Homeಕರ್ನಾಟಕಹೊಸ ರೀತಿಯ ಅನೈತಿಕ ಪಕ್ಷಾಂತರಕ್ಕೆ ಮದ್ದು ನೀಡಲು ವಿಫಲವಾದ ಸುಪ್ರೀಂ.. : ಡಾ.ವಾಸು ಎಚ್.ವಿ

ಹೊಸ ರೀತಿಯ ಅನೈತಿಕ ಪಕ್ಷಾಂತರಕ್ಕೆ ಮದ್ದು ನೀಡಲು ವಿಫಲವಾದ ಸುಪ್ರೀಂ.. : ಡಾ.ವಾಸು ಎಚ್.ವಿ

- Advertisement -
- Advertisement -

ಬಹುನಿರೀಕ್ಷಿತವಾಗಿದ್ದ ಅನರ್ಹ ಶಾಸಕರ ಕುರಿತಾದ ಮೊಕದ್ದಮೆಯಲ್ಲಿ ಇಂದು ಸುಪ್ರೀಂಕೋರ್ಟು ನಿರೀಕ್ಷಿತ ತೀರ್ಪನ್ನು ನೀಡಿದೆ. ಅವರು ಅನರ್ಹರೇ, ಆದರೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಸುಪ್ರೀಂಕೋರ್ಟಿನ ತೀರ್ಪಿನ ಹಿಂದಿರಬಹುದಾದ ಸದುದ್ದೇಶವೇನಿರಬಹುದು? ಅನರ್ಹರು ಎನ್ನುವ ಟ್ಯಾಗ್ ಕೊಡೋಣ. ಆದರೆ, ಜನತಾ ನ್ಯಾಯಾಲಯಕ್ಕೆ ಹೋಗಿ ಸ್ಪರ್ಧೆ ಮಾಡಲಿ. ಜನರು ತೀರ್ಮಾನ ಮಾಡಲಿ ಎಂಬ ಸದುದ್ದೇಶವನ್ನು ಆರೋಪಿಸಬಹುದು.

ನಮ್ಮ ಸಂವಿಧಾನದ ಪ್ರಕಾರ ತೀವ್ರ ಸ್ವರೂಪದ ಕ್ರಿಮಿನಲ್ ಪ್ರಕರಣಗಳಲ್ಲಿ ಶಿಕ್ಷೆಯಾಗಿರುವವರು ಸ್ಪರ್ಧೆ ಮಾಡುವಂತಿಲ್ಲ. ಆದರೆ, ಅಂತಹ ವ್ಯಕ್ತಿಗಳು ಸ್ಪರ್ಧೆ ಮಾಡಿದರೆ ಜನರು ಅವರನ್ನು ಚುನಾಯಿಸುವುದಿಲ್ಲವೇ? ಚುನಾಯಿಸುವ ಸಾಧ್ಯತೆ ಹೆಚ್ಚೇ ಇರಬಹುದು. ಅಲ್ಲಿ ಒಂದು ನೈತಿಕ ನಿರ್ಬಂಧವನ್ನು ಸಂವಿಧಾನವು ಒಡ್ಡಿದೆ. ಈ ಹಿನ್ನೆಲೆಯಲ್ಲಿ ಒಂದು ವಿಶ್ಲೇಷಣೆ ಮಾಡುವ ಅಗತ್ಯ ಇದೆ.

ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗೆ ತಂದಾಗ ಎಲ್ಲಾ ಪಕ್ಷಗಳ ನಡುವೆ ಸಹಮತ ಇತ್ತು. ಹಾಗೆ ನೋಡಿದರೆ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಬಹುಮತವಿದ್ದು, ಯಾವ ಪಕ್ಷಾಂತರವೂ ಅಲುಗಾಡಿಸಲು ಸಾಧ್ಯವಿರದ ಸರ್ಕಾರವು (ರಾಜೀವ್ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ) ಪಕ್ಷಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ನಂತರದ ದಿನಗಳಲ್ಲಿ ಸುಪ್ರೀಂಕೋರ್ಟು ಸಹಾ ಅದಕ್ಕೆ ತನ್ನದೇ ರೀತಿಯಲ್ಲಿ ಮಾನ್ಯತೆಯನ್ನು ನೀಡಿತ್ತು.

