Homeಮುಖಪುಟಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

- Advertisement -
- Advertisement -

‘ಆಪರೇಷನ್ ಸಿಂಧೂರ’ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದ ಪೋಸ್ಟ್ ಸಂಬಂಧ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮೂದಾಬಾದ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ (ಮೇ 21) ಮಧ್ಯಂತರ ಜಾಮೀನು ನೀಡಿದೆ ಎಂದು ವರದಿಯಾಗಿದೆ.

ಅಲಿ ಖಾನ್ ಅವರನ್ನು ಮೇ 18 ರಂದು ಬಂಧಿಸಲಾಗಿತ್ತು. ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ಅವರನ್ನು ಮೇ 20ರಂದು ಸೋನೆಪತ್ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಈ ನಡುವೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು ಖಾನ್ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಆದರೆ, ಅವರ ವಿರುದ್ದ ಹರಿಯಾಣ ಪೊಲೀಸರು ದಾಖಲಿಸಿರುವ ಎರಡು ಎಫ್‌ಐಆರ್‌ಗಳಿಗೆ ತಡೆ ನೀಡಲು ನಿರಾಕರಿಸಿದೆ.

ಅಲಿ ಖಾನ್ ಅವರ ಪೋಸ್ಟ್‌ನ ನಿಜವಾದ ಅರ್ಥವನ್ನು ಅರ್ಥಮಾಡಿಕೊಳ್ಳಲು ಮತ್ತು ತನಿಖೆ ಮಾಡಲು ಹರಿಯಾಣ ಅಥವಾ ದೆಹಲಿಗೆ ಸಂಬಂಧಿಸದ ಹಿರಿಯ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) 24 ಗಂಟೆಗಳ ಒಳಗೆ ರಚಿಸುವಂತೆ ಇದೇ ವೇಳೆ ಸುಪ್ರೀಂ ಕೋರ್ಟ್ ಹರಿಯಾಣ ಡಿಜಿಪಿಗೆ ನಿರ್ದೇಶನ ನೀಡಿದೆ.

ಎಸ್‌ಐಟಿಯ ಒಬ್ಬ ಅಧಿಕಾರಿ ಮಹಿಳೆಯಾಗಿರಬೇಕು. ಎಸ್‌ಐಟಿಗೆ ಐಜಿ ಶ್ರೇಣಿಯ ಅಧಿಕಾರಿ ನೇತೃತ್ವ ವಹಿಸಬೇಕು ಮತ್ತು ಉಳಿದ ಇಬ್ಬರು ಸದಸ್ಯರು ಎಸ್‌ಪಿ ಶ್ರೇಣಿಯವರಾಗಿರಬೇಕು ಎಂದು ಸೂಚಿಸಿದೆ.

ಜಾಮೀನು ನೀಡುವ ವೇಳೆ, ಪ್ರಕರಣ ದಾಖಲಾಗಲು ಕಾರಣವಾಗಿರುವ ಪೋಸ್ಟ್‌ಗೆ ಸಂಬಂಧಿಸಿದ ಯಾವುದೇ ಹೊಸ ಪೋಸ್ಟ್‌ಗಳನ್ನು ಹಾಕುವುದು ಅಥವಾ ಲೇಖನಗಳನ್ನು ಬರೆಯುವುದಕ್ಕೆ ಮತ್ತು ಭಾರತೀಯ ನೆಲದಲ್ಲಿ ನಡೆದ ಭಯೋತ್ಪಾದಕ ದಾಳಿ ಅಥವಾ ಭಾರತ ಅವುಗಳಿಗೆ ನೀಡಿದ ಪ್ರತಿಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸದಂತೆ ಸುಪ್ರೀಂ ಕೋರ್ಟ್ ಅಲಿ ಖಾನ್ ಅವರಿಗೆ ನಿರ್ಬಂಧ ವಿಧಿಸಿದೆ.

ತನಿಖೆಗೆ ಸಂಪೂರ್ಣವಾಗಿ ಸಹಕರಿಸುವಂತೆ ಮತ್ತು ಪಾಸ್‌ಪೋರ್ಟ್ ಒಪ್ಪಿಸುವಂತೆ ನ್ಯಾಯಾಲಯ ಸೂಚಿಸಿದೆ.

ನ್ಯಾಯಾಲಯ ಆದೇಶ ಹೊರಡಿಸಿದ ನಂತರ ಅರ್ಜಿದಾರರ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ಅಲಿ ಖಾನ್ ಅವರ ವಿರುದ್ದ ಪ್ರಸ್ತುತ ವಿಷಯದ ಕುರಿತು ಹೊಸ ಎಫ್‌ಐಆರ್‌ಗಳನ್ನು ದಾಖಲಿಸದಂತೆ ತಡೆಯಲು ನ್ಯಾಯಾಲಯವನ್ನು ಕೋರಿದರು. ಇದಕ್ಕೆ ಉತ್ತರಿಸಿದ ನ್ಯಾಯಮೂರ್ತಿ ಸೂರ್ಯ ಕಾಂತ್  ಅವರು,”ಏನೂ ಆಗುವುದಿಲ್ಲ” ಎಂದು ಮೌಖಿಕವಾಗಿ ಹೇಳಿದರು. ಈ ಬಗ್ಗೆ ಗಮನಿಸುವಂತೆ ಹರಿಯಾಣ ರಾಜ್ಯ ಸರ್ಕಾರಕ್ಕೂ ಸೂಚಿಸಿದರು. ತನಿಖೆಯ ಸಮಯದಲ್ಲಿ ಕಂಡುಕೊಳ್ಳುವ ಯಾವುದೇ ಹೆಚ್ಚಿನ ಅಪರಾಧದ ವಸ್ತುಗಳನ್ನು ದಾಖಲಿಸಲು ಕೋರ್ಟ್ ರಾಜ್ಯಕ್ಕೆ ಅವಕಾಶ ನೀಡಿದೆ ಎಂದು livelaw.in ವರದಿ ಮಾಡಿದೆ.

ವಿಚಾರಣೆಯ ಆರಂಭದಲ್ಲಿ, ವಕೀಲ ಕಪಿಲ್ ಸಿಬಲ್ ಅವರು ಅಲಿ ಖಾನ್ ಅವರು ತಮ್ಮ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಖಾತೆಗಳಲ್ಲಿ ಆಪರೇಷನ್ ಸಿಂಧೂರ ಕುರಿತು ಹಾಕಿದ್ದ ಪೋಸ್ಟ್ ಬಗ್ಗೆ ಪೀಠದ ಗಮನ ಸೆಳೆದರು. ಅವರ ಪೋಸ್ಟ್ ಅನ್ನು ಪೀಠಕ್ಕೆ ಓದಿ ಹೇಳಿದರು. ಇದು ಅತ್ಯಂತ ದೇಶಭಕ್ತಿಯ ಪೋಸ್ಟ್ ಎಂದು ವಿವರಿಸಿದರು.

ಈ ವೇಳೆ “ಆಪರೇಷನ್ ಸಿಂಧೂರ ಕುರಿತ ಮಾಧ್ಯಮಗೋಷ್ಠಿಯ ನೇತೃತ್ವ ವಹಿಸಿದ್ದ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಹೊಗಳುವ ಬಲಪಂಥೀಯರು ಗುಂಪು ಹಲ್ಲೆ ಮತ್ತು ಆಸ್ತಿಗಳ ಅನಿಯಂತ್ರಿತ ಧ್ವಂಸಕ್ಕೆ ಬಲಿಯಾದವರ ಪರವಾಗಿ ಮಾತನಾಡುವಂತೆ” ಅಲಿಖಾನ್ ತನ್ನ ಪೋಸ್ಟ್‌ನಲ್ಲಿ ಹೇಳಿದ್ದನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಸೂರ್ಯಕಾಂತ್ ಅವರು, “ಯುದ್ಧದ ಬಗ್ಗೆ ಹೇಳಿಕೆ ನೀಡಿದ ನಂತರ ಅಲಿ ಖಾನ್ ರಾಜಕೀಯದತ್ತ ತಿರುಗಿದ್ದಾರೆ” ಎಂದು ಹೇಳಿದ್ದಾರೆ.

“ಪ್ರತಿಯೊಬ್ಬರಿಗೂ ಮುಕ್ತ ಅಭಿವ್ಯಕ್ತಿಯ ಹಕ್ಕು ಇದೆ. ಆದರೆ ಕೋಮುವಾದದ ಬಗ್ಗೆ ಇಷ್ಟೊಂದು ಮಾತನಾಡುವ ಸಮಯ ಇದುವಾ? ದೇಶ ದೊಡ್ಡ ಸವಾಲನ್ನು ಎದುರಿಸುತ್ತಿದೆ. ರಾಕ್ಷಸರು ಎಲ್ಲೆಡೆ ಬಂದು ನಮ್ಮ ಮುಗ್ಧ ಜನರ ಮೇಲೆ ದಾಳಿ ಮಾಡಿದ್ದಾರೆ. ನಾವು ಒಗ್ಗಟ್ಟಿನಿಂದ ಇದ್ದೇವೆ. ಈ ಸಮಯದಲ್ಲಿ ಈ ರೀತಿಯ ಅಗ್ಗದ ಜನಪ್ರಿಯತೆ ಬೇಕು?” ಎಂದು ನ್ಯಾಯಮೂರ್ತಿ ಕಾಂತ್ ಪ್ರಶ್ನಿಸಿದ್ದಾರೆ.

ಈ ವೇಳೆ ಅಲಿ ಖಾನ್ ಅವರ ಹೇಳಿಕೆಗಳನ್ನು ಸಮರ್ಥಿಸಿಕೊಂಡ ವಕೀಲ ಕಪಿಲ್ ಸಿಬಲ್, “ಅವರ ಪೋಸ್ಟ್‌ನಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿದ ನ್ಯಾ.ಕಾಂತ್, “ಕಳೆದ 75 ವರ್ಷಗಳಿಂದ ದೇಶ ಹಕ್ಕುಗಳನ್ನು ವಿತರಿಸುತ್ತಿದೆ ಎಂಬಂತೆ, ಎಲ್ಲರೂ ಹಕ್ಕುಗಳ ಬಗ್ಗೆ ಮಾತನಾಡುತ್ತಾರೆ” ಎಂದು ಹೇಳಿದ್ದಾರೆ.

ಸೌಜನ್ಯ ; livelaw.in

ಎನ್‌ಇಪಿ ಜಾರಿಗೊಳಿಸದ್ದಕ್ಕೆ ಶೈಕ್ಷಣಿಕ ಯೋಜನೆಗಳ ಅನುದಾನ ತಡೆಹಿಡಿದ ಕೇಂದ್ರ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...