Homeಮುಖಪುಟಕಡೆಗೂ ಪತ್ರಕರ್ತ ಸಿದ್ದಿಕ್ ಕಪ್ಪನ್‌ರವರಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ಕಡೆಗೂ ಪತ್ರಕರ್ತ ಸಿದ್ದಿಕ್ ಕಪ್ಪನ್‌ರವರಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣದಲ್ಲಿ ಎರಡು ವರ್ಷಗಳಿಂದ ಜೈಲಿನಲ್ಲಿದ್ದ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್‌ರವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ಜಾಮೀನು ನೀಡುವುದಾಗಿ ತಿಳಿಸಿದೆ.

ಪ್ರತಿಯೊಬ್ಬ ವ್ಯಕ್ತಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ ಎಂದಿರುವ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಯುಯು ಲಲಿತ್‌ರವರು ಸುಪ್ರೀಂ ಕೋರ್ಟ್ ಸಿದ್ದಿಕ್ ಕಪ್ಪನ್‌ರವರಿಗೆ ಜಾಮೀನು ನೀಡುತ್ತದೆ ಎಂದು ತಿಳಿಸಿದ್ದಾರೆ.

ಕಪ್ಪನ್‌ ಮಾನ್ಯತೆ ಪಡೆದ ಪತ್ರಕರ್ತರಲ್ಲ. ಅವರಿಗೆ ಗಲಭೆಗಳನ್ನು ಪ್ರಚೋದಿಸಲು ಹಣ ನೀಡಲಾಗಿದೆ. ಅವರು ಗಲಭೆ ಪರಿಸ್ಥಿತಿಯನ್ನು ಸೃಷ್ಟಿಸಲು ಮತ್ತು ಸ್ಫೋಟಕಗಳನ್ನು ಬಳಸಲು ಪ್ರಯತ್ನಿಸುತ್ತಿದ್ದರು. ಅವರು ಪಿಎಫ್‌ಐಗೆ ಸೇರಿದವರು ಮತ್ತು ಇದು ಭಯೋತ್ಪಾದಕ ಸಂಘಟನೆ” ಎಂದು ಉತ್ತರ ಪ್ರದೇಶ ಸರ್ಕಾರದ ಪರವಾಗಿ ವಕೀಲ ಮಹೇಶ್ ಜೇಠ್ಮಲಾನಿ ವಾದಿಸಿದರು.

ಕಪ್ಪನ್ ಬಳಿಯಿಂದ ಏನನ್ನು ವಶಪಡಿಸಿಕೊಂಡಿದ್ದೀರಿ? ಕಾರಿನಲ್ಲಿ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ, ಅವನ ಬಳಿ ಯಾವುದೇ ವಸ್ತುಗಳು ಕಂಡುಬಂದಿಲ್ಲ. ಹಾಗಿದ್ದ ಮೇಲೆ ಸ್ಪೋಟಕಗಳನ್ನು ಎಲ್ಲಿ ಬಳಸಿದರು ಎಂದು ಪ್ರಶ್ನಿಸಿದ ಲಲಿತ್‌ರವರು ಜಾಮೀನು ಮಂಜೂರು ಮಾಡಿದರು. ಮುಂದಿನ ಆರು ವಾರಗಳ ಕಾಲ ದೆಹಲಿ ಪೊಲೀಸರಿಗೆ ಮತ್ತು ಆನಂತರ ಕೇರಳ ಪೊಲೀಸರಿಗೆ ವರದಿ ಮಾಡಿಕೊಳ್ಳಬೇಕು ಎಂಬು ಷರತ್ತು ವಿಧಿಸಲಾಗಿದೆ.