ಮೂರನೇ ಒಂದು ಭಾಗದಷ್ಟು ಶಾಸಕರು ಒಟ್ಟಿಗೆ ಹೋದರೆ ಅದು ಪಕ್ಷಾಂತರವಾಗದು ಎಂಬುದು ನಂತರ ಮೂರನೇ ಎರಡು ಭಾಗ ಆದದ್ದಕ್ಕೂ ಕಾರಣವಿತ್ತು. ‘ಪಕ್ಷಾಂತರವನ್ನು ನಿಷೇಧಿಸಬೇಕು; ಏಕೆಂದರೆ ಇದು ಅನೈತಿಕವಾದುದು; ಗೆದ್ದ ಜನಪ್ರತಿನಿಧಿಗಳು ತಮ್ಮ ಸ್ವಂತ ಹಿತಾಸಕ್ತಿಗಾಗಿ ಮಾಡುತ್ತಿರುವ ಪಕ್ಷಾಂತರವಿದು’ ಎಂಬ ಕುರಿತು ಯಾರಿಗೂ ಅಸಮ್ಮತಿಯಿರಲಿಲ್ಲ. ಹೀಗಾಗಿ ಪಕ್ಷಾಂತರ ನಿಷೇಧ ಕಾನೂನನ್ನು ಗಟ್ಟಿ ಮಾಡುವ ಕೆಲಸ ನಡೆಯಿತು.

ಅದನ್ನೂ ಉಲ್ಲಂಘಿಸಲು ಕೆಲವು ದಾರಿಗಳನ್ನು ಅನೈತಿಕ ರಾಜಕಾರಣದಲ್ಲಿ ತೊಡಗಿರುವ ರಾಜಕೀಯ ಪಕ್ಷಗಳು ಕಂಡುಕೊಂಡವು. ಅದರಲ್ಲಿ ಒಂದು – ಸ್ಪೀಕರ್ ಅವರು ಪಕ್ಷಾಂತರಿಗಳ ಪರ ಇದ್ದರೆ, ವಿಳಂಬ ನೀತಿಯನ್ನು ಅನುಸರಿಸಿ ಶಾಸನಸಭೆಯ ಅವಧಿ ಮುಗಿಯುವತನಕ ಎಳೆದು ಅನರ್ಹಗೊಳಿಸಲು ಕೋರಿದ ದೂರೇ ಅಪ್ರಸ್ತುತವಾಗುವಂತೆ ಮಾಡುವುದು. ಎರಡು- ಆಡಳಿತ ಪಕ್ಷಕ್ಕೆ ಪಕ್ಷಾಂತರ ಮಾಡಿಸಲು ಶಾಸನಸಭೆಯ ಸದಸ್ಯರ ಕೈಯ್ಯಲ್ಲಿ ರಾಜೀನಾಮೆ ಕೊಡಿಸುವುದು. ನಂತರ ಅವರಿಗೆ ಅಧಿಕಾರ ನೀಡಿ, ಆಡಳಿತದ ಬಲದೊಂದಿಗೆ ಆಡಳಿತ ಪಕ್ಷದ ಟಿಕೆಟ್ ಮೇಲೆ ಸ್ಪರ್ಧಿಸಿ ಗೆಲ್ಲಿಸಿಕೊಂಡು ಬರುವುದು. ಇದನ್ನು ಬಿಜೆಪಿಯೇ ಶುರು ಮಾಡಿದ್ದರಿಂದ ಮತ್ತು ಹೆಚ್ಚು ಬಳಸಿದ್ದರಿಂದ ‘ಆಪರೇಷನ್ ಕಮಲ’ ಎಂಬ ಹೆಸರಿನಲ್ಲಿ ಚಾಲ್ತಿಯಲ್ಲಿದೆ.

ಅಂತಹ ಆಪರೇಷನ್ ಕಮಲಕ್ಕೆ ಮದ್ದು ಕಂಡುಕೊಳ್ಳುವುದು ಬಹಳ ಅಗತ್ಯವಿತ್ತು. ಆದರೆ, ಸ್ವತಃ ಬಿಜೆಪಿ (ಅಥವಾ ಇನ್ನಾವುದೋ ಪಕ್ಷ) ಅಧಿಕಾರದಲ್ಲಿದ್ದಾಗ ಅವರದ್ದೇ ಸ್ಪೀಕರ್ ಇರುವುದರಿಂದ ಅನರ್ಹತೆ ಆಗುತ್ತಿರಲಿಲ್ಲ. ಈ ಸಾರಿ ಕರ್ನಾಕಟದಲ್ಲಿ ಪರಿಸ್ಥಿತಿ ಸ್ವಲ್ಪ ಭಿನ್ನವಾಗಿತ್ತು. ಅಧಿಕಾರದಲ್ಲಿದ್ದ ಸಮ್ಮಿಶ್ರ ಸರ್ಕಾರದ ಶಾಸಕರನ್ನು ಸೆಳೆದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದು ರಾಜ್ಯದಲ್ಲಿ ವಿರೋಧ ಪಕ್ಷದಲ್ಲಿದ್ದ ಪಕ್ಷವಾದ ಬಿಜೆಪಿಯು ಪಕ್ಷಾಂತರ ಮಾಡಿಸಿತ್ತು. ಹೀಗಾಗಿ ಸಮ್ಮಿಶ್ರ ಸರ್ಕಾರದ ಪಕ್ಷಗಳ ಬೆಂಬಲದೊಂದಿಗೆ (ವಾಸ್ತವದಲ್ಲಿ ಸರ್ವಾನುಮತದಿಂದ) ಆಯ್ಕೆಯಾಗಿದ್ದ ಸ್ಪೀಕರ್ ರಮೇಶ್ ಕುಮಾರ್ ಅವರು ತೀರ್ಮಾನ ತೆಗೆದುಕೊಳ್ಳುವ ಸ್ಥಾನದಲ್ಲಿದ್ದರು. ಅವರು ಸದರಿ ಶಾಸಕರನ್ನು ಅನರ್ಹಗೊಳಿಸಿದರು ಮತ್ತು ಷೆಡ್ಯೂಲ್ 10ರ ಪ್ರಕಾರ ವಿಧಾನಸಭೆಯ ಈ ಅವಧಿ ಮುಗಿಯುವವರೆಗೆ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ತೀರ್ಪಿತ್ತಿದ್ದರು. ಒಂದು ರೀತಿಯಲ್ಲಿ ಅದು ಆಪರೇಷನ್ ಕಮಲಕ್ಕೆ ಮದ್ದಾಗಿತ್ತು.

ಅದು ನಂತರ ಸುಪ್ರೀಂಕೋರ್ಟಿನ ಮೆಟ್ಟಿಲೇರಿತ್ತು. ಇವೆಲ್ಲದರಿಂದ ಶಾಸಕರುಗಳು ಗುಂಪಾಗಿ, ಒಂದು ನಿರ್ದಿಷ್ಟ ಯೋಜನೆಯ ಭಾಗವಾಗಿ ವಿರೋಧ ಪಕ್ಷವನ್ನು ಸ್ವಂತ ಹಿತಾಸಕ್ತಿಗಾಗಿ ಅಧಿಕಾರಕ್ಕೆ ತರಲೆಂದೇ (ಅಂದರೆ ಪಕ್ಷಾಂತರ ಮಾಡಲೆಂದೇ) ರಾಜೀನಾಮೆಗೆ ಮುಂದಾಗಿದ್ದಾರೆ ಎಂಬುದು ಸ್ಪಷ್ಟವಿತ್ತು. ಅದಕ್ಕೆ ಯಡಿಯೂರಪ್ಪನವರ ಆಡಿಯೋ ಕಡೆಯ ಸಾಕ್ಷಿಯಾಗಿತ್ತೇ ಹೊರತು, ಬೇಕಾದಷ್ಟು ಸಾಂದರ್ಭಿಕ ಸಾಕ್ಷಿಗಳಿತ್ತು. ಹೀಗಿದ್ದುದರಿಂದ, ಸದರಿ ಶಾಸಕರನ್ನು ಹಾಲಿ ವಿಧಾನಸಭೆಯ ಅವಧಿ ಮುಗಿಯುವವರೆಗೂ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಂಕೋರ್ಟು ಯಾವ ನಿರ್ಬಂಧ ವಿಧಿಸುತ್ತದೆ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿತ್ತು. ಒಂದು ವೇಳೆ ಅದು ಸರಿ ಇಲ್ಲ ಎನ್ನುವುದಾದರೂ ಬೇರೆ ಯಾವ ಮದ್ದು ನೀಡಲಿದೆ ಎಂಬುದು ಪ್ರಜಾತಂತ್ರದ ಉಳಿವಿನ ದೃಷ್ಟಿಯಿಂದ ಮಹತ್ವದ್ದಾಗಿತ್ತು.

ರಾಜೀನಾಮೆ ನೀಡಿ ಬೇರೆ ಪಕ್ಷಕ್ಕೆ ಹೋಗಲು ತುದಿಗಾಲಿನಲ್ಲಿ ನಿಂತಿದ್ದ ಗುಂಪಿಗೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎನ್ನುವುದು ಉಡುಗೊರೆಯೇ ಹೊರತು ಶಿಕ್ಷೆಯಲ್ಲ. ಹೀಗಿರುವಾಗ ಅನರ್ಹತೆಯನ್ನು ಎತ್ತಿ ಹಿಡಿದಿದ್ದೇವೆ ಎನ್ನುವುದಕ್ಕೆ ಯಾವ ಅರ್ಥವೂ ಇದ್ದಂತಿಲ್ಲ.

ಅನೈತಿಕ ಪಕ್ಷಾಂತರವನ್ನು ತಡೆಯಬಲ್ಲ ಯಾವ ಮದ್ದನ್ನು ನೀಡುವಲ್ಲಿಯೂ ಸುಪ್ರೀಂಕೋರ್ಟು ಸಫಲವಾಗಿಲ್ಲ ಎಂಬುದು ವಿಷಾದದ ಸಂಗತಿಯಾಗಿದೆ. ಅನರ್ಹಗೊಂಡ ಬಹುತೇಕ ಶಾಸಕರು ಈಗ ಬಿಜೆಪಿ ಟಿಕೆಟ್ ಮೇಲೆ ಸ್ಪರ್ಧಿಸಲಿದ್ದಾರೆ ಎನ್ನುವುದು ಸುಪ್ರೀಂಕೋರ್ಟು ವಿಫಲವಾದದ್ದಕ್ಕೆ ಸಾಕ್ಷಿಯಾಗಲಿದೆ. ಒಂದು ರೀತಿಯಲ್ಲಿ ಬಿಜೆಪಿಯಿಂದ ಅನರ್ಹರಿಗೆ ಟಿಕೆಟ್ ನೀಡುವುದು ಮತ್ತು ಪಡೆಯುವುದು ಸುಪ್ರೀಂಕೋರ್ಟನ್ನೇ ಅಣಕ ಮಾಡಿದಂತೆಯೂ ಆಗುವ ಸಾಧ್ಯತೆ ಇದೆ. ಯಾವುದಕ್ಕೂ ಉಪಚುನಾವಣೆಯಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...