗುವಂತೆ ಮಾಡುವುದು. ಎರಡು- ಆಡಳಿತ ಪಕ್ಷಕ್ಕೆ ಪಕ್ಷಾಂತರ ಮಾಡಿಸಲು ಶಾಸನಸಭೆಯ ಸದಸ್ಯರ ಕೈಯ್ಯಲ್ಲಿ ರಾಜೀನಾಮೆ ಕೊಡಿಸುವುದು. ನಂತರ ಅವರಿಗೆ ಅಧಿಕಾರ ನೀಡಿ, ಆಡಳಿತದ ಬಲದೊಂದಿಗೆ ಆಡಳಿತ ಪಕ್ಷದ ಟಿಕೆಟ್ ಮೇಲೆ ಸ್ಪರ್ಧಿಸಿ ಗೆಲ್ಲಿಸಿಕೊಂಡು ಬರುವುದು. ಇದನ್ನು ಬಿಜೆಪಿಯೇ ಶುರು ಮಾಡಿದ್ದರಿಂದ ಮತ್ತು ಹೆಚ್ಚು ಬಳಸಿದ್ದರಿಂದ ‘ಆಪರೇಷನ್ ಕಮಲ’ ಎಂಬ ಹೆಸರಿನಲ್ಲಿ ಚಾಲ್ತಿಯಲ್ಲಿದೆ.

ಅಂತಹ ಆಪರೇಷನ್ ಕಮಲಕ್ಕೆ ಮದ್ದು ಕಂಡುಕೊಳ್ಳುವುದು ಬಹಳ ಅಗತ್ಯವಿತ್ತು. ಆದರೆ, ಸ್ವತಃ ಬಿಜೆಪಿ (ಅಥವಾ ಇನ್ನಾವುದೋ ಪಕ್ಷ) ಅಧಿಕಾರದಲ್ಲಿದ್ದಾಗ ಅವರದ್ದೇ ಸ್ಪೀಕರ್ ಇರುವುದರಿಂದ ಅನರ್ಹತೆ ಆಗುತ್ತಿರಲಿಲ್ಲ. ಈ ಸಾರಿ ಕರ್ನಾಕಟದಲ್ಲಿ ಪರಿಸ್ಥಿತಿ ಸ್ವಲ್ಪ ಭಿನ್ನವಾಗಿತ್ತು. ಅಧಿಕಾರದಲ್ಲಿದ್ದ ಸಮ್ಮಿಶ್ರ ಸರ್ಕಾರದ ಶಾಸಕರನ್ನು ಸೆಳೆದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದು ರಾಜ್ಯದಲ್ಲಿ ವಿರೋಧ ಪಕ್ಷದಲ್ಲಿದ್ದ ಪಕ್ಷವಾದ ಬಿಜೆಪಿಯು ಪಕ್ಷಾಂತರ ಮಾಡಿಸಿತ್ತು. ಹೀಗಾಗಿ ಸಮ್ಮಿಶ್ರ ಸರ್ಕಾರದ ಪಕ್ಷಗಳ ಬೆಂಬಲದೊಂದಿಗೆ (ವಾಸ್ತವದಲ್ಲಿ ಸರ್ವಾನುಮತದಿಂದ) ಆಯ್ಕೆಯಾಗಿದ್ದ ಸ್ಪೀಕರ್ ರಮೇಶ್ ಕುಮಾರ್ ಅವರು ತೀರ್ಮಾನ ತೆಗೆದುಕೊಳ್ಳುವ ಸ್ಥಾನದಲ್ಲಿದ್ದರು. ಅವರು ಸದರಿ ಶಾಸಕರನ್ನು ಅನರ್ಹಗೊಳಿಸಿದರು ಮತ್ತು ಷೆಡ್ಯೂಲ್ 10ರ ಪ್ರಕಾರ ವಿಧಾನಸಭೆಯ ಈ ಅವಧಿ ಮುಗಿಯುವವರೆಗೆ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ತೀರ್ಪಿತ್ತಿದ್ದರು. ಒಂದು ರೀತಿಯಲ್ಲಿ ಅದು ಆಪರೇಷನ್ ಕಮಲಕ್ಕೆ ಮದ್ದಾಗಿತ್ತು.

ಅದು ನಂತರ ಸುಪ್ರೀಂಕೋರ್ಟಿನ ಮೆಟ್ಟಿಲೇರಿತ್ತು. ಇವೆಲ್ಲದರಿಂದ ಶಾಸಕರುಗಳು ಗುಂಪಾಗಿ, ಒಂದು ನಿರ್ದಿಷ್ಟ ಯೋಜನೆಯ ಭಾಗವಾಗಿ ವಿರೋಧ ಪಕ್ಷವನ್ನು ಸ್ವಂತ ಹಿತಾಸಕ್ತಿಗಾಗಿ ಅಧಿಕಾರಕ್ಕೆ ತರಲೆಂದೇ (ಅಂದರೆ ಪಕ್ಷಾಂತರ ಮಾಡಲೆಂದೇ) ರಾಜೀನಾಮೆಗೆ ಮುಂದಾಗಿದ್ದಾರೆ ಎಂಬುದು ಸ್ಪಷ್ಟವಿತ್ತು. ಅದಕ್ಕೆ ಯಡಿಯೂರಪ್ಪನವರ ಆಡಿಯೋ ಕಡೆಯ ಸಾಕ್ಷಿಯಾಗಿತ್ತೇ ಹೊರತು, ಬೇಕಾದಷ್ಟು ಸಾಂದರ್ಭಿಕ ಸಾಕ್ಷಿಗಳಿತ್ತು. ಹೀಗಿದ್ದುದರಿಂದ, ಸದರಿ ಶಾಸಕರನ್ನು ಹಾಲಿ ವಿಧಾನಸಭೆಯ ಅವಧಿ ಮುಗಿಯುವವರೆಗೂ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಂಕೋರ್ಟು ಯಾವ ನಿರ್ಬಂಧ ವಿಧಿಸುತ್ತದೆ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿತ್ತು. ಒಂದು ವೇಳೆ ಅದು ಸರಿ ಇಲ್ಲ ಎನ್ನುವುದಾದರೂ ಬೇರೆ ಯಾವ ಮದ್ದು ನೀಡಲಿದೆ ಎಂಬುದು ಪ್ರಜಾತಂತ್ರದ ಉಳಿವಿನ ದೃಷ್ಟಿಯಿಂದ ಮಹತ್ವದ್ದಾಗಿತ್ತು.

ರಾಜೀನಾಮೆ ನೀಡಿ ಬೇರೆ ಪಕ್ಷಕ್ಕೆ ಹೋಗಲು ತುದಿಗಾಲಿನಲ್ಲಿ ನಿಂತಿದ್ದ ಗುಂಪಿಗೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎನ್ನುವುದು ಉಡುಗೊರೆಯೇ ಹೊರತು ಶಿಕ್ಷೆಯಲ್ಲ. ಹೀಗಿರುವಾಗ ಅನರ್ಹತೆಯನ್ನು ಎತ್ತಿ ಹಿಡಿದಿದ್ದೇವೆ ಎನ್ನುವುದಕ್ಕೆ ಯಾವ ಅರ್ಥವೂ ಇದ್ದಂತಿಲ್ಲ.

ಅನೈತಿಕ ಪಕ್ಷಾಂತರವನ್ನು ತಡೆಯಬಲ್ಲ ಯಾವ ಮದ್ದನ್ನು ನೀಡುವಲ್ಲಿಯೂ ಸುಪ್ರೀಂಕೋರ್ಟು ಸಫಲವಾಗಿಲ್ಲ ಎಂಬುದು ವಿಷಾದದ ಸಂಗತಿಯಾಗಿದೆ. ಅನರ್ಹಗೊಂಡ ಬಹುತೇಕ ಶಾಸಕರು ಈಗ ಬಿಜೆಪಿ ಟಿಕೆಟ್ ಮೇಲೆ ಸ್ಪರ್ಧಿಸಲಿದ್ದಾರೆ ಎನ್ನುವುದು ಸುಪ್ರೀಂಕೋರ್ಟು ವಿಫಲವಾದದ್ದಕ್ಕೆ ಸಾಕ್ಷಿಯಾಗಲಿದೆ. ಒಂದು ರೀತಿಯಲ್ಲಿ ಬಿಜೆಪಿಯಿಂದ ಅನರ್ಹರಿಗೆ ಟಿಕೆಟ್ ನೀಡುವುದು ಮತ್ತು ಪಡೆಯುವುದು ಸುಪ್ರೀಂಕೋರ್ಟನ್ನೇ ಅಣಕ ಮಾಡಿದಂತೆಯೂ ಆಗುವ ಸಾಧ್ಯತೆ ಇದೆ. ಯಾವುದಕ್ಕೂ ಉಪಚುನಾವಣೆಯಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...