2020 ರ ಅಕ್ಟೋಬರ್ 5 ರಂದು ಸಿದ್ದೀಕ್ ಕಪ್ಪನ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. 2020 ರ ಸೆಪ್ಟೆಂಬರ್ 14 ರಂದು ಹತ್ರಾಸ್‌ನಲ್ಲಿ 19 ವರ್ಷದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವರದಿ ಮಾಡುವುದಾಕ್ಕಾಗಿ ಕಪ್ಪನ್ ಇತರ ಮೂವರೊಂದಿಗೆ ಕಾರಿನಲ್ಲಿ ಹತ್ರಾಸ್‌ಗೆ ಪ್ರಯಾಣಿಸುತ್ತಿದ್ದಾಗ ಬಂಧನಕ್ಕೊಳಗಾಗಿದ್ದರು. ಅಂದಿನಿಂದ ಅವರಿಗೆ ಜಾಮೀನು ನಿರಾಕರಿಸಲಾಗಿತ್ತು.

ಕೇರಳ ಮೂಲದ ಪತ್ರಕರ್ತರಾಗಿರುವ ಸಿದ್ದಿಕ್‌ ಜಾತಿ ಆಧಾರಿತ ಗಲಭೆಯನ್ನು ಪ್ರಾರಂಭಿಸಲು ಮತ್ತು ಕೋಮು ಸೌಹಾರ್ದತೆಯನ್ನು ಸೃಷ್ಟಿಸಲು ಉದ್ದೇಶಿಸಿದ್ದಾರೆ ಎಂದು ಉತ್ತರ ಪ್ರದೇಶದ ಪೊಲೀಸರು ಮೊದಲು ಆರೋಪಿಸಿದ್ದರು. ತರುವಾಯ, ದೇಶದ್ರೋಹದ ಆರೋಪಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಸಿದ್ದಿಕ್ ಕಪ್ಪನ್ ನಿರಪರಾಧಿಯಾಗಿದ್ದು ಅವರು ಅಸಾಮರಸ್ಯ ಹರಡಲು ಯಾವುದೇ ವೇದಿಕೆಯನ್ನು ಬಳಸಿಲ್ಲ. ಕಪ್ಪನ್‌ ಅವರಿಗೆ ಮರೆಮಾಚಲು ಏನೂ ಇಲ್ಲ. ಅವರು ತಮ್ಮ ಮುಗ್ಧತೆಯನ್ನು ಸಾಬೀತುಪಡಿಸಲು ನಾರ್ಕೋ ವಿಶ್ಲೇಷಣೆ ಅಥವಾ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗಳಿಗೆ ಒಳಗಾಗಲು ಕೂಡಾ ತಯಾರು” ಎಂದು ನ್ಯಾಯಾಲಯದಲ್ಲಿ ಅವರ ಪರ ವಕೀಲರು ವಾದಿಸಿದ್ದರು.

ಕಪ್ಪನ್ ಮತ್ತು ಇತರ ಇಬ್ಬರೊಂದಿಗೆ ಬಂಧಿಸಲ್ಪಟ್ಟ ಕ್ಯಾಬ್ ಚಾಲಕನಿಗೆ ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್  ಜಾಮೀನು ನೀಡಿತ್ತು.

ಇದನ್ನೂ ಓದಿ: 2015ರ ಸಮಯಕ್ಕೆ ಆತ್ಮೀಯರಾಗಿದ್ದವರ ದನಿ ಬದಲಾಗಿದ್ದನ್ನು ಗಮನಿಸಿದೆ; ಮೊಹಮ್ಮದ್ ಝುಬೇರ್ ಸಂದರ್ಶನ ಭಾಗ-1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾವ ತಪ್ಪನ್ನೂ ಮಾಡದ ಸಿದ್ದಿಕ್ ಕಪ್ಪನ್ ಎರಡು ವರ್ಷ ಜೈಲು ಶಿಕ್ಷೆ ಅನುಬವಿಸಿದರು. ಇವರಿಗೆ ಜಾಮೀನು ದೊರಕಿದ್ದು ಸ್ವಾಗತಾರ್ಹ.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...