Homeಮುಖಪುಟಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

- Advertisement -
- Advertisement -

ಆಪಾದಿತ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಇಂದು (ಮೇ 10) ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಸಂಜೆಯೊಳಗೆ ವಿವರವಾದ ಆದೇಶವನ್ನು ಅಪ್ಲೋಡ್ ಮಾಡಲಾಗುವುದು ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠ ಹೇಳಿದೆ.

ಅಬಕಾರಿ ನೀತಿ ಹಗರಣ ಸಂಬಂಧ ಆಗಸ್ಟ್ 2022ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ, ಕೇಜ್ರಿವಾಲ್ ಅವರನ್ನು ಸುಮಾರು ಒಂದೂವರೆ ವರ್ಷಗಳ ನಂತರ 21 ಮಾರ್ಚ್ 2024 ರಲ್ಲಿ ಬಂಧಿಸಿರುವುದನ್ನು ಪೀಠ ಗಮನಿಸಿದೆ.

ಚುನಾಯಿತ ಮುಖ್ಯಮಂತ್ರಿಯ ಪ್ರಕರಣದ ವಿಚಾರಣೆ ನಡೆಯುತ್ತಿದೆ, ಸಾಮಾನ್ಯ ವ್ಯಕ್ತಿಯದ್ದಲ್ಲ. ಸಾರ್ವತ್ರಿಕ ಚುನಾವಣೆ 5 ವರ್ಷಗಳಿಗೊಮ್ಮೆ ನಡೆಯುತ್ತದೆ ಎಂಬ ಅಂಶಗಳನ್ನೂ ಪೀಠ ಗಮನಿಸಿದೆ. ಮೇ 7ರಂದು ವಿಚಾರಣೆ ನಡೆಸಿದ್ದ ಪೀಠ, ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ದೊರೆತರೂ, ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸಲು ಅನುಮತಿಸುವುದಿಲ್ಲ ಎಂದು ಮೌಖಿಕವಾಗಿ ಹೇಳಿತ್ತು.

ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದನ್ನು ವಿರೋಧಿಸಿ ಇಡಿ ನಿನ್ನೆ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿತ್ತು. ಇಂದು, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಖಲಿಸ್ತಾನಿ ಚಟುವಟಿಕೆಗಳ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತರಾಗಿರುವ ಅಮೃತ್ ಪಾಲ್ ಸಿಂಗ್ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಜಾಮೀನಿಗಾಗಿ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ ಎಂದು ತಿಳಿಸಿದರು. ಚುನಾವಣೆ ಹಿನ್ನೆಲೆ ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡುವುದು ಭಾರೀ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಖನ್ನಾ ಅವರು, ಅಮೃತ ಪಾಲ್ ಸಿಂಗ್ ಮತ್ತು ಕೇಜ್ರಿವಾಲ್ ಅವರದ್ದು ಪ್ರತ್ಯೇಕ ಪ್ರಕರಣಗಳು ಎಂದರು. ಈ ವೇಳೆ ಮತ್ತೆ ವಾದ ಮಂಡಿಸಿದ ತುಷಾರ್ ಮೆಹ್ತಾ, ಕೇಜ್ರಿವಾಲ್ ಲೋಕಸಭೆ ಚುನಾವಣೆಯ ಅಭ್ಯರ್ಥಿ ಅಲ್ಲ. ಬಂಧಿತ ವ್ಯಕ್ತಿ ಅಭ್ಯರ್ಥಿ ಅಲ್ಲದಿರುವಾಗ ಅವರನ್ನು ಪ್ರಚಾರದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವ ಸಲುವಾಗಿ ಬಿಡುಗಡೆ ಮಾಡಿದ ನಿದರ್ಶನಗಳಿಲ್ಲ ಎಂದು ಹೇಳಿದರು.

ಕೊನೆಯದಾಗಿ, ಇಡಿ ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ಅಂತಿಮ ವಿಚಾರಣೆಯನ್ನು ಮುಂದಿನ ವಾರ ಮುಕ್ತಾಯಗೊಳಿಸಲಾಗುವುದು ಎಂದು ನ್ಯಾಯಮೂರ್ತಿ ಖನ್ನಾ ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ನಡೆಸಲು ಕೇಜ್ರಿವಾಲ್ ಅವರಿಗೆ ಜೂನ್‌ 1ರವರೆಗೆ ಮಧ್ಯಂತರ ಜಾಮೀನು ನೀಡಲಾಗಿದೆ ಎಂದು ತಿಳಿದು ಬಂದಿದೆ. ಜೂನ್ 2ರಂದು ಜೈಲಿಗೆ ಶರಣಾಗಬೇಕು ಎಂದು ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಂಕರ್ ದತ್ತಾ ಅವರಿದ್ದ ಪೀಠ ಸೂಚಿಸಿದೆ.

ಇದನ್ನೂ ಓದಿ : ದಾಭೋಲ್ಕರ್ ಪ್ರಕರಣ: ಜೀವಾವಧಿ ಶಿಕ್ಷೆಗೆ ಒಳಗಾದ ಅಪರಾಧಿ ಗೌರಿ ಲಂಕೇಶ್ ಹತ್ಯೆಯಲ್ಲೂ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...