Homeಮುಖಪುಟಒಕ್ಕೂಟ ಸರ್ಕಾರಕ್ಕೆ ದಂಡ ವಿಧಿಸಿದ ಸುಪ್ರೀಂಕೋರ್ಟ್‌!

ಒಕ್ಕೂಟ ಸರ್ಕಾರಕ್ಕೆ ದಂಡ ವಿಧಿಸಿದ ಸುಪ್ರೀಂಕೋರ್ಟ್‌!

- Advertisement -
- Advertisement -

ಒಂದು ಸಮುದಾಯದ ಅಲ್ಪಸಂಖ್ಯಾತ ಸ್ಥಾನವನ್ನು ರಾಜ್ಯಮಟ್ಟದಲ್ಲಿ ನಿರ್ಧಾರವಾಗಬೇಕೇ ಹೊರತು ರಾಷ್ಟ್ರಮಟ್ಟದಲ್ಲಿ ಅಲ್ಲ ಎಂದು ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ಯಾವುದೇ ನಿಲುವು ಪ್ರಕಟಿಸದ ಒಕ್ಕೂಟ ಸರ್ಕಾರಕ್ಕೆ ನ್ಯಾಯಾಲಯವು ದಂಡ ವಿಧಿಸಲಾಗಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂ.ಎಂ. ಸುಂದ್ರೇಶ್‌ ಪೀಠವು ಜನವರಿ 7ರೊಳಗೆ ಅಫಿದಾವಿತ್ ಸಲ್ಲಿಸಲು ಒಕ್ಕೂಟ ಸರ್ಕಾರಕ್ಕೆ ಕೊನೆಯ ಅವಕಾಶ ನೀಡಿತ್ತು. ಆದರೂ, ಸರ್ಕಾರ ತನ್ನ ನಿಲುವು ಪ್ರಕಟಿಸಿ ಅಫಿದಾವಿತ್ ಸಲ್ಲಿಸದೆ ಇರುವುದಕ್ಕೆ ರೂ. 7,500 ದಂಡ ವಿಧಿಸಲಾಗಿದೆ.

ಇದನ್ನೂ ಓದಿ: ಬಿಜೆಪಿಯನ್ನು ಬಂಗಾಳಕೊಲ್ಲಿಗೆ ಎಸೆಯಿರಿ: ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್‌ ಕರೆ

ಈಗಾಗಲೇ ಅಫಿದಾವಿತ್ ಕರಡು ಸಿದ್ಧವಾಗಿದ್ದು, ಕೊರೊನಾ ಕಾರಣ ನ್ಯಾಯಾಲಯಕ್ಕೆ ಸಲ್ಲಿಸಲು ಸಾಧ್ಯವಾಗಲಿಲ್ಲ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್ ತಿಳಿಸಿದ್ದನ್ನು ಒಪ್ಪಿಕೊಳ್ಳಲು ಸುಪ್ರೀಂಕೋರ್ಟ್ ನಿರಾಕರಿಸಿದೆ. “ನಮಗೆ ಒಪ್ಪಿಕೊಳ್ಳಲು ಕಷ್ಟವಾಗುವಂಥ ನೆಪಗಳನ್ನು ಹೇಳಬೇಡಿ” ಎಂದು ನ್ಯಾಯಾಲಯ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಈ ವಿಚಾರವಾಗಿ ಸರ್ಕಾರಕ್ಕೆ ತಮ್ಮ ಅಭಿಪ್ರಾಯ ತಿಳಿಸಲು ಅಫಿದಾವತ್ ಸಲ್ಲಿಸಲು 4 ವಾರಗಳ ಅಂತಿಮ ಗಡುವು ನೀಡಿದೆ.

ಈ ವಿಚಾರವಾಗಿ ಬಿಜೆಪಿ ಸದಸ್ಯೆ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ ಅರ್ಜಿಯನ್ನೇ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು ಕುತೂಹಲದ ವಿಚಾರ. ಸಂಸ್ಥೆಗಳನ್ನು ನಡೆಸಲು ಸಾಧ್ಯವಾಗುವಂತೆ, ರಾಜ್ಯವೊಂದರಲ್ಲಿ ಇರುವ ಒಂದು ಸಮುದಾಯದ ಜನಸಂಖ್ಯಾ ಆಧಾರದ ಮೇಲೆ ಧಾರ್ಮಿಕ ಮತ್ತು ಹಿಂದುಳಿದ ಭಾಷಿಕರು ಎಂದು ಘೋಷಿಸಬೇಕು ಎಂದು ಅವರು ಅರ್ಜಿಯಲ್ಲಿ ಹೇಳಿದ್ದರು.

ರಾಷ್ಟ್ರೀಯ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಕಾಯ್ದೆಯ ಸೆಕ್ಷನ್ 2 (ಎಫ್) ಪ್ರಕಾರ ರಾಷ್ಟ್ರವ್ಯಾಪಿ ಜನಸಂಖ್ಯೆ ಆಧರಿಸಿ ಅಲ್ಪಸಂಖ್ಯಾತ ಸಮುದಾಯವನ್ನು ಘೋಷಿಸುವ ಅಧಿಕಾರ ಒಕ್ಕೂಟ ಸರ್ಕಾರಕ್ಕೆ ಇದೆ. ರಾಷ್ಟ್ರವ್ಯಾಪಿ ಜನಸಂಖ್ಯೆ ಆಧಾರದ ಮೇರೆಗೆ ಅಲ್ಪಸಂಖ್ಯಾತರ ಸ್ಥಾನಮಾನ ನಿರ್ಧರಿಸುವುದು ಹಿಂದುಗಳು ಕಡಿಮೆ ಇರುವ ರಾಜ್ಯಗಳ ಹಿತಾಸಕ್ತಿಗೆ ಮಾರಕವಾಗಲಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...