Homeಕರ್ನಾಟಕಹೊಸ ರೀತಿಯ ಅನೈತಿಕ ಪಕ್ಷಾಂತರಕ್ಕೆ ಮದ್ದು ನೀಡಲು ವಿಫಲವಾದ ಸುಪ್ರೀಂ.. : ಡಾ.ವಾಸು ಎಚ್.ವಿ

ಹೊಸ ರೀತಿಯ ಅನೈತಿಕ ಪಕ್ಷಾಂತರಕ್ಕೆ ಮದ್ದು ನೀಡಲು ವಿಫಲವಾದ ಸುಪ್ರೀಂ.. : ಡಾ.ವಾಸು ಎಚ್.ವಿ

- Advertisement -
- Advertisement -

ಬಹುನಿರೀಕ್ಷಿತವಾಗಿದ್ದ ಅನರ್ಹ ಶಾಸಕರ ಕುರಿತಾದ ಮೊಕದ್ದಮೆಯಲ್ಲಿ ಇಂದು ಸುಪ್ರೀಂಕೋರ್ಟು ನಿರೀಕ್ಷಿತ ತೀರ್ಪನ್ನು ನೀಡಿದೆ. ಅವರು ಅನರ್ಹರೇ, ಆದರೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಸುಪ್ರೀಂಕೋರ್ಟಿನ ತೀರ್ಪಿನ ಹಿಂದಿರಬಹುದಾದ ಸದುದ್ದೇಶವೇನಿರಬಹುದು? ಅನರ್ಹರು ಎನ್ನುವ ಟ್ಯಾಗ್ ಕೊಡೋಣ. ಆದರೆ, ಜನತಾ ನ್ಯಾಯಾಲಯಕ್ಕೆ ಹೋಗಿ ಸ್ಪರ್ಧೆ ಮಾಡಲಿ. ಜನರು ತೀರ್ಮಾನ ಮಾಡಲಿ ಎಂಬ ಸದುದ್ದೇಶವನ್ನು ಆರೋಪಿಸಬಹುದು.

ನಮ್ಮ ಸಂವಿಧಾನದ ಪ್ರಕಾರ ತೀವ್ರ ಸ್ವರೂಪದ ಕ್ರಿಮಿನಲ್ ಪ್ರಕರಣಗಳಲ್ಲಿ ಶಿಕ್ಷೆಯಾಗಿರುವವರು ಸ್ಪರ್ಧೆ ಮಾಡುವಂತಿಲ್ಲ. ಆದರೆ, ಅಂತಹ ವ್ಯಕ್ತಿಗಳು ಸ್ಪರ್ಧೆ ಮಾಡಿದರೆ ಜನರು ಅವರನ್ನು ಚುನಾಯಿಸುವುದಿಲ್ಲವೇ? ಚುನಾಯಿಸುವ ಸಾಧ್ಯತೆ ಹೆಚ್ಚೇ ಇರಬಹುದು. ಅಲ್ಲಿ ಒಂದು ನೈತಿಕ ನಿರ್ಬಂಧವನ್ನು ಸಂವಿಧಾನವು ಒಡ್ಡಿದೆ. ಈ ಹಿನ್ನೆಲೆಯಲ್ಲಿ ಒಂದು ವಿಶ್ಲೇಷಣೆ ಮಾಡುವ ಅಗತ್ಯ ಇದೆ.

ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗೆ ತಂದಾಗ ಎಲ್ಲಾ ಪಕ್ಷಗಳ ನಡುವೆ ಸಹಮತ ಇತ್ತು. ಹಾಗೆ ನೋಡಿದರೆ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಬಹುಮತವಿದ್ದು, ಯಾವ ಪಕ್ಷಾಂತರವೂ ಅಲುಗಾಡಿಸಲು ಸಾಧ್ಯವಿರದ ಸರ್ಕಾರವು (ರಾಜೀವ್ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ) ಪಕ್ಷಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ನಂತರದ ದಿನಗಳಲ್ಲಿ ಸುಪ್ರೀಂಕೋರ್ಟು ಸಹಾ ಅದಕ್ಕೆ ತನ್ನದೇ ರೀತಿಯಲ್ಲಿ ಮಾನ್ಯತೆಯನ್ನು ನೀಡಿತ್ತು.

ಮೂರನೇ ಒಂದು ಭಾಗದಷ್ಟು ಶಾಸಕರು ಒಟ್ಟಿಗೆ ಹೋದರೆ ಅದು ಪಕ್ಷಾಂತರವಾಗದು ಎಂಬುದು ನಂತರ ಮೂರನೇ ಎರಡು ಭಾಗ ಆದದ್ದಕ್ಕೂ ಕಾರಣವಿತ್ತು. ‘ಪಕ್ಷಾಂತರವನ್ನು ನಿಷೇಧಿಸಬೇಕು; ಏಕೆಂದರೆ ಇದು ಅನೈತಿಕವಾದುದು; ಗೆದ್ದ ಜನಪ್ರತಿನಿಧಿಗಳು ತಮ್ಮ ಸ್ವಂತ ಹಿತಾಸಕ್ತಿಗಾಗಿ ಮಾಡುತ್ತಿರುವ ಪಕ್ಷಾಂತರವಿದು’ ಎಂಬ ಕುರಿತು ಯಾರಿಗೂ ಅಸಮ್ಮತಿಯಿರಲಿಲ್ಲ. ಹೀಗಾಗಿ ಪಕ್ಷಾಂತರ ನಿಷೇಧ ಕಾನೂನನ್ನು ಗಟ್ಟಿ ಮಾಡುವ ಕೆಲಸ ನಡೆಯಿತು.

ಅದನ್ನೂ ಉಲ್ಲಂಘಿಸಲು ಕೆಲವು ದಾರಿಗಳನ್ನು ಅನೈತಿಕ ರಾಜಕಾರಣದಲ್ಲಿ ತೊಡಗಿರುವ ರಾಜಕೀಯ ಪಕ್ಷಗಳು ಕಂಡುಕೊಂಡವು. ಅದರಲ್ಲಿ ಒಂದು – ಸ್ಪೀಕರ್ ಅವರು ಪಕ್ಷಾಂತರಿಗಳ ಪರ ಇದ್ದರೆ, ವಿಳಂಬ ನೀತಿಯನ್ನು ಅನುಸರಿಸಿ ಶಾಸನಸಭೆಯ ಅವಧಿ ಮುಗಿಯುವತನಕ ಎಳೆದು ಅನರ್ಹಗೊಳಿಸಲು ಕೋರಿದ ದೂರೇ ಅಪ್ರಸ್ತುತವಾಗುವಂತೆ ಮಾಡುವುದು. ಎರಡು- ಆಡಳಿತ ಪಕ್ಷಕ್ಕೆ ಪಕ್ಷಾಂತರ ಮಾಡಿಸಲು ಶಾಸನಸಭೆಯ ಸದಸ್ಯರ ಕೈಯ್ಯಲ್ಲಿ ರಾಜೀನಾಮೆ ಕೊಡಿಸುವುದು. ನಂತರ ಅವರಿಗೆ ಅಧಿಕಾರ ನೀಡಿ, ಆಡಳಿತದ ಬಲದೊಂದಿಗೆ ಆಡಳಿತ ಪಕ್ಷದ ಟಿಕೆಟ್ ಮೇಲೆ ಸ್ಪರ್ಧಿಸಿ ಗೆಲ್ಲಿಸಿಕೊಂಡು ಬರುವುದು. ಇದನ್ನು ಬಿಜೆಪಿಯೇ ಶುರು ಮಾಡಿದ್ದರಿಂದ ಮತ್ತು ಹೆಚ್ಚು ಬಳಸಿದ್ದರಿಂದ ‘ಆಪರೇಷನ್ ಕಮಲ’ ಎಂಬ ಹೆಸರಿನಲ್ಲಿ ಚಾಲ್ತಿಯಲ್ಲಿದೆ.

ಅಂತಹ ಆಪರೇಷನ್ ಕಮಲಕ್ಕೆ ಮದ್ದು ಕಂಡುಕೊಳ್ಳುವುದು ಬಹಳ ಅಗತ್ಯವಿತ್ತು. ಆದರೆ, ಸ್ವತಃ ಬಿಜೆಪಿ (ಅಥವಾ ಇನ್ನಾವುದೋ ಪಕ್ಷ) ಅಧಿಕಾರದಲ್ಲಿದ್ದಾಗ ಅವರದ್ದೇ ಸ್ಪೀಕರ್ ಇರುವುದರಿಂದ ಅನರ್ಹತೆ ಆಗುತ್ತಿರಲಿಲ್ಲ. ಈ ಸಾರಿ ಕರ್ನಾಕಟದಲ್ಲಿ ಪರಿಸ್ಥಿತಿ ಸ್ವಲ್ಪ ಭಿನ್ನವಾಗಿತ್ತು. ಅಧಿಕಾರದಲ್ಲಿದ್ದ ಸಮ್ಮಿಶ್ರ ಸರ್ಕಾರದ ಶಾಸಕರನ್ನು ಸೆಳೆದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದು ರಾಜ್ಯದಲ್ಲಿ ವಿರೋಧ ಪಕ್ಷದಲ್ಲಿದ್ದ ಪಕ್ಷವಾದ ಬಿಜೆಪಿಯು ಪಕ್ಷಾಂತರ ಮಾಡಿಸಿತ್ತು. ಹೀಗಾಗಿ ಸಮ್ಮಿಶ್ರ ಸರ್ಕಾರದ ಪಕ್ಷಗಳ ಬೆಂಬಲದೊಂದಿಗೆ (ವಾಸ್ತವದಲ್ಲಿ ಸರ್ವಾನುಮತದಿಂದ) ಆಯ್ಕೆಯಾಗಿದ್ದ ಸ್ಪೀಕರ್ ರಮೇಶ್ ಕುಮಾರ್ ಅವರು ತೀರ್ಮಾನ ತೆಗೆದುಕೊಳ್ಳುವ ಸ್ಥಾನದಲ್ಲಿದ್ದರು. ಅವರು ಸದರಿ ಶಾಸಕರನ್ನು ಅನರ್ಹಗೊಳಿಸಿದರು ಮತ್ತು ಷೆಡ್ಯೂಲ್ 10ರ ಪ್ರಕಾರ ವಿಧಾನಸಭೆಯ ಈ ಅವಧಿ ಮುಗಿಯುವವರೆಗೆ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ತೀರ್ಪಿತ್ತಿದ್ದರು. ಒಂದು ರೀತಿಯಲ್ಲಿ ಅದು ಆಪರೇಷನ್ ಕಮಲಕ್ಕೆ ಮದ್ದಾಗಿತ್ತು.

ಅದು ನಂತರ ಸುಪ್ರೀಂಕೋರ್ಟಿನ ಮೆಟ್ಟಿಲೇರಿತ್ತು. ಇವೆಲ್ಲದರಿಂದ ಶಾಸಕರುಗಳು ಗುಂಪಾಗಿ, ಒಂದು ನಿರ್ದಿಷ್ಟ ಯೋಜನೆಯ ಭಾಗವಾಗಿ ವಿರೋಧ ಪಕ್ಷವನ್ನು ಸ್ವಂತ ಹಿತಾಸಕ್ತಿಗಾಗಿ ಅಧಿಕಾರಕ್ಕೆ ತರಲೆಂದೇ (ಅಂದರೆ ಪಕ್ಷಾಂತರ ಮಾಡಲೆಂದೇ) ರಾಜೀನಾಮೆಗೆ ಮುಂದಾಗಿದ್ದಾರೆ ಎಂಬುದು ಸ್ಪಷ್ಟವಿತ್ತು. ಅದಕ್ಕೆ ಯಡಿಯೂರಪ್ಪನವರ ಆಡಿಯೋ ಕಡೆಯ ಸಾಕ್ಷಿಯಾಗಿತ್ತೇ ಹೊರತು, ಬೇಕಾದಷ್ಟು ಸಾಂದರ್ಭಿಕ ಸಾಕ್ಷಿಗಳಿತ್ತು. ಹೀಗಿದ್ದುದರಿಂದ, ಸದರಿ ಶಾಸಕರನ್ನು ಹಾಲಿ ವಿಧಾನಸಭೆಯ ಅವಧಿ ಮುಗಿಯುವವರೆಗೂ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಂಕೋರ್ಟು ಯಾವ ನಿರ್ಬಂಧ ವಿಧಿಸುತ್ತದೆ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿತ್ತು. ಒಂದು ವೇಳೆ ಅದು ಸರಿ ಇಲ್ಲ ಎನ್ನುವುದಾದರೂ ಬೇರೆ ಯಾವ ಮದ್ದು ನೀಡಲಿದೆ ಎಂಬುದು ಪ್ರಜಾತಂತ್ರದ ಉಳಿವಿನ ದೃಷ್ಟಿಯಿಂದ ಮಹತ್ವದ್ದಾಗಿತ್ತು.

ರಾಜೀನಾಮೆ ನೀಡಿ ಬೇರೆ ಪಕ್ಷಕ್ಕೆ ಹೋಗಲು ತುದಿಗಾಲಿನಲ್ಲಿ ನಿಂತಿದ್ದ ಗುಂಪಿಗೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎನ್ನುವುದು ಉಡುಗೊರೆಯೇ ಹೊರತು ಶಿಕ್ಷೆಯಲ್ಲ. ಹೀಗಿರುವಾಗ ಅನರ್ಹತೆಯನ್ನು ಎತ್ತಿ ಹಿಡಿದಿದ್ದೇವೆ ಎನ್ನುವುದಕ್ಕೆ ಯಾವ ಅರ್ಥವೂ ಇದ್ದಂತಿಲ್ಲ.

ಅನೈತಿಕ ಪಕ್ಷಾಂತರವನ್ನು ತಡೆಯಬಲ್ಲ ಯಾವ ಮದ್ದನ್ನು ನೀಡುವಲ್ಲಿಯೂ ಸುಪ್ರೀಂಕೋರ್ಟು ಸಫಲವಾಗಿಲ್ಲ ಎಂಬುದು ವಿಷಾದದ ಸಂಗತಿಯಾಗಿದೆ. ಅನರ್ಹಗೊಂಡ ಬಹುತೇಕ ಶಾಸಕರು ಈಗ ಬಿಜೆಪಿ ಟಿಕೆಟ್ ಮೇಲೆ ಸ್ಪರ್ಧಿಸಲಿದ್ದಾರೆ ಎನ್ನುವುದು ಸುಪ್ರೀಂಕೋರ್ಟು ವಿಫಲವಾದದ್ದಕ್ಕೆ ಸಾಕ್ಷಿಯಾಗಲಿದೆ. ಒಂದು ರೀತಿಯಲ್ಲಿ ಬಿಜೆಪಿಯಿಂದ ಅನರ್ಹರಿಗೆ ಟಿಕೆಟ್ ನೀಡುವುದು ಮತ್ತು ಪಡೆಯುವುದು ಸುಪ್ರೀಂಕೋರ್ಟನ್ನೇ ಅಣಕ ಮಾಡಿದಂತೆಯೂ ಆಗುವ ಸಾಧ್ಯತೆ ಇದೆ. ಯಾವುದಕ್ಕೂ ಉಪಚುನಾವಣೆಯಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